ಕಾಡುಸೊರಂಜ ಅಮೈ ರಸ್ತೆ ಶ್ರಮದಾನ

ಮಂಡೆಕೋಲು ಗ್ರಾಮದ ಕಾಡುಸೊರಂಜ ಅಮೈ ರಸ್ತೆಯನ್ನು ಗ್ರಾಮಸ್ಥರು ದುರಸ್ತಿಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಮಿಥೇಶ್, ಕಿಶನ್, ದಯಾನಂದ,ಪ್ರದೀಪ್ ಶ್ರಮದಾನ ನಡೆಸಿದರು.

ರಾಜ್ಯಮಟ್ಟದ ಪ್ರತಿಭೆ ಅನುಷ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ,ಸಂಸದ ಕಟೀಲ್ ಅಭಿನಂದನೆ

ಬಿಜೆಪಿ ರಾಜ್ಯಾಧ್ಯಕ್ಷ ,ಸಂಸದ ನಳಿನ್ ಕುಮಾರ್ ಕಟೀಲ್ ಇಂದು ಸಂಜೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯಮಟ್ಟದಲ್ಲಿ ಮಿಂಚಿದ, ಗ್ರಾಮೀಣ ಪ್ರತಿಭೆ ಅನುಷ್ ಎ.ಎಲ್ ಮನೆಗೆ ಭೇಟಿ ನೀಡಿ ಸನ್ಮಾನಿಸಿದರು.ಈ ವೇಳೆ ಕಟೀಲ್ ರೊಂದಿಗೆ ಶಾಸಕ ಎಸ್.ಅಂಗಾರ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಬಿಜೆಪಿ ತಾಲೂಕು ಅಧ್ಯಕ್ಷ ಹರೀಶ್ ಕಂಜಿಪಿಲಿ, ಗುತ್ತಿಗಾರು ಸಹಕಾರಿ...
Ad Widget

ಚೈತನ್ಯ ಸಂಪ್ಯಾಡಿ ಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 583 ಅಂಕ

ಮೊರಾರ್ಜಿ ದೇಸಾಯಿ ರೆಸಿಡೆನ್ಸಿ ಸ್ಕೂಲ್ ನೆಲ್ಲಿತೀರ್ಥ ಮಂಗಳೂರು ಇಲ್ಲಿನ ವಿದ್ಯಾರ್ಥಿ ಚೈತನ್ಯ ಎಸ್ ಕೆ. ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 583 ಅಂಕ ಪಡೆದು, (93.28%) ತೇರ್ಗಡೆ ಹೊಂದಿರುತ್ತಾಳೆ. ಇವಳು ಹಾಲೆಮಜಲು ಸಂಪ್ಯಾಡಿ ಕವಿತಾ ಕರುಣಾಕರ ಇವರ ಪುತ್ರಿ.

ಅಮರ ಸುದ್ದಿ ವರದಿಗೆ ಸ್ಪಂದಿಸಿದ ಉಸ್ತುವಾರಿ ಸಚಿವರು – ಸರಕಾರಿ ಆಸ್ಪತ್ರೆಯ ಕೋವಿಡ್ ವಿಭಾಗಕ್ಕೆ ಬಿಸಿನೀರಿಗಾಗಿ ನಾಳೆಯೇ ಗೀಸರ್ ಅಳವಡಿಕೆಗೆ ಸೂಚನೆ

ಸುಳ್ಯ ಸರಕಾರಿ ಆಸ್ಪತ್ರೆಯ ಕೋವಿಡ್ ವಾರ್ಡ್‌ನಲ್ಲಿರುವ ಪೇಷೆಂಟ್‌ಗಳಿಗೆ ಸ್ನಾನಕ್ಕೆ ಬಿಸಿನೀರು ಸಿಗದಿರುವ ಬಗ್ಗೆ ಅಮರ ಸುದ್ದಿ ವರದಿ ಪ್ರಕಟಿಸಿದ ಬೆನ್ನಲ್ಲೇ ಸಚಿವರು ಆರೋಗ್ಯಾಧಿಕಾರಿಗಳಿಗೆ ನಾಳೆಯೇ ಗೀಸರ್ ಅಳವಡಿಸಲು ಸೂಚಿಸಿದ್ದಾರೆ. ಇಂದು ಕಾರ್ಯನಿಮಿತ್ತ ಸುಳ್ಯಕ್ಕೆ ಬಂದಾಗ ಪತ್ರಕರ್ತರು ಪ್ರಶ್ನಿಸಿದಾಗ ಉತ್ತರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ನಾಳೆಯೇ ಸಮಸ್ಯೆ ನಿವಾರಿಸುವುದಾಗಿ ಹೇಳಿದರಲ್ಲದೆ ತಾಲೂಕು ವೈದ್ಯಾಧಿಕಾರಿಯವರನ್ನು...

ಅರಂತೋಡು ವಲಯ ಕಾಂಗ್ರೆಸ್ ಸಭೆ

ಅರಂತೋಡು ವಲಯ ಕಾಂಗ್ರೆಸ್ ಸಭೆಯು ವಲಯ ಕಾಂಗ್ರೆಸ್ ಅಧ್ಯಕ್ಷ ಜನಾರ್ಧನ ಅಡ್ಕಬಳೆ ಅಧ್ಯಕ್ಷತೆಯಲ್ಲಿ ಆ.16 ರಂದು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಿತು. ಸಭೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ, ಸುಳ್ಯ ಬ್ಲಾಕ್ ಕಾಂಗ್ರೆಸ್ ವಕ್ತಾರ ನಂದರಾಜ್ ಸಂಕೇಶ್, ದಿನೇಶ್ ಗುತ್ತಿಗಾರ್, ಅರಂತೋಡು ಗ್ರಾಮ ಪಂಚಾಯಿತ್ ಮಾಜಿ ಸದಸ್ಯ ಇದ್ದೀನ್ ಕುಂಞ,ಸುಳ್ಯ ವಿಧಾನ ಸಭಾ...

ಕಾಯರ್ತೋಡಿ ಮಿತ್ರ ಬಳಗದ ವತಿಯಿಂದ ಶ್ರಮದಾನ

ಮಿತ್ರಬಳಗ (ರಿ.) ಕಾಯರ್ತೋಡಿ ಮತ್ತು ಊರ ದಾನಿಗಳ ಸಹಕಾರದೊಂದಿಗೆ ಇಂದು ಗಾಂಧಿನಗರ ಶಾಲೆ ಹಿಂಭಾಗದ ಕಾಂಕ್ರೀಟ್ ರಸ್ತೆ ಹಾಗೂ ಉಬರಡ್ಕ ರಸ್ತೆಯಿಂದ ಕಾಯರ್ತೋಡಿ ಬೈಲಿಗೆ ಬರುವ ಕಾಂಕ್ರೀಟ್ ರಸ್ತೆ ಜಾರುವ ಸ್ಥಿತಿಯಲ್ಲಿದ್ದ ಕಾರಣ ಬ್ಲೀಚಿಂಗ್ ಪೌಡರ್, ಸುಣ್ಣ ಹಾಗೂ ಮರಳು ಹಾಕಿ ಶುಚಿಗೊಳಿಸುವ ಮೂಲಕ ಶ್ರಮದಾನ ಮಾಡಲಾಯಿತು.ಈ ಸಂದರ್ಭದಲ್ಲಿ ಮಿತ್ರ ಬಳಗದ ಅಧ್ಯಕ್ಷ ಮಹೇಶ್ ಕುದ್ಪಾಜೆ...

ಆ‌. 29 ರಂದು ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಮಹಾಸಭೆ

ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ(ರಿ)ಇದರ ಮಹಾಸಭೆ ಆ.29 ರಂದು ಶನಿವಾರ ಅಪರಾಹ್ನ 2-30ಕ್ಕೆ ಕೆವಿಜಿ ಕಾನೂನು ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಸಂಘದ ಎಲ್ಲಾ ಗೌರವಾನ್ವಿತ ಸದಸ್ಯರು ಮಾಸ್ಕ್ ಧರಿಸಿ ಹಾಜರಿದ್ದು ಸಲಹೆ ಸೂಚನೆಗಳನ್ನು ನೀಡಬೇಕೆಂದು ಸಂಘಟಕರು ತಿಳಿಸಿದ್ದಾರೆ.

ದರ್ಖಾಸ್ತು ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

ಸ.ಹಿ.ಪ್ರಾ.ಶಾಲೆ ದರ್ಖಾಸ್ತು ಇಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್.ಡಿ.ಎಂ.ಸಿ ಅಧ್ಯಕ್ಷೆ ಶ್ರೀಮತಿ ಸುಜಾತಾ ನೆರವೇರಿಸಿದರು. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶ್ರೀ ನಟರಾಜ್ ಸ್ವತಂತ್ರ ದಿನೋತ್ಸವ ಭಾಷಣಗೈದರು. ಪ್ರಭಾರ ಮುಖ್ಯಶಿಕ್ಷಕಿ ಶ್ರೀಮತಿ ಪಲ್ಲವಿ ಪಿ ಸ್ವಾಗತಿಸಿ, ಸಹಶಿಕ್ಷಕಿ ಪ್ರೇಮಾ ವಂದಿಸಿದರು. ಈ ಸಂದರ್ಭದಲ್ಲಿ ಶಾಲೆಯ ಹಳೆ ವಿದ್ಯಾರ್ಥಿಗಳು ಹಾಗೂ ಸಹಶಿಕ್ಷಕರು...

ಸುಳ್ಯದಲ್ಲಿ ಮೂರನೇ ಹಂತದ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ – ತರಬೇತಿ ಪಡೆದು ಸ್ವಾವಲಂಬಿ ಜೀವನ ನಡೆಸಲು ಸಿದ್ದರಾದ 243 ಜನ

ಗ್ರಾಮ ವಿಕಾಸ ಮಂಗಳೂರು ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.), ಸಹಕಾರ ಭಾರತಿ ದ.ಕ., ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ಸುಳ್ಯದ ಎ.ಪಿ.ಯಂ.ಸಿ ಸಭಾಂಗಣದಲ್ಲಿ ನಡೆದ  ಮೂರನೇ ಹಂತದ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ಸಮಾರೋಪ ಆ.15 ರಂದು ನಡೆಯಿತು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಎಸ್ ಅಂಗಾರ ವಹಿಸಿದ್ದರು. ಮುಖ್ಯ ಅತಿಥಿಯಾಗಿ...

ಹರಿಹರ ಪಲ್ಲತ್ತಡ್ಕ ಸಹಕಾರಿ ಸಂಘದಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆ

ಹರಿಹರವ ಪಲ್ಲತ್ತಡ್ಕ ಕೊಲ್ಲಮೊಗ್ರ ಪ್ರಾ.ಕೃ.ಪ.ಸ.ಸಂಘದ ಕಛೇರಿಯಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ನಿವೃತ್ತ ಉಪನ್ಯಾಸಕರಾದ ರಾಮಚಂದ್ರ ಪಳಂಗಾಯ ಧ್ವಜರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ವಿನೂಪ್ ಮಲ್ಲಾರ ಮತ್ತು ಉಪಾಧ್ಯಕ್ಷರಾದ ಮಣಿಕಂಠ ಕೊಳಗೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಷಪ್ಪ ಗೌಡ ಕಿರಿಭಾಗ, ಸಿಬ್ಬಂದಿ ವರ್ಗ ಮತ್ತು ಸಂಸ್ಥೆಯ ನಿರ್ದೇಶಕರು ಮತ್ತು ಸದಸ್ಯರು ಹಾಜರಿದ್ದರು.
Loading posts...

All posts loaded

No more posts

error: Content is protected !!