Ad Widget

ಕುಕ್ಕೆ ಸುಬ್ರಹ್ಮಣ್ಯ : ಸೆ.07 ರಂದು ಚಂದ್ರಗ್ರಹಣದ ನಿಮಿತ್ತ ದೇವಳದಲ್ಲಿ ದೇವರ ದರುಶನ ಹಾಗೂ ಸೇವೆಗಳಲ್ಲಿ ವ್ಯತ್ಯಯ

ಸುಬ್ರಹ್ಮಣ್ಯ : "ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ.07 ರಂದು ಆದಿತ್ಯವಾರ ಚಂದ್ರಗ್ರಹಣ ಇರುವುದರಿಂದ ಈ ದಿನ ಶ್ರೀ ದೇವಳದಲ್ಲಿ ದಿನನಿತ್ಯದ ಸೇವೆ ಮತ್ತು ದರುಶನ ಹಾಗೂ ಭಕ್ತಾದಿಗಳ ಸೇವಾ ಸಮಯಗಳಲ್ಲಿ ವ್ಯತ್ಯಯ ಉಂಟಾಗಲಿದೆ. ಭಕ್ತರು ಸಹಕರಿಸಬೇಕು" ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.ಮದ್ಯಾಹ್ನ 11:00 ಗಂಟೆಗೆ ಮಹಾಪೂಜೆ : “ಆದಿತ್ಯವಾರ ಶ್ರೀ ದೇವರ...

ದೇವರಹಳ್ಳಿ : 29ನೇ ವರ್ಷದ ಗಣೇಶೋತ್ಸವ

ಏನೆಕಲ್ಲು ಗ್ರಾಮದ ದೇವರಹಳ್ಳಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 29ನೇ ವರ್ಷದ  ಗಣೇಶೋತ್ಸವ ಕಾರ್ಯಕ್ರಮ ಆಗಸ್ಟ್ 27ರಂದು ಶ್ರೀಹರಿ ಭಜನಾ ಮಂದಿರದಲ್ಲಿ ನಡೆಯಿತು. ಆಗಸ್ಟ್ 27ರಂದು ಬೆಳಿಗ್ಗೆ ದೇವರ ವಿಗ್ರಹ ಪ್ರತಿಷ್ಠಾಪನೆ ನಂತರ ಭಜನಾ ಕಾರ್ಯಕ್ರಮ, ಗಣಪತಿ ಹೋಮ, ಪೂರ್ಣಾವತಿ, ಮಕ್ಕಳಿಗೆ ವಿದ್ಯಾರಂಭ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು. ಅಪರಾಹ್ನ...
Ad Widget

ಹಳೆಗೇಟು : ಸಾಂಸ್ಕೃತಿಕ ಸಂಘದ ಆಶ್ರಯದಲ್ಲಿ 42ನೇ  ಗಣೇಶೋತ್ಸವ

ಸಾಂಸ್ಕೃತಿಕ ಸಂಘ ಹಳೆಗೇಟು, ಸುಳ್ಯ ಇದರ ಆಶ್ರಯದಲ್ಲಿ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮಕ್ಕೆ ಸಾಂಸ್ಕೃತಿಕ ಸಂಘ ಹಳೆಗೇಟು ಇದರ ವಸಂತಕಟ್ಟೆಯಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ವಿವಿಧ ಕಾರ್ಯಕ್ರಮಗಳೊಂದಿಗೆ ಚಾಲನೆ ನೀಡಲಾಯಿತು. ಅಗಸ್ಟ್ 27ರಂದು ಬೆಳಿಗ್ಗೆ ಸ್ಥಳ ಶುದ್ದಿ, ಗಣಪತಿ ಹೋಮ, ವಿಗ್ರಹ ಪ್ರತಿಷ್ಠಾಪನೆ, ಮಧ್ಯಾಹ್ನ ಮಹಾಪೂಜೆ ನಡೆಯಿತು. ಸಂಜೆ ದೀಪಾಂಜಲಿ ಮಹಿಳಾ ಭಜನಾ ಮಂಡಳಿ ...

ಮೇದಿನಡ್ಕ ಶ್ರೀ ಗಣೇಶ ಚತುರ್ಥಿ ಆಚರಣೆ

ಅಜ್ಜಾವರ: ಮೇದಿನಡ್ಕ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಬೆಳಿಗ್ಗೆ ಮಹಾಮಂಗಳಾರತಿ, ವಿಶೇಷ ಪೂಜೆಯೊಂದಿಗೆ ಪ್ರಸಾದ ವಿತರಣೆ, ಮಧ್ಯಾಹ್ನ ಮಹಾಪೂಜೆ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಅಲಂಕಾರ ಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಿತು, ಈ ಸಂದರ್ಭದಲ್ಲಿ ಊರ ಭಕ್ತಾದಿಗಳು, ದೇವಸ್ಥಾನದ ಆಡಳಿತ ಸಮಿತಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕ್ಷೇತ್ರದ ಅರ್ಚಕರಾದ ಯೋಗರಾಜ್ ವೈದಿಕ...

ಪಂಜ : ಗಣೇಶೋತ್ಸವ

ಪಂಜ ಪರಿಸರದ ಸಾರ್ವಜನಿಕ ಗಣೇಶೋತ್ಸವ ಅಂಗವಾಗಿ  ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಆ.27 ರಂದು ಶ್ರೀ ಗಣಪತಿ ವಿಗ್ರಹ ಪ್ರತಿಷ್ಠಾಪನೆಗೊಂಡಿತು. ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ‌ನಡೆದು ಆ.29 ರಂದು ಭವ್ಯ ಶೋಭಾಯಾತ್ರೆಯೊಂದಿಗೆ ಗಣಪತಿ ವಿಸರ್ಜನೆ ನಡೆಯಲಿದೆ.

ಸುಳ್ಯ ತಾಲೂಕು ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟ : ಕೆ.ಪಿ.ಎಸ್ ಬೆಳ್ಳಾರೆಯ ನಾಲ್ಕು ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಇಲಾಖೆ ಸುಳ್ಯ ಮತ್ತು ಕೆಪಿಎಸ್ ಬೆಳ್ಳಾರೆ ಇದರ ಜಂಟಿ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ 14 ಮತ್ತು 17 ವರ್ಷದ ವಯೋಮಾನದ ಬಾಲಕ ಬಾಲಕಿಯರ  ಹ್ಯಾಂಡ್ ಬಾಲ್ ಪಂದ್ಯಾಟವು ಕೆಪಿಎಸ್ ಕ್ರೀಡಾಂಗಣದಲ್ಲಿ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಮಿತಾ.ಎಲ್ ರೈ ಉದ್ಘಾಟಿಸಿದರು. ಕೆ.ಪಿ.ಎಸ್ ಬೆಳ್ಳಾರೆಯ ಎಸ್‌.ಡಿ.ಎಂ.ಸಿ...

ಕೊಲ್ಲಮೊಗ್ರು : 17ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೊಲ್ಲಮೊಗ್ರು ಇದರ ವತಿಯಿಂದ ಇಂದು ಮಯೂರ ಕಲಾ ಮಂದಿರದಲ್ಲಿ ಗಣೇಶ ಮೂರ್ತಿಯ ಪ್ರತಿಷ್ಠೆ  ಹಾಗೂ 12 ತೆಂಗಿನ ಕಾಯಿ ಗಣಪತಿ ಹವನ ನಡೆಯಿತು. ನಂತರ ಭಜನಾ ಕಾರ್ಯಕ್ರಮ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನ ಪ್ರಸಾದ ವಿತರಣೆ ಶ್ರದ್ದಾ ಭಕ್ತಿಯಿಂದ ನಡೆಯಿತು. ಮದ್ಯಾಹ್ನ ನಂತರ ಅಂಗನವಾಡಿ ಮಕ್ಕಳಿಗೆ  ಪುಟಾಣಿಗಳಿಗೆ ಮುದ್ದು...

ಕುಕ್ಕೆ ಸುಬ್ರಹ್ಮಣ್ಯ : 55ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಚಾಲನೆ ; ಶ್ರೀ ಮಹಾಗಣಪತಿ ದೇವರಿಗೆ ರಜತ ಪ್ರಭಾವಳಿ ಸಮರ್ಪಣೆ ; ಆ.27 ರಿಂದ ಸೆ.02 ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ(ರಿ.) ಕುಕ್ಕೆ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ನಡೆಯುವ “55ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”ವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆ.27 ರಿಂದ ಸೆ.02 ರವರೆಗೆ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ರಥಬೀದಿಯ ಪಕ್ಕದಲ್ಲಿರುವ ಸಭಾಂಗಣದಲ್ಲಿ ನಡೆಯಲಿದ್ದು, ಮೊದಲ ದಿನವಾದ ಇಂದು ಅಂದರೆ ಜು.27 ರಂದು ಪೂರ್ವಾಹ್ನ 8:30ಕ್ಕೆ ಗಣಪತಿ ಪ್ರತಿಷ್ಠಾಪನೆ,...

ಎಡಮಂಗಲ : 20ನೇ ವರ್ಷದ ಗಣೇಶೋತ್ಸವಕ್ಕೆ ಚಾಲನೆ

ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಎಡಮಂಗಲ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ 20ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಮಿತಿಯ ಅಧ್ಯಕ್ಷ ಶಿವಪ್ರಸಾದ್ ಹೊನ್ನಪ್ಪಾಡಿ ಪೊಲೆಂಜ, ಕಾರ್ಯದರ್ಶಿ ಗಿರೀಶ್ ನಡುಬೈಲು, ಖಜಾಂಜಿ ಪ್ರವೀಣ್ ರೈ ಮರ್ದೂರು ಹಾಗೂ ಸಮಿತಿಯ ಪದಾಧಿಕಾರಿಗಳು ಮತ್ತು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು. ಇಂದು ಸಂಜೆ ಎಡಮಂಗಲದಿಂದ ಪುಳಿಕುಕ್ಕು...

ಹರಿಹರ ಪಳ್ಳತ್ತಡ್ಕ : 16ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಚಾಲನೆ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹರಿಹರ ಪಳ್ಳತ್ತಡ್ಕ ಇದರ ಆಶ್ರಯದಲ್ಲಿ ಶ್ರೀ ಹರಿಹರೇಶ್ವರ ದೇವಸ್ಥಾನದ ಸಹಭಾಗಿತ್ವದೊಂದಿಗೆ ಶ್ರೀ ಹರಿಹರೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ “16ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”ಕ್ಕೆ ಆ.26 ರಂದು ಬೆಳಿಗ್ಗೆ 8:50ಕ್ಕೆ ‘ಶ್ರೀ ಗೌರಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗೌರಿ ಪೂಜೆ’ ಯೊಂದಿಗೆ ಚಾಲನೆ ದೊರೆತಿದ್ದು, ನಂತರ ಸಂಜೆ 6:00 ಗಂಟೆಯಿಂದ...
Loading posts...

All posts loaded

No more posts

error: Content is protected !!