Ad Widget

ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ಮಹಾಶಿವರಾತ್ರಿ ಉತ್ಸವ

ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವದ ಅಂಗವಾಗಿ ಇಂದು ಸಂಜೆ ಗಂಟೆ 5-00ರಿಂದ ಶತರುದ್ರಾಭಿಷೇಕ, ರಾತ್ರಿ 9-30ಕ್ಕೆ ಮಹಾಪೂಜೆ ನಡೆಯಲಿರುವುದು. ಸಾಂಸ್ಕೃತಿಕ ಕಾರ್ಯಕ್ರಮದ ಪ್ರಯುಕ್ತ ಸಂಜೆ ಗಂಟೆ 6-30ರಿಂದ ಶ್ರೀ ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿ ತಡಂಬೈಲ್, ಸುರತ್ಕಲ್ ಇವರಿಂದ ಗಿರಿಜಾ ಕಲ್ಯಾಣ-ಕುಮಾರವಿಜಯ ತಾಳಮದ್ದಳೆ ನಡೆಯಲಿದೆ. ರಾತ್ರಿ ಗಂಟೆ 10-00ರಿಂದ ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ,...

ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಇಂದು ಮಹಾಶಿವರಾತ್ರಿ ಉತ್ಸವ, ಯಕ್ಷಗಾನ ಬಯಲಾಟ

ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಇಂದು ಮಹಾಶಿವರಾತ್ರಿ ಉತ್ಸವ ಜರುಗಲಿದ್ದು, ಸಂಜೆ ಗಂಟೆ 6.00ರಿಂದ ಶತರುದ್ರಾಭಿಷೇಕ, ರಂಗಪೂಜೆ ಮತ್ತು ಪ್ರಸಾದ ವಿತರಣೆ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಾತ್ರಿ ಗಂಟೆ 7.00ರಿಂದ ಪ್ರಸಿದ್ಧ ಕಲಾವಿದರ ಕೂಡುವಿಕೆಯೊಂದಿಗೆ "ಶಿವಪಂಚಾಕ್ಷರಿ ಮಹಿಮೆ" ಯಕ್ಷಗಾನ ಬಯಲಾಟ ನಡೆಯಲಿದೆ.
Ad Widget

ಭಕ್ತಿ-ಸಡಗರದ ಬೆಳ್ಳಾರೆ ಅಜಪಿಲ ಜಾತ್ರೋತ್ಸವ ಸಂಪನ್ನ

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.13ರಂದು ಮೊದಲ್ಗೊಂಡು ಫೆ.17ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವೈಭವೋಪೇತವಾಗಿ ಜರುಗಿತು. ಜಾತ್ರೋತ್ಸವದ ಪ್ರಯುಕ್ತ ಫೆ.13ರಂದು ಬೆಳಿಗ್ಗೆ ಉಗ್ರಾಣ ಮುಹೂರ್ತ, ಸಂಜೆ ತಂತ್ರಿಗಳ ಆಗಮನ, ಸ್ವಾಗತ, ಪ್ರಾರ್ಥನೆ, ದೀಪಾರಾಧನೆ ನಡೆಯಿತು. ರಾತ್ರಿ ಧ್ವಜಾರೋಹಣದ ಮೂಲಕ ವಿದ್ಯುಕ್ತವಾಗಿ...

ಬೆಳ್ಳಾರೆ ಅಜಪಿಲ ಜಾತ್ರೋತ್ಸವ; ಶ್ರೀ ದೇವರ ದರ್ಶನ ಬಲಿ, ಬಟ್ಟಲುಕಾಣಿಕೆ; ರಾತ್ರಿ ಅಗ್ನಿಗುಳಿಗ ದೈವದ ನೇಮೋತ್ಸವ

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ಜರುಗುತ್ತಿದ್ದು, ಇಂದು (ಫೆ.17) ಬೆಳಿಗ್ಗೆ ಕವಾಟೋದ್ಘಾಟನೆ, ತೈಲಾಭ್ಯಂಜನ, ಉಷಾಃಪೂಜೆ, ಆರಾಟುಬಲಿ ನಂತರ ಅವಭೃತ ಸ್ನಾನ ನಡೆಯಿತು. ಬಳಿಕ ಶ್ರೀದೇವರ ದರ್ಶನ ಬಲಿ, ರಾಜಾಂಗಣ ಪ್ರಸಾದ, ಬಟ್ಟಲುಕಾಣಿಕೆ, ಧ್ವಜ ಅವರೋಹಣ ,ಸಂಪ್ರೋಕ್ಷಣೆ, ಮಹಾಪೂಜೆ, ಮಂತ್ರಾಕ್ಷತೆ,...

ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ; ಬಲಿ ಉತ್ಸವ ಹಾಗೂ ಮಹಾರಥೋತ್ಸವ

ಎಡಮಂಗಲ ಗ್ರಾಮದ ಕಾರಣೀಕ ಕ್ಷೇತ್ರ ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿಪೂರ್ವಾಶಿಷ್ಟ ಸಂಪ್ರದಾಯ ಪ್ರಕಾರ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿಐದು ದಿವಸಗಳ ಉತ್ಸವಾದಿಗಳು ಸೇರಿದಂತೆ ವಾರ್ಷಿಕ ಜಾತ್ರೋತ್ಸವವು ಫೆ.13ರಂದು ಆರಂಭಗೊಂಡಿದ್ದು ಫೆ.19ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಜಾತ್ರೋತ್ಸವದ ಪ್ರಯುಕ್ತ ಫೆ.16ರಂದು ಬೆಳಗ್ಗೆ ಉತ್ಸವ, ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಬಲಿ ಹೊರಟು...

ಬೆಳ್ಳಾರೆ ಅಜಪಿಲ ಜಾತ್ರೋತ್ಸವ; ಪೇಟೆ ಸವಾರಿ, ಸಿಡಿಮದ್ದು ಪ್ರದರ್ಶನ, ಫೆ.17ರಂದು ದರ್ಶನ ಬಲಿ, ಬಟ್ಟಲುಕಾಣಿಕೆ, ಅಗ್ನಿಗುಳಿಗ ದೈವದ ನೇಮೋತ್ಸವ

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.13ರಂದು ಆರಂಭಗೊಂಡಿದ್ದು, ಫೆ.17ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಜಾತ್ರೋತ್ಸವದ ಪ್ರಯುಕ್ತ ಇಂದು (ಫೆ.16ರಂದು) ಬೆಳಿಗ್ಗೆ ಗಣಪತಿ ಹವನ, ಉಷಾಃಪೂಜೆ, ಶಿವೇಲಿ, ನವಕ ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಶಿವೇಲಿ, ಅನ್ನಸಂತರ್ಪಣೆ ನಡೆಯಿತು. ಸಂಜೆ ಶ್ರೀ...

ಶ್ರದ್ಧಾ-ಭಕ್ತಿಯ ಕಾಂಚೋಡು ಜಾತ್ರೋತ್ಸವ ಸಂಪನ್ನ

ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಫೆ.11ರಂದು ಆರಂಭಗೊಂಡು, ಫೆ.14ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗಿತು. ಫೆ.11ರಂದು ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಸಂಜೆ ದೇವಾಲಯಕ್ಕೆ ತಂತ್ರಿಗಳವರ ಆಗಮನ, ಊರ ಭಕ್ತಾದಿಗಳಿಂದ ಬಾಳಿಲದಿಂದ ಮೆರವಣಿಗೆ ಮೂಲಕ ಶ್ರೀ ದೇವಳಕ್ಕೆ ಹಸಿರು ಹೊರೆಕಾಣಿಕೆ ಸಮರ್ಪಣೆ,...

ಕಾಂಚೋಡು ಜಾತ್ರೋತ್ಸವ: ಸಭಾ ಕಾರ್ಯಕ್ರಮ, ಸಾಧಕರಿಗೆ ಗೌರವಾರ್ಪಣೆ

ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ವಿಜೃಂಭಣೆಯಿಂದ ಜಾತ್ರೋತ್ಸವ ನಡೆಯುತ್ತಿದ್ದು, ಇಂದು ರಾತ್ರಿ ಸಭಾ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಮುಖ್ಯ ಅಭ್ಯಾಗತರಾಗಿ ಸುಬ್ರಹ್ಮಣ್ಯ ವಲಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ ಪ್ರವೀಣ್ ಶೆಟ್ಟಿ ಭಾಗವಹಿಸಿದ್ದರು. ಅಭ್ಯಾಗತರಾಗಿ ಬಾಳಿಲ ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಶ್ರೀಮತಿ ಸವಿತಾ ಚಾಕೋಟೆಡ್ಕ, ಉಪಾಧ್ಯಕ್ಷರಾದ ಶ್ರೀಮತಿ ತ್ರಿವೇಣಿ ವಿಶ್ವೇಶ್ವರ, ಕಳಂಜ ಬಾಳಿಲ ಪ್ರಾಥಮಿಕ...

ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಆರಂಭ, ಧ್ವಜಾರೋಹಣ

ಎಡಮಂಗಲ ಗ್ರಾಮದ ಕಾರಣೀಕ ಕ್ಷೇತ್ರ ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿಪೂರ್ವಾಶಿಷ್ಟ ಸಂಪ್ರದಾಯ ಪ್ರಕಾರ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿಐದು ದಿವಸಗಳ ಉತ್ಸವಾದಿಗಳು ಸೇರಿದಂತೆ ವಾರ್ಷಿಕ ಜಾತ್ರೋತ್ಸವವು ಇಂದು(ಫೆ.13) ಆರಂಭಗೊಂಡಿದ್ದು ಫೆ.19ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಜಾತ್ರೋತ್ಸವದ ಪ್ರಯುಕ್ತ ಇಂದು ರಾತ್ರಿ ಧ್ವಜಾರೋಹಣ ನಡೆಯಿತು. ನಂತರ ಬಲಿ ಹೊರಟು ಉತ್ಸವ, ಶ್ರೀ...

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಆರಂಭ, ಧ್ವಜಾರೋಹಣ

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಇಂದು (ಫೆ.13) ಆರಂಭಗೊಂಡಿದ್ದು, ಫೆ.17ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಜಾತ್ರೋತ್ಸವದ ಪ್ರಯುಕ್ತ ಇಂದು ದೇವಸ್ಥಾನದಲ್ಲಿ ಬೆಳಿಗ್ಗೆ ಉಗ್ರಾಣ ಮುಹೂರ್ತ, ಸಂಜೆ ತಂತ್ರಿಗಳ ಆಗಮನ, ಸ್ವಾಗತ, ಪ್ರಾರ್ಥನೆ, ದೀಪಾರಾಧನೆ ನಡೆಯಿತು. ರಾತ್ರಿ ಧ್ವಜಾರೋಹಣದ ಮೂಲಕ...
Loading posts...

All posts loaded

No more posts

error: Content is protected !!