Ad Widget

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಡಾ| ರೇಣುಕಾ ಪ್ರಸಾದ್.ಕೆ.ವಿ ಹಾಗೂ ಮನೆಯವರಿಂದ ಶಾಸ್ತ್ರೋಕ್ತವಾಗಿ ಬೆಳ್ಳಿರಥ ಸಮರ್ಪಣೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಡಾ| ರೇಣುಕಾ ಪ್ರಸಾದ್ ಕೆ.ವಿ ಹಾಗೂ ಮನೆಯವರಿಂದ ಸುಮಾರು ಒಂದು ಕೋಟಿ ರೂಪಾಯಿ ಮೌಲ್ಯದ ಬೆಳ್ಳಿರಥ ಸಮರ್ಪಣೆ ನ.10 ರಂದು ನಡೆಯಿತು.ರಥ ಶಿಲ್ಪಿ ಜಕಣಾಚಾರಿ ಪ್ರಶಸ್ತಿ ಪುರಸ್ಕೃತರಾದ ಕೋಟೇಶ್ವರ ಬಿ.ಲಕ್ಷ್ಮೀನಾರಾಯಣ ಆಚಾರ್ಯರು ಮತ್ತು ಪುತ್ರ ಶ್ರೀ ರಾಜಗೋಪಾಲ ಆಚಾರ್ಯರು ಬೆಳ್ಳಿರಥವನ್ನು ನಿರ್ಮಿಸಿದ್ದಾರೆ. ನ.03 ರಂದು ಗುತ್ತಿಪೂಜೆ ಮತ್ತು ನ.04ರಂದು ಬೆಳ್ಳಿ...

ಸುಬ್ರಹ್ಮಣ್ಯ : ನ.16 ರಿಂದ ಡಿ.02 ರವರೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ “ಚಂಪಾಷಷ್ಠಿ ಜಾತ್ರಾ ಮಹೋತ್ಸವ” – ನ.16 ರಂದು ಕೊಪ್ಪರಿಗೆ ಏರುವುದು – ನ.19 ರಂದು ಲಕ್ಷದೀಪೋತ್ಸವ – ನ.26 ರಂದು ಪ್ರಾತಃಕಾಲ “ಚಂಪಾಷಷ್ಠಿ ಮಹಾರಥೋತ್ಸವ”

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ “ಚಂಪಾಷಷ್ಠಿ ಮಹೋತ್ಸವ”ವು ಸಮೀಪಿಸುತ್ತಿದ್ದು, ನವೆಂಬರ್ 16 ಆದಿತ್ಯವಾರದಂದು ಕೊಪ್ಪರಿಗೆ ಏರುವುದು, ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ನ.17 ಸೋಮವಾರದಂದು ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ನ.18 ಮಂಗಳವಾರದಂದು ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ನ.19 ಬುಧವಾರದಂದು...
Ad Widget

ಕುಕ್ಕೆ ಸುಬ್ರಹ್ಮಣ್ಯ : ಶ್ರೀ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವದ ಪ್ರಯುಕ್ತ ರಥಗಳಿಗೆ ಗೂಟ ಪೂಜಾ ಮುಹೂರ್ತ

ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಎಳೆಯುವ ರಥಗಳಿಗೆ ಗೂಟ ಪೂಜಾ ಮುಹೂರ್ತ ನ.06 ಬುಧವಾರದಂದು ನೆರವೇರಿತು. ಶ್ರೀ ದೇಗುಲದಲ್ಲಿ ಪೂಜೆ ನೆರವೇರಿದ ಬಳಿಕ ಜಾತ್ರಾ ಸಮಯದಲ್ಲಿ ಎಳೆಯುವ ಬ್ರಹ್ಮರಥ ಮತ್ತು ಪಂಚಮಿ ರಥಗಳನ್ನು ನಿರ್ಮಿಸಲು ಕಾರ್ತಿಕ ಹುಣ್ಣಿಮೆಯ...

ಬೆಳ್ಳಾರೆಯ ಬೂಡು ಗರಡಿಯಲ್ಲಿ ಲಕ್ಷ ದೀಪೋತ್ಸವ

ಬೆಳ್ಳಾರೆ ಗ್ರಾಮದ ಆದಿನಾಗ ಬ್ರಹ್ಮಮೊಗೇರ್ಕಳ ಗರಡಿಯಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮ ನ.05 ರಂದು ನಡೆಯಿತು.ಹಲವಾರು ಭಕ್ತಾಭಿಮಾನಿಗಳು ದೀಪಗಳನ್ನು ಬೆಳಗಿಸಿ ಕಣ್ಣು ತುಂಬಿಕೊಂಡರು.ಈ ಕ್ಷೇತ್ರದ ಕಾರಣಿಕ ಶಕ್ತಿಗಳಾದ ಗುಳಿಗ ದೈವ, ಪಂಜುರ್ಲಿ, ಕೊರಗಜ್ಜ ದೈವ ಮತ್ತು ಮೊಗೇರ್ಕಳ ದೈವಗಳಿಗೆ ದೀಪಾವಳಿ ತಂಬಿಲ ಸೇವೆಯು ನಡೆಯಿತು.ನಂತರ ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಯಿತು.

ಸುಬ್ರಹ್ಮಣ್ಯ : ಚಂಪಾಷಷ್ಠಿ ಮಹೋತ್ಸವ ಪೂರ್ವಭಾವಿ ಸಭೆ – “ಬ್ರಹ್ಮರಥೋತ್ಸವ ಎಳೆಯುವ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಕ್ರಮ ಕೈಗೊಳ್ಳಬೇಕು” : ದ.ಕ ಜಿಲ್ಲಾಧಿಕಾರಿ ದರ್ಶನ್.ಹೆಚ್.ವಿ – “ಹೆಚ್ಚುವರಿ ಸಿ.ಸಿ ಕ್ಯಾಮೆರಾಗಳನ್ನು ಅಳವಡಿಸಿ ಅದು ಶಾಶ್ವತವಾಗಿ ಇರುವಂತೆ ಕ್ರಮ ಕೈಗೊಳ್ಳಬೇಕು” : ದ.ಕ ಜಿಲ್ಲಾ ಎಸ್.ಪಿ ಡಾ. ಅರುಣ್.ಕೆ

ಸುಬ್ರಹ್ಮಣ್ಯ ನ.05 : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೆ ಚಂಪಾಷಷ್ಠಿ ಮಹೋತ್ಸವ ರಥೋತ್ಸವ ಪೂರ್ವಭಾವಿ ಸಭೆ ಬುಧವಾರ ದೇವಸ್ಥಾನದ ಆಡಳಿತ ಕಚೇರಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ದರ್ಶನ್.ಹೆಚ್.ವಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ಚಂಪಾಷಷ್ಠಿ ಮಹೋತ್ಸವದ ಬಗ್ಗೆ ಚರ್ಚೆ ನಡೆಯಿತು. ಜಿಲ್ಲಾಧಿಕಾರಿಗಳಾದ ದರ್ಶನ್ ಮಾತನಾಡಿ “ಬ್ರಹ್ಮರಥೋತ್ಸವ ಎಳೆಯುವ ವೇಳೆ ಯಾವುದೇ ಗೊಂದಲ ಉಂಟಾಗದಂತೆ...

ಕುಲ್ಕುಂದ : ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ “ಗೋಪೂಜೆ ಮತ್ತು ಗೋಗ್ರಾಸ ಅರ್ಪಣೆ” ಹಾಗೂ “ಗೋಜಾತ್ರೆಯ ಸಾಂಕೇತಿಕ ಆಚರಣೆ”

ಕಡಬ ತಾಲೂಕಿನ ಕುಲ್ಕುಂದ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ನ.05 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಿಂದ ಗೋವುಗಳನ್ನು ಕರೆತಂದು “ಗೋಪೂಜೆ ಮತ್ತು ಗೋಗ್ರಾಸ ಅರ್ಪಣೆ” ಹಾಗೂ ಶ್ರೀ ಕ್ಷೇತ್ರ ಬಸವನಮೂಲದಲ್ಲಿ ನಡೆಯುತ್ತಿದ್ದ “ಗೋಜಾತ್ರೆಯ ಸಾಂಕೇತಿಕ ಆಚರಣೆ” ನಡೆಯಿತು.ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರೀಶ್ ಇಂಜಾಡಿ ಹಾಗೂ ವ್ಯವಸ್ಥಾಪನಾ...

ವೈಭವದ ಮೆರವಣಿಗೆಯೊಂದಿಗೆ ಕುಕ್ಕೆಗೆ ಆಗಮಿಸಿದ ಬೆಳ್ಳಿರಥ

ಸುಬ್ರಹ್ಮಣ್ಯ ನವಂಬರ್ 5 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸುಳ್ಯದ ಡಾ.ಕುರುಂಜಿ ರೇಣುಕಾ ಪ್ರಸಾದ್ ಹಾಗೂ ಮನೆಯವರು ಕೊಡುಗೆಯಾಗಿ ನೀಡಿದ ಎರಡು ಕೋಟಿ ರೂಪಾಯಿ ವೆಚ್ಚದ ಬೆಳ್ಳಿ ರಥವು ಇಂದು ಬುಧವಾರ ಸಂಜೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತಲುಪಿದೆ. ರಥದೊಂದಿಗೆ ಬಂದಿರುವ ಕುರುಂಜಿ ಡಾ.ರೇಣುಕಾ ಪ್ರಸಾದ್ ರವರು ಹಾಗೂ ಮನೆಯವರು, ರಥಶಿಲ್ಪಿಗಳು, ಸುಳ್ಯ...

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಡಾ| ರೇಣುಕಾ ಪ್ರಸಾದ್.ಕೆ.ವಿ ಹಾಗೂ ಮನೆಯವರಿಂದ ಸಮರ್ಪಣೆಯಾಗಲಿರುವ ಬೆಳ್ಳಿರಥ – ಸುಳ್ಯದಿಂದ ಸುಬ್ರಹ್ಮಣ್ಯದವರೆಗೆ ರಥ ಸಾಗಿ ಬರುವ ದಾರಿ ಹಾಗೂ ಸಮಯ ಇಲ್ಲಿದೆ…

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಡಾ| ರೇಣುಕಾ ಪ್ರಸಾದ್.ಕೆ.ವಿ ಹಾಗೂ ಮನೆಯವರಿಂದ ಸಮರ್ಪಣೆಯಾಗಲಿರುವ ಬೆಳ್ಳಿ ರಥಕ್ಕೆ ಕೋಟೇಶ್ವರದಲ್ಲಿ ಪೂಜೆ ನಡೆದು ಭವ್ಯ ಮೆರವಣಿಗೆಯಲ್ಲಿ ನಿನ್ನೆ(ನ.04) ಸುಳ್ಯಕ್ಕೆ ಆಗಮಿ‌‌ಸಿದೆ.ಇಂದು(ನ.05) ಸುಳ್ಯದಿಂದ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಥ ತೆರಳಲಿದ್ದು, ಸುಳ್ಯದಿಂದ ಸುಬ್ರಹ್ಮಣ್ಯದವರೆಗೆ ರಥ ಸಾಗಿ ಬರುವ ದಾರಿ ಹಾಗೂ ಸಮಯ ಈ ಕೆಳಗಿನಂತಿದೆ...ಇಂದು(ನ.05) ಬೆಳಿಗ್ಗೆ 6:30 ರಿಂದ 7:00 ರವರೆಗೆ...

ಶಿಕ್ಷಣ ಕಾಶಿ ಕುರುಂಜಿಭಾಗ್ ಗೆ ಆಗಮಿಸಿದ ಬೆಳ್ಳಿರಥ –  ಕೆ.ವಿ.ಜಿ ಸಮೂಹ ಸಂಸ್ಥೆಗಳು ಹಾಗೂ ಗಣ್ಯರಿಂದ ಸ್ವಾಗತ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಡಾ. ರೇಣುಕಾ ಪ್ರಸಾದ್ ಕೆ.ವಿ ಮತ್ತು ಮನೆಯವರಿಂದ ಸಮರ್ಪಣೆಯಾಗಲಿರುವ ಸಮರ್ಪಣೆಯಾಗಲಿರುವ ಬೆಳ್ಳಿರಥಕ್ಕೆ ಕೋಟೇಶ್ವರದಲ್ಲಿ  ಪೂಜೆ ನಡೆದು ಭವ್ಯ ಮೆರವಣಿಗೆಯಲ್ಲಿ ಸುಳ್ಯಕ್ಕೆ ನಿನ್ನೆ ಆಗಮಿಸಿದೆ.ಇಂದು ಸುಳ್ಯದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ರಥ ತೆರಳಲಿದ್ದು ಇದೀಗ ಕುರುಂಜಿಭಾಗ್ ಗೆ ಆಗಮಿಸಿದ್ದು, ಕೆವಿಜಿ ಅಭಿಮಾನಿಗಳು ಗಣ್ಯರು ಕಣ್ತುಂಬಿಕೊಂಡರು.

ಸುಳ್ಯಕ್ಕೆ ಆಗಮಿಸಿದ ಬೆಳ್ಳಿರಥ – ಕುರುಂಜಿ ಕುಟುಂಬಸ್ಥರು ಸೇರಿದಂತೆ ಗಣ್ಯರಿಂದ ಸ್ವಾಗತ

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರಿಗೆ ಡಾ.ರೇಣುಕಾ ಪ್ರಸಾದ್ ಕೆ.ವಿ ಮತ್ತು ಮನೆಯವರಿಂದ ಸಮರ್ಪಣೆಯಾಗಲಿರುವ ಬೆಳ್ಳಿರಥಕ್ಕೆ ಕೋಟೇಶ್ವರದಲ್ಲಿ  ಪೂಜೆ ನಡೆದು ಭವ್ಯ ಮೆರವಣಿಗೆಯಲ್ಲಿ  ಸುಳ್ಯಕ್ಕೆ ಆಗಮಿಸಿದೆ.ಸುಳ್ಯದಲ್ಲಿ ಡಾ.ಚಿದಾನಂದ ಕೆ.ವಿ ಹಾಗೂ ಮನೆಯವರು, ಸುಳ್ಯದ ಗಣ್ಯರು, ಕೆವಿಜಿ ಸಮೂಹ ಸಂಸ್ಥೆಗಳ ಸಿಬ್ಬಂದಿಗಳು, ಪ್ರಮುಖರು, ವಿದ್ಯಾರ್ಥಿಗಳು ನೂತನ ರಥವನ್ನು ಸ್ವಾಗತಿಸಿದರು.
Loading posts...

All posts loaded

No more posts

error: Content is protected !!