- Saturday
- May 2nd, 2026
ಅರಂತೋಡು ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯು ನ.21ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮುಖ್ಯವಾಗಿ ಸುಮಾರು 14 ಮನೆ ಗಳಿಗೆ ಸಂಪರ್ಕ ಕಲ್ಪಿಸುವ 30ವರ್ಷಗಳಿಂದ ಊರ್ಜಿತ ದಲ್ಲಿರುವ ಆರಂತೋಡು, ಅಳಿಕೆ - ಕಲ್ಲುಗದ್ದೆ ಪಂಚಾಯತ್ ರಸ್ತೆಯನ್ನು ಪಂಚಾಯತಿನ ಅವಾಹಗನೆ ತರದೆ ಖಾಸಗಿ ವ್ಯಕ್ತಿಗಳು ರಸ್ತೆಯನ್ನು ಬಂದ್ ಮಾಡಲು...
ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು. ಪೆರಾಜೆ ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ದ್ವಿ ಚಕ್ರ ವಾಹನವನ್ನು ಕಳ್ಳನೊಬ್ಬ ಕದಿಯಲು ಯತ್ನಿ ಸಿದ್ದು ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನ 20 ರಂದು ರಾತ್ರಿ ಸುಮಾರು 10 ಘಂಟೆಗೆ ನಡೆದಿದೆ. ಪೆರಾಜೆ ಮಸೀದಿ ಬಳಿ ಮುಖ್ಯ ರಸ್ತೆಯ ಬದಿ ಇರುವ ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ...
ವೈದ್ಯಾಧಿಕಾರಿ ಡಾ. ಕರುಣಾಕರ ರವರಿಂದ ಪತ್ರಿಕಾ ಪ್ರಕಟಣೆ ಸುಳ್ಯ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ವಾಹನ ಪಾರ್ಕಿಂಗ್ ವಿಷಯಕ್ಕೆ ಸಂಬಂಧಿಸಿ ಆಂಬುಲೆನ್ಸ್ ಚಾಲಕರ ಮತ್ತು ಆಸ್ಪತ್ರೆಯ ವೈದ್ಯರ ನಡುವೆ ನಡೆಯುತ್ತಿದ್ದ ಪರ ವಿರೋಧ ಆರೋಪಗಳನ್ನು ನವಂಬರ್ 21ರಂದು ವೈದ್ಯಾಧಿಕಾರಿ ಡಾ. ಕರುಣಾಕರ ರವರ ನೇತೃತ್ವದಲ್ಲಿ ಮಾತುಕತೆ ನಡೆದು ವಿಷಯವನ್ನು ಇತ್ಯರ್ಥಪಡಿಸಿರುವುದಾಗಿ ವೈದ್ಯರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ....
ಸುಳ್ಯದ ಕಾಂತಮಂಗಲ ಸಮೀಪ ದಾಖಲೆಪತ್ರಗಳು ಬಿದ್ದು ಸಿಕ್ಕಿದೆ ಕಳೆದುಕೊಂಡವರು 9483312579 ಈ ದೂರವಾಣಿ ಸಂಖ್ಯೆಗೆ ಕರೆ ಮಾಡುವಂತೆ ತಿಳಿಸಿದ್ದಾರೆ
ಸಂಪಾಜೆ: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿ ಎಂಬಲ್ಲಿ ಇದೀಗ ಸುಮಾರು 9 ಗಂಟೆಯ ವೇಳೆಗೆ ಚಿರತೆ ಮರಿಯೊಂದು ಕಾಡಿನಿಂದ ರಸ್ತೆ ಮಾರ್ಗವಾಗಿ ದಾಟುವ ಸಂದರ್ಭದಲ್ಲಿ ರಸ್ತೆಯಲ್ಲಿ ವೇಗವಾಗಿ ಬರುತ್ತಿದ್ದ ವಾನಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ಇದೀಗ ವರದಿಯಾಗಿದೆ . ಸದ್ಯ ಅರಣ್ಯ ಇಲಾಖೆಗೆ ಮಾಹಿತಿ ರವಾನೆಯಾಗಿದ್ದು ಇದರ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಗಾಂಧಿನಗರ ವೈನ್ ಶಾಪ್ ಬಳಿ ತಲವಾರು ಹಿಡಿದು ಬೈಕ್ನಲ್ಲಿ ಬಂದ ಅಪರಿಚಿತರು ಕೆಲವು ಹೊತ್ತು ಅವರೊಳಗೆ ಗಲಾಟೆ ಮಾಡಿಕೊಂಡು ಆತಂಕ ಸೃಷ್ಟಿಸಿದ ಘಟನೆಯ ವಿಡಿಯೋ ವೈರಲ್ ಆಗಿದೆ. https://youtube.com/shorts/FkSqp5uM9M0?si=5PCLqgZn1kacbDkN ದ್ವಿ ಚಕ್ರ ವಾಹನದಲ್ಲಿ ಬಂದ ಇಬ್ಬರು ಚೀಲದಿಂದ ತಲವಾರ್ ರೀತಿಯ ಕತ್ತಿಯನ್ನು ಹೊರಗೆ ತೆಗೆದು ಮತ್ತೆ ಚೀಲದಲ್ಲಿ ಇರಿಸುವ ದೃಶ್ಯ ಕಂಡು ಬರುತ್ತಿದೆ. ಸ್ವಲ್ಪ ಮುಂದಕ್ಕೆ...
ಒಸಾಟ್ ಸಂಸ್ಥೆ ವತಿಯಿಂದ 1 ಕೋಟಿ ರೂ ವೆಚ್ಚದಲ್ಲಿ ಸುಳ್ಯ ಸ.ಪ.ಪೂ. ಕಾಲೇಜು ಕೊಠಡಿ ಮತ್ತು ನೂತನ ಸಭಾಭವನಕ್ಕೆ ಶಿಲಾನ್ಯಾಸ
ಸಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಅಮೇರಿಕಾದ ಒಸಾಟ್ ಸಂಸ್ಥೆ ವತಿಯಿಂದ ರೂ.1 ಕೋಟಿ ವೆಚ್ಚದಲ್ಲಿ ನಾಲ್ಕು ಕೊಠಡಿ ನಿರ್ಮಾಣವಾಗಲಿದ್ದು, ಅದರ ಶಿಲಾನ್ಯಾಸ ಕಾರ್ಯಕ್ರಮ ನ.20ರಂದು ನಡೆಯಿತು.ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ನೂತನ ಕೊಠಡಿಗಳಿಗೆ ಶಿಲಾನ್ಯಾಸ ನೆರವೇರಿಸಿದರು.ಪುರೋಹಿತ ನಾಗರಾಜ ಭಟ್ ರ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನಡೆದವು.ಹಿರಿಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರು, ಅಕಾಡೆಮಿ...
ಸುಳ್ಯ ನಗರ ಪಂಚಾಯತ್ ವತಿಯಿಂದ ಜ್ಯೋತಿ ಸರ್ಕಲ್ ನಿಂದ ನಿರೀಕ್ಷಣಾ ಮಂದಿರದ ರಸ್ತೆಯ ಬಲಬದಿಯಲ್ಲಿ ನೂತನವಾಗಿ ನಿರ್ಮಿಸಿದ ಉದ್ಯಾನವನಕ್ಕೆ ಸರ್ದಾರ್ ವಲ್ಲಭಾಯಿ ಪಟೇಲ್ ನಾಮಕರಣ ಮಾಡುವಂತೆ ಹಾಗೂ ಪುತ್ಥಳಿ ನಿರ್ಮಿಸುವಂತೆ ಸುಳ್ಯರಾಷ್ಟ್ರಾಭಿಮಾನಿಗಳ ಬಳಗದ ವತಿಯಿಂದ ಇಂದು ಮನವಿ ನೀಡಲಾಯಿತು.ನಗರ ಪಂಚಾಯತ್ ಉಪಾಧ್ಯಕ್ಷ ಬುದ್ದ ನಾಯ್ಕ ರವರಲ್ಲಿ ಮನವಿ ಪತ್ರವನ್ನು ರಾಷ್ಟ್ರಾಭಿಮಾನಿಗಳ ಬಳಗದ ಸಂಚಾಲಕ ಉಮೇಶ್ ಪಿ.ಕೆ...
ವೈದ್ಯರಿಗೊಂದು ನ್ಯಾಯ ಆಂಬುಲೆನ್ಸ್ ಚಾಲಕರಿಗೊಂದು ನ್ಯಾಯವಾ? ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆ ಸುಳ್ಯ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಆಸ್ಪತ್ರೆಯ ಸಿಬ್ಬಂದಿಗಳ ವಾಹನ ನಿಲುಗಡೆಗೆ ಕಾಯ್ದಿರಿಸಿದ ಸ್ಥಳದಲ್ಲಿ ನ.19 ರಂದು ಮಧ್ಯಾಹ್ನ ವೇಳೆ ಖಾಸಗಿ ಆಂಬುಲೆನ್ಸ್ ವಾಹನವೊಂದು ನಿಲ್ಲಿಸಿದ್ದು ಇದರ ಫೋಟೋ ಇದೀಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣ ವಾಗಿದೆ.ಇದೇ ರೀತಿಯ ಘಟನೆ ಕಳೆದ ಕೆಲವು ದಿನಗಳ...
Loading posts...
All posts loaded
No more posts
