ಮೊಗ್ರ : ರಕ್ಷಾ ನಾಗರಿಕ ಬಳಗ ಅಸ್ತಿತ್ವಕ್ಕೆ

ಗುತ್ತಿಗಾರು ಗ್ರಾಮದ ಮೊಗ್ರ, ಮಲ್ಕಜೆ, ಕಿನ್ನಿಕುಮೇರಿ ಭಾಗದ ಸುಮಾರು 60 ಮನೆಗಳ ಸದಸ್ಯರು ಒಟ್ಟು ಸೇರಿ ರಕ್ಷಾ ನಾಗರಿಕ ಬಳಗ ಎಂಬ ಸಮಾಜಸೇವಾ ಸಂಘಟನೆಯನ್ನು ರಚಿಸಿರುತ್ತಾರೆ.ಸಂಘಟನೆಯ ಅಧ್ಯಕ್ಷರಾಗಿ ಲ| ನಾಗೇಶ್ ಕಿನ್ನಿಕುಮೇರಿ, ಪ್ರಧಾನ ಕಾರ್ಯದರ್ಶಿಯಾಗಿ ಜೇಸಿ ಜೀವನ್ ಮಲ್ಕಜೆ, ಖಜಾಂಚಿಯಾಗಿ ದಯಾನಂದ ಕಿನ್ನಿಕುಮೇರಿಯವರನ್ನು ಆಯ್ಕೆ ಮಾಡಲಾಯಿತು.ಸಂಚಾಲಕರಾಗಿ ಲಯನ್ ಕರುಣಾಕರ ಎಣ್ಣೆಮಜಲು, ಸುಧಾಕರ ಮಲ್ಕಜೆ, ಉಮೇಶ ಮಕ್ಕಿ,...

ಬೆಳ್ಳಾರೆ ಪ್ರಾಥಮಿಕ ಕೃ.ಪ.ಸ.ಸಂಘದ ಅಧ್ಯಕ್ಷರಾಗಿ ಆರ್.ಕೆ.ಭಟ್.ಕುರುಂಬುಡೇలు,ಸಂಘದ ಉಪಾಧ್ಯಕ್ಷರಾಗಿ ಪದ್ಮನಾಭ ಶೆಟ್ಟಿ ಅವಿರೋಧ ಆಯ್ಕೆ

ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಮಕೃಷ್ಣ ಭಟ್ ಕುರುಂಬುಡೇಲು ಮತ್ತು ಉಪಾಧ್ಯಕ್ಷರಾಗಿ ಪದ್ಮನಾಭ ಶೆಟ್ಟಿ ಪೆರುವಾಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ 11 ಮಂದಿ ಅಭ್ಯರ್ಥಿಗಳು ಚುನಾವಣೆಯಲ್ಲಿ ನಿರ್ದೇಶಕರಾಗಿ ಆಯ್ಕೆಯಾಗಿದ್ದರು. ಇಂದು ನಡೆದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯ ಸಂದರ್ಭದಲ್ಲಿ ರಾಮಕೃಷ್ಣ ಭಟ್ ಕುರುಂಬುಡೇಲು ಅಧ್ಯಕ್ಷತೆಗೆ ಮತ್ತು...
Ad Widget

ಕಲ್ಮಕಾರು : ಭಜನಾ ಮಂದಿರದ ಉಪ ಕಟ್ಟಡಕ್ಕೆ ಶ್ರೀ.ಕ್ಷೇ.ಧ.ಗ್ರಾ ಯೋಜನೆಯ ವತಿಯಿಂದ 1 ಲಕ್ಷ ಅನುದಾನ

ಶ್ರೀ ಅಯ್ಯಪ್ಪ ಭಜನಾ ಮಂದಿರ ಶಕ್ತಿನಗರ ಕಲ್ಮಕಾರು ಇದರ ಉಪ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜ.07 ರಂದು ಅನುದಾನವನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಗಳಾದ ಮಾಧವ ಗೌಡ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯ ಅಧ್ಯಕ್ಷರಾದ ತೀರ್ಥರಾಮ ದೋಣಿಪಳ್ಳ, ಕಲ್ಮಕಾರು ಒಕ್ಕೂಟದ...

ಅರಂತೋಡು:-ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕಾರ್ಯಕ್ರಮ

ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ ನಡೆಸಲಾಯಿತು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭೌತಶಾಸ್ತ್ರ ಉಪನ್ಯಾಸಕರಾದ ಶ್ರೀ ಸುರೇಶ್ ವಾಗ್ಲೆ ವಹಿಸಿಕೊಂಡಿದ್ದರು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾದ ಶ್ರೀಮತಿ ಗಾಯತ್ರಿ ಜಿಲ್ಲಾ ಮುಖ್ಯ ಗ್ರಂಥಾಲಯಾಧಿಕಾರಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಮಾರ್ಗದರ್ಶನ ನೀಡಿದರು ಅರ್ಥಶಾಸ್ತ್ರ ಉನ್ಯಾಸಕ ಶ್ರೀ...

ರಾಜ್ಯಮಟ್ಟದ ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆ ,ಸುಳ್ಯದ ಸ್ಪರ್ಧಿ ಶಶ್ಮಿ ಭಟ್ ಭಾಗಿ.

ಅಂತಾರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ -2025 ರಾಜ್ಯಮಟ್ಟದ ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆಯು ಬೆಂಗಳೂರು ಸ್ಲರ್ಪ್ ಅಕಾಡೆಮಿಯಲ್ಲಿ ನಡೆಯುತ್ತಿದ್ದು ಜಿಲ್ಲಾ ಮಟ್ಟದಲ್ಲಿ ನಡೆದ ಸ್ಪರ್ಧೆಯಲ್ಲಿ ಪ್ರಥನ ಬಹುಮಾನ ಪಡೆದ ತಂಡಗಳನ್ನು ಮಂಗಳೂರು ಜಂಟಿ ಸಹಾಯಕ ಕೃಷಿ ನಿರ್ದೇಶಕ ಕಛೇರಿಯ ಧನಲಕ್ಷ್ಮೀ ಡಿ. ಎನ್ ಇವರ ನೇತೃತ್ವದಲ್ಲಿ ಬೆಂಗಳೂರಿನ ಸ್ಪರ್ಧೆಯಲ್ಲಿ ಭಾಗವಹಿಸಲಾಯಿತು.ಮಂಗಳೂರಿನಲ್ಲಿ...

ನಾಳೆ (ಜ. 08) ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿಗಳ ಕಚೇರಿ ಎದುರು ರೈತರಿಂದ ಬೃಹತ್ ಪ್ರತಿಭಟನೆ

ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿಸರ್ವೇ ಆಗಬೇಕೆಂಬ ವಿಚಾರವಾಗಿ ಸುಬ್ರಹ್ಮಣ್ಯ ವಲಯದ ಅಡಿಯಲ್ಲಿ ಬರುವ ಕೃಷಿಕರಿಂದ ಜ. 08 ರಂದು ಬೃಹತ್ ಪ್ರತಿಭಟನೆ ನಡೆಯಲಿದೆ. ಮಲೆನಾಡು ಜನಹಿತರಕ್ಷಣಾ ವೇದಿಕೆಯ ಅಡಿಯಲ್ಲಿ ಈ ಪ್ರತಿಭಟನೆ ನಡೆಯುತ್ತಿದ್ದು ಈ ಪ್ರತಿಭಟನೆಯ ನಂತರದ ದಿನಗಳಲ್ಲಿ ಪಂಜ,ಸುಳ್ಯ ಹಾಗೂ ಉಪ್ಪಿನಂಗಡಿಯಲ್ಲಿಯೂ ವಲಯ ಅರಣ್ಯಾಧಿಕಾರಿಗಳ ಕಚೇರಿ ಮುಂದೆ ಧರಣಿ...

ಸುಳ್ಯ: ಪುರದೊಡೆಯನಿಗೆ ಜಾತ್ರಾ ಸಂಭ್ರಮ , ಜನವರಿ 10 ರಂದು ವೈಭವದ ಬ್ರಹ್ಮ ರಥೋತ್ಸವ

ಸುಳ್ಯದ ಪುರದೊಡೆಯ ಶ್ರೀ ಚನ್ನಕೇಶವನಿಗೆ ಜಾತ್ರಾ ಸಂಭ್ರಮ ಸುಮಾರು 300 ವರ್ಷಗಳ ನಂತರ ನೂತನವಾಗಿ ಆಗಮಿಸಿದ ವಿಶೇಷವಾದ ಬ್ರಹ್ಮರಥ ಸಮರ್ಪಣೆಯ ನಂತರದ ಪ್ರಥಮ ಜಾತ್ರಾ ಮಹೋತ್ಸವ ಇದಾಗಿದ್ದು ಬ್ರಹ್ಮರಥವು ವಿಶೇಷ ಆಕರ್ಷಣೀಯ ಕೇಂದ್ರವಾದ ಕಾರಣ ತಾಲ್ಲೂಕಿನ ಮೂಲೆ ಮೂಲೆಗಳಿಂದ ಅತಿ ಹೆಚ್ಚು ಜನರು ಜಾತ್ರೆಗೆ ಆಗಮಿಸಿ. ಬ್ರಹ್ಮರಥೋತ್ಸವವನ್ನು ಕಣ್ತುಂಬಿಕೊಳ್ಳಲಿದ್ದಾರೆ ದಿನಾಂಕ 07-01-2025ನೇ ಮಂಗಳವಾರ ರಾತ್ರಿ ಉತ್ಸವ...

ಸಮಹಾದಿ ರಿಫಾಯಿ ಯೂತ್ ಫೆಡರೇಷನ್ (RYF) ಸಮಿತಿ ರಚನೆ : ಅಧ್ಯಕ್ಷರಾಗಿ ಮಹಮ್ಮದ್ ಬಶೀರ್ ರಾಗಿಪೇಟೆ – ಪ್ರಧಾನ ಕಾರ್ಯದರ್ಶಿ ಮುಸ್ತಫಾ ಸಮಹಾದಿ ಆಯ್ಕೆ

ರಿಫಾಯಿ ಜುಮ್ಮಾ ಮಸ್ಜಿದ್ ಸಮಹಾದಿ ಇದರ ಅಧೀನದಲ್ಲಿ ರಿಫಾಯಿ ಯೂತ್ ಫೆಡರೇಶನ್ ಸಮಹಾದಿ ಎಂಬ ನೂತನ ಯುವಕರ ಸಂಘಟನೆಯನ್ನು ರಚಿಸಲಾಯಿತು.ಇದರ ರೂಪೀಕರಣ ಸಭೆಯು ಬೈತಡ್ಕ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಇದರ ಅಧ್ಯಕ್ಷರಾದ ಬಿ.ಪಿ ಇಸ್ಮಾಯಿಲ್ ಹಾಜಿಯವರ ಅಧ್ಯಕ್ಷತೆಯಲ್ಲಿ ಸಮಹಾದಿ ಮಸೀದಿಯಲ್ಲಿ ನಡೆಯಿತು. ಮಸೀದಿ ಖತೀಬರಾದ ಬಹು| ರಫೀಕ್ ನಿಝಾಮಿ ಉಸ್ತಾದ್ ರು ಪ್ರಾಸ್ತಾವಿಕವಾಗಿ...

ಪೆರಾಜೆ : ತೋಟಕ್ಕೆ ಆನೆ ದಾಳಿ – ಅಪಾರ ಕೃಷಿ ನಷ್ಟ

ಪೆರಾಜೆ ಗ್ರಾಮದ ಬಂಗಾರಕೋಡಿ ಪರಿಸರದಲ್ಲಿ ಕಾಡಾನೆಗಳು ತೋಟಗಳಿಗೆ ದಾಳಿ ನಡೆಸಿ ಅಪಾರ ಪ್ರಮಾಣದ ಕೃಷಿ ನಷ್ಟ ಮಾಡಿರುವ ಘಟನೆ ವರದಿಯಾಗಿದೆ. ಬಂಗಾರಕೋಡಿ ಜಯರಾಮ ಎಂಬವರ ತೋಟಕ್ಕೆ ಕಳೆದ ರಾತ್ರಿ ನುಗ್ಗಿರುವ ಕಾಡಾನೆಗಳು ಅಪಾರ ಪ್ರಮಾಣದ ಬಾಳೆಗಿಡಗಳು,ತೆಂಗು, ಅಡಿಕೆ ಗಿಡಗಳನ್ನು ನಾಶ ಮಾಡಿರುವ ಬಗ್ಗೆ ವರದಿಯಾಗಿದೆ.

ಕಲ್ಮಕಾರು : ಬಿಜೆಪಿ ಸೇರ್ಪಡೆಗೊಂಡ ಸುಬ್ರಹ್ಮಣ್ಯ ಕೊಪ್ಪಡ್ಕ

ಕಲ್ಮಕಾರು ಗ್ರಾಮದ ಕೊಪ್ಪಡ್ಕ ಸುಬ್ರಹ್ಮಣ್ಯ ಕೊಪ್ಪಡ್ಕ ಮತ್ತು ಮೇನಕ ಸುಬ್ರಹ್ಮಣ್ಯ ಇವರು ಬಿಜೆಪಿಯ ತತ್ವ ಸಿದ್ಧಾಂತಗಳಿಗೆ ಬದ್ದವಾಗಿ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ನವೀನ್ ಮುಳುಗಾಡು, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕೃಷ್ಣಯ್ಯ ಮೂಲೆತೋಟ ಇವರ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಯಾದರು.
Loading posts...

All posts loaded

No more posts

error: Content is protected !!