- Friday
- July 17th, 2026
ನಾಳೆ (ಆ. 16) ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸುಳ್ಯಕ್ಕೆ ಆಗಮಿಸಲಿದ್ದಾರೆ.ಬೆಳಗ್ಗೆ 11 ಕ್ಕೆ ತಾ.ಪಂ.ಸಭಾಂಗಣದಲ್ಲಿ ಮರಳು, ಆನೆ ಕಂದಕ ಮತ್ತಿತರ ವಿಷಯದ ಬಗ್ಗೆ ಅಧಿಕಾರಿಗಳ, ಜನಪ್ರತಿನಿಧಿಗಳ ಸಭೆ ನಡೆಸಲಿದ್ದಾರೆ ಎಂದು ತಹಶಿಲ್ದಾರ್ ಅನಂತ ಶಂಕರ ತಿಳಿಸಿದ್ದಾರೆ.
ವ್ಯಾಪಕವಾಗಿ ಕೊಡಗಿನಲ್ಲಿ ಸುರಿದ ಮಳೆಗೆ ನೂರಾರು ವಿದ್ಯುತ್ ಕಂಬಗಳು ಹಾನಿಯಾಗಿ ಜನ ಕತ್ತಲೆಯಲಿದ್ದರು. ಕಳೆದ ಬಾರಿ ಕೂಡ ಕೊಡಗಿನಲ್ಲಿ ವ್ಯಾಪಕವಾಗಿ ಹಾನಿಯಾಗಿದ್ದ ವಿದ್ಯುತ್ ಲೈನ್ ಅನ್ನು ಸುಳ್ಯದ ತಂಡ ದುರಸ್ತಿಪಡಿಸಿತ್ತು. ಈ ಬಾರಿ ಹಾನಿಯಾದ ವಿದ್ಯುತ್ ಲೈನ್,ಕಂಬ ಅಳವಡಿಕೆಯಲ್ಲಿ ಸುಳ್ಯದ ಆನಂದ ಇಲೆಕ್ಟ್ರೀಕಲ್ ತಂಡ ಕಳೆದ 10 ದಿನಗಳಿಂದ ನಿರಂತರ ಸೇವೆ ಒದಗಿಸಿದೆ. ಆ ಮೂಲಕ...
ಸ.ಹಿ.ಪ್ರಾ. ಶಾಲೆ ಕೋಟೆಮುಂಡುಗಾರು ಇಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಗಂಗಾಧರ ತೋಟದಮೂಲೆ ಧ್ವಜಾರೋಹಣ ನೆರವೇರಿಸಿದರು. ಕಳಂಜ ಗ್ರಾ.ಪಂ.ಮಾಜಿ ಸದಸ್ಯ ಲಕ್ಷ್ಮೀಶ ಕಜೆಮೂಲೆ ಸ್ವಾತಂತ್ರ್ಯೋತ್ಸವ ಭಾಷಣಗೈದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮೋಹನಿ, ಅಧ್ಯಾಪಕ ವೃಂದ , ಎಸ್.ಡಿ.ಎಂ.ಸಿ ಸದಸ್ಯರು ಹಾಗೂ ಶಾಲೆಯ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಉಬರಡ್ಕ ಅಮೈಮಡಿಯಾರು ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ನಿವೃತ್ತ ಯೋಧ ಮಾಧವ ಗೌಡ ಮದಕ ಧ್ವಜರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಎಸ್ ಡಿ ಎಂ.ಸಿ ಅಧ್ಯಕ್ಷ ಲೋಕೇಶ್ ಕೊಟ್ಯಾನ್, ಗ್ರಾ.ಪಂ. ಮಾಜಿ ಅಧ್ಯಕ್ಷ ಹರೀಶ್ ರೈ ಉಬರಡ್ಕ, ಮುಖ್ಯ ಶಿಕ್ಷಕ ಪದ್ಮನಾಭ ಅತ್ಯಾಡಿ, ವಿನಾಯಕ ಮಿತ್ರ ಬಳಗದ ಅಧ್ಯಕ್ಷ ವಿದ್ಯಾಧರ ಹರ್ಲಡ್ಕ , ಎಸ್ ಡಿ ಎಂ...
ಜೇಸಿಐ ಪಂಜ ಪಂಚಶ್ರೀ, ಗ್ರಾಮ ಪಂಚಾಯತ್ ಪಂಜ, ಬಿ.ಯಂ.ಎಸ್ ರಿಕ್ಷಾ ಚಾಲಕ ಮಾಲಕರ ಸಂಘ (ರಿ) ಪಂಜ, ಪಂಜ ಪರಿಸರದ ವರ್ತಕರು, ಭಾರತ ಸೈಟ್ & ಗೈಡ್ಸ್ ಸ್ಥಳೀಯ ಸಂಸ್ಥೆ ಇವುಗಳ ಜಂಟಿ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಇಂದು ಬೆಳಿಗ್ಗೆ ನಡೆಯಿತು. ಧ್ವಜಾರೋಹಣವನ್ನು ಡಾ. ದೇವಿಪ್ರಸಾದ್ ಕಾನತ್ತೂರು ಆಡಳಿತಾಧಿಕಾರಿ ಗ್ರಾಮ ಪಂಚಾಯತ್ ಪಂಜ ಇವರು ನೆರವೇರಿಸಿದರು.ಧ್ವಜಾರೋಹಣದ...
ಅರಂತೋಡು ದ.ಕ.ಜಿ.ಸ.ಹಿ.ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು .ಮಾಜಿ ಸೈನಿಕ ಫಸೀಲು ಅರಂತೋಡು ಧ್ವಜಾರೋಹಣಗೈದರು.ಎಸ್.ಡಿ.ಎಮ್ .ಸಿ ಸದಸ್ಯರಾದ ಈಶ್ವರ ಗುಂಡ್ಲ,ಶಿವರಾಮ ಅಡ್ತಲೆ,ಮಹಮ್ಮದ್ ಅಮೀರ್ ಕುಕ್ಕುಂಬಳ,ಅಂಗನವಾಡಿ ಶಿಕ್ಷಕಿ ಹೊನ್ನಮ್ಮ,ಶಿಕ್ಷಕಿಯರಾದ ರೇಶ್ಮಾ,ಶಿಕ್ಷಕ ಪ್ರಶಾಂತ್ ಸೇರಿದಂತೆ ಎಸ್.ಡಿ.ಎಮ್.ಸಿ ಸದಸ್ಯರು ಮುಂತಾದವರು ಉಪಸ್ಥಿತರಿದ್ದರು . ಮುಖ್ಯ ಶಿಕ್ಷಕಿ ಸರಸ್ವತಿ ಕೆ. ಸ್ವಾಗತಿಸಿ ಶಿಕ್ಷಕಿ ಭಾನುಮತಿ ಎಸ್.ಬಿ. ವಂದಿಸಿದರು
ಮಿತ್ರ ಯುವಕ ಮಂಡಲ (ರಿ) ಕೊಯಿಕುಳಿ ಮತ್ತು ಕುರಲ್ ತುಳು ಕೂಟ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಯುವಕ ಮಂಡಲ ಕಟ್ಟಡದ ಆವರಣದಲ್ಲಿ ನಡೆಯಿತು. ಕೊರೋನ ವಾರಿಯರ್ಸ್ ಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ದುಗ್ಗಲಡ್ಕ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಳಿನಿ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ದುಗ್ಗಲಡ್ಕ ಕಿರಿಯ ಆರೋಗ್ಯ ಸಹಾಯಕಿ ಶಶಿಕಲಾ ಭಾಗವಹಿಸಿದ್ದರು. ಯುವಕ...
ಸ.ಉ.ಹಿ.ಪ್ರಾ.ಶಾಲೆ ಅಯ್ಯನಕಟ್ಟೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯಾಯಿತು. ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಶ್ರೀ ಸತೀಶ್ಚಂದ್ರ ಪಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಶೀಲಾವತಿ, ಶಿಕ್ಷಕ ವೃಂದ ಹಾಗೂ ಪೋಷಕ ವೃಂದದವರು ಉಪಸ್ಥಿತರಿದ್ದರು.
ಕಳಂಜ - ಬಾಳಿಲ ಪ್ರಾ.ಕೃ.ಪತ್ತಿನ ಸಹಕಾರಿ ಸಂಘ ಕೋಟೆಮುಂಡುಗಾರು ಇದರ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಘದ ಅಧ್ಯಕ್ಷರಾದ ಶ್ರೀ ಕೂಸಪ್ಪ ಗೌಡ ಮುಗುಪ್ಪು ಧ್ವಜಾರೋಹಣಗೈದರು.ನಂತರ ಜರುಗಿದ ಸರಳ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬೆಳ್ಳಾರೆ ಆರಕ್ಷಕ ಠಾಣೆಯ ಎಸ್.ಐ. ಶ್ರೀ ಆಂಜನೇಯ ರೆಡ್ಡಿ 'ಕೊರೋನಾ ವಾರಿಯರ್ಸ್' ಗಳಿಗೆ ಅಭಿನಂದನೆ...
Loading posts...
All posts loaded
No more posts
