- Saturday
- March 7th, 2026
ಸರಕಾರದ ಮಾರ್ಗ ಸೂಚಿಯಂತೆ ಹಾಗೂ ಕೊರೊನಾ ವೈರಸ್ ನಿಯಂತ್ರಿಸಲು ಮುಂಜಾಗರೂಕತೆಯನ್ನು ಅನುಸರಿಸಿ ಇಂದಿನಿಂದ ನಾಡಿನ ಪವಿತ್ರ ಕ್ಷೇತ್ರವಾದ ಶ್ರೀ ಕ್ಷೇತ್ರ ದರ್ಮಸ್ಥಳದಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕ್ಷೇತ್ರದ ಪ್ರಕಟನೆ ತಿಳಿಸಿದೆ. ದೇವರ ದರ್ಶನ ಸಂದರ್ಭದಲ್ಲಿ ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿದೆ. ದೇವಸ್ಥಾನ ಅರ್ಚಕರು, ರಕ್ಷಣಾ ಸಿಬ್ಬಂದಿಗಳು ಹಾಗೂ ನೌಕರರು...
ಕಡಬ ತಾಲೂಕು ಎಣ್ಮೂರು ಗ್ರಾಮದ ಅಲೆಂಗಾರ ಮೋನಪ್ಪ ಗೌಡರ ಪುತ್ರಿ ಲಿಖಿತಾರವರ ವಿವಾಹವು ಸುಳ್ಯ ತಾಲೂಕು ಮಡಪ್ಪಾಡಿ ಗ್ರಾಮದ ಕೇವಳ ಕರುಣಾಕರ ಗೌಡರ ಪುತ್ರ ಕೇತನ್ ರೊಂದಿಗೆ ಮೇ.೩೧ರಂದು ವಧುವಿನ ಮನೆಯಲ್ಲಿ ನಡೆಯಿತು.
ಸುಳ್ಯದಿಂದ ಬರುವ ವಿದ್ಯುತ್ ಲೈನ್ ನ ವಿದ್ಯುತ್ ಬಳಕೆದಾರರಿಂದ ಇಂದು ಶ್ರಮದಾನ ನಡೆಯಿತು. ಸುಮಾರು 9 ತಂಡಗಳಿಂದ ಎನ್ನೆಟ್ಟಿ, ಕಾಡುಸೊರಂಜ, ಮೈತಡ್ಕ, ಕೇನಾಜೆ, ದೇವರಗುಂಡ, ಮೂರೂರು, ಕಾಪಿನಡ್ಕ ಭಾಗದಲ್ಲಿ 11ಕೆ ವಿ ವಿದ್ಯುತ್ ತಂತಿಗೆ ತಾಗಿಕೊಂಡಿರುವ ಮರದ ಗೆಲ್ಲು ಬಳ್ಳಿಗಳನ್ನು ತೆರವು ಗೊಳಿಸಲಾಯಿತು, ಈ ಸಂದರ್ಭದಲ್ಲಿ ಮೆಸ್ಕಾಂ ಸಿಬ್ಬಂದಿಗಳು ಜತೆಗೆ ಇದ್ದು ಮಾರ್ಗದರ್ಶನ ನೀಡಿದರು
ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಸರಕಾರವು ಕೈಗೊಂಡ ಕ್ರಮದಿಂದ ಪ್ರಾರ್ಥನಾ ಮಂದಿರಗಳ ಪ್ರವೇಶ ಸುಮಾರು 2 ತಿಂಗಳುಗಳಿಂದ ನಿರ್ಬಂಧಿಸಲಾಗಿದ್ದು ಜೂ.8 ರಿಂದ ಮತ್ತೆ ತೆರೆಯಲಿದೆ. ಬೆಳ್ಳಾರೆಯ ಮುಖ್ಯ ಪೇಟೆ ಸಮೀಪ ಇರುವ ಝಖರಿಯ್ಯಾ ಜುಮ್ಮಾ ಮಸೀದಿಯಲ್ಲಿ ಭಕ್ತಾದಿಗಳಿಗೆ ಇಂದಿನಿಂದ ಪ್ರವೇಶ ನೀಡಲಾಗಿದೆ. ಮುಖಕ್ಕೆ ಮಾಸ್ಕ್ ಕಡ್ಡಾಯವಾಗಿ ಹಾಕಿಕೊಂಡು ಬರಬೇಕು. ಸರಕಾರದ ಆದೇಶಗಳನ್ನುಸಂಪೂರ್ಣ ವಾಗಿ ಪಾಲಿಸಲಾಗುವುದು.ಮಸೀದಿಯಲ್ಲಿ ಪ್ರವೇಶಿಸುವವರಿಗೆ...
ಕೋವಿಡ್ 19 ಹಿನ್ನೆಲೆಯಲ್ಲಿ ಕಳೆದ ಕೆಲವು ತಿಂಗಳಿನಿಂದ ಸಂಪೂರ್ಣ ಲಾಕ್ ಡೌನ್ ಗೊಂಡು ಮಸೀದಿಗಳು ಒಳಗೊಂಡಂತೆ ಎಲ್ಲಾ ಧಾರ್ಮಿಕ ಕ್ಷೇತ್ರಗಳು ಮುಚ್ಚಿದ್ದವು. ಇದೀಗ ಲಾಕ್ ಡೌನ್ ಸಡಿಲಿಕೆಯ ಹಿನ್ನೆಲೆಯಲ್ಲಿ ಜೂ. 08 ರಿಂದ ಧಾರ್ಮಿಕ ಕೇಂದ್ರಗಳು ತೆರೆಯಲು ಅನುಕೂಲ ಸಾಧ್ಯತೆ ಇರುವುದರಿಂದ ಅತ್ಯಂತ ಜಾಗರೂಕತೆಯಿಂದ ಅದನ್ನು ಸದುಪಯೋಗ ಪಡಿಸಬೇಕಾಗಿದೆ.ಈ ನಿಟ್ಟಿನಲ್ಲಿ ಮಸೀದಿಗಳ ಪ್ರಾರ್ಥನೆಯ ಪುನರಾರಂಭಕ್ಕೆ ಸರಕಾರ...
ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಎರಡು ಬಣಗಳ ಕಾದಾಟದಲ್ಲಿನಮ್ಮ ಜಮಾಅತ್ ಗೆ ಒಳಪಟ್ಟ ಅಮಾಯಕ ಅಬ್ದುಲ್ ಲತೀಫ್ ಎಂಬ ಯುವಕನನ್ನು ಹಾಡಹಗಲೇ ದುಷ್ಕರ್ಮಿಗಳು ಕೊಲೆಗೈದು ವಿಕ್ರತಿ ಮೆರೆದದ್ದು ಖಂಡನೀಯವಾಗಿದೆ.ಸಾದು ಸ್ವಭಾವ ಮತ್ತು ಪರೋಪಕಾರಿ ಯಾಗಿ ನಮ್ಮ ಜಮಾಅತ್ ನ ಎಲ್ಲಾ ಆಗು ಹೋಗುಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದ ಈ ಯುವಕನ ಅಕಾಲಿಕ ಮರಣವು ಇಡೀ ಊರನ್ನೆ ಶೋಕ ಸಾಗರದಲ್ಲಿ...
ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಐವರ್ನಾಡು ಗ್ರಾಮ ಪಂಚಾಯತ್ ಗ್ರಾಮ ವಿಕಾಸ ಸಭಾಭವನದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ .5 ರಂದು ಆಚರಿಸಲಾಯಿತು . ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಬೆಳ್ಳಾರೆ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರಾದ ಎಸ್.ಎನ್.ಮನ್ಮಥರ ಅಧ್ಯಕ್ಷತೆಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ಗ್ರಾಮ ವಿಕಾಸ ಸಭಾಭವನದ...
ಬೆಳ್ತಂಗಡಿ ಮುಂಗಡ ಅಡಕೆ ಖರೀದಿಸಿ ನೂರಾರು ಗ್ರಾಹಕರಿಗೆ ಕೋಟ್ಯಂತರ ರೂಪಾಯಿ ಹಣ ಕೊಡಲು ಬಾಕಿ ಮಾಡಿದ್ದ ಅಡಕೆ ವ್ಯಾಪಾರಿಯೋರ್ವರು ಮನೆಗೆ ಬೀಗ ಹಾಕಿ ಒಂದು ವಾರದಿಂದ ನಿಗೂಢವಾಗಿ ನಾಪತ್ತೆಯಾದ ಘಟನೆ ಬಂದಾರು ಗ್ರಾಮದಿಂದ ವರದಿಯಾಗಿದ್ದು ಹಣ ಕಳೆದುಕೊಳ್ಳುವ ಭೀತಿಯಲ್ಲಿರುವ ಗ್ರಾಹಕರು ದಾರಿ ತೋಚದ ತೀವ್ರ ಆತಂಕ ಪಡುವಂತಾಗಿದೆ . ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ ಬಟ್ಲಡ್ಕ...
ಜೂ .8 ರಂದು ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಗ್ರಾಮ ವಿಕಾಸ ಸಮಿತಿ ಸುಳ್ಯ ಮತ್ತು ಅಜ್ಜಾವರ ಆಶ್ರಯದಲ್ಲಿ ತರಕಾರಿ ಬೀಜ ವಿತರಣಾ ಕಾರ್ಯಕ್ರಮ ಸುಳ್ಯ ಸಿಎ ಬ್ಯಾಂಕ್ ವಠಾರದಲ್ಲಿ ನಡೆಯಲಿದೆ . ಶಾಸಕ ಅಂಗಾರ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ . ಬಳಿಕ ತಾಲೂಕಿನಲ್ಲಿ ಪ್ರತೀ ಗ್ರಾಮ ಮಟ್ಟದಲ್ಲೂ ಆಯಾ ಗ್ರಾಮದ...
ಕಳೆದ ಕೆಲವು ದಿನಗಳ ಹಿಂದೆ ಪೊಲೀಸರೊಂದಿಗೆ ಭುಜಕ್ಕೆ ಭುಜ ಜೋಡಿಸಿ ಕರ್ತವ್ಯ ನಿಷ್ಠೆ ಮೆರೆಯುತ್ತಿದ್ದ ಗೃಹರಕ್ಷಕ ದಳದವರು ರಸ್ತೆಗಳಲ್ಲಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆಯಲ್ಲಿ ಕಾಣದೆ ಅವರ ಕೊರತೆಯು ಎದ್ದು ಕಾಣುತ್ತಿತ್ತು. ಕಳೆದ ಹಲವು ತಿಂಗಳುಗಳಿಂದ ಕೋವಿಡ್ 19 ರ ಹಿನ್ನೆಲೆಯಲ್ಲಿ ಸಂಪೂರ್ಣವಾಗಿ ಸೇವೆಯಲ್ಲಿ ತೊಡಗಿಕೊಂಡಿದ್ದ ಗೃಹರಕ್ಷಕ ದಳದವರು ಪ್ರತಿಯೊಂದು ಕ್ಷೇತ್ರಗಳಲ್ಲಿ ಕರ್ತವ್ಯ ನಿಷ್ಠೆಯಿಂದ ನಡೆದು...
Loading posts...
All posts loaded
No more posts
