- Saturday
- March 14th, 2026
ಸುಳ್ಯ ಫೋಟೋಗ್ರಾಫರ್ಸ್ ಎಸೋಸಿಯೇಶನ್ ನ ಸದಸ್ಯತ್ವ ನವೀಕರಣ ಹಾಗೂ ಸಾಮಾನ್ಯ ಸಭೆ ಸುಳ್ಯ ಸಿ.ಎ.ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಫೋಟೋಗ್ರಾಫರ್ಸ್ ಎಸೋಸಿಯೇಶನ್ ನ ಸ್ಥಾಪಕಾಧ್ಯಕ್ಷ ಗೋಪಾಲ್ ಸುಳ್ಯ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು.ಅಧ್ಯಕ್ಷ ಸುಧಾಕರ ಪಿ.ಎಸ್. ಅಧ್ಯಕ್ಷತೆ ವಹಿಸಿ ಮಾತನಾಡಿದರು.ಗೌರವಾಧ್ಯಕ್ಷ ಹಾಗೂ ಜಿಲ್ಲಾ ವಲಯ ಸಂಘಟಕ ಲೋಕೇಶ್ ಸುಬ್ರಹ್ಮಣ್ಯ, ಜಿಲ್ಲಾ ಎಸ್.ಕೆ.ಪಿ.ಎ ವಿವಿಧೋದ್ದೇಶ ಸಹಕಾರಿ ಸಂಘದ...
ಡ್ರೈವಿಂಗ್ ಲೈಸೆನ್ಸ್, ಪ್ಯಾನ್ ಕಾರ್ಡ್, ರೇಷನ್ ಕಾರ್ಡ್ ಪಡೆಯಲು ನೀವು ಬೇರೆ ಬೇರೆ ಸ್ಥಳಗಳಿಗೆ ಹೋಗಬೇಕಾಗಿಲ್ಲ. ಈಗ ನೀವು ಈ ಎಲ್ಲದಕ್ಕೂ ಅಂಚೆ ಕಚೇರಿಯಲ್ಲಿಯೇ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರ ಪೋಸ್ಟ್ ಆಫೀಸ್ ಸಾಮಾನ್ಯ ಸೇವಾ ಕೇಂದ್ರವನ್ನು ಪ್ರಾರಂಭಿಸಿದೆ. ಸಾಮಾನ್ಯ ಸೇವಾ ಕೇಂದ್ರದ ಮೂಲಕ ಜನರು ಡಿಎಲ್, ಪ್ಯಾನ್ ಕಾರ್ಡ್, ಪಡಿತರ ಚೀಟಿ ಮುಂತಾದ ಕೆಲಸವನ್ನು...
ಸುಬ್ರಹ್ಮಣ್ಯದ ಉದ್ಯಮಿ ಹರೀಶ್ ಇಂಜಾಡಿಯವರ ತಾಯಿ, ನಿವೃತ್ತ ಮುಖ್ಯ ಶಿಕ್ಷಕ ಪುಂಗವ ಗೌಡ ಇಂಜಾಡಿಯವರ ಧರ್ಮಪತ್ನಿ ಶ್ರೀಮತಿ ಕಲ್ಯಾಣಿ ಪುಂಗವ ಗೌಡರು ಅಸೌಖ್ಯದಿಂದ ಸೆ.8 ರಂದು ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರಿಗೆ 76 ವರ್ಷ ವಯಸ್ಸಾಗಿತ್ತು. ಇವರು ಸುಬ್ರಹ್ಮಣ್ಯ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮೃತರು...
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(09.09.2020 ಬುಧವಾರ ) ಅಡಿಕೆ ಧಾರಣೆಹೊಸ ಅಡಿಕೆ 300 - 360ಹಳೆ ಅಡಿಕೆ 300 - 400ಡಬಲ್ ಚೋಲ್ 300 - 400 ಫಠೋರ 220 - 290ಉಳ್ಳಿಗಡ್ಡೆ 110 - 210ಕರಿಗೋಟು 110 - 200 ಕಾಳುಮೆಣಸುಕಾಳುಮೆಣಸು 250 - 325 ಕೊಕ್ಕೋಒಣ ಕೊಕ್ಕೋ :- 150 -...
ಗುತ್ತಿಗಾರು ಗ್ರಾಮದ ವಳಲಂಬೆ ಪುರೋಹಿತ ಸುಬ್ರಾಯ ಕೆದಿಲಾಯ ರವರ ಧರ್ಮಪತ್ನಿ ಶ್ರೀಮತಿ ಕುಸುಮ ಎಸ್. ಕೆದಿಲಾಯ ಸೆ. 8 ರಂದು ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ಮೃತರು ಪತಿ, ಪುತ್ರ ವೇಣುಗೋಪಾಲ ಕೆದಿಲಾಯ, ಪುತ್ರಿ ಶುಭಾ ಅವಿನಾಶ್ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.
ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಆಯುಷ್ಮಾನ್ ಆರೋಗ್ಯ ಯೋಜನೆಯ ಕಾರ್ಡ್ ನೋಂದಣಿ ಕಾರ್ಯಕ್ರಮ ಸೆ.17 ರಂದು ಕಲ್ಮಡ್ಕದ ಕಾಚಿಲ ಶ್ರೀ ರಾಮ ಮಂದಿರದಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿ ದೂರವಾಣಿ ಸಂಖ್ಯೆ 9483722704 ಗೆ ಸಂಪರ್ಕಿಸಬಹುದು ಎಂದು ಸಂಘಟಕರಾದ ಚೇತನ್ ಕಲ್ಮಡ್ಕ ಮತ್ತು ರಾಜೇಶ್ ಕಾಚಿಲ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಪೇರಡ್ಕ ದರ್ಗಾ ಷರೀಫ್ ಭೇಟಿ ನೀಡಿದರು. ಈ ಸಂದರ್ಭ ಮುನೀರ್ ದಾರಿಮಿ ದುಹಾಕೆ ನೇತೃತ್ವ ನೀಡಿದರು. ಈ ಸಂದರ್ಭ ಸುಳ್ಯ ತಾಲೂಕು ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಅಧ್ಯಕ್ಷ ಹಮೀದ್ ಜಿ. ಕೆ. ಜಿಲ್ಲಾ ಎನ್ ಎಸ್ ಯು ಐ ಉಪಾಧ್ಯಕ್ಷ ಸವಾದ್ ಗೂನಡ್ಕ, ನಗರ...
ಐವರ್ನಾಡು ಗ್ರಾಮದ ಪಂಚಮೂಲ ಕಾಲೋನಿಯಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಸೋಲಾರ್ ಹೋಮ್ ಲೈಟ್ ಸೌಲಭ್ಯವನ್ನು ಒದಗಿಸಲಾಯಿತು. ಅಜ್ಜಮೂಲೆ ಕಾಲೋನಿಯ ಸದಾನಂದ ಇವರ ಮನೆಯಲ್ಲಿ ಉದ್ಘಾಟನಾ ಸಮಾರಂಭ ನಡೆಯಿತು. ಇಲ್ಲಿನ ಸ್ಥಳೀಯ ಸುಮಾರು ಹನ್ನೊಂದು ಮನೆಗಳಿಗೆ ಸೋಲಾರ್ ಲೈಟ್ ಸೌಲಭ್ಯವನ್ನು ಒದಗಿಸಲಾಗಿದೆ. ಅಜ್ಜಮೂಲೆ ಕಾಲೋನಿಯ ಜನರು ಜನವಸತಿ ಸಭೆಯಲ್ಲಿ ವಿದ್ಯುತ್ ಸಮಸ್ಯೆಯನ್ನು ಗ್ರಾಮ ಪಂಚಾಯಿತಿನ ಗಮನಕ್ಕೆ ತಂದಿದ್ದರು....
ಕರ್ನಾಟಕ ರಾಜ್ಯ ಎನ್.ಎಸ್.ಯು.ಐ. ವತಿಯಿಂದ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗುರುತಿಸುವ ನಿಟ್ಟಿನಲ್ಲಿ ನಡೆಯುತ್ತಿರುವ "ನಮ್ಮೂರ ಹೆಮ್ಮೆ "ಕಾರ್ಯಕ್ರಮಕ್ಕೆ ಸೆ.8 ರಂದು ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ನಡೆಯಿತು . ಸುಳ್ಯ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚಾಲನೆಯನ್ನು ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಆಗಮಿಸಿ ಚಾಲನೆ ನೀಡಿದ್ದರು.ಅಧ್ಯಕ್ಷ...
ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಪದವಿ ಕಾಲೇಜಿನ ಹಿಂದಿ ಉಪನ್ಯಾಸಕಿ ದೇವಕಿ ಪ್ರಸನ್ನ ಜಿ.ಎಸ್. ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ.'ಮಧು ಕಾಂಕರಿಯಾ ಕೆ ಕಥಾ ಸಾಹಿತ್ಯ ಮೆ ಮಾನವೀಯ ಸಂವೇದನಾ' ಎನ್ನುವ ವಿಷಯದ ಬಗ್ಗೆ ಡಾ.ಪ್ರಭಾ.ವಿ.ಭಟ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ, ದೇವಕಿ ಪ್ರಸನ್ನ ಅವರು ಪ್ರಬಂಧ ಮಂಡಿಸಿದ್ದರು.ಅವರು ಪುತ್ತೂರಿನ ಕ್ಯಾಂಪ್ಕೋ ಉದ್ಯೋಗಿ...
Loading posts...
All posts loaded
No more posts
