ಮೊಗ್ರ : ದೈವ ನರ್ತಕ ಗಿರಿಯಪ್ಪ ಅಜಿಲ ನಿಧನ

ಗುತ್ತಿಗಾರು ಗ್ರಾಮದ ಮೊಗ್ರ ನಿವಾಸಿ ಗಿರಿಯಪ್ಪ ಅಜಿಲರವರು ಹೃದಯಘಾತದಿಂದ ಡಿ. 12ರಂದು ರಾತ್ರಿ ನಿಧನರಾದರು. ಅವಿವಾಹಿತರಾಗಿದ್ದ ಅವರಿಗೆ 36 ವರ್ಷ ವಯಸ್ಸಾಗಿತ್ತು. ಆರೋಗ್ಯದಿಂದಿದ್ದ ಅವರು ರಾತ್ರಿ ಊಟ ಮುಗಿಸಿ ಮಲಗುವ ಹೊತ್ತಿಗೆ ಮನೆಯಲ್ಲಿ ಹೃದಯಘಾತವಾಯಿತೆನ್ನಲಾಗಿದೆ. ತಕ್ಷಣ ಅವರನ್ನು ಕಾಣಿಯೂರಿನ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೇ ಚಿಕಿತ್ಸೆ ಫಲಿಸದೇ ಮೃತಪಟ್ಟರೆಂದು ತಿಳಿದುಬಂದಿದೆ. ಮೊಗ್ರ ಶ್ರೀ ಕನ್ನಡ...

ವಿವಾಹ ನಿಶ್ಚಿತಾರ್ಥ : ಕೀರ್ತನ್ ಕುಕ್ಕುಡೇಲು – ಹರ್ಷಿತಾ

ಸುಳ್ಯ ತಾ| ಐವರ್ನಾಡು ಗ್ರಾಮದ ಕುಕ್ಕುಡೇಲು ಕೃಷ್ಣಪ್ಪ ಗೌಡರ ಪುತ್ರ ಕೀರ್ತನ್ ರವರ ವಿವಾಹ ನಿಶ್ಚಿತಾರ್ಥವು ಕುಶಾಲನಗರ ತಾ| ಬಾಳುಗೋಡು ಗ್ರಾಮದ ಪೂಜಾರಿಮನೆ ದಿ.ರಾಮಯ್ಯ ಗೌಡರ ಪುತ್ರಿ ಹರ್ಷಿತಾ ರೊಂದಿಗೆ ನ.11 ರಂದು ಕುಶಾಲನಗರದ ಗೌಡ ಸಮಾಜದಲ್ಲಿ ನಡೆಯಿತು.
Ad Widget

ಕಟ್ಟಡದ ವೆಲ್ಡಿಂಗ್ ಕೆಲಸ ನಿರ್ವಹಿಸುತ್ತಿದ್ದ ವೇಳೆ ಕುಸಿದು ಬಿದ್ದು ಮೃತ್ಯು

ಸುಳ್ಯದಲ್ಲಿ ನಡೆದ ಘಟನೆ ಸುಳ್ಯ ಜ್ಯೋತಿ ಸರ್ಕಲ್ ಬಳಿ ಮೇಲಿನ ಕಾನತ್ತಿಲ ಕಟ್ಟಡದಲ್ಲಿ ವೆಲ್ಡಿಂಗ್ ಮಾಡುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ಘಟನೆ ವರದಿಯಾಗಿದೆ. ಜ್ಯೋತಿ ಸರ್ಕಲ್ ಬಳಿಯ ಕಟ್ಟಡದ ವೆಲ್ಡಿಂಗ್ ಕೆಲಸ ಮಾಡುತ್ತಿರುವಾಗ ಕುಸಿದು ಬಿದ್ದರೆನ್ನಲಾಗಿದೆ.ಅಲ್ಲಿ ಸೇರಿದ್ದ ಸ್ಥಳೀಯರು ಕೂಡಲೇ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದೊಯ್ದರು. ಆದರೆ ಆಸ್ಪತ್ರೆಗೆ ತಲುಪುಷ್ಟರಲ್ಲಿ ಮೃತಪಟ್ಟಿದ್ದರು.ಮೃತಪಟ್ಟ ವ್ಯಕ್ತಿ...

ಕೆ.ವಿ.ಜಿ. ಸುಳ್ಯ ಹಬ್ಬ ಆಮಂತ್ರಣ ಬಿಡುಗಡೆ

ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ದಿ.ಡಾ.ಕುರುಂಜಿ ವೆಂಕಟ್ರಮಣ ಗೌಡರ ಜನ್ಮ ದಿನಾಚರಣೆ ಪ್ರಯುಕ್ತ ಕೆ.ವಿ.ಜಿ. ಸುಳ್ಯ ಹಬ್ಬವನ್ನು ದ.25 ಮತ್ತು ದ.26 ರಂದು ಏರ್ಪಡಿಸಲಾಗುತ್ತಿದ್ದು, ಈ ಬಾರಿಯ ಸುಳ್ಯಹಬ್ಬದ ಆಮಂತ್ರಣ ಪತ್ರ ಬಿಡುಗಡೆ ಇಂದು ನಡೆಯಿತು. ಸಮಿತಿಯ ಗೌರವಾಧ್ಯಕ್ಷ ಡಾ.ಕೆ.ವಿ.ಚಿದಾನಂದರು ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು. ಸಮಿತಿಯ ಸ್ಥಾಪಕಾಧ್ಯಕ್ಷ ಎನ್‌.ಜಯಪ್ರಕಾಶ ರೈ ಮತ್ತು...

ಎನ್ನೆಂಪಿಯುಸಿ ಕಾಲೇಜು ವಾರ್ಷಿಕೋತ್ಸವ

ಸುಳ್ಯದ ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವವು ಡಿ.10ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ “ವಿದ್ಯಾರ್ಥಿಗಳು ಶಿಕ್ಷಣ ಸಾಂಸ್ಕೃತಿಕ ಕ್ರೀಡೆಯಂತಹ ಹಲವಾರು ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಾಗ ಮಾತ್ರ ವಿದ್ಯಾರ್ಥಿ ಜೀವನಕ್ಕೆ ಮೆರುಗು ಬರವಂತಹದ್ದು. ಈ ನಿಟ್ಟಿನಲ್ಲಿ ಇಂತಹ...

ಪೆರಾಜೆ ಗ್ರಾ.ಪಂ. ಮಾಜಿ ಅಧ್ಯಕ್ಷ, ಬಿಜೆಪಿ ನಾಯಕ ಎ.ಸಿ. ಹೊನ್ನಪ್ಪ ನಿಧನ

ಪೆರಾಜೆ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷರು, ಪೆರಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ, ಬಿಜೆಪಿ ಹಿರಿಯ ಮುಖಂಡರಾಗಿದ್ದ ಅಮಚೂರು ಎ.ಸಿ. ಹೊನ್ನಪ್ಪ ಅವರು ಅಲ್ಪ ಕಾಲದ ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾದರು. ಇವರಿಗೆ 72 ವರ್ಷ ವಯಸ್ಸಾಗಿತ್ತು. ಕೆಲ ದಿನಗಳ ಹಿಂದ ಬೈನ್ ಹ್ಯಾಮರೇಜ್ ಗೊಳಗಾಗಿದ್ದ ಇವರನ್ನು ಸುಳ್ಯ ಆಸ್ಪತ್ರೆಗೆ ಕರೆತಂದು, ಬಳಿಕ ಮಂಗಳೂರು ಆಸ್ಪತ್ರೆಗೆ...

ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಸ್ಮಾರ್ಟ್ ತರಗತಿ ಉದ್ಘಾಟನೆ

ಗುತ್ತಿಗಾರು:2015ರಲ್ಲಿ ಕೆವಿಜಿ ಪಾಲಿಟೆಕ್ನಿಕ್ ಸುಳ್ಯ ಇಲ್ಲಿ ಹುಟ್ಟಿಕೊಂಡ ಎನ್.ಎಸ್.ಎಸ್‌ ಸೇವಾ ಸಂಗಮ ಟ್ರಸ್ಟ್(ರಿ) ಸುಳ್ಯ ಎನ್.ಎಸ್.ಎಸ್ ಹಿರಿಯ ವಿದ್ಯಾರ್ಥಿಗಳ ಸಂಘ ಕರ್ನಾಟಕ ಇದರ ದಶಮಾನೋತ್ಸವದ ಅಂಗವಾಗಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇಲ್ಲಿಗೆ ವಿದ್ಯಾರ್ಥಿಗಳ ಕಲಿಕೆಗೆ ಸಹಾಯವಾಗುವ ನಿಟ್ಟಿನಲ್ಲಿ ನೀಡಿದ ಸ್ಮಾರ್ಟ್ ಕ್ಲಾಸ್ ಇದರ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಸ್ಮಾರ್ಟ್ ತರಗತಿಯ ಉದ್ಘಾಟನೆಯನ್ನು ಪುರುಷೋತ್ತಮ...

ಸುಳ್ಯ : ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಕ್ಯಾಲೆಂಡರ್ ಬಿಡುಗಡೆ

ಸುಳ್ಯ ರಥಬೀದಿಯ ವಿನಾಯಕ ಬಿಲ್ಡಿಂಗ್‌ ನ ಮೊದಲನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ., ಸುಳ್ಯ ಇದರ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಸಮಾರಂಭವು ಡಿ.09 ರಂದು ಸಹಕಾರಿಯ ಕಛೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಜನಾರ್ದನ ದೋಳ ಉಪಾಧ್ಯಕ್ಷರಾದ ಸತ್ಯನಾರಾಯಣ ಅಚ್ರಪ್ಪಾಡಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ ಬಿಳಿಮಲೆ ನಿರ್ದೇಶಕರಾದ ಪ್ರಭಾಕರನ್ ನಾಯರ್, ಪ್ರಕಾಶ್...

ಪೆರುವಾಜೆ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆ : ಚಪ್ಪರ ಮುಹೂರ್ತ

ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಜ.16 ರಿಂದ 21 ರ ತನಕ‌ ನಡೆಯಲಿರುವ ಜಾತ್ರಾ ಮಹೋತ್ಸವ ಹಾಗೂ‌ ಬ್ರಹ್ಮರಥೋತ್ಸವ ಪ್ರಯುಕ್ತ ಚಪ್ಪರ ಮುಹೂರ್ತ ಡಿ.10 ರಂದು ನಡೆಯಿತು. ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿತು. ಕ್ಷೇತ್ರದ ಆಡಳಿತಾಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ, ಪೆರುವಾಜೆ ಗ್ರಾ.ಪಂ....

ಮಾಜಿ ಮುಖ್ಯ ಮಂತ್ರಿ ಎಸ್.ಎಂ.ಕೃಷ್ಣ ವಿಧಿವಶ. ನಾಳೆ ರಾಜ್ಯಾದ್ಯಂತ ಸರಕಾರಿ ರಜೆ ಘೋಷಣೆ

ರಾಜ್ಯದ ಮಾಜಿ ಮುಖ್ಯ ಮಂತ್ರಿ, ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ (92) ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಅವರ ಗೌರವಾರ್ಥ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಮತ್ತು ನಾಳೆ ಸರಕಾರಿ ರಜೆಯನ್ನು ಸರಕಾರ ಘೋಷಣೆ ಮಾಡಿದೆ. ರಾಜ್ಯಾದ್ಯಂತ ಎಲ್ಲಾ ಸರಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ.
Loading posts...

All posts loaded

No more posts

error: Content is protected !!