ಡಿ.07 ರಂದು ದೀನದಯಾಳ್‌ ಸಹಕಾರ ಸಂಘದ ನೂತನ ಕಛೇರಿ ಉದ್ಘಾಟನೆ – ನಡೆದು ಬಂದ ಹಾದಿಯನ್ನು ವಿವರಿಸಿದ ಸಂಘದ ಅಧ್ಯಕ್ಷ, ಮಾಜಿ ಸಚಿವ ಎಸ್ ಅಂಗಾರ

ಪರಿಶಿಷ್ಟ ಜಾತಿ ಮುಗೇರ ಜನಾಂಗದ ಕುಲದೈವ ಗಡಿ ಮೊಗೇರ್ಕಳ ದೈವಗಳ ಆರಾಧನೆ ಹಾಗೂ ಭವಿಷ್ಯದಲ್ಲಿ ಸಮಾಜದಲ್ಲಿ, ಜನಾಂಗದ ವಿಶ್ವಾಸವನ್ನು ಉಳಿಸಿಕೊಳ್ಳುವ ಉದ್ದೇಶದಿಂದ 2004-05 ರಲ್ಲಿ ದೀನ ದಯಾಳ್ ಎಜ್ಯುಕೇಶನಲ್ ರೂರಲ್ & ಅರ್ಬನ್ ಡೆವಲಪ್‌ಮೆಂಟ್ ಟ್ರಸ್ಟ್ (ರಿ.) ಅನ್ನು ರಚನೆ ಮಾಡಲಾಯಿತು. ಇದರ ಮೂಲಕ ದಾಸನಕನೆಯಲ್ಲಿ ಮೊಗೇರ್ಕಳ ದೈವದ ಗುಡಿ ನಿರ್ಮಾಣ, ಬ್ರಹ್ಮದೇವರ ಗುಂಡ ನಿರ್ಮಾಣ...

ಪಂಬೆತ್ತಾಡಿ : ಅಕ್ಷತಾ ಯುವತಿ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ಧನಲಕ್ಷ್ಮಿ ಮಠ, ಕಾರ್ಯದರ್ಶಿಯಾಗಿ ಅಶ್ವಿನಿ ಪಂಜದಬೈಲು

ಅಕ್ಷತಾ ಯುವತಿ ಮಂಡಲ ಪಂಬೆತ್ತಾಡಿ ಇದರ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಇತ್ತೀಚೆಗೆ ನಡೆಯಿತು.2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಧನಲಕ್ಷ್ಮಿ ಮಠ, ಗೌರವಾಧ್ಯಕ್ಷರಾಗಿ ಶ್ವೇತಾ ಪಂಜದಬೈಲು, ಕಾರ್ಯದರ್ಶಿಯಾಗಿ ಅಶ್ವಿನಿ ಪಂಜದಬೈಲು, ಉಪಾಧ್ಯಕ್ಷರಾಗಿ ಜಯಂತಿ ಪಂಜದಬೈಲು, ಜತೆಕಾರ್ಯದರ್ಶಿಯಾಗಿ ಲಿಖಿತಾ ಕರಿಕ್ಕಳ, ಖಜಾಂಜಿಯಾಗಿ ಪೂರ್ಣಶ್ರೀ ಪಂಜದಬೈಲು, ಕ್ರೀಡಾ ಕಾರ್ಯದರ್ಶಿಯಾಗಿ ಅಕ್ಷತಾ ಕರಿಕ್ಕಳ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸೌಮ್ಯ...
Ad Widget

ಪಂಬೆತ್ತಾಡಿ : ಅಮೃತಾ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ಶ್ರೀಮತಿ ಲಲಿತಾ ಬಾಬ್ಲುಬೆಟ್ಟು, ಕಾರ್ಯದರ್ಶಿಯಾಗಿ ಶ್ರೀಮತಿ ಅಶ್ವಿನಿ ಮಡಿವಾಳಮಜಲು

ಅಮೃತಾ ಮಹಿಳಾ ಮಂಡಲ ಪಂಬೆತ್ತಾಡಿ ಇದರ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಇತ್ತೀಚೆಗೆ ನಡೆಯಿತು.ಯುವತಿ ಮಂಡಲದ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀಮತಿ ಲಲಿತಾ ಬಾಬ್ಲುಬೆಟ್ಟು, ಗೌರವಾಧ್ಯಕ್ಷರಾಗಿ ಶ್ರೀಮತಿ ಅನಿತಾ ಸುತ್ತುಕೋಟೆ, ಕಾರ್ಯದರ್ಶಿಯಾಗಿ ಶ್ರೀಮತಿ ಅಶ್ವಿನಿ ಮಡಿವಾಳಮಜಲು, ಉಪಾಧ್ಯಕ್ಷರಾಗಿ ಶ್ರೀಮತಿ ರಮ್ಯಾ ಬಾಬ್ಲುಬೆಟ್ಟು, ಜತೆಕಾರ್ಯದರ್ಶಿಯಾಗಿ ಶ್ರೀಮತಿ ಸುಶ್ಮಿತಾ ಜಾಕೆ, ಖಜಾಂಜಿಯಾಗಿ ಶ್ರೀಮತಿ ಮೋಹನಾಂಗಿ...

ಪಂಬೆತ್ತಾಡಿ : ಪಂಚಶ್ರೀ ಯುವಕ ಮಂಡಲದ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ಲೋಕೇಶ್ ಪಂಜದಬೈಲು, ಕಾರ್ಯದರ್ಶಿಯಾಗಿ ಶ್ರೀಧರ್ ಭೀಮಗುಳಿ

ಪಂಚಶ್ರೀ ಯುವಕ ಮಂಡಲ ಪಂಬೆತ್ತಾಡಿ ಇದರ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಇತ್ತೀಚೆಗೆ ನಡೆಯಿತು.2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಲೋಕೇಶ್ ಪಂಜದಬೈಲು, ಗೌರವಾಧ್ಯಕ್ಷರಾಗಿ ನಾಗಪ್ಪ ಗೌಡ ಪಂಜದಬೈಲು, ಕಾರ್ಯದರ್ಶಿಯಾಗಿ ಶ್ರೀಧರ್ ಭೀಮಗುಳಿ, ಉಪಾಧ್ಯಕ್ಷರಾಗಿ ನೇಮಿರಾಜ್ ಪಂಜದಬೈಲು, ಜತೆಕಾರ್ಯದರ್ಶಿಯಾಗಿ ರಮೇಶ್ ಮಡಿವಾಳಮಜಲು, ಖಜಾಂಜಿಯಾಗಿ ಯಕ್ಷಿತ್ ಜಾಕೆ, ಕ್ರೀಡಾ ಕಾರ್ಯದರ್ಶಿಯಾಗಿ ವಿನಯಕುಮಾರ್ ಕರಿಕ್ಕಳ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ...

ಸುಳ್ಯ : ಸಂಚಾರ ನಿಯಮ ಉಲ್ಲಂಘನೆ – 10 ಕ್ಕೂ ಹೆಚ್ಚು ಪ್ರಕರಣ ದಾಖಲು

ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಕಳೆದ ಎರಡು ವಾರಗಳಿಂದ ಪೋಲೀಸರು ಕಾರ್ಯಾಚರಣೆ ನಡೆಸಿ ನಂಬರ್ ಪ್ಲೇಟ್ ಇಲ್ಲದೇ ಸಂಚಾರ ನಿಯಮಗಳನ್ನು ಉಲ್ಲಂಘಿಸಿ, ಅಪಾಯಕಾರಿ ರೀತಿಯಲ್ಲಿ ವಾಹನ ಚಲಾಯಿಸುತ್ತಿದ್ದ ಸುಮಾರು 10ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡು ವಾಹನ ಸವಾರರ ಮೇಲೆ ಪ್ರಕರಣ ದಾಖಲಿಸಿದ್ದಾರೆ.‌

ಕುಕ್ಕೆ ಸುಬ್ರಹ್ಮಣ್ಯ: ಇಂದು ಲಕ್ಷದೀಪೋತ್ಸವ, ಅಖಂಡ ಕುಣಿತ ಭಜನೆ ಸಂಭ್ರಮ| ರಾತ್ರಿಯಿಂದ ಬೀದಿ ಮಡೆಸ್ನಾನ ಆರಂಭ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರೋತ್ಸವದ ಪ್ರಯುಕ್ತ ನ.30ರಂದು ಲಕ್ಷದೀಪೋತ್ಸವ ನೆರವೇರಲಿದೆ. ಈ ನಿಮಿತ್ತ ಶ್ರೀ ದೇವರ ಚಂದ್ರ ಮಂಡಲ ರಥೋತ್ಸವ ನಡೆಯಲಿದ್ದು, ಈ ಸಂದರ್ಭ ದೇಗುಲ ಸಹಿತ ಗೋಪುರದ ಬಳಿಯಿಂದ ಕಾಶಿಕಟ್ಟೆ ತನಕ ಹಾಗೂ ಆದಿ ಸುಬ್ರಹ್ಮಣ್ಯ ದೇಗುಲ ಪರಿಸರದಲ್ಲಿ ಲಕ್ಷ ದೀಪಗಳು ಬೆಳಗಲಿವೆ. ಜತೆಗೆ ವಿಶೇಷವಾಗಿ ಸುಮಾರು 120 ತಂಡಗಳಿಂದ ಅಖಂಡ...

ಸುಳ್ಯ : ಕೆ.ವಿ.ಜಿ.ಆಯುರ್ವೇದ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿ ಸಂಘದ ರಚನೆ ಮತ್ತು ಪ್ರತಿಜ್ಞಾ ವಿಧಿ ಸ್ವೀಕಾರ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ವಿದ್ಯಾರ್ಥಿ ಸಂಘದ ರಚನೆ ಮತ್ತು ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮವನ್ನು ನ.29ರಂದು ಕಾಲೇಜಿನ ಆಡಿಟೋರಿಯಂನಲ್ಲಿ ನೆರವೇರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಅವರು ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿ, 1996 ರಿಂದ ಕಾಲೇಜು ಪ್ರಾರಂಭಗೊಂಡು ಇಲ್ಲಿಯ...

ಸುಳ್ಯ : ಜರ್ನಲಿಸ್ಟ್ ಯೂನಿಯನ್ ನೂತನ ಪದಾಧಿಕಾರಿಗಳ ಆಯ್ಕೆ -ಅಧ್ಯಕ್ಷೆಯಾಗಿ ಜಯಶ್ರೀ ಕೊಯಿಂಗೋಡಿ, ಕಾರ್ಯದರ್ಶಿಯಾಗಿ ಗಣೇಶ್ ಕುಕ್ಕುದಡಿ, ಕೋಶಾಧಿಕಾರಿಯಾಗಿ ಕುಶಾಂತ್ ಕೊರತ್ಯಡ್ಕ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ವಾರ್ಷಿಕ ಮಹಾಸಭೆಯು ಸುಳ್ಯದ ಶ್ರೀ ಹರಿ ಕಾಂಪ್ಲೆಕ್ಸ್ ನ ಸಭಾಭವನದಲ್ಲಿ ತಾಲೂಕು ಘಟಕದ ಅಧ್ಯಕ್ಷ ಈಶ್ವರ ವಾರಣಾಸಿ ಯವರ ಅಧ್ಯಕ್ಷತೆಯಲ್ಲಿ ನ.29 ರಂದು ನಡೆಯಿತು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಜಿಲ್ಲಾ ಗೌರವಾಧ್ಯಕ್ಷ ಹರೀಶ್ ಬಂಟ್ವಾಳ್, ಕೆಜೆಯು ಸುಳ್ಯ ತಾ.ಘಟಕದ ಗೌರವಾಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ, ಕಾರ್ಯದರ್ಶಿ ಜಯಶ್ರೀ ಕೊಯಿಂಗೋಡಿ,...

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಲೆಗಳ ಹೊಸ ಕೊಠಡಿ ನಿರ್ಮಾಣ, ದುರಸ್ತಿ ಹಾಗೂ ಶೌಚಾಲಯ ನಿರ್ಮಾಣಕ್ಕೆ ಒಟ್ಟು 2.48 ಕೋಟಿ ಮಂಜೂರು: ಶಾಸಕರ ಕಚೇರಿ ಮಾಹಿತಿ

ಸುಳ್ಯ: 2024-25ನೇ ಸಾಲಿನಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳ ಹೊಸ ಕೊಠಡಿ ನಿರ್ಮಾಣ, ದುರಸ್ತಿ ಹಾಗೂ ಶೌಚಾಲಯ ನಿರ್ಮಾಣಕ್ಕೆ ಒಟ್ಟು 2.48 ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ತಿಳಿಸಿದ್ದಾರೆ. ಮೊದಲ ಹಂತದಲ್ಲಿ ಸರಕಾರಿ ಶಾಲೆಗಳಿಗೆ ಹೊಸ ಕೊಠಡಿಗಳ ನಿರ್ಮಾಣಕ್ಕೆ ರೂ. 72.50 ಲಕ್ಷ ಮಂಜೂರಾಗಿದೆ. ಕಲ್ಮಡ್ಕ ಸರಕಾರಿ ಹಿರಿಯ ಪ್ರಾಥಮಿಕ...

ಜಾಲ್ಸೂರಿನ ಮಾಪಲಡ್ಕ ಬಳಿ ಆತ್ಮಹತ್ಯೆಗೆ ಶರಣಾದ ಅಜ್ಜ ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ಜಾಲ್ಸೂರು ಸಮೀಪದ ಮಾಪಲಡ್ಕ ಬಳಿ ವೃದ್ದರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇದೀಗ ವರದಿಯಾಗಿದೆ. 61 ವರ್ಷದ ಕುಟ್ಟಿ ಎನ್ನುವವರು ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ. ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರು ಪಂಜಿಕಲ್ಲು ಮಾಪಲಡ್ಕ ಕಾಲೋನಿಯ ನಿವಾಸಿಯಾಗಿದ್ದಾರೆ. ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
Loading posts...

All posts loaded

No more posts

error: Content is protected !!