Ad Widget

*ತಂಟೆಪ್ಪಾಡಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ*

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ತಂಟೆಪ್ಪಾಡಿಯಲ್ಲಿ ಸ್ವಾತಂತ್ರ್ಯೋತ್ಸವ  ಆಚರಣೆ ನಡೆಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷ ಶೇಷಪ್ಪ ಕೆ ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಮುಖ್ಯಶಿಕ್ಷಕಿ ಗೀತಾ, ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಪಾರ್ವತಿ ಜಿ ಕೆ ಹಾಗೂ ಪೋಷಕರು ಉಪಸ್ಥಿತರಿದ್ದರು.

*ಬೊಳುಬೈಲು ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ*

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬೊಲುಬೈಲು ಇಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲ್ಪಟ್ಟಿತು. 74ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಮುಖ್ಯಶಿಕ್ಷಕಿ ಕೋಮಲ ನೆರವೇರಿಸಿದರು. ಸಹಶಿಕ್ಷಕಿ ರಾಧಮ್ಮ ಸಹಕರಿಸಿದರು.
Ad Widget

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ಸ್ವಾತಂತ್ರ್ಯ ದಿನಾಚರಣೆ

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ ಇಲ್ಲಿ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.ಧ್ವಜಾರೋಹಣವನ್ನು ಶಾಲಾ ಸಂಚಾಲಕರಾದ ಶ್ರೀ ಎನ್ ವೆಂಕಟ್ರಮಣ ಭಟ್ ನೆರವೇರಿಸಿದರು. ಮುಖ್ಯಶಿಕ್ಷಕರಾದ ಶ್ರೀ ಯಶೋಧರ ಎನ್ ಶುಭ ಹಾರೈಯಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಹರಿಪ್ರಸಾದ್ ರೈ ಜಿ ಇವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು. ಈ ಸಂದರ್ಭದಲ್ಲಿ ಎಲ್ಲಾ ಶಿಕ್ಷಕರು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

ದಾಸ್ಯತನದ ಸಂಕೋಲೆಯಿಂದ ಬಿಡುಗಡೆ ಹೊಂದಿರುವ ಸಂಭ್ರಮ ಇಂದು

ಉದಾರತೆ, ಶಾಂತಿ ಶುಚಿತೆಗಳಲ್ಲಿ ಮಾನವೀಯತೆಯು ತುತ್ತ ತುದಿ ತಲುಪಿರುವ ಅನೇಕ ಋಷಿಮುನಿಗಳ ತಪೋ ಭೂಮಿ ಭಾರತ.ಜನನೀ ಜನ್ಮಭೂಮಿಶ್ಚ ಸ್ವರ್ಗಾದಪಿ ಗರೀಯಸಿ ಎಂದು ಭಾವಿಸಿ ಜನ್ಮ ಕೊಟ್ಟ ಇರಲು ನೆಲವಿತ್ತ ಭಾರತ ಮಾತೆಗೆ ಪ್ರಾಣವನ್ನೇ ಬಲಿದಾನ ಮಾಡಿ ಜೀವವನ್ನೇ ಭಾರತಾಂಬೆಯ ಸೇವೆಗೆ ಮುಡಿಪಾಗಿಟ್ಟ ವೀರ ಮಹಾತ್ಮರ ಭಗೀರಥ ಹೋರಾಟದ ಫಲವಾಗಿ ಪರರ ದಾಸ್ಯತನದ ಸಂಕೋಲೆಯಿಂದ ಬಿಡುಗಡೆ ಹೊಂದಿರುವ...

ಕೆ.ಎಸ್.ಆರ್.ಟಿ.ಸಿ ಡಿಪೋದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಸುಳ್ಯದ ಕೆ.ಎಸ್.ಆರ್.ಟಿ.ಸಿ ಡಿಪೋದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15 ರಂದು ಆಚರಿಸಲಾಯಿತು.ದ್ವಜಾರೋಹಣವನ್ನು ಹಿರಿಯ ಸಂಚಾರ ನಿಯಂತ್ರಕರಾದ ಗಂಗಾಧರ ಮಾವಂಜಿ ಮಂಡೆಕೋಲು ನೆರವೇರಿಸಿದರು.ದ್ವಜಾರೋಹಣ ಸಂದರ್ಭದಲ್ಲಿ ಘಟಕ ವ್ಯವಸ್ಥಾಪಕರಾದ ಸುಂದರರಾಜ್, ಭದ್ರತಾಧಿಕಾರಿ ಶಿವಕುಮಾರ್, ಸಹಾಯಕ ಸಂಚಾರ ನಿರೀಕ್ಷಕರಾದ ಕರುಣಾಕರ ಕರ್ಲಪ್ಪಾಡಿ, ಹರಿಶ್ಚಂದ್ರ ಮೇಲಡ್ತಲೆ, ಜಗದೀಶ, ಪ್ರವೀಣ್ ರಾಯಣ್ಣ ಗೌಡ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 74ನೇ ಸ್ವಾತಂತ್ರ್ಯೋತ್ಸವ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇಲ್ಲಿ 74ನೇ ಸ್ವಾತಂತ್ರ್ಯೋತ್ಸವವನ್ನು ಕೊವಿಡ್-19ರ ಕಾರಣ ಸರಳವಾಗಿ ಆಚರಿಸಲಾಯಿತು.ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಕುರುಂಜಿಭಾಗ್ ಸುಳ್ಯ ಇದರ ಅಧ್ಯಕ್ಷರಾದ ಡಾ.ಕೆ.ವಿ ಚಿದಾನಂದ ರವರು ಧ್ವಜರೋಹಣ ನೆರವೇರಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಕೆವಿಜಿ ಮೆಡಿಕಲ್ ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್ ಭಾಗವಹಿಸಿ ದ್ದರು. ಅಕಾಡೆಮಿ...

ಕಲ್ಮಡ್ಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

ಸ.ಉ.ಹಿ.ಪ್ರಾ.ಶಾಲೆ ಕಲ್ಮಡ್ಕದಲ್ಲಿ 74ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಮುಖ್ಯಶಿಕ್ಷಕಿ ಶಶಿಕಲಾ ಕೆ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಹಶಿಕ್ಷಕಿಯರಾದ ವಜ್ರಾಕ್ಷಿ ಹಾಗೂ ವನಜಾಕ್ಷಿ ಉಪಸ್ಥಿತರಿದ್ದರು.

ಪೆರುವಾಜೆ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

ಸ.ಹಿ.ಪ್ರಾ.ಶಾಲೆ ಪೆರುವಾಜೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಎಸ್.ಡಿ.ಎಂ.ಸಿ ಸದಸ್ಯ ದಿವಾಕರ ಗೌಡ ಧ್ವಜಾರೋಹಣಗೈದರು. ಕಾರ್ಯಕ್ರಮದಲ್ಲಿ ಪೆರುವಾಜೆ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಶ್ರೀ ಜಯಪ್ರಕಾಶ್ ಹಾಗೂ ಸಿಬ್ಬಂದಿ ವರ್ಗ, ಪೆರುವಾಜೆ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ವಿಜಯ, ಎಸ್.ಡಿ.ಎಂ.ಸಿ ಸದಸ್ಯರು, ಶಾಲಾ ಶಿಕ್ಷಕರು,ಅಕ್ಷರ - ದಾಸೋಹ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಲಲಿತ ಕುಮಾರಿ ಸ್ವಾಗತಿಸಿ, ವಂದನಾರ್ಪಣೆಗೈದರು. ಈ...

ಬಿಳಿನೆಲೆ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಹಾಗೂ ಶ್ರೀ ವೇದವ್ಯಾಸ ವಿದ್ಯಾಲಯ ಬಿಳಿನೆಲೆ ಇಲ್ಲಿ 74ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಶಾಲೆಯ ಹಿರಿಯ ವಿದ್ಯಾರ್ಥಿ ಹಾಗೂ ನಿವೃತ್ತ ಹವಾಲ್ದಾರ್ ಶ್ರೀ ಸೋಮಶೇಖರ್ ಧ್ವಜಾರೋಹಣಗೈದು, ಪ್ರಸ್ತುತ ಸನ್ನಿವೇಶದಲ್ಲಿ ಸ್ವಾತಂತ್ರ್ಯದ ಪ್ರಾಮುಖ್ಯತೆ ಹಾಗೂ ಆಚರಣೆಯ ಅಗತ್ಯತೆ ಬಗ್ಗೆ ತಿಳಿಸಿದರು. ಕೊರೋನಾ ಸಂಕಟಕಾಲದಲ್ಲಿ ಸರಳ ರೀತಿಯಲ್ಲಿ ಆಚರಿಸಲ್ಪಟ್ಟ ಕಾರ್ಯಕ್ರಮದಲ್ಲಿ ಸಂಸ್ಥೆಯ ಹಿರಿಯ ವಿದ್ಯಾರ್ಥಿ ಹಾಗೂ...

ಮಂಡೆಕೋಲು ಗ್ರಾಮ ಪಂಚಾಯತ್ ನಲ್ಲಿ 74 ನೇ ಸ್ವಾತಂತ್ರ್ಯೋತ್ಸವ

ಮಂಡೆಕೋಲು ಗ್ರಾಮ ಪಂಚಾಯತ್ ನಲ್ಲಿ 74 ನೇ ಸ್ವಾತಂತ್ರ್ಯೋತ್ಸವ ಇಂದು ನಡೆಯಿತು. ಗ್ರಾ.ಪಂ.ಪಿಡಿಓ ಜಯಕುಮಾರ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಹಿರಿಯರಾದ ಜತ್ತಪ್ಪ ಗೌಡ ಉಗ್ರಾಣಿಮನೆ, ರವಿ ಕಣೆಮರಡ್ಕ, ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. "ಗಂದಗಿ ಮುಕ್ತ ಭಾರತ" ಅಭಿಯಾನದಡಿ ಗಿಡ ನೆಟ್ಟು, ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
Loading posts...

All posts loaded

No more posts

error: Content is protected !!