- Tuesday
- April 28th, 2026
ಮರಳಿ ತಾಲ್ನಾಡಿಗೆ ಆಗಮನ, ಸುಳ್ಯ ಪರಿಸರದ ಅಭಿಮಾನಿಗಳಿಂದ ಸ್ವಾಗತ. ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪುತ್ತೂರು ಮೂಲದ ಸಿನಾನ್ ಎಂಬ ಯುವಕ ಕಳೆದ 2 ವರ್ಷಗಳಿಂದ ತನ್ನ ಸ್ಕೋರ್ಪಿಯೋ ವಾಹನದಲ್ಲಿ ವಿಶ್ವ ಪರಿಯಟನೆ ಮಾಡಿ ಡಿ 3 ರಂದು ತಾಯ್ಕಾಡು ಪುತ್ತೂರಿಗೆ ಮರಳಿದ್ದಾರೆ. ಡಿ 3 ರಂದು ಸಂಜೆ ಸುಳ್ಯ ಮಾರ್ಗವಾಗಿ ಪುತ್ತೂರಿಗೆ ತೆರಳುವ ಮಾಹಿತಿ...
ನಿನ್ನೆ ಸಂಜೆ ಸುರಿದ ಗಾಳಿ ಮಳೆಗೆ ಪೆರಾಜೆಯ ಜಂಕ್ಷನ್ ನಲ್ಲಿ ಕಳೆದ ವರ್ಷ ನಿರ್ಮಿಸಿದ ಆಟೋ ನಿಲ್ದಾಣಕ್ಕೆ ಹಾನಿಯಾಗಿದೆ. ಇದರಿಂದ ಆಟೋ ನಿಲ್ದಾಣದಲ್ಲಿ ನಿಲ್ಲಿಸಬೇಕಾದ ರಿಕ್ಷಾಗಳನ್ನು ರಸ್ತೆ ಬದಿಯಲ್ಲಿ ಪಾರ್ಕಿಂಗ್ ಮಾಡುವಂತಾಗಿದೆ. ಕಳೆದ ವರ್ಷ ಪಂಚಾಯತ್ ವತಿಯಿಂದ ಅಂದಾಜು ಸುಮಾರು 80 ಸಾವಿರ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ನಿಲ್ದಾಣ ಒಂದು ವರ್ಷಕ್ಕೆ ಮುರಿದು ಹೋಗಿರುವುದರಿಂದ ಆಟೋ...
ಸುವರ್ಣ ಕರ್ನಾಟಕ ಸಂಭ್ರಮದ ಭಾಗವಾಗಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿ, ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಕರ್ನಾಟಕ ಯಕ್ಷಗಾನ ಅಕಾಡಮಿಗಳು ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲಾಡಳಿತ ಹಾಗೂ ಮಂಗಳೂರು ಮಹಾನಗರ...
ಕನಕಮಜಲು: ಕನಕಮಜಲು ಯುವಕ ಮಂಡಲ, ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು(ಕಾವಾ) ಮೈಸೂರು ಇದರ ಆಶ್ರಯದಲ್ಲಿ ಸು-ಯೋಗ 2024 ನಿಸರ್ಗ ಚಿತ್ರ ಕಲಾ ಶಿಬಿರ ಕನಕಮಜಲಿನ ಮೂರ್ಜೆ ಶ್ರೀ ಬಾಲ ನಿಲಯದಲ್ಲಿ ಆರಂಭಗೊಂಡಿತು. ಡಿ.2ರಿಂದ 8ರ ತನಕ ಚಿತ್ರ ಕಲಾ ಶಿಬಿರ ನಡೆಯಲಿದ್ದು 15ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ. ಡಿ.2ರಂದು ನಡೆದ ಸಮಾರಂಭದಲ್ಲಿ ಚಿತ್ರ ಕಲಾವಿದರಾದ...
ಕಳೆದ ಎರಡು ದಿನಗಳ ಹಿಂದೆ ಪೈಚಾರು ಫುಡ್ ಪಾಯಿಂಟ್ ಹೊಟೇಲಿಗೆ ರಾತ್ರಿ ವೇಳೆ ನುಗ್ಗಿ ಕಳ್ಳತನ ಮಾಡಿದ್ದ ಚಾಲಾಕಿ ಕಳ್ಳನನ್ನು ಸುಳ್ಯ ಪೋಲಿಸರ ಜೊತೆಗೆ ಪೈಚಾರಿನ ಯುವಕರು ಸೇರಿಕೊಂಡು ಛಲ ಬಿಡದೆ ಹಗಲಿರುಳು ಹುಡುಕಾಟ ನಡೆಸಿ ಕೊನೆಗೂ ಕಳ್ಳನನ್ನು ಹಿಡಿದು ಸುಳ್ಯ ಪೊಲೀಸರಿಗೆ ಒಪ್ಪಿಸಿದ ಘಟನೆ ವರದಿಯಾಗಿದೆ. ನ 3೦ ರಂದು ನಡೆದಿದ್ದ ಹೊಟೇಲ್ ಕಳ್ಳತನದ...
ವಾಯುಭಾರ ಕುಸಿತದಿಂದ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತದ ಪ್ರಭಾವದಿಂದ ರಾಜ್ಯಾದ್ಯಂತ ಮೋಡ ಕವಿದ ವಾತಾವರಣವಿದ್ದು ಸುಳ್ಯದಲ್ಲಿ ಕಳೆದ ರಾತ್ರಿಯಿಂದ ಮಳೆ ಆರಂಭವಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಅಕಾಲಿಕ ಮಳೆಯಿಂದ ಕೃಷಿಕರನ್ನು ಕಂಗಾಲಾಗುವಂತೆ ಮಾಡಿದೆ.
ಶಾಲಾ-ಕಾಲೇಜು ದಿನಗಳದು ಮುಗಿದು ಹೋಗಿದೆ ಇಂದು, ವರ್ಷಗಳ ಕಾಲ ಜೊತೆಗಿದ್ದ ಬಂಧ ದೂರ ಸಾಗುತ್ತಿದೆ ಇಂದು…ಸ್ವಾರ್ಥವಿಲ್ಲದೇ ಪ್ರೀತಿ ತೋರಿದ ಸ್ನೇಹವದು ಸೂತ್ರ ತಪ್ಪಿದೆ ಇಂದು, ಒಲ್ಲದ ಮನಸ್ಸಿನಿಂದಲೇ ದೂರವಾಗುತ್ತಿದೆ ಇಂದು…ವರ್ಷಗಳ ಕಾಲ ಜೊತೆಯಾಗಿ ಸಾಗಿದ ಈ ಪಯಣ ದಾರಿ ಬದಲಿಸುತ್ತಿದೆ ಇಂದು, ಇನ್ನು ಅವರವರ ಬದುಕಿನ ದಾರಿಯ ಹುಡುಕಿ ಎಲ್ಲರೂ ಸಾಗುವರು ಮುಂದು…ಬದುಕಿನ ಬಗ್ಗೆ ಚಿಂತೆಯಿಲ್ಲದೇ...
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ರಾತ್ರಿ ವೈಭವದ ಲಕ್ಷದೀಪೋತ್ಸವ ನೆರವೇರಿತು. ಸಾಲು ಸಾಲು ಹಣತೆ ದೀಪಗಳ ನಡುವೆ ಕುಕ್ಕೆ ಸುಬ್ರಹ್ಮಣ್ಯ ದೇವರ ಲಕ್ಷದೀಪೋತ್ಸವವು ಭಕ್ತಿ-ಸಡಗರದಿಂದ ನಡೆಯಿತು. ಚಂದ್ರಮಂಡಲ ರಥದಲ್ಲಿ ಸುಬ್ರಹ್ಮಣ್ಯ ದೇವರ ಉತ್ಸವ ನಡೆಯಿತು.ಶ್ರೀ ದೇವಳದ ಅರ್ಚಕರು ಉತ್ಸವದ ವಿದಿ ವಿಧಾನ ನೆರವೇರಿಸಿದರು. ರಥಬೀದಿಯಿಂದ...
ಸುಬ್ರಹ್ಮಣ್ಯ ಡಿ1: ಕುಮಾರಸ್ವಾಮಿ ಪದವಿಪೂರ್ವ ಕಾಲೇಜಿನಲ್ಲಿ ಕಡಬ ಸುಳ್ಯ ಮತ್ತು ಪುತ್ತೂರು ತಾಲೂಕುಗಳ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನದಲ್ಲಿ ಆಸಕ್ತಿ ಮೂಡಿಸಿ, ತಾವೇ ಸ್ವತಃ ಪ್ರಯೋಗಗಳನ್ನು ಕೈಗೊಳ್ಳಲು ಅನುಕೂಲ ಹೊಂದಿದ್ದು ನೂತನ ಆವಿಷ್ಕಾರಗಳನ್ನು ಮಾಡಲು ಪ್ರೆರೇಪಿಸುವ ವಿಶಿಷ್ಟ ಪ್ರಯೋಗಾಲಯ ದ ವೀಕ್ಷಣೆ ಹಾಗೂ ಮಾಹಿತಿ ಸಂಗ್ರಹಣೆಯನ್ನುಶನಿವಾರ ಏನೆಕಲ್ಲು ಪ್ರೌಢಶಾಲಾ 8ನೇ ತರಗತಿಯ ವಿದ್ಯಾರ್ಥಿಗಳು ಪಡಕೊಂಡರು....
ಸುಬ್ರಹ್ಮಣ್ಯ ಡಿ.1 :ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಏನೆಕಲ್ಲು ಬಾನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಕಂಪ್ಯೂಟರ್ ಪ್ರಿಂಟರ್ ನ್ನು ಶುಕ್ರವಾರ ಕೊಡುಗೆಯಾಗಿ ನೀಡಲಾಯಿತು.ಸಮಾರಂಭದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷ ಚಂದ್ರಶೇಖರ ನಾಯರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜೋನಲ್ ಲೆಫ್ಟಿನೆಂಟ್ ವಿಶ್ವನಾಥ ನಡುತೋಟ, ಶಾಲಾ ಮೇಲುಸ್ತುವಾರಿ ಹಾಗೂ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಾಸುದೇವ...
Loading posts...
All posts loaded
No more posts
