ವಿದ್ಯಾಬೋಧಿನೀ ಬಾಳಿಲ : 77.52% ಫಲಿತಾಂಶ

ಈ ಬಾರಿಯ ಎಸ್. ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ ಶೇಕಡಾ 77.52 ಫಲಿತಾಂಶ ದಾಖಲಿಸಿದೆ. ಸಂಸ್ಥೆಯ 129 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 100 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 17 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಹಾಗೂ 69 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಸಂಸ್ಥೆಯ ಚರೀಷ್ಮಾ ಎ 603(96.48%) ಹಾಗೂ ಆಶಿತಾ ಬಿ 600 (96%...

ಎಸ್ ಎಸ್ ಎಲ್ ಸಿ : ಕೆ.ಎಸ್.ಗೌಡ ವಿದ್ಯಾಸಂಸ್ಥೆಗೆ 87.5% ಫಲಿತಾಂಶ

ಕೆ. ಎಸ್. ಗೌಡ ಆಂಗ್ಲಮಾಧ್ಯಮ ವಿದ್ಯಾಸಂಸ್ಥೆ ನಿಂತಿಕಲ್ಲು ಇಲ್ಲಿನ 16 ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದು 14 ಮಕ್ಕಳು ತೇರ್ಗಡೆಯಾಗಿದ್ದಾರೆ.ಸಂಜನಾ ಬಿ ಎಲ್ 574, ತನ್ಮಯ್ ಕೆ ಕೆ 572, ಸುಭದಾ ಪಿ 550 ಅಂಕಣಗಳನ್ನು ಗಳಿಸಿದ್ದಾರೆ. ವಿಶೇಷವಾಗಿ ತುಳು ಪರೀಕ್ಷೆಯಲ್ಲಿ 4 ವಿದ್ಯಾರ್ಥಿಗಳು 100 ಕ್ಕೆ 100 ಅಂಕಗಳನ್ನು ಗಳಿಸಿ ತೇರ್ಗಡೆಯಾಗಿದ್ದಾರೆ.
Ad Widget

ಹಳೆಗೇಟು ನಿವಾಸಿಯೊಬ್ಬರಿಗೆ ಕೊರೊನಾ ಪಾಸಿಟಿವ್ – ಇಂದು ಒಟ್ಟು 3 ಸೋಂಕಿತರ ಪತ್ತೆ

ಹಳೆಗೇಟು ನಿವಾಸಿಯೊಬ್ಬರಿಗೆ ಇಂದು ಕೊರೊನಾ ಪಾಸಿಟಿವ್ ಧೃಡವಾಗಿದ್ದು ,ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಕಾರಂಟೈನ್ ಗೊಳಪಡಿಸಿದ್ದಾರೆ.

ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿಧ್ಯಾರ್ಥಿ ಅನುಷ್ ಎ.ಎಲ್. ಗೆ 625 ಅಂಕ – ರಾಜ್ಯಕ್ಕೆ ಪ್ರಥಮ

ಕಡಬ ತಾಲೂಕಿನ ಸುಬ್ರಹ್ಮಣ್ಯದ ಕುಮಾರಸ್ವಾಮಿ ಪ್ರೌಢಶಾಲಾ ವಿದ್ಯಾರ್ಥಿ ಅನುಷ್ ಎ.ಎಲ್. 625 ರಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಈತ ಗುತ್ತಿಗಾರು ಮೆಸ್ಕಾಂ ಪ್ರಭಾರ ಜೆಇ ಆಗಿರುವ ಬಳ್ಪ ಗ್ರಾಮದ ಲೋಕೇಶ್ ಎಣ್ಣೆಮಜಲು ಹಾಗೂ ಉಷಾ ದಂಪತಿಗಳ ಪುತ್ರ.

ಪೆರಾಜೆ ತಿರುವಿನಲ್ಲಿ ಝೂಮ್ ಮಿರರ್ ಅಳವಡಿಕೆ

ಕನ್ನಡ ಪೆರಾಜೆ ರಸ್ತೆಯಿಂದ ಮಡಿಕೇರಿ ಮಾಣಿ ರಸ್ತೆ ಗೆ ಬರುವಾಗ ತಿರುವು ಇರುವುದರಿಂದ ಅಪಘಾತಗಳು ಸಂಭವಿಸುತ್ತಿರುತ್ತದೆ, ಇದನ್ನು ಮನಗಂಡು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಕೊಡಗು ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧ್ಯಕ್ಷ ಉನೈಸ್ ಪೆರಾಜೆ ಝೂಮ್ ಮಿರರ್ ಅನ್ನು ಕೊಡುಗೆ ಯಾಗಿ ನೀಡಿದರು ಈ ಸಂದರ್ಭದಲ್ಲಿ ಪೆರಾಜೆ ಯ ಕರವೇ ಸ್ವಾಭಿಮಾನಿ ಬಣದ ಕಾರ್ಯಕರ್ತರು...

ಸುಳ್ಯದಲ್ಲಿ ಮೂರನೇ ಹಂತದ ಉದ್ಯೋಗ ನೈಪುಣ್ಯ ತರಬೇತಿಗೆ ಚಾಲನೆ

ಗ್ರಾಮ ವಿಕಾಸ ಮಂಗಳೂರು ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.), ಸಹಕಾರ ಭಾರತಿ ದ.ಕ., ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ಸುಳ್ಯದ ಎ.ಪಿ.ಯಂ.ಸಿ ಸಭಾಂಗಣದಲ್ಲಿ ನಡೆದ ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಇದರ ಉದ್ಘಾಟನಾ ಕಾರ್ಯಕ್ರಮವು ಆ. 10ರಂದು ನಡೆಯಿತು. ಕ್ಯಾಂಪ್ಕೊ ಪುತ್ತೂರು ಇದರ ಸಿ.ಇ.ಓ ಕೃಷ್ಣ...

ಪದ್ಮಯ್ಯ ಗೌಡ ಕಮಿಲ ನಿಧನ

ಗುತ್ತಿಗಾರು ಗ್ರಾಮದ ಕಮಿಲ ಆಜಡ್ಕ ದಿ. ಶೇಷಪ್ಪ ಗೌಡರ ಪುತ್ರ ಪದ್ಮಯ್ಯ ಗೌಡ ಆ.7 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಪದ್ಮಾವತಿ,ಮೂವರು ಪುತ್ರಿಯರು, ಅಳಿಯಂದಿರು, ಹಾಗೂ ಸಹೋದರ ಸಹೋದರಿಯರನ್ನು ಅಗಲಿದ್ದಾರೆ.

ಜೂನಿಯರ್‌ ಕಾಲೇಜು ಬಳಿಯ ವ್ಯಕ್ತಿಯೊಬ್ಬರಿಗೆ ಇಂದು ಪಾಸಿಟಿವ್

ಸುಳ್ಯ ಜೂನಿಯರ್ ಕಾಲೇಜು ಬಳಿಯ ವ್ಯಕ್ತಿಯೊಬ್ಬರಿಗೆ ಇಂದು ಪಾಸಿಟಿವ್ ಧೃಡವಾಗಿದ್ದು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಕಾರಂಟೈನ್ ಗೊಳಪಡಿಸಲಾಗಿದೆ.

ಶೇಣಿ : ಶಿವಶಕ್ತಿ ಪ್ರಗತಿ ಬಂಧು ತಂಡ ರಚನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಬಿಸಿ ಟ್ರಸ್ಟ್ (ರಿ)ಬೆಳ್ಳಾರೆ ವಲಯದ ಚೊಕ್ಕಾಡಿ ಒಕ್ಕೂಟದ ಶೇಣಿ ಎಂಬಲ್ಲಿ ಶಿವಶಕ್ತಿ ಪ್ರಗತಿ ಬಂದು ತಂಡವನ್ನು ವಲಯದ ಮಾಜಿ ಅಧ್ಯಕ್ಷರಾಗಿರುವ ಸುಂದರ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಘದ ದಾಖಲಾತಿಯನ್ನು ಒಕ್ಕೂಟದ ಅಧ್ಯಕ್ಷರಾದ ಪ್ರಸಾದ್ ಕೋಟೆ ಬನ ಇವರು ವಿತರಿಸಿದರು. ಈ ಸಂದರ್ಭ ವಲಯ ಮೇಲ್ವಿಚಾರಕರಾದ ಮುರಳೀಧರ,...

ಅಡ್ಕಾರ್ ಪದವು ನ ವ್ಯಕ್ತಿಯೊಬ್ಬರಿಗೆ ಇಂದು ಪಾಸಿಟಿವ್

ಅಡ್ಕಾರ್ ಪದವು ನ ವ್ಯಕ್ತಿಯೊಬ್ಬರಿಗೆ ಇಂದು ಪಾಸಿಟಿವ್ ಧೃಡವಾಗಿದ್ದು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಕಾರಂಟೈನ್ ಗೊಳಪಡಿಸಲಾಗಿದೆ
Loading posts...

All posts loaded

No more posts

error: Content is protected !!