ಕುಕ್ಕೆ ಸುಬ್ರಹ್ಮಣ್ಯ : ಆಶ್ಲೇಷ ನಕ್ಷತ್ರ ಹಿನ್ನೆಲೆ ಭಕ್ತರ ಸಾಲು

ಸುಬ್ರಹ್ಮಣ್ಯ ಜುಲೈ 16 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ತಿಂಗಳಿಗೊಮ್ಮೆ ಬರುವ ಆಶ್ಲೇಷ ನಕ್ಷತ್ರದಂದು ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಕ್ಷೇತ್ರಕ್ಕೆ ಬಂದು ಆಶ್ಲೇಷ ಬಲಿ ಸೇವೆ ಸಲ್ಲಿಸುವುದಾಗಿದೆ. ಅದೇ ರೀತಿ ಈ ಬಾರಿ ಮಳೆಗಾಲವಾದರೂ ಮಳೆ ಇಲ್ಲದ ಕಾರಣ ಹೆಚ್ಚಿನ ಭಕ್ತರು ಆಶ್ಲೇಷ ಸೇವೆಗೆಂದೆ ಬಂದು ನಿನ್ನೆ ಬುಧವಾರದಂದು ಕುಕ್ಕೆ ಕ್ಷೇತ್ರದ ದೇವಳದ ವಸತಿ...

ಸುಬ್ರಹ್ಮಣ್ಯದ ಗೃಹ ರಕ್ಷಕ ದಳದ ಸಿಬ್ಬಂದಿಗಳಿಗೆ ರೈನ್ ಕೋಟ್ ವಿತರಣೆ

ಸುಬ್ರಹ್ಮಣ್ಯ ಜುಲೈ 16 : ಸುಬ್ರಹ್ಮಣ್ಯ ಪೊಲೀಸ್ ಠಾಣಾ ಸುಪರ್ದಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 20 ಜನ ಗ್ರಹರಕ್ಷಕ ಸಿಬ್ಬಂದಿಯವರಿಗೆ ಸುಬ್ರಹ್ಮಣ್ಯದ ಅಖಿಲ ಭಾರತ ಅಯ್ಯಪ್ಪ ಸೇವಾ ಸಮಿತಿ ವತಿಯಿಂದ ರೈನ್ ಕೋರ್ಟ್ ಗುರುವಾರ ವಿತರಿಸಲಾಯಿತು.  ಸುಬ್ರಹ್ಮಣ್ಯದ ಕಾಶಿ ಕಟ್ಟೆ ಬಳಿಯ ಮೈದಾನದಲ್ಲಿ ಬೆಳಗ್ಗಿನ ಜಾವ ನಡೆದ ಕಾರ್ಯಕ್ರಮದಲ್ಲಿ ಅಯ್ಯಪ್ಪ ಸೇವಾ ಸಮಿತಿಯ ಸ್ಥಾಪಕ ಅಧ್ಯಕ್ಷ ಉಮೇಶ ಕೆ.ಎನ್...
Ad Widget

ಎಸ್.ಐ.ಆರ್ ಕಾರ್ಯಕ್ಕಾಗಿ ಹಗ್ಗದ ಮೂಲಕ ಹೊಳೆ ದಾಟಿದ ಬಿ.ಎಲ್.ಓ – ಕರ್ತವ್ಯ ಬದ್ಧತೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಾರ್ವಜನಿಕರು – ಶಾಶ್ವತ ಸೇತುವೆ ಇಲ್ಲದೇ ಸ್ಥಳೀಯರ ದೈನಂದಿನ ಸಂಚಾರಕ್ಕೂ ಇದೇ ಹಗ್ಗದ ಮಾರ್ಗ

ವರದಿ : ಉಲ್ಲಾಸ್ ಕಜ್ಜೋಡಿಕರ್ನಾಟಕ ರಾಜ್ಯದಾದ್ಯಂತ ಇದೀಗ ಮತದಾರರ ಪಟ್ಟಿಯ ಪರಿಷ್ಕರಣೆಯ ಉದ್ದೇಶದಿಂದ ಭಾರತೀಯ ಚುನಾವಣಾ ಆಯೋಗವು “ವಿಶೇಷ ಸಮಗ್ರ ಮತದಾರರ ಪರಿಷ್ಕರಣೆ(ಎಸ್.ಐ.ಆರ್)” ಪ್ರಕ್ರಿಯೆಯನ್ನು ನಡೆಸುತ್ತಿದ್ದು, ಪ್ರತಿಯೊಬ್ಬ ಮತದಾರರ ಹೆಸರು, ವಯಸ್ಸು, ವಿಳಾಸ ಹಾಗೂ ಕುಟುಂಬದ ವಿವರಗಳನ್ನು ಮನೆ-ಮನೆಗೆ ಭೇಟಿ ನೀಡಿ ಪರಿಶೀಲಿಸುವ ಕಡ್ಡಾಯ ಪ್ರಕ್ರಿಯೆ ಇದಾಗಿದ್ದು, ಬೂತ್ ಮಟ್ಟದ ಅಧಿಕಾರಿಗಳು(ಬಿ.ಎಲ್.ಒ) ಮನೆ-ಮನೆಗೆ ತೆರಳಿ ಎನ್ಯೂಮರೇಷನ್...

ನಿಧನ : ಚಂದ್ರಶೇಖರ ನೂಚಿಲ

ಸುಬ್ರಹ್ಮಣ್ಯ ಮಹಿಳಾ ಸೊಸೈಟಿಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀಮತಿ ವಾರಿಜಾಕ್ಷಿ ರವರ ಪತಿ ಚಂದ್ರಶೇಖರ ನೂಚಿಲ ರವರು ಇಂದು(ಜು.13) ನಿಧನರಾಗಿದ್ದು, ಮೃತರಿಗೆ 65 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಇಬ್ಬರು ಪುತ್ರರು, ಕುಟುಂಬಸ್ಥರು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.

ಯೇನೆಕಲ್ಲಿನಲ್ಲಿ ಒಕ್ಕಲಿಗ ಗೌಡರ ಮಹಾ ಅಭಿಯಾನ

ಸುಬ್ರಹ್ಮಣ್ಯ ಜುಲೈ 13 : ಒಕ್ಕಲಿಗ ಗೌಡ ಸೇವಾ ಸಂಘ(ರಿ.) ಕಡಬ ತಾಲೂಕು ಇದರ ಸುಬ್ರಹ್ಮಣ್ಯ ವಲಯದ ಏನೆಕಲ್ಲು ಗ್ರಾಮದ ಒಕ್ಕಲಿಗ ಗೌಡರ ಮಹಾ ಅಭಿಯಾನ ಕಾರ್ಯಕ್ರಮ ರವಿವಾರ ಯೇನೆಕಲ್ಲಿನಲ್ಲಿ ನಡೆಯಿತು.  ಈ ಅಭಿಯಾನದಲ್ಲಿ ಏನೆಕಲ್ಲು ಗ್ರಾಮದ ಮುತ್ಲಾಜೆ ಬೈಲು, ಕಲ್ಕುದಿ ಬೈಲು, ಕರ್ನಾಜೆ ಕಿಬ್ಬೊಡಿ ಬೈಲು, ಮಲ್ಲಾರ ಮಾದನಮನೆ ಬೈಲು, ಕೋಟಿ ಗೌಡನ ಮನೆ...

ಹಿರಿಯ ಯಕ್ಷಗಾನ ಕಲಾವಿದ ಗೋಪಾಲಕೃಷ್ಣ ಭಟ್ ಮಲೆಯಾಳ ಇನ್ನಿಲ್ಲ

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಮಲೆಯಾಳ ನಿವಾಸಿ ಗೋಪಾಲಕೃಷ್ಣ ಭಟ್ ಮಲೆಯಾಳ(93) ಶನಿವಾರ ಸ್ವಗೃಹದಲ್ಲಿ ನಿಧನರಾದರು.  ಪ್ರಗತಿಪರ ಕೃಷಿಕರಾಗಿಯೂ, ಹವ್ಯಾಸಿ ಯಕ್ಷಗಾನ ವೇಷ ಧಾರಿಯೂ, ಯಕ್ಷ ಗುರುಗಳಾಗಿಯೂ ಪ್ರಸಿದ್ಧಿ ಹೊಂದಿದ್ದರು. ಯಕ್ಷಗುರುಗಳಾದ ಇವರು ಪುತ್ತೂರು, ಸುಳ್ಯ ತಾಲೂಕಿನ ಅನೇಕ ಶಾಲೆಯ ವಿದ್ಯಾರ್ಥಿಗಳಿಗೆ ಯಕ್ಷಗಾನ ನಾಟ್ಯ ತರಬೇತಿ ನೀಡಿ ಮಕ್ಕಳು ಯಕ್ಷ ರಂಗಸ್ಥಳದಲ್ಲಿ ಮಿಂಚುವಂತೆ ಮಾಡಿದವರು....

ನಾಗ ಪ್ರತಿಷ್ಠ ಮಂಟಪದ ಶಿಲಾ ಕಲ್ಲುಗಳು ಕುಮಾರಧಾರ ನದಿಯಲ್ಲಿ ಜಲ ಸ್ತಂಭನ

ಸುಬ್ರಹ್ಮಣ್ಯ ಜುಲೈ 11 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನಾಗ ಪ್ರತಿಷ್ಠ ಮಂಟಪದಲ್ಲಿ ಶೇಖರಣೆಯಾದ ನಾಗ ಶಿಲಾ ಕಲ್ಲುಗಳನ್ನು ಶನಿವಾರ ಕುಮಾರಧಾರ ನದಿಯಲ್ಲಿ ಜಲ ಸ್ತಂಭಗೊಳಿಸಲಾಯಿತು. ಕುಕ್ಕೆ ಸುಬ್ರಹ್ಮಣ್ಯ ದೇವಳದ ಅರ್ಚಕರು, ಸರ್ಪಸಂಸ್ಕಾರ ವಿಭಾಗದ ಅರ್ಚಕರು ಹಾಗೂ ಕ್ರಿಯಾಕರ್ತರು ನಾಗ ಪ್ರತಿಷ್ಠಾ ಶಿಲಾ ಕಲ್ಲುಗಳನ್ನು ಪ್ರತಿಷ್ಟಾ ಮಂಟಪದಿಂದ ತೆರವುಗೊಳಿಸಿ ಕುಮಾರಧಾರ ನದಿಗೆ ಕೊಂಡೊಯ್ಯಲು ಜುಲೈ...

ಸುಳ್ಯ-ಕಡಬದಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಸುಳ್ಯ: ಸುಳ್ಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ತೆರವಾಗಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಮಿತ್ತಡ್ಕ, ಅಮರ ಮುಡ್ನೂರು ಗ್ರಾಮದ ದೊಡ್ಡತೋಟ ಹಾಗೂ ಕಡಬ ತಾಲೂಕಿನ ಐನೆಕಿದು...

ಸುಬ್ರಹ್ಮಣ್ಯ : ಲಾಡ್ಜ್ ನಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯದ ಖಾಸಗಿ ಲಾಡ್ಜ್‌ನಲ್ಲಿ ತಂಗಿದ್ದ ರಾಮನಗರ ಜಿಲ್ಲೆಯ 30 ವರ್ಷದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ರಾಮನಗರ ಜಿಲ್ಲೆಯ ಕೈಲಂಜ ಹೋಬಳಿ, ಕೆ.ಪಿ.ದೊಡ್ಡ ಅಂಚೆ, ಉಚ್ಚಮ್ಮನದೊಡ್ಡಿ ನಿವಾಸಿ ಮಧು.ಎಸ್(30) ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮಧು ಅವರು ಜುಲೈ 8ರಂದು ಕುಕ್ಕೆ ಶ್ರೀ...

ಗೃಹಜ್ಯೋತಿ ಯೋಜನೆ ಪರಿಶೀಲನೆ : ವಿದ್ಯುತ್ ಗ್ರಾಹಕರಿಗೆ ಮೆಸ್ಕಾಂ ನಿಂದ ಪ್ರಮುಖ ಸೂಚನೆ..!

“ಕರ್ನಾಟಕ ಘನ ಸರ್ಕಾರದಿಂದ ಗೃಹಜ್ಯೋತಿ ಯೋಜನೆಯ ಅಡಿಯಲ್ಲಿ ಈಗಾಗಲೇ ನೋಂದಣಿಗೊಳಿಸಿರುವ ಗೃಹಬಳಕೆ ವಿದ್ಯುತ್ ಸ್ಥಾವರಗಳ ಮಾಹಿತಿಯನ್ನು ಪರಿಶೀಲನೆ ಮಾಡಲು ಮೆಸ್ಕಾಂ ಇಲಾಖೆಯ ವತಿಯಿಂದ ಮಾಪನ ಓದುಗರು ಹಾಗೂ ಪವರ್ ಮ್ಯಾನ್ ಸಿಬ್ಬಂದಿಗಳು ಪ್ರತೀ ಮನೆಗಳಿಗೆ ಭೇಟಿ ನೀಡಲಿದ್ದು, ಸದ್ರಿ ಭೇಟಿಯ ಸಂದರ್ಭದಲ್ಲಿ ವಿದ್ಯುತ್ ಗ್ರಾಹಕರುಗಳು ಗೃಹಜ್ಯೋತಿ ಯೋಜನೆಯ ನೋಂದಣಿ ಸಂದರ್ಭದಲ್ಲಿ ನೀಡಿರುವ ಆಧಾರ್ ಕಾರ್ಡ್ ಜೊತೆಗೆ...
Loading posts...

All posts loaded

No more posts

error: Content is protected !!