ಭಕ್ತ ಸಾಗರದಲ್ಲಿ ತೇಲಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರ – ಆಶ್ಲೇಷ ಬಲಿ, ನಾಗಪ್ರತಿಷ್ಠೆ, ಸರ್ಪಸಂಸ್ಕಾರ ಸೇವೆಗಳ ಸೇವಾರ್ಥಿಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ

ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಮೇ.24 ಭಾನುವಾರದಂದು ಭಕ್ತರ ಮಹಾಪೂರವೇ ಹರಿದು ಬಂದಿದ್ದು ಸುಮಾರು 40,000ಕ್ಕೂ ಅಧಿಕ ಭಕ್ತರ ಆಗಮನವಾಗಿದೆ ಎಂದು ತಿಳಿದುಬಂದಿದೆ. ದೇವಸ್ಥಾನದ ಒಳಾಂಗಣ, ಹೊರಾಂಗಣ, ರಥಬೀದಿ ಸೇರಿದಂತೆ ಎಲ್ಲೆಡೆ ಭಕ್ತರಿಂದ ತುಂಬಿ ತುಳುಕಿದ ದೃಶ್ಯಗಳು ಕಂಡುಬಂದವು. ದೇವರ ದರ್ಶನಕ್ಕಾಗಿ ಗೋಪುರದವರೆಗೂ ಉದ್ದ...

ಹರಿಹರ ಪಳ್ಳತ್ತಡ್ಕ : ನಾಳೆ(ಮೇ.25) ಶ್ರೀ ಹರಿಹರೇಶ್ವರ ದೇವಸ್ಥಾನದ ದೈವಗಳ ಚಾವಡಿಯಲ್ಲಿ “ಪತ್ತನಾಜೆ ತಂಬಿಲ”

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದ ದೈವಗಳ ಚಾವಡಿಯಲ್ಲಿ ನಾಳೆ(ಮೇ.25) “ಪತ್ತನಾಜೆ ತಂಬಿಲ” ನಡೆಯಲಿದ್ದು, ಕೂಡುಗಟ್ಟಿನ ಹಾಗೂ ಊರ-ಪರವೂರ ಭಕ್ತಾದಿಗಳು ಆಗಮಿಸಿ ಉಪಸ್ಥಿತರಿದ್ದು ಶ್ರೀ ದೈವದ ಗಂಧ-ಪ್ರಸಾದವನ್ನು ಸ್ವೀಕರಿಸುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪು ತಿಳಿಸಿದ್ದಾರೆ. (ವರದಿ : ಉಲ್ಲಾಸ್ ಕಜ್ಜೋಡಿ)
Ad Widget

ಕುಲ್ಕುಂದ : ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ 9ನೇ ವರ್ಷದ “ವಸಂತ-ವೇದ ಪಾಠ ಶಿಬಿರ”ದ ಸಮಾರೋಪ

ಕುಲ್ಕುಂದ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದ ವತಿಯಿಂದ ನಡೆದ 9ನೇ ವರ್ಷದ “ವಸಂತ-ವೇದ ಪಾಠ ಶಿಬಿರ”ದ ಸಮಾರೋಪ ಸಮಾರಂಭವು ಮೇ.22ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು.ದೇವಸ್ಥಾನದ ಅಧ್ಯಕ್ಷರಾದ ಗಿರಿಧರ ಸ್ಕಂದ ರವರು ಮಾತನಾಡಿ “ಶ್ರೀ ದೇವಳದಲ್ಲಿ ನಡೆಯತಕ್ಕಂತಹ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬಲ್ಲ ಕಾರ್ಯಕ್ರಮಗಳಿಗೆ ಯಾವತ್ತೂ ನಮ್ಮ ಪ್ರೋತ್ಸಾಹ ಇದೆ. ವೇದ ಶಿಬಿರ, ಸಂಸ್ಕಾರ ಶಿಬಿರ, ಭಜನಾ...

ಎಣ್ಮೂರು : ಮಕ್ಕಳ ಭಜನಾ ತರಬೇತಿ ಹಾಗೂ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ ಹಾಗೂ ಮಾತಾ ಪಿತೃವಂದನಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ನಿಂತಿಕಲ್ಲು ವಲಯ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್, ನಿಂತಿಕಲ್ಲು ವಲಯ ಶ್ರೀ ಸೀತಾರಾಮಾಂಜನೇಯ ಭಾರತೀ ಮಂದಿರ ಎಣ್ಮೂರು ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ನಿಂತಿಕಲ್ಲು ವಲಯ ಇದರ ಸಂಯುಕ್ತ ಆಶ್ರಯದಲ್ಲಿ ಮೇ.15ನೇ ಶುಕ್ರವಾರದಂದು ಉದ್ಘಾಟನೆಗೊಂಡು ಆರಂಭಗೊಂಡ ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರ...

ಕುಕ್ಕೆ ಸುಬ್ರಹ್ಮಣ್ಯ : ಆಶ್ಲೇಷ ನಕ್ಷತ್ರ ಹಿನ್ನೆಲೆ ಭಕ್ತಾದಿಗಳಿಂದ ದಾಖಲೆಯ 2,500 ಮಿಕ್ಕಿ ಆಶ್ಲೇಷ ಬಲಿ ಸೇವೆ

ಸುಬ್ರಹ್ಮಣ್ಯ ಮೇ 22 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ತಿಂಗಳಲ್ಲಿ ಬರುವ ಆಶ್ಲೇಷ ನಕ್ಷತ್ರದಂದು ಅಧಿಕ ಸಂಖ್ಯೆಯ ಭಕ್ತಾದಿಗಳು ರಾಜ್ಯ ಹಾಗೂ ಹೊರರಾಜ್ಯಗಳಿಂದ ಬಂದು ಬೆಳಿಗ್ಗೆಯ ಏಳು ಬ್ಯಾಚ್‌ಗಳಲ್ಲಿ ಸುಮಾರು 2,500 ಮಿಕ್ಕಿ ಆಶ್ಲೇಷ ಬಲಿ ಸೇವೆಯನ್ನು ಸಲ್ಲಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯನ ನಕ್ಷತ್ರವು ಆಶ್ಲೇಷವಾಗಿದ್ದರಿಂದ ಆಶ್ಲೇಷ ಬಲಿ ಸೇವೆ ಹರಕೆ ಹೊತ್ತ ಭಕ್ತಾದಿಗಳು ಏಕಾದಶಿ...

ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿದ ತೆಲಂಗಾಣ ಸಾರಿಗೆ ಸಚಿವರಾದ ಪೋನ್ನಮ್ ಪ್ರಭಾಕರ

ಸುಬ್ರಹ್ಮಣ್ಯ : ತೆಲಂಗಾಣ ರಾಜ್ಯ ಸರಕಾರದ ಸಾರಿಗೆ ಸಚಿವರಾದ ಪೊನ್ನಮ್ ಪ್ರಭಾಕರ ಅವರು ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಇವರನ್ನು ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿಗಳಾದ ಅರವಿಂದ ಅಯ್ಯಪ್ಪ ಸುತಗುಂಡಿ ಸ್ವಾಗತಿಸಿದರು. ಬಳಿಕ ಶ್ರೀ ದೇವಳಕ್ಕೆ ತೆರಳಿದ ಸಚಿವರು ಶ್ರೀ ದೇವರ ದರುಶನ ಮಾಡಿದರು. ಇವರಿಗೆ ಅರ್ಚಕರು ಶಾಲು ಹೊದಿಸಿ ಮಹಾಪ್ರಸಾದ ನೀಡಿದರು....

ಸುಬ್ರಹ್ಮಣ್ಯ : ಸಂಸ್ಕೃತ ಸರಳ ಪರೀಕ್ಷಾ ಪ್ರಶಸ್ತಿ ಪತ್ರ ವಿತರಣೆ ಸಮಾರಂಭ

ಸಂಸ್ಕೃತ ಭಾರತಿ ವತಿಯಿಂದ ಮಾರ್ಚ್ ತಿಂಗಳಲ್ಲಿ ನಡೆಸಲಾಗಿದ್ದ “ಸಂಸ್ಕೃತ ಸರಳ ಪರೀಕ್ಷೆ”ಯ ಪ್ರಶಸ್ತಿ ಪತ್ರ ವಿತರಣೆ ಸಮಾರಂಭವು ಮೇ.19ರಂದು ಸಂಜೆ ಸುಬ್ರಹ್ಮಣ್ಯದಲ್ಲಿ ಸರ್ವೇಶ್ವರ ಕೇಕುಣ್ಣಯ ಅವರ ನಿವಾಸದಲ್ಲಿ ನಡೆಯಿತು.ಕಾರ್ಯಕ್ರಮದ ಆರಂಭದಲ್ಲಿ ಸಂಸ್ಕೃತ ಗುರುಗಳಾದ ಶ್ರೀಮತಿ ಸ್ವರ್ಣಲತಾ ಅವರು ಸಂಸ್ಕೃತ ಭಾರತಿಯ ಕಾರ್ಯಪರಿಚಯವನ್ನು ನೀಡಿದರು. ಸಂಸ್ಕೃತ ಭಾಷೆಯ ಮಹತ್ವ, ಭಾರತೀಯ ಸಂಸ್ಕೃತಿಯೊಂದಿಗೆ ಅದರ ಅವಿನಾಭಾವ ಸಂಬಂಧ ಹಾಗೂ...

ಕುಲ್ಕುಂದ :- ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಬ್ರಹ್ಮಣ್ಯ ವಲಯ, ಶ್ರೀ ಬಸವೇಶ್ವರ ಚಾರಿಟೇಬಲ್ ಟ್ರಸ್ಟ್ (ರಿ.), ಶ್ರೀ ಬಸವೇಶ್ವರ ದೇವಸ್ಥಾನ (ರಿ.) ಬಸವನಮೂಲೆ ಕುಲ್ಕುಂದ ಸುಬ್ರಹ್ಮಣ್ಯ, ಪ್ರಗತಿ ಬಂಧು ಸ್ವ-ಸಹಾಯ ಒಕ್ಕೂಟ ಸುಬ್ರಹ್ಮಣ್ಯ ವಲಯ ಹಾಗೂ ಶ್ರೀ ಬಸವೇಶ್ವರ ಭಜನಾ ಮಂಡಳಿ ಕುಲ್ಕುಂದ ಇದರ...

ಕುಲ್ಕುಂದ ಬಸವೇಶ್ವರ ದೇವಳದ ಅಭಿವೃದ್ಧಿಗಾಗಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರಿಗೆ ಮನವಿ

ಸುಬ್ರಹ್ಮಣ್ಯ ಮೇ 18 : ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಬಸವೇಶ್ವರ ದೇವಾಲಯ ಪ್ರಗತಿ ಪಥದಲ್ಲಿ ಅಭಿವೃದ್ಧಿ ಹೊಂದುತ್ತಿದ್ದು, ಸ್ಥಳೀಯ ಹಾಗೂ ಪರಊರ ಭಕ್ತ ಅಭಿಮಾನಿಗಳನ್ನು ಆಕರ್ಷಿಸುವಲ್ಲಿ ಹೆಜ್ಜೆ ಇಟ್ಟಿದೆ. ಈಗಾಗಲೇ ದೇವಾಲಯದ ಅಭಿವೃದ್ಧಿ ಕೆಲಸ ಕಾರ್ಯಗಳು ಬಹಳಷ್ಟು ಆಗಿದ್ದು, ಇನ್ನಷ್ಟು ಕೂಡ ಆಗಬೇಕಾಗಿದೆ. ಆ ನಿಟ್ಟಿನಲ್ಲಿ ಬಸವೇಶ್ವರ ದೇವಸ್ಥಾನದ ಅಧ್ಯಕ್ಷರಾದ ಗಿರಿಧರ ಸ್ಕಂದ, ಕಾರ್ಯದರ್ಶಿಗಳಾದ, ವಿಜಯಕುಮಾರ್...

ಶ್ರೀ ವೀರಾಂಜನೇಯ ಮಕ್ಕಳ ತಂಡ ಅಂತರ್ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

ಕಟೀಲು ಮೇ.10 : ಶ್ರೀ ಕಟೀಲು ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ಅಖಂಡ ಅಂತರ್ ಜಿಲ್ಲಾ ಮಟ್ಟದ ಆಹ್ವಾನಿತ ಭಜನಾ ಸ್ಪರ್ಧೆಯ ಅಂತಿಮ ಹಂತದಲ್ಲಿ ಸುಳ್ಯದ ಶ್ರೀ ವೀರಾಂಜನೇಯ ಮಕ್ಕಳ ಭಜನಾ ತಂಡ ತೃತೀಯ ಸ್ಥಾನ ಪಡೆದು 10 ಸಾವಿರ ರೂಪಾಯಿ ಬಹುಮಾನ ಪಡೆದಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸದನದಲ್ಲಿ ನಡೆದ 16 ವರ್ಷದೊಳಗಿನ ವಿಭಾಗದಲ್ಲಿ...
Loading posts...

All posts loaded

No more posts

error: Content is protected !!