ಐವರ್ನಾಡು ಮುತ್ತುಮಾರಿಯಮ್ಮ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನ ಕನಕಪುರ ಐವರ್ನಾಡು ಇದರ ಬ್ರಹ್ಮಕಲಶೋತ್ಸವವು ಎ.29,30 ಹಾಗೂ ಮೇ.1ರಂದು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಯಿತು.ಈ ಸಂದರ್ಭದಲ್ಲಿ ಆಡಳಿತ ಸಮಿತಿ ಪದಾಧಿಕಾರಿಗಳು, ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.

ಮಾವಿನಕಟ್ಟೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಚ್ಛತಾ ಕಾರ್ಯ

ಮಾ.19 ಗುರುವಾರದಂದು ಮಾವಿನಕಟ್ಟೆಯಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೈವದ ಜಾತ್ರಾ ಮಹೋತ್ಸವ ಮುಗಿದ ನಂತರ ಈ ದಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುತ್ತಿಗಾರು ವಲಯದ ಮಾವಿನಕಟ್ಟೆ ಒಕ್ಕೂಟದ ವತಿಯಿಂದ ದೈವಸ್ಥಾನದ ಸುತ್ತಮುತ್ತ ಸ್ವಚ್ಛತಾ ಶ್ರಮದಾನ ನಡೆಸಲಾಯಿತುಸುಮಾರು 30 ಜನ ಸದಸ್ಯರು ಭಾಗವಹಿಸಿದ್ದು, ಪ್ಲಾಸ್ಟಿಕ್ ತ್ಯಾಜ್ಯವನ್ನು ಹೆಕ್ಕಿ ದೈವಸ್ಥಾನದ ಸುತ್ತಮುತ್ತ ಗುಡಿಸಿ ಸೃಚ್ಛತೆ ಮಾಡಲಾಯಿತು.ಈ ಸಂದರ್ಭದಲ್ಲಿ...
Ad Widget

ಕಲ್ಲುಗುಂಡಿ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲದ ಆಮಂತ್ರಣ ಬಿಡುಗಡೆ – ಕೊಳ್ಳಿಮುಹೂರ್ತ

ದ.ಕ ಸಂಪಾಜೆ ಗ್ರಾಮದ ಇತಿಹಾಸ ಪ್ರಸಿದ್ದ ಕಲ್ಲುಗುಂಡಿ ಶ್ರೀ ಮಹಾವಿಷ್ಣುಮೂರ್ತಿ ಒತ್ತೆಕೋಲ ಉತ್ಸವವು ಮಾ.28 ರಿಂದ 30 ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು, ಮಾರ್ಚ್ 14 ರಂದು ಒತ್ತೆಕೋಲದ ಆಮಂತ್ರಣ ಬಿಡುಗಡೆ ಹಾಗೂ ಕೊಳ್ಳಿ ಮೂಹೂರ್ತ ನಡೆಯಿತು.ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನದಲ್ಲಿ ಶ್ರೀ ದೈವಕ್ಕೆ ವಿಶೇಷ ಪೂಜೆಯನ್ನು ಮಾಡಿ ಬಳಿಕ ಕೆ.ಬಿ ಕೇಶವ ಆಚಾರ್ಯ ಕೀಲಾರು ಬೈಲು...

ಮಾವಿನಕಟ್ಟೆ ಶ್ರೀ ಮಹಾವಿಷ್ಣು ದೈವದ ಒತ್ತೆಕೋಲ – ದೈವದ ಅಗ್ನಿಸೇವೆ – ಮನಸೂರೆಗೊಂಡ ಛತ್ರಪತಿ ಶಿವಾಜಿ ನಾಟಕ

ದೇವಚಳ್ಳ ಗ್ರಾಮದ ಮಾವಿನಕಟ್ಟೆ ಉದಯಗಿರಿಯಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮಾ.18 ಮತ್ತು 19 ರಂದು ನಡೆಯಿತು. ನೂರಾರು ಭಕ್ತಾಧಿಗಳು ಅಗಮಿಸಿ ಶ್ರೀ ದೈವದ ಪ್ರಸಾದ ಸ್ವೀಕರಿಸಿ, ಕಣ್ತುಂಬಿಕೊಂಡರು. ಮಾ.18 ರಂದು ಬೆಳಿಗ್ಗೆ ಗಣಪತಿ ಹವನ, ಶುದ್ಧಿ ಕಲಶ, ಮೇಲೇರಿ ಕಾರ್ಯಕ್ರಮ, ಅಶ್ವತ್ಥ ಪೂಜೆ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ರಾತ್ರಿ...

ಬೆಳ್ಳಾರೆ ಬೂಡು ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಹಾಗೂ ಸಪರಿವಾರ ದೈವಗಳ ನೇಮೋತ್ಸವ

ಬೆಳ್ಳಾರೆ ಗ್ರಾಮದ ಬೂಡು ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಹಾಗೂ ಸಪರಿವಾರ ದೈವಗಳ ನೇಮೋತ್ಸವವು ಫೆ.14 ಮತ್ತು 15ರಂದು ನಡೆಯಿತು. ಫೆ.14ರಂದು ಬೆಳಿಗ್ಗೆ ಗಣಪತಿ ಹೋಮ ಹಾಗೂ ಗೊನೆ ಮುಹೂರ್ತ ನಡೆಯಿತು. ಆ ಬಳಿಕ ಜಾಗದ ಪಂಜುರ್ಲಿಗೆ ತಂಬಿಲ ಸೇವೆ ನಡೆಯಿತು. ಅಪರಾಹ್ನ ಗುಳಿಗ ದೈವಕ್ಕೆ ಎಣ್ಣೆ ಬೂಳ್ಯ ನೀಡಿ ಗುಳಿಗ ದೈವದ ನೇಮೋತ್ಸವ ಜರುಗಿತು. ಸಂಜೆ...

ಪೆರುವಾಜೆ ಶ್ರೀ ಜಲದುರ್ಗಾ ದೇವೀ ಭಜನಾ ಮಂಡಳಿ ಅಧ್ಯಕ್ಷರಾಗಿ ಚಿದಾನಂದ ರೈ ಬಜ – ಕಾರ್ಯದರ್ಶಿಯಾಗಿ ವಸಂತ ಆಚಾರ್ಯ ಪೆರುವಾಜೆ ಆಯ್ಕೆ

ಪೆರುವಾಜೆ ಶ್ರೀ ಜಲದುರ್ಗಾ ದೇವೀ ಭಜನಾ ಮಂಡಳಿ ಇದರ ಸಭೆ ಮಾ.15 ರಂದು ನಡೆಯಿತು. ಸಭೆಯಲ್ಲಿ 2026-27 ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಚಿದಾನಂದ ರೈ ಬಜ, ಕಾರ್ಯದರ್ಶಿಯಾಗಿ ವಸಂತ ಆಚಾರ್ಯ ಪೆರುವಾಜೆ ಆಯ್ಕೆಯಾದರು.‌

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಉಪಹಾರ ಹಾಗೂ ಭೋಜನ ಪ್ರಸಾದ ಯಥಾಸ್ಥಿತಿಯಲ್ಲಿ ಮುಂದುವರಿಕೆ

ಸುಬ್ರಹ್ಮಣ್ಯ ಮಾ.13 : ದಕ್ಷಿಣ ಭಾರತದ ನಾಗರಾಧನೆಯ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಗ್ಯಾಸ್ ಸಿಲಿಂಡರ್ ಪೊರೈಕೆ ಸಮಸ್ಯೆಯ ಹಿನ್ನೆಲೆಯಲ್ಲಿ ಉಪಹಾರ ವ್ಯವಸ್ಥೆಯಲ್ಲಿ ಮಾಡಲಾಗಿದ್ದ ಬದಲಾವಣೆಯನ್ನು ಸರಿಪಡಿಸಿ ಈ ಹಿಂದಿನಂತೆ ಉಪಹಾರ ವಿತರಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಬೆಳಗಿನ ಉಪಹಾರ, ಮಧ್ಯಾಹ್ನದ ಭೋಜನ ಪ್ರಸಾದ ಹಾಗೂ ರಾತ್ರಿಯ ಭೋಜನ ಪ್ರಸಾದ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಗ್ಯಾಸ್...

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಯಥಾಪ್ರಕಾರ ಬೋಜನ ಪ್ರಸಾದ ಮತ್ತು ಉಪಹಾರ ವ್ಯವಸ್ಥೆ – ಗ್ಯಾಸ್ ಉಳಿಕೆಗೆ ಕ್ರಮ ; ವಾರಕ್ಕೆ ಬೇಕಾದ ಗ್ಯಾಸ್ ಹಾಗೂ ಕಟ್ಟಿಗೆ ದಾಸ್ತಾನು

“ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಉಪಹಾರ ಮತ್ತು ಬೋಜನ ಪ್ರಸಾದ ವಿತರಣೆಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ಪ್ರತಿದಿನದಂತೆ ಬೋಜನ ಪ್ರಸಾದ ಮತ್ತು ಉಪಹಾರವನ್ನು ಭಕ್ತರಿಗೆ ವಿತರಿಸಲಾಗುತ್ತದೆ. ಒಂದು ವಾರಕ್ಕೆ ಬೇಕಾದ ಗ್ಯಾಸ್ ಶೇಖರಿಸಲ್ಪಟ್ಟಿದ್ದು ಬುಧವಾರ ಕೂಡಾ ಶ್ರೀ ದೇವಳಕ್ಕೆ ಗ್ಯಾಸ್ ಸಿಲಿಂಡರ್ ಬಂದಿದೆ. ಆದ್ದರಿಂದ ಭಕ್ತರಿಗೆ ಈ ಬಗ್ಗೆ ಯಾವುದೇ ಗೊಂದಲ...

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೂ ತಟ್ಟಿದ ಮಧ್ಯಪ್ರಾಚ್ಯದ ಯುದ್ಧದ ಬಿಸಿ – ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ; ದೇವಸ್ಥಾನದ ಬೆಳಗ್ಗಿನ ಉಪಾಹಾರದ ವಿತರಣೆಯಲ್ಲಿ ಬದಲಾವಣೆ

ಕುಕ್ಕೆ ಸುಬ್ರಹ್ಮಣ್ಯ ಮಾ.11 : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವಂತಹ ಯುದ್ಧದ ಪರಿಣಾಮವಾಗಿ ದೇಶದಾದ್ಯಂತ ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಇದರಿಂದಾಗಿ ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ ಕೊರತೆ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಮಾ.11 ರಿಂದ ದೇವಸ್ಥಾನದಲ್ಲಿ ಬೆಳಗ್ಗಿನ ಉಪಾಹಾರ ವಿತರಣೆಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ....

ಕಂದ್ರಪ್ಪಾಡಿ : ಜಾತ್ರೋತ್ಸವದ ಅಂಗವಾಗಿ ಧ್ವಜರೋಹಣ

ಕಂದ್ರಪ್ಪಾಡಿ ಶ್ರೀ ರಾಜ್ಯದೈವ ಮತ್ತು ಪುರುಷದೈವ ದೈವಸ್ಥಾನ ಕಂದ್ರಪ್ಪಾಡಿ ಇದರ ಜಾತ್ರೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವು ಮಾ.10 ರಂದು ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಾಳಿಕಾಪ್ರಸಾದ್ ಮುಂಡೋಡಿ, ಸದಸ್ಯರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು. ಮಾ.14 ಮತ್ತು 15 ರಂದು ಪುರುಷ ದೈವ ಮತ್ತು ರಾಜ್ಯದೈವದ ನೇಮೋತ್ಸವವು ನಡೆಯಲಿದೆ.
Loading posts...

All posts loaded

No more posts

error: Content is protected !!