- Tuesday
- June 23rd, 2026
ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಕಳೆದ ಎರಡು ವಾರಗಳಿಂದ ಪೋಲೀಸರು ಕಾರ್ಯಾಚರಣೆ ನಡೆಸಿ ನಂಬರ್ ಪ್ಲೇಟ್ ಇಲ್ಲದೇ ಸಂಚಾರ ನಿಯಮಗಳನ್ನು ಉಲ್ಲಂಘಿಸಿ, ಅಪಾಯಕಾರಿ ರೀತಿಯಲ್ಲಿ ವಾಹನ ಚಲಾಯಿಸುತ್ತಿದ್ದ ಸುಮಾರು 10ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡು ವಾಹನ ಸವಾರರ ಮೇಲೆ ಪ್ರಕರಣ ದಾಖಲಿಸಿದ್ದಾರೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರೋತ್ಸವದ ಪ್ರಯುಕ್ತ ನ.30ರಂದು ಲಕ್ಷದೀಪೋತ್ಸವ ನೆರವೇರಲಿದೆ. ಈ ನಿಮಿತ್ತ ಶ್ರೀ ದೇವರ ಚಂದ್ರ ಮಂಡಲ ರಥೋತ್ಸವ ನಡೆಯಲಿದ್ದು, ಈ ಸಂದರ್ಭ ದೇಗುಲ ಸಹಿತ ಗೋಪುರದ ಬಳಿಯಿಂದ ಕಾಶಿಕಟ್ಟೆ ತನಕ ಹಾಗೂ ಆದಿ ಸುಬ್ರಹ್ಮಣ್ಯ ದೇಗುಲ ಪರಿಸರದಲ್ಲಿ ಲಕ್ಷ ದೀಪಗಳು ಬೆಳಗಲಿವೆ. ಜತೆಗೆ ವಿಶೇಷವಾಗಿ ಸುಮಾರು 120 ತಂಡಗಳಿಂದ ಅಖಂಡ...
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ವಿದ್ಯಾರ್ಥಿ ಸಂಘದ ರಚನೆ ಮತ್ತು ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮವನ್ನು ನ.29ರಂದು ಕಾಲೇಜಿನ ಆಡಿಟೋರಿಯಂನಲ್ಲಿ ನೆರವೇರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಅವರು ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿ, 1996 ರಿಂದ ಕಾಲೇಜು ಪ್ರಾರಂಭಗೊಂಡು ಇಲ್ಲಿಯ...
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ವಾರ್ಷಿಕ ಮಹಾಸಭೆಯು ಸುಳ್ಯದ ಶ್ರೀ ಹರಿ ಕಾಂಪ್ಲೆಕ್ಸ್ ನ ಸಭಾಭವನದಲ್ಲಿ ತಾಲೂಕು ಘಟಕದ ಅಧ್ಯಕ್ಷ ಈಶ್ವರ ವಾರಣಾಸಿ ಯವರ ಅಧ್ಯಕ್ಷತೆಯಲ್ಲಿ ನ.29 ರಂದು ನಡೆಯಿತು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ನ ಜಿಲ್ಲಾ ಗೌರವಾಧ್ಯಕ್ಷ ಹರೀಶ್ ಬಂಟ್ವಾಳ್, ಕೆಜೆಯು ಸುಳ್ಯ ತಾ.ಘಟಕದ ಗೌರವಾಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ, ಕಾರ್ಯದರ್ಶಿ ಜಯಶ್ರೀ ಕೊಯಿಂಗೋಡಿ,...
ಸುಳ್ಯ: 2024-25ನೇ ಸಾಲಿನಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳ ಹೊಸ ಕೊಠಡಿ ನಿರ್ಮಾಣ, ದುರಸ್ತಿ ಹಾಗೂ ಶೌಚಾಲಯ ನಿರ್ಮಾಣಕ್ಕೆ ಒಟ್ಟು 2.48 ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ತಿಳಿಸಿದ್ದಾರೆ. ಮೊದಲ ಹಂತದಲ್ಲಿ ಸರಕಾರಿ ಶಾಲೆಗಳಿಗೆ ಹೊಸ ಕೊಠಡಿಗಳ ನಿರ್ಮಾಣಕ್ಕೆ ರೂ. 72.50 ಲಕ್ಷ ಮಂಜೂರಾಗಿದೆ. ಕಲ್ಮಡ್ಕ ಸರಕಾರಿ ಹಿರಿಯ ಪ್ರಾಥಮಿಕ...
ಜಾಲ್ಸೂರು ಸಮೀಪದ ಮಾಪಲಡ್ಕ ಬಳಿ ವೃದ್ದರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇದೀಗ ವರದಿಯಾಗಿದೆ. 61 ವರ್ಷದ ಕುಟ್ಟಿ ಎನ್ನುವವರು ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರು ಪಂಜಿಕಲ್ಲು ಮಾಪಲಡ್ಕ ಕಾಲೋನಿಯ ನಿವಾಸಿಯಾಗಿದ್ದಾರೆ. ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇಲ್ಲಿ ನವಂಬರ್ 29ರಂದು 2024 -25 ನೇ ಸಾಲಿನ ಪ್ರಥಮ ಬಿಎಎಂಎಸ್ ವಿದ್ಯಾರ್ಥಿಗಳಿಗೆ ಶಿಶ್ಯೋಪನಯನ ಹಾಗೂ ಗಣಪತಿ ಹವನ ಸಹಿತ ಧನ್ವಂತರಿ ಪೂಜೆಯನ್ನು ಕಾಲೇಜಿನಲ್ಲಿ ವೇದಮೂರ್ತಿ ಪುರೋಹಿತ ನಾಗರಾಜ್ ಭಟ್ ಹಾಗೂ ನಟರಾಜ್ ಶರ್ಮಾ ರವರ ವೈದಿಕತ್ವದಲ್ಲಿ ಹಮ್ಮಿಕೊಳ್ಳಲಾಯಿತು. ಸಮಾರಂಭದಲ್ಲಿ ಡಾ. ಚಿದಾನಂದ ಕೆ ವಿ,...
ಒಗ್ಗಟ್ಟಿನಲ್ಲಿದ್ದರೆ ಯಾವುದೇ ಕಷ್ಟವನ್ನು ಪರಿಹರಿಸಲು ಸಾಧ್ಯ , ಒಗ್ಗಟ್ಟು ಮತ್ತು ಶಾಂತಿ ಸೌಹಾರ್ದತೆ ನೆಲೆ ನಿಲ್ಲಬೇಕು;ಸಯ್ಯಿದ್ ಕಡಲುಂಡಿ ತಂಙಳ್ ಸುಳ್ಯದ ಜಟ್ಟಿಪಳ್ಳ ಅನ್ಸಾರಿಯಾ ಎಜ್ಯುಕೇಷನ್ ಸೆಂಟರ್ 'ಗಲ್ಫ್ ಅಡಿಟೋರಿಯಂ ಇದರ ಉದ್ಘಾಟನಾ ಸಮಾರಂಭ ನ 29 ರಂದು ಎ ಜಿ ಸಿ ಸಿ ಆಡಿಟೋರಿಯಂ ವೇದಿಕೆಯಲ್ಲಿ ನಡೆಯಿತು. ಈ ನೂತನ ಆಡಿಟೋರಿಯಂ ಉದ್ಘಾಟನೆ ಮಾಡಿದ ಸಮಸ್ತ...
ಅನ್ಸಾರಿಯಾ ಗಲ್ಫ್ ಆಡಿಟೋರಿಯಂ ಉದ್ಘಾಟನಾ ಸಮಾರಂಭಕ್ಕೆ ಭಾಗವಹಿಸುವ ಸಾರ್ವಜನಿಕರಿಗೆ ಉಚಿತ ಚಾ ತಿಂಡಿ ವ್ಯವಸ್ಥೆಗೆ ಸೂಕುಲ್ ಅನ್ಸಾರ್ ತಟ್ಟು ಕಡವನ್ನು ಸ್ಥಳೀಯ ಯುವಕರ ತಂಡ ಕೆಲವೇ ಘಂಟೆಗಳಲ್ಲಿ ನಿರ್ಮಿಸಿದೆ. ಕೇರಳದಲ್ಲಿ ಕಾಣಬಹುದಾದ ಬಿದಿರು, ತೆಂಗಿನ ಗರಿ, ಮುಂತಾದ ಕಚ್ಚ ವಸ್ತುಗಳಿಂದ ಯುವಕರು ಕೆಲವೇ ಸಮಯದಲ್ಲಿ ಸುಂದರ ತಟ್ಟು ಕಡೆ ನಿರ್ಮಿಸಿದ್ದು ಅದಕ್ಕೆ ವಿದ್ಯುತ್ ದೀಪಾಲಂಕಾರ ಮಾಡಿರುತ್ತಾರೆ....
ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ರಿ. ಮಂಗಳೂರು ಪ್ರವರ್ತಕರು ಬ್ಯಾಂಕ್ ಆಫ್ ಬರೋಡ, ವಿಜಯ ಗ್ರಾಮ ಸಮಿತಿ ನಾಲ್ಕೂರು, ಯುವಜನ ಸಂಯುಕ್ತ ಮಂಡಳಿ ಸುಳ್ಯ ಇದರ ಆಶಯದಲ್ಲಿ ನ. 29ರಂದು ಹಾಲೆಮಜಲಿನ ವೆಂಕಟೇಶ್ವರ ಸಭಾಭವನದಲ್ಲಿ ಬ್ಯಾಂಕ್ ಆಫ್ ಬರೋಡದಲ್ಲಿ ಖಾತೆ ತೆರೆಯುವ ಬಗ್ಗೆ ಮತ್ತು ಮಲ್ಲಿಗೆ ಕೃಷಿ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು...
Loading posts...
All posts loaded
No more posts
