- Monday
- June 22nd, 2026
ಸರಕಾರಿ ಶಾಲೆಗಳ ಉತ್ತೇಜನಕ್ಕೆ ಹಲವಾರು ರೀತಿಯ ಯೋಜನೆಗಳನ್ನು ಸರಕಾರಗಳು ನಡೆಸುತ್ತಿದ್ದು ಖಾಸಗಿ ಶಾಲೆಗಳ ಸ್ಪರ್ಧೆಯಿಂದ ವಿದ್ಯಾರ್ಥಿಗಳ ಕೊರತೆ ಎದುರಿಸುತ್ತಿರುವಾಗ ಸರಕಾರಿ ಶಾಲೆಗಳಿಗೆ ಸರಕಾರಿ ಸಂಸ್ಥೆಯೇ ನೀರಿನ ಸಂಪರ್ಕ ಕಡಿತ ಗೊಳಿಸಿದ್ದರು. ಈ ಶಾಲೆಯವರು ದೂರು ಸಲ್ಲಿಸಿದ ಬಳಿಕ ಹಿರಿಯ ಅಧಿಕಾರಿಗಳ ಖಡಕ್ ಎಚ್ಚರಿಕೆಯ ಬಳಿಕ ನೀರಿನ ಸಂಪರ್ಕ ಮರು ಜೋಡಣೆ ನಡೆಸಿದ ಘಟನೆ ಜ.೩ ರಂದು...
ಕನ್ನಡ ಚಿತ್ರರಂಗದ ಸಾಹಸ ಸಿಂಹ ಅಭಿನಯ ಭಾರ್ಗವ ಡಾ. ವಿಷ್ಣುವರ್ಧನ್ ಅಭಿಮಾನಿಗಳು ಸಂಘದ ವತಿಯಿಂದ ಡಾ.ವಿಷ್ಣುವರ್ಧನ್ ರವರ 15 ನೇ ಪುಣ್ಯತಿಥಿ ಕಾರ್ಯಕ್ರಮ ಸುಳ್ಯದ ಪಂಡಿತ್ ಕಾಂಪ್ಲೆಕ್ಸ್ ನಲ್ಲಿ ಹಲವಾರು ಅಭಿಮಾನಿಗಳ ಸಮ್ಮುಖದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಡಾ. ವಿಷ್ಣುವರ್ಧನ್ ಅಭಿಮಾನಿಗಳ ಸಂಘದ ಅಧ್ಯಕ್ಷ ಹರಿಶ್ಚಂದ್ರ ಪಂಡಿತ್, ಹಮೀದ್ ರಥಬೀದಿ, ಅಪೂರ್ವ, ಅಮೂಲ್ಯ, ರಾಹುಲ್, ಶಿವ,...
ಸರ್ವ ಕ್ರೈಸ್ತ ವಿಭಾಗಗಳ ಐಕ್ಯತೆ ಮತ್ತು ಕಲ್ಯಾಣ ಕಾರ್ಯಗಳನ್ನು ಮುಂದಿಟ್ಟುಕೊಂಡು ಸಂಪಾಜೆಯಲ್ಲಿ ಸರ್ವ ಕ್ರೈಸ್ತ ಸಮೂದಾಯ ಸಂಘಟನೆ ಅಸ್ತಿತ್ವಕ್ಕೆ ಬಂದಿದ್ದು, ರಾಜೇಶ್ ಡಿಸೋಜ ಹಾಗೂ ಸಂತೋಷ್ ಕ್ರಾಸ್ತಾ ಇವರುಗಳು ದೀಪ ಬೆಳಗಿಸುವ ಜ.1 ರಂದು ಉದ್ಘಾಟಿಸಿದರು. ಸಮಾಜಕ್ಕೆ ಕ್ರೈಸ್ತರ ತ್ಯಾಗ ,ಸೇವೆ ಮತ್ತು ಕೊಡುಗೆಗಳ ಅರಿವು ಮೂಡಿಸುವುದು ಮತ್ತು ಸಮೂದಾಯದ ಧಮನಿತರು ಮತ್ತು ದೀನರಿಗೆ ನೆರವಾಗುವುದು...
ಎಡಮಂಗಲ ಗ್ರಾಮದ ಹೇಮಳ ದಿ. ಈಶ್ವರ ಗೌಡರ ಪುತ್ರ, ಬಂಟ್ವಾಳ ಬಿಇಒ ಕಚೇರಿಯಲ್ಲಿ ಉದ್ಯೋಗಿಯಾಗಿದ್ದ ಪ್ರಕಾಶ್ಚಂದ್ರ ಹೇಮಳರವರು ಅಸೌಖ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ನಿಧನರಾದರು. ಅವರಿಗೆ 41 ವರ್ಷ ವಯಸ್ಸಾಗಿತ್ತು. ಸುಳ್ಯ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಉದ್ಯೋಗಿಯಾಗಿದ್ದ ಇವರು ಆ ಬಳಿಕ ಬಂಟ್ವಾಳ ಬಿಇಒ ಕಚೇರಿ ಗೆ ಅಧೀಕ್ಷಕರಾಗಿ...
ಧಾರ್ಮಿಕ ಕೇಂದ್ರಗಳ ಜೀರ್ಣೋದ್ಧಾರ ಮಾಡಬೇಕಾದುದು ನಮ್ಮ ಕರ್ತವ್ಯ. ದೇವಾಲಯಗಳು ಸಂಸ್ಕಾರ, ಸಂಸ್ಕೃತಿ ಸಾರುವ ಪ್ರಧಾನ ಕೇಂದ್ರ ಎಂದು ಕಾಸರಗೋಡು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ನುಡಿದರು. ಎಡಮಂಗಲ ಗ್ರಾಮದ ಕೇರ್ಪಡ ಶ್ರೀ ಮಹಿಷಮರ್ದಿನೀ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಮೊದಲ ದಿನದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.ಯುವಜನತೆಯಲ್ಲಿ ಧಾರ್ಮಿಕ ಶ್ರದ್ಧೆ...
ಅಜ್ಜಾವರ ಗ್ರಾಮದ ಹಲವು ವರ್ಷಗಳ ಬೇಡಿಕೆಯಾದಸುಳ್ಯ ಅಡ್ಕಾರ್,ಪೇರಾಲು ಮಾರ್ಗವಾಗಿ ಅಡ್ಪಂಗಾಯಕ್ಕೆ ಸರ್ಕಾರಿ ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸುವಂತೆ ಹಲವಾರು ವರ್ಷಗಳಿಂದ ಪ್ರಯತ್ನಿಸುತ್ತಿದ್ದರು ಆದರೆ ಅದು ಸಾಧ್ಯವಾಗದೇ ಇದ್ದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರ ನೇತೃತ್ವದಲ್ಲಿ ಅಧಿಕಾರಿಗಳಿಗೆ ತಿಳಿಸಿ ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ನಡೆದ ಗ್ರಾಮ ಮಟ್ಟದ ವಿಲೇವಾರಿ ಸಭೆಯಲ್ಲಿಯು ಪ್ರತಿಧ್ವನಿಸಿದ ಪರಿಣಾಮವಾಗಿ ಸಾರ್ವಜನಿಕರಿಗೆ ಮತ್ತು...
ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಅವರು ಹಿರಿಯ ಸಹಾಯಕ ಆಯುಕ್ತರಾಗಿ ಭಡ್ತಿ ಹೊಂದಿರುತ್ತಾರೆ. ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿಗಳು ಆಗಿರುವ ಜುಬಿನ್ ಮೊಹಪಾತ್ರ ರನ್ನು ಶ್ರೀ ದೇವಳದ ಆಡಳಿತ ಕಚೇರಿಯಲ್ಲಿ ಅಭಿನಂದಿಸಲಾಯಿತು. ಪದೋನ್ನತಿ ಹೊಂದಿದ ಅಧಿಕಾರಿಯನ್ನು ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಗೌರವಿಸಿದರು.ಈ ಸಂದರ್ಭ ಶ್ರೀ ದೇವಳದ...
ರೋಟರಿ ಕ್ಲಬ್ ಬೆಳ್ಳಾರೆ ಟೌನ್,ಜೇಸಿಐ ಬೆಳ್ಳಾರೆ, ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗಾ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಧತ್ವ ನಿವಾರಣಾ ವಿಭಾಗ ಮಂಗಳೂರು ಇವುಗಳ...
ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೋಮಶೇಖರ ಕೊಯಿಂಗಾಜೆ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಯಮುನ ಬಿ.ಎಸ್. ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜ.2ರಂದು ನಡೆದ ನೂತನ ಅಧ್ಯಕ್ಷ - ಉಪಾಧ್ಯಕ್ಷರ ಆಯ್ಕೆ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸೋಮಶೇಖರ ಕೊಯಿಂಗಾಜೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶ್ರೀಮತಿ ಯಮುನ ಬಿ.ಎಸ್. ಅವರು ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾವುದೇ...
ಅಮರಪಡೂರು ಗ್ರಾಮದ ಕಣಿಪ್ಪಿಲ ಎಂಬಲ್ಲಿ ಇಂದು ಬೆಳಿಗ್ಗೆ ಪಿಕಪ್ ಪಲ್ಟಿಯಾದ ಘಟನೆ ವರದಿಯಾಗಿದೆ. ಚೊಕ್ಕಾಡಿಯಿಂದ ಸುಳ್ಯಕ್ಕೆ ಕೆಲಸಕ್ಕೆ ಜನರನ್ನು ಕರೆದುಕೊಂಡು ಹೋಗುತ್ತಿದ್ದ ಪಿಕಪ್ ಪಲ್ಟಿಯಾಗಿದ್ದು, ಅದರಲ್ಲಿ 6 ಜನ ಇದ್ದರು. ಪಲ್ಟಿಯಾದ ರಭಸಕ್ಕೆ ಎಲ್ಲರಿಗೂ ಗಾಯಗಳಾಗಿದ್ದು, ಅವರ ಸುಳ್ಯ ಆಸ್ಪತ್ರೆ ಗೆ ಚಿಕಿತ್ಸೆಗೆ ಕರೆತರಲಾಯಿತು. ಈ ಪಿಕಪ್ ನಲ್ಲಿ ಯತೀನ್ ಪುಳಿಮರಡ್ಕ ಚಾಲಕರಾಗಿದ್ದರು ಎಂದು ಹೇಳಲಾಗುತ್ತಿದೆ.
Loading posts...
All posts loaded
No more posts
