- Saturday
- March 14th, 2026
ಭೂಸುಧಾರಣಾ ಕಾಯಿದೆ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯಿದೆ ಮತ್ತು ಇತರೆ ಕಾಯ್ದೆಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಸಂಪಾಜೆಯಿಂದ ಮಂಗಳೂರಿಗೆ ವಿಶೇಷ ಜಾಥಾ ನಡೆಯಲಿದೆ ಎಂದು ರೈತ ಸಂಘದ ಅಧ್ಯಕ್ಷರಾದ ಲೋಲಜಾಕ್ಷ ಭೂತಕಲ್ಲು ಹೇಳಿದರು.ಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರೈತ ದಲಿತ ಕಾರ್ಮಿಕ ಜನಪರ ಚಳುವಳಿಗಳ ಒಕ್ಕೂಟ ದಕ್ಷಿಣಕನ್ನಡ...
ಕುಕ್ಕಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಂಟ್ರಾಕ್ಟರ್ ಸುನಿಲ್ ನಾಯ್ಕ್ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿನ್ನೆ ರಾತ್ರಿ (ಸೆ.7) ನಿಧನರಾದರು. ಅವರಿಗೆ 46 ವರ್ಷ ವಯಸ್ಸಾಗಿತ್ತು. ಪುತ್ತೂರು ಬೀದಿಮಜಲಿನವರಾಗಿದ್ದ ಇವರು ಹಲವು ವರ್ಷಗಳಿಂದ ಸುಬ್ರಹ್ಮಣ್ಯದಲ್ಲಿ ಕಂಟ್ರಾಕ್ಟರ್ ವೃತ್ತಿ ಮಾಡುತಿದ್ದರು. ಮೃತರು ತಂದೆ ಭಾಸ್ಕರ ನಾಯ್ಕ್, ತಾಯಿ, ಪತ್ನಿ ಪೂನಂ, ಇಬ್ಬರು ಮಕ್ಕಳು ಹಾಗೂ ಹಲವಾರು ಬಂಧುಮಿತ್ರರನ್ನು ಅಗಲಿದ್ದಾರೆ.
ಲಖನ್ ಸಿಂಗ್ ಯಾದವ್ ಪುತ್ತೂರು ಉಪವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಿವೈಎಸ್ಪಿ ದಿನಕರ್ ಶೆಟ್ಟಿಯವರಿಗೆ ವರ್ಗಾವಣೆಯಾಗಿದ್ದು, ಅವರ ಜಾಗಕ್ಕೆ ನೂತನ ಐಪಿಎಸ್ ಅಧಿಕಾರಿ ಎ.ಎಸ್ಪಿ ಲಖನ್ ಸಿಂಗ್ ಯಾದವ್ ಸೆ.6ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಲಖನ್ ಸಿಂಗ್ ಯಾದವ್ ಅವರು ಮೈಸೂರಿನಲ್ಲಿ ಪ್ರೊಬೆಷನರಿ ಎ.ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ವರ್ಗಾವಣೆಗೊಂಡಿರುವ ಡಿವೈಎಸ್ಪಿ ದಿನಕರ್ ಶೆಟ್ಟಿಯ ಅವರು ಸುರತ್ಕಲ್ ನಿವಾಸಿಯಾಗಿದ್ದು ಈ ಹಿಂದೆ...
ಆರಂತೋಡು ಗ್ರಾಮ ಪಂಚಾಯತ್ ಸ. ನಂ 127/1 p 1 ರಲ್ಲಿ ಈ ಹಿಂದೆ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಲು ಯೋಜನೆ ಹಾಕಿದ ಸ್ಥಳ ವಿರೋಧ ಬಂದು ಕೊಡಂಕೇರಿಗೆ ಸ್ಥಳಾಂತರ ಗೊಂಡಿತ್ತು. ಇದೀಗ ಈ ಜಾಗಕ್ಕೆ ಪಂಚಾಯತ್ ಬೇಲಿ ಹಾಕುವ ವೇಳೆ ಮತ್ತೊಮ್ಮೆ ವಿವಾದ ಉಂಟಾಗಿ ದಲಿತ್ ಸೇವಾ ಸಮಿತಿ ಆಕ್ಷೇಪ ವ್ಯಕ್ತಪಡಿಸಿರುವುದರಿಂದ ಕಂದಾಯ ಇಲಾಖೆ...
ಸುಬ್ರಹ್ಮಣ್ಯ ಗ್ರಾಮದ ನೂಚಿಲ ನಿವಾಸಿ, ಖ್ಯಾತ ಯಕ್ಷಗಾನ ಕಲಾವಿದ ಗಂಗಾಧರ ಬಾರಿಗ ಸೆ.07 ರಂದು ತಮ್ಮ ಸ್ವಗೃಹದಲ್ಲಿ ನಿಧನರಾದರು. ಇವರಿಗೆ 54 ವರ್ಷ ವಯಸ್ಸಾಗಿತ್ತು. ಕೆಲ ದಿನಗಳಿಂದ ಇವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.ಯಕ್ಷಗಾನ ಕಲಾವಿದರಾಗಿ ಧರ್ಮಸ್ಥಳ ಮೇಳ ಹಾಗೂ ಬಪ್ಪನಾಡು ಮೇಳಗಳಲ್ಲಿ ಸೇವೆ ಸಲ್ಲಿಸಿರುವ ಇವರು, ಸುಬ್ರಹ್ಮಣ್ಯದಲ್ಲಿ ಶ್ರೀ ವಾಸುಕಿ ಯಕ್ಷಗಾನ ಕಲಾಕೇಂದ್ರ (ರಿ) ಸಂಸ್ಥೆಯ...
ದ.ಕ.ಜಿಲ್ಲಾ ಸ್ಕೌಟ್ ಮತ್ತು ಗೈಡ್ಸ್ ಆಶ್ರಯದಲ್ಲಿ ನಡೆದ ವರ್ಚುವಲ್ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿದ ಜಿಲ್ಲೆಯ 28 ಸ್ಕೌಟ್ ವಿದ್ಯಾರ್ಥಿಗಳಲ್ಲಿ ಆಳ್ವಾಸ್ ಹಿರಿಯ ಪ್ರಾಥಮಿಕ ಶಾಲೆಯ 7 ನೇ ತರಗತಿಯ ಮನುಜ ನೇಹಿಗ ಸುಳ್ಯ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.ಈತ ರಂಗನಿರ್ದೇಶಕ ಜೀವನ್ ರಾಂ ಸುಳ್ಯ ಮತ್ತು ಡಾ| ಮೌಲ್ಯ ದಂಪತಿಗಳ ಪುತ್ರನಾಗಿದ್ದಾನೆ.
ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯಲ್ಲಿ 33/11 ಕೆ.ವಿ. ದ್ವಿ. ಮಾರ್ಗ ರಚನೆ ಕಾಮಾಗಾರಿಯನ್ನು ಸೆ. 9 ಬುಧವಾರದಂದು ಹಮ್ಮಿಕೊಂಡಿರುವುದ್ದರಿಂದ ಸುಳ್ಯ 33/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11 ಕೆ.ವಿ ಸುಳ್ಯ-1 ಕೇರ್ಪಳ, ಶ್ರೀರಾಂಪೇಟೆ, ಸಂಪಾಜೆ ಫೀಡರುಗಳಲ್ಲಿ ಬೆಳಿಗ್ಗೆ 1೦ ರಿಂದ ಸಾಯಂಕಾಲ 6 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕಾಗಿ...
ಕೇಂದ್ರ ಸರಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಭಾರತೀಯ ಜನೌಷಧಿ ಕೇಂದ್ರ ಬಡವರ ಮತ್ತು ಮಧ್ಯಮ ವರ್ಗದ ಪಾಲಿಗೆ ಶ್ರೀರಕ್ಷೆಯಾಗಿದೆ. ಸುಳ್ಯ ತಾಲೂಕಿನ ಒಂದು ಬಡಕುಟುಂಬದ ಒಬ್ಬರು ಸದಸ್ಯರಿಗೆ ದೇಹದ ಒಂದು ಭಾಗದ ನರದಲ್ಲಿ ರಕ್ತ ಸಂಚಾಲನದ ಆಗದೆ ಆರೋಗ್ಯದಲ್ಲಿ ಏರುಪೇರು ಆಗಿತ್ತು. ನಂತರ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಯಿತು. ದುಡಿಯುವ ಕೈ ಶಕ್ತಿ...
ಗ್ರಾಮ ಪಂಚಾಯಿತಿ ಚುನಾವಣೆಯ ಪೂರ್ವ ತಯಾರಿ ಸಭೆ ಯುವಜನ ಸಂಯುಕ್ತ ಮಂಡಳಿ ಸಭಾಂಗಣ ಸೆ. 8 ರಂದು ಪೂ.10.00 ಗಂಟೆಗೆ ನಡೆಯಲಿದೆ.ಗ್ರಾಮ ಪಂಚಾಯಿತಿಗಳಿಗೆ ಶೀಘ್ರವೇ ಚುನಾವಣೆ ಜರುಗಲಿದ್ದು, ಸಂಬಂಧ ಪಟ್ಟಂತೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ರಾದ ಶ್ರೀ ಮಿಥುನ್ ರೈ ಯವರು ಸುಳ್ಯಕ್ಕೆ ಆಗಮಿಸಲಿದ್ದು ಚುನಾವಣೆ ಪೂರ್ವ ತಯಾರಿ ಸಭೆ ನಡೆಸಲಿದ್ದಾರೆ ಎಂದು ಬ್ಲಾಕ್...
ಬೆಳ್ಳಾರೆ ಸಮುದಾಯ ಆರೋಗ್ಯ ಕೇಂದ್ರವನ್ನು ಶೀಘ್ರವಾಗಿ ಕಾರ್ಯಾರಂಭ ಗೊಳಿಸುವಂತೆ ಆಗ್ರಹಿಸಿ ಎಸ್ಡಿಪಿಐ ವತಿಯಿಂದ ಮನವಿ
ಸುಳ್ಯ ತಾಲೂಕಿನ ಬೆಳ್ಳಾರೆ ಪ್ರಾರ್ಥಮಿಕ ಆರೋಗ್ಯ ಕೇಂದ್ರವು ಎಲ್ಲಾ ಮೂಲಭೂತ ಸೌಕರ್ಯಗಳೊಂದಿಗೆ ಸಮುದಾಯ ಆರೋಗ್ಯ ಕೇಂದ್ರ ವಾಗಿ ಮಾರ್ಪಾಡುಗೊಂಡು ಮೂರು ವರ್ಷ ಕಳೆದರೂ ಇನ್ನೂ ಕೂಡ ಕಾರ್ಯಾರಂಭ ಗೊಂಡಿರುವುದಿಲ್ಲ. ಬೆಳ್ಳಾರೆ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಜನರು ತುರ್ತು ಸಂದರ್ಭದಲ್ಲಿ ಇದೇ ಕೇಂದ್ರವನ್ನು ಅವಲಂಬಿಸಿರುತ್ತಾರೆ. ಆದರೆ ಇಲ್ಲಿ ಖಾಯಂ ವೈದ್ಯರು ಇಲ್ಲದೇ ಇರುವುದರಿಂದ ಆಸುಪಾಸಿನ ಜನರು ಸಂಕಷ್ಟ...
Loading posts...
All posts loaded
No more posts
