- Friday
- July 17th, 2026
ಉದಾರತೆ, ಶಾಂತಿ ಶುಚಿತೆಗಳಲ್ಲಿ ಮಾನವೀಯತೆಯು ತುತ್ತ ತುದಿ ತಲುಪಿರುವ ಅನೇಕ ಋಷಿಮುನಿಗಳ ತಪೋ ಭೂಮಿ ಭಾರತ.ಜನನೀ ಜನ್ಮಭೂಮಿಶ್ಚ ಸ್ವರ್ಗಾದಪಿ ಗರೀಯಸಿ ಎಂದು ಭಾವಿಸಿ ಜನ್ಮ ಕೊಟ್ಟ ಇರಲು ನೆಲವಿತ್ತ ಭಾರತ ಮಾತೆಗೆ ಪ್ರಾಣವನ್ನೇ ಬಲಿದಾನ ಮಾಡಿ ಜೀವವನ್ನೇ ಭಾರತಾಂಬೆಯ ಸೇವೆಗೆ ಮುಡಿಪಾಗಿಟ್ಟ ವೀರ ಮಹಾತ್ಮರ ಭಗೀರಥ ಹೋರಾಟದ ಫಲವಾಗಿ ಪರರ ದಾಸ್ಯತನದ ಸಂಕೋಲೆಯಿಂದ ಬಿಡುಗಡೆ ಹೊಂದಿರುವ...
ಸುಳ್ಯದ ಕೆ.ಎಸ್.ಆರ್.ಟಿ.ಸಿ ಡಿಪೋದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15 ರಂದು ಆಚರಿಸಲಾಯಿತು.ದ್ವಜಾರೋಹಣವನ್ನು ಹಿರಿಯ ಸಂಚಾರ ನಿಯಂತ್ರಕರಾದ ಗಂಗಾಧರ ಮಾವಂಜಿ ಮಂಡೆಕೋಲು ನೆರವೇರಿಸಿದರು.ದ್ವಜಾರೋಹಣ ಸಂದರ್ಭದಲ್ಲಿ ಘಟಕ ವ್ಯವಸ್ಥಾಪಕರಾದ ಸುಂದರರಾಜ್, ಭದ್ರತಾಧಿಕಾರಿ ಶಿವಕುಮಾರ್, ಸಹಾಯಕ ಸಂಚಾರ ನಿರೀಕ್ಷಕರಾದ ಕರುಣಾಕರ ಕರ್ಲಪ್ಪಾಡಿ, ಹರಿಶ್ಚಂದ್ರ ಮೇಲಡ್ತಲೆ, ಜಗದೀಶ, ಪ್ರವೀಣ್ ರಾಯಣ್ಣ ಗೌಡ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇಲ್ಲಿ 74ನೇ ಸ್ವಾತಂತ್ರ್ಯೋತ್ಸವವನ್ನು ಕೊವಿಡ್-19ರ ಕಾರಣ ಸರಳವಾಗಿ ಆಚರಿಸಲಾಯಿತು.ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಕುರುಂಜಿಭಾಗ್ ಸುಳ್ಯ ಇದರ ಅಧ್ಯಕ್ಷರಾದ ಡಾ.ಕೆ.ವಿ ಚಿದಾನಂದ ರವರು ಧ್ವಜರೋಹಣ ನೆರವೇರಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಕೆವಿಜಿ ಮೆಡಿಕಲ್ ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್ ಭಾಗವಹಿಸಿ ದ್ದರು. ಅಕಾಡೆಮಿ...
ಸ.ಉ.ಹಿ.ಪ್ರಾ.ಶಾಲೆ ಕಲ್ಮಡ್ಕದಲ್ಲಿ 74ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಮುಖ್ಯಶಿಕ್ಷಕಿ ಶಶಿಕಲಾ ಕೆ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಹಶಿಕ್ಷಕಿಯರಾದ ವಜ್ರಾಕ್ಷಿ ಹಾಗೂ ವನಜಾಕ್ಷಿ ಉಪಸ್ಥಿತರಿದ್ದರು.
ಸ.ಹಿ.ಪ್ರಾ.ಶಾಲೆ ಪೆರುವಾಜೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಎಸ್.ಡಿ.ಎಂ.ಸಿ ಸದಸ್ಯ ದಿವಾಕರ ಗೌಡ ಧ್ವಜಾರೋಹಣಗೈದರು. ಕಾರ್ಯಕ್ರಮದಲ್ಲಿ ಪೆರುವಾಜೆ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಶ್ರೀ ಜಯಪ್ರಕಾಶ್ ಹಾಗೂ ಸಿಬ್ಬಂದಿ ವರ್ಗ, ಪೆರುವಾಜೆ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ವಿಜಯ, ಎಸ್.ಡಿ.ಎಂ.ಸಿ ಸದಸ್ಯರು, ಶಾಲಾ ಶಿಕ್ಷಕರು,ಅಕ್ಷರ - ದಾಸೋಹ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಲಲಿತ ಕುಮಾರಿ ಸ್ವಾಗತಿಸಿ, ವಂದನಾರ್ಪಣೆಗೈದರು. ಈ...
ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಹಾಗೂ ಶ್ರೀ ವೇದವ್ಯಾಸ ವಿದ್ಯಾಲಯ ಬಿಳಿನೆಲೆ ಇಲ್ಲಿ 74ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಶಾಲೆಯ ಹಿರಿಯ ವಿದ್ಯಾರ್ಥಿ ಹಾಗೂ ನಿವೃತ್ತ ಹವಾಲ್ದಾರ್ ಶ್ರೀ ಸೋಮಶೇಖರ್ ಧ್ವಜಾರೋಹಣಗೈದು, ಪ್ರಸ್ತುತ ಸನ್ನಿವೇಶದಲ್ಲಿ ಸ್ವಾತಂತ್ರ್ಯದ ಪ್ರಾಮುಖ್ಯತೆ ಹಾಗೂ ಆಚರಣೆಯ ಅಗತ್ಯತೆ ಬಗ್ಗೆ ತಿಳಿಸಿದರು. ಕೊರೋನಾ ಸಂಕಟಕಾಲದಲ್ಲಿ ಸರಳ ರೀತಿಯಲ್ಲಿ ಆಚರಿಸಲ್ಪಟ್ಟ ಕಾರ್ಯಕ್ರಮದಲ್ಲಿ ಸಂಸ್ಥೆಯ ಹಿರಿಯ ವಿದ್ಯಾರ್ಥಿ ಹಾಗೂ...
ಮಂಡೆಕೋಲು ಗ್ರಾಮ ಪಂಚಾಯತ್ ನಲ್ಲಿ 74 ನೇ ಸ್ವಾತಂತ್ರ್ಯೋತ್ಸವ ಇಂದು ನಡೆಯಿತು. ಗ್ರಾ.ಪಂ.ಪಿಡಿಓ ಜಯಕುಮಾರ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಹಿರಿಯರಾದ ಜತ್ತಪ್ಪ ಗೌಡ ಉಗ್ರಾಣಿಮನೆ, ರವಿ ಕಣೆಮರಡ್ಕ, ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. "ಗಂದಗಿ ಮುಕ್ತ ಭಾರತ" ಅಭಿಯಾನದಡಿ ಗಿಡ ನೆಟ್ಟು, ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಬಾಳಿಲ ಗ್ರಾಮ ಪಂಚಾಯತ್ ನಲ್ಲಿ ನಡೆದ 74 ನೇ ಸ್ವಾತಂತ್ರ್ಯ ದಿನಾಚರಣೆಯಂದು ಆಡಳಿತಾಧಿಕಾರಿ ನಿರಂಜನ ಚಿದಾನಂದ ಹಿರೇಮಠ್ ಧ್ವಜಾರೋಹಣಗೈದು ಶುಭಹಾರೈಸಿದರು. ಈ ಸಂದರ್ಭದಲ್ಲಿ ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು, ಧ್ವಜಸ್ತಂಭದ ದಾನಿಗಳಾದ ಶಾರದೋತ್ಸವ ಸಮಿತಿ ಅಧ್ಯಕ್ಷ ರೋಹಿತ್, ಬಾಳಿಲದ ನಾಗರಿಕ ಸೇವಾ ಸಮಿತಿಯ ಗಂಗಾಧರ, ಪಂಚಾಯತ್ ಪೂರ್ವಾಧ್ಯಕ್ಷರು, ಸದಸ್ಯರು, ಕಾರ್ಯದರ್ಶಿ ಜಯಶೀಲಾ ರೈ, ಪಂಚಾಯತ್...
ಸುಳ್ಯ ಸೋಷಿಯಲ್ ಡೆಮಾಕ್ರೆಟಿಕ್ ಆಟೋ ಚಾಲಕರ ಯೂನಿಯನ್ ವತಿಯಿಂದ 74ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ಗಾಂಧಿನಗರ ಪೆಟ್ರೋಲ್ ಬಂಕ್ ಮುಂಬಾಗದಲ್ಲಿ ನಡಯಿತು.ಎಸ.ಡಿ.ಎ.ಯು ತಾಲೂಕು ಅದ್ಯಕ್ಷರಾದ ಶಾಫಿ ಎಂ.ಆರ್. ಧ್ವಜಾರೋಹಣ ನೆರವೇರಿಸಿದರು.ಎಸ್.ಡಿ.ಟಿ.ಯು ತಾಲೂಕು ಅಧ್ಯಕ್ಷರಾದ ಫೈಝಲ್ ಬೆಳ್ಳಾರೆ ಮತ್ತು ಪಿಎಫ್ಐ ಸುಳ್ಯ ಡಿವಿಷನ್ ಕಾರ್ಯದರ್ಶಿ ಅಥಾವುಲ್ಲಾ ಕಲ್ಲುಮುಟ್ಲು ಸಭಿಕರನ್ನು ಉದ್ದೇಶಿಸಿ ಮಾತನಾಡಿದರುಈ ಕಾರ್ಯಕ್ರಮದಲ್ಲಿ ಎಸ್.ಡಿ.ಪಿ.ಐ ಸುಳ್ಯ...
ಮರ್ಕಂಜ ಗ್ರಾಮ ಪಂಚಾಯತ್ ಆವರಣದಲ್ಲಿ ನಲ್ಲಿ 74 ನೇ ಸ್ವಾತಂತ್ರೋತ್ಸವ ಆಚರಣೆ ನಡೆಯಿತು. ಪಂಚಾಯತ್ ಅಭಿವೃದ್ದಿ ಅಧಿಕಾರಿ ಸಂತೋಷ್ ಕುಮಾರ್ ಆರ್ ಎನ್ ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಗ್ರಾ.ಪಂ ಸಿಬ್ಬಂದಿ ವರ್ಗದವರಾದ ನೇತ್ರಾವತಿ , ಆಶಾಲತ, ದೇವಿಪ್ರಸಾದ್, ಪುಟ್ಟರಾಜು, ಲೋಹಿತ್ ಮತ್ತು ಅಂಗನವಾಡಿ ಕಾರ್ಯಕರ್ತೆ ಹೊನ್ನಮ್ಮ ಸಹಾಯಕಿ ವೀಣಾ, ಗ್ರಂಥಾಲಯ ಸಿಬ್ಬಂದಿ ತೇಜಾವತಿ, ವಿಕಲಚೇತನ ಪನರ್ವಸತಿ...
Loading posts...
All posts loaded
No more posts
