Ad Widget

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ಕಲಶ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ ಆರಂಭ, ಶ್ರೀ ಕಲ್ಲುರ್ಟಿ ಮತ್ತು ಕಲ್ಕುಡ ದೈವದ ಪ್ರತಿಷ್ಠೆ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ಕಲಶ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವವು ಆರಂಭಗೊಂಡಿದ್ದು, ಇಂದು(ಜ.16 ರಂದು) ಬೆಳಿಗ್ಗೆ ಗಂಟೆ 9-10 ರಿಂದ 9-45 ರ ಕುಂಭ ಲಗ್ನದಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ಶ್ರೀ ಕಲ್ಲುರ್ಟಿ ಮತ್ತು ಕಲ್ಕುಡ ದೈವದ ಪ್ರತಿಷ್ಠೆ ನೆರವೇರಿತು. ಈ ಸಂದರ್ಭದಲ್ಲಿ ಪವಿತ್ರವಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ...

ಅಯ್ಯನಕಟ್ಟೆ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನ ಮೂರುಕಲ್ಲಡ್ಕದಲ್ಲಿ ಜ.26ರಿಂದ ಜ.29ರ ತನಕ ಅಯ್ಯನಕಟ್ಟೆ ಜಾತ್ರೋತ್ಸವ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮವು ಇಂದು (ಜ.14ರಂದು) ನಡೆಯಿತು. ಮೊದಲಾಗಿ ಮೂರುಕಲ್ಲಡ್ಕ ದೈವಸ್ಥಾನದಲ್ಲಿ ಸಂಕ್ರಮಣ ತಂಬಿಲ ಸೇವೆ ನಡೆಯಿತು. ತದನಂತರ ಆಮಂತ್ರಣ ಪತ್ರಿಕೆಯನ್ನು ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು(ರಿ.) ಮೂರುಕಲ್ಲಡ್ಕ ಹಾಗೂ ಅಯ್ಯನಕಟ್ಟೆ ಜಾತ್ರೋತ್ಸವ...
Ad Widget

ಮೂರುಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಾಳಿಲ ಒಕ್ಕೂಟದಿಂದ ಶ್ರಮದಾನ

ಬಾಳಿಲ ಗ್ರಾಮದ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನ ಮೂರುಕಲ್ಲಡ್ಕದಲ್ಲಿ ಜ.26ರಿಂದ 'ಅಯ್ಯನಕಟ್ಟೆ ಜಾತ್ರೆ'ಯು ಆರಂಭಗೊಳ್ಳಲಿದ್ದು, ಇದರ ಪೂರ್ವಭಾವಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಾಳಿಲ ಒಕ್ಕೂಟದ ಸದಸ್ಯರಿಂದ ಜ.12ರಂದು ಶ್ರಮದಾನ ನಡೆಯಿತು. ಶ್ರಮದಾನದಲ್ಲಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.

ಜ.15 – ಜ.21 : ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ಕಲಶ ಹಾಗೂ ಜಾತ್ರಾ ಮಹೋತ್ಸವ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜ.15 ರಿಂದ ಜ.21 ರವರೆಗೆ ಪ್ರತಿಷ್ಠಾ ಕಲಶ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಜ.10 ರಂದು ಬೆಳಿಗ್ಗೆ ಗಂಟೆ 9.30ಕ್ಕೆ ಗೊನೆ ಮುಹೂರ್ತ ಕಾರ್ಯಕ್ರಮ ನಡೆಯಿತು. ಜ.15 ರಂದು ಸಂಜೆ ದೇವತಾ ಪ್ರಾರ್ಥನೆ, ಆಚಾರ್ಯವರಣ,...

ಕುಕ್ಕೆ: ಮಾ.12ರಂದು ಸಪ್ತಪದಿ ಸರಳ ಸಾಮೂಹಿಕ ವಿವಾಹ – ಅರ್ಜಿ ಆಹ್ವಾನ

ಸುಬ್ರಹ್ಮಣ್ಯ: ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ನಾಗಾರಾಧನೆಯ ಪುಣ್ಯ ತಾಣ ಮತ್ತು ರಾಜ್ಯದ ನಂಬರ್ ವನ್ ಆದಾಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.12ರಂದು ಸರಳ ಸಾಮೂಹಿಕ ವಿವಾಹ ನಡೆಯಲಿದೆ. ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಕುಕ್ಕೆ ದೇವಳದಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ಸಪ್ತಪದಿ ಸಾಮೂಹಿಕ ಸರಳ...

ಕಳಂಜ: 25ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಏಕಾಹ ಭಜನೆ ಕಾರ್ಯಕ್ರಮ

ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟ್(ರಿ.) ಕಳಂಜ ಇದರ ವತಿಯಿಂದ 25ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ಹಾಗೂ ಏಕಾಹ ಭಜನೆ ಕಾರ್ಯಕ್ರಮ ಜ.05 ಹಾಗೂ ಜ.06 ರಂದು ಜರುಗಿತು. ಜ.05 ಸಂಜೆ ಸೂರ್ಯಾಸ್ತದಿಂದ ಆರಂಭವಾದ ಏಕಾಹ ಭಜನೆ ಕಾರ್ಯಕ್ರಮವು ಜ.06 ಸಂಜೆ ಸೂರ್ಯಾಸ್ತದವರೆಗೆ ಜರುಗಿದ್ದು, ಕಾರ್ಯಕ್ರಮದಲ್ಲಿ ವಿವಿಧ ಭಜನಾ ತಂಡಗಳು ಭಾಗವಹಿಸಿದ್ದವು. ಜ.06ರಂದು...

ಕೊಲ್ಯ-ಪೆರುವಾಜೆ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ಗಣಹೋಮ, ಸತ್ಯನಾರಾಯಣ ಪೂಜೆ ಹಾಗೂ ವರ್ಷಾವಧಿ ಕೊರಗಜ್ಜನ ನೇಮೋತ್ಸವ

ಪೆರುವಾಜೆ ಗ್ರಾಮದ ಕೊಲ್ಯ-ಪೆರುವಾಜೆ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ಗಣಹೋಮ, ಸತ್ಯನಾರಾಯಣ ಪೂಜೆ ಹಾಗೂ ವರ್ಷಾವಧಿ ಕೊರಗಜ್ಜನ ನೇಮೋತ್ಸವವು ಡಿ.30 ಶುಕ್ರವಾರದಂದು ನಡೆಯಿತು. ಬೆಳಿಗ್ಗೆ ಗಣಹೋಮ ನಂತರ ಸತ್ಯನಾರಾಯಣ ಪೂಜೆ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಗಂಟೆ 7.00ಕ್ಕೆ ದೈವದ ಭಂಡಾರ ತೆಗೆದು ಬಳಿಕ ಅನ್ನಸಂತರ್ಪಣೆ ನಡೆಯಿತು. ಆ ಬಳಿಕ ಶ್ರೀ ಕೊರಗಜ್ಜ ದೈವದ ನೇಮೋತ್ಸವ...

ಡಿ.6,7 :ಬೆಳ್ಳಿಪ್ಪಾಡಿ ಶ್ರೀ ಉಳ್ಳಾಕುಲು ಧೂಮಾವತಿ ದೈವದ ನೇಮೋತ್ಸವ

ಬೆಳ್ಳಿಪ್ಪಾಡಿ ನಡುಬೆಟ್ಟು ಶ್ರೀ ಉಳ್ಳಾಕುಲು ಧೂಮಾವತಿ ದೈವಸ್ಥಾನದಲ್ಲಿ ಡಿ.6 ಮತ್ತು 7 ರಂದು ಕಾಲಾವಧಿ ನೇಮೋತ್ಸವ ನಡೆಯಲಿದೆ.

ತರವಾಡು ಮನೆಗಳು ಮಕ್ಕಳಿಗೆ ಧಾರ್ಮಿಕ ಶಿಕ್ಷಣ, ಶಿಸ್ತು, ಶ್ರದ್ಧೆಯನ್ನು ಕಳುಹಿಸುವ ಶ್ರದ್ಧಾ ಕೇಂದ್ರವಾಗಲಿ

ನಮ್ಮ ತುಳುನಾಡಿನಲ್ಲಿ ತರವಾಡು ಮನೆಗೆ ಭಾರಿ ಮಹತ್ವವಿದೆ . ತರವಾಡು ಮನೆಯಿಲ್ಲದ ಕುಟುಂಬವಿರದು. ತರವಾಡು ಮನೆಯು ತನ್ನ ಕುಟುಂಬದ ಮನೆಗಳ ದೈವಗಳ ಕಾರ್ಯ ದೇವರ ಕಾರ್ಯಗಳ ಮುಂದುವರಿಕೆಗೆ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ. ತರವಾಡು ಮನೆಯ ಯಜಮಾನನು ತನ್ನದೆ ಆದ ಗೌರವವನ್ನು ಹೊಂದಿದ್ದು , ಕುಟುಂಬ ಸದಸ್ಯರನ್ನು ಪ್ರೀತಿ , ಸಹನೆ , ತಾಲ್ಮೆಯಿಂದ ಸಮರ್ಪಕವಾಗಿ ನಿಭಾಯಿಸುವ...

ಕುಕ್ಕೆ ಸುಬ್ರಹ್ಮಣ್ಯ: ಆಶ್ಲೇಷಾ ನಕ್ಷತ್ರದ ಅಂಗವಾಗಿ ದೇವಾಲಯದಲ್ಲಿ ಭಕ್ತ ಸಾಗರ

ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಇಂದು ಆಶ್ಲೇಷಾ ನಕ್ಷತ್ರವಾಗಿರುವುದರಿಂದ ಶ್ರೀ ದೇವರ ದರ್ಶನಕ್ಕೆ ಸಾವಿರಾರು ಭಕ್ತರು ಆಗಮಿಸಿದ್ದಾರೆ. ಮುಂಜಾನೆಯಿಂದಲೇ ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯಲು ಕಾಯುತ್ತಿದ್ದಾರೆ. ದೇವಳದ ಮುಂಭಾಗದಲ್ಲಿ ರಥಬೀದಿಯವರೆಗೆ 2 ಸಾಲಿನಲ್ಲಿ ಭಕ್ತರನ್ನು ಕಾಣಬಹುದು. ಎಂದಿನಂತೆ ಮುಂಜಾನೆ 6.00ರಿಂದ ಪೂಜೆಗಳು ಪ್ರಾರಂಭಗೊಂಡಿದ್ದು,ಮುಂಜಾನೆಯ ಪೂಜೆ ನಾಲ್ಕು ವಿಭಾಗಗಳಲ್ಲಿ ನಡೆಯಲಿದೆ. ವರದಿ: ಅನನ್ಯ ಹೆಚ್...
Loading posts...

All posts loaded

No more posts

error: Content is protected !!