ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮ

ಸುಳ್ಯ, ಜು. 4: ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು, ಸುಳ್ಯದಲ್ಲಿ ಶನಿವಾರ ಪಿಯುಸಿ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ಮಾರ್ಗದರ್ಶನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್‌ನ ಅಧ್ಯಕ್ಷರಾದ ರೊ. ಮೇಜರ್ ಡೋನರ್ ಲತಾ ಮಧುಸೂದನ್ ವಹಿಸಿದ್ದರು. ಕಾಲೇಜಿನ ಸಂಚಾಲಕರಾದ ರೊ. ಪಿಪಿ ಎಂಪಿಎಚ್ಎಫ್ ಪ್ರಭಾಕರನ್ ನಾಯರ್ ವಿದ್ಯಾರ್ಥಿಗಳು ಉನ್ನತ...

ಸುಳ್ಯದ ಜ್ಞಾನದೀಪ ನವೋದಯ ತರಬೇತಿ ಸಂಸ್ಥೆಯಿಂದ ತರಬೇತಿ ಪಡೆದ ಸಾನ್ವಿ ಬಿ.ಜಿ. ನವೋದಯ ಶಾಲೆಗೆ ಆಯ್ಕೆ

2025-26ನೇ ಸಾಲಿನಲ್ಲಿ ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪಡೆಯಲು 3ನೇ ಸುತ್ತಿನಲ್ಲಿ ಸುಳ್ಯದ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದ ಸಾನ್ವಿ ಬಿ.ಜಿ. ಮುಡಿಪು ಪಿಎಂಶ್ರೀ ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ. ಸುಳ್ಯ ಬೆಟ್ಟಂಪಾಡಿಯ ಗೌರಿಶಂಕರ ಮತ್ತು ಸವಿತಾ ಕುಮಾರಿ ದಂಪತಿಗಳ ಪುತ್ರಿ ಸುಳ್ಯದ ಸೈoಟ್ ಬ್ರಿಜಿಡ್ಸ್ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಸಾನ್ವಿ ಬಿ.ಜಿ....
Ad Widget

ಗುತ್ತಿಗಾರು ಸರಕಾರಿ ಪ್ರೌಢಶಾಲೆಯಲ್ಲಿ ಪ್ರದೀಪ್ ಕ್ರಾಫ್ಟ್ ವರ್ಕ್ ಸಂಸ್ಥೆಯ ವತಿಯಿಂದ ಕ್ರಾಫ್ಟ್ ವರ್ಕ್ ತರಬೇತಿ ಕಾರ್ಯಕ್ರಮ

ಗುತ್ತಿಗಾರು ಸರಕಾರಿ ಪ್ರೌಢಶಾಲೆಯಲ್ಲಿ ಜು.01 ರಂದು ಕ್ರಾಫ್ಟ್ ವರ್ಕ್ ತರಬೇತಿ ಕಾರ್ಯಕ್ರಮವನ್ನು ಪ್ರದೀಪ್ ಕ್ರಾಫ್ಟ್ ವರ್ಕ್ ಸಂಸ್ಥೆಯ ಮುಖ್ಯಸ್ಥರಾದ ಪ್ರದೀಪ್ ಕರಿಕೆ ನಡೆಸಿಕೊಟ್ಟರು. ತೆಂಗಿನ ಗೆರಟೆಯಲ್ಲಿ ವಿವಿಧ ಗೃಹ ಉಪಯೋಗಿ ಮತ್ತು ಅಲಂಕಾರಿಕ ವಸ್ತುಗಳನ್ನು ತಯಾರಿಸುವ ವಿಧಾನವನ್ನು ಪ್ರಾತ್ಯಕ್ಷಿತೆ ಮೂಲಕ ತೊರಿಸಲಾಯಿತು. ಸ್ವದೇಶಿ ನಿರ್ಮಿತ ವಸ್ತುವಿನ ಬಳಕೆಯಿಂದ ಪರಿಸರ ಸಂರಕ್ಷಣೆಯ ಜೊತೆಗೆ ದೇಹದ ಆರೋಗ್ಯಕ್ಕೆ ಮತ್ತು...

ಗುತ್ತಿಗಾರು ಸರಕಾರಿ ಪ್ರೌಢಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಬಾಲಸುಬ್ರಹ್ಮಣ್ಯ.ಎನ್.ಜಿ

ಗುತ್ತಿಗಾರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಪೋಷಕರ ಸಭೆಯು ಜೂ.20ರಂದು ನಡೆದಿದ್ದು, ಸಭೆಯಲ್ಲಿ ಶಾಲಾ ಎಸ್.ಡಿ.ಎಂ.ಸಿಯ ತೆರವಾದ ನಾಲ್ಕು ಸ್ಥಾನಗಳಿಗೆ ಸದಸ್ಯರ ಹಾಗೂ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದ್ದು, ನೂತನ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಬಾಲಸುಬ್ರಹ್ಮಣ್ಯ.ಎನ್.ಜಿ ಇವರು ಆಯ್ಕೆಯಾಗಿದ್ದಾರೆ. ಸುಳ್ಯದಲ್ಲಿ ವಕೀಲರಾಗಿರುವ ಇವರು ಈ ಹಿಂದೆ ಸತತ 09 ವರ್ಷಗಳ ಕಾಲ ಬಂಗ್ಲೆಗುಡ್ಡೆ ಸರಕಾರಿ...

ಸುಳ್ಯದ ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನಲ್ಲಿ “ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮ”

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಡಿಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆಯ ಪ್ರಯುಕ್ತ ರಾಜ್ಯದಾದ್ಯಂತ ಆನ್ಲೈನ್ ಜಾಗೃತಿ ಕಾರ್ಯಕ್ರಮದ ಪ್ರಯುಕ್ತ ಸುಳ್ಯದ ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮ ಮಾಡಲಾಯಿತು. ಕಾರ್ಯಕ್ರಮದಲ್ಲಿ ಪ್ರಾಸ್ತವಿಕವಾಗಿ ಮಾತನಾಡಿದ ಪೂಜ್ಯ ವೀರೇಂದ್ರ ಹೆಗ್ಗಡೆಯವರು “ಜನಜಾಗೃತಿ ಮೂಲಕ...

ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಸತ್ತು ಚುನಾವಣೆ

ಅರಂತೋಡು : ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು, ಅರಂತೋಡಿನಲ್ಲಿ 2026-27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಸತ್ತು ಚುನಾವಣೆಯನ್ನು ನಡೆಸಲಾಯಿತು. ಈ ಚುನಾವಣೆಯನ್ನು ಆಧುನಿಕ ತಂತ್ರಜ್ಞಾನದ ನೆರವಿನಿಂದ ಮೊಬೈಲ್ ಅಪ್ಲಿಕೇಶನ್ ಬಳಸಿ ಇಲೆಕ್ಟ್ರಾನಿಕ್ ಮತಯಂತ್ರ(EVM) ಮಾದರಿಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಪ್ರಕ್ರಿಯೆಗೆ ಗೌರವ...

ಡಾ. ಹರಿಣಾಕ್ಷಿ ಎಂ.ಡಿ ಸೇವಾ ನಿವೃತ್ತಿ

ಡಾ. ಹರಿಣಾಕ್ಷಿ ಎಂ.ಡಿ ಅವರು ಜೂನ್ 30ರಂದು 1990ರಿಂದ 2026ರ ತನಕದ ಸುದೀರ್ಘ 36 ವರ್ಷಗಳ ಬೋಧನಾ ವೃತ್ತಿಯಿಂದ ನಿವೃತ್ತಿ ಹೊಂದಿದ್ದಾರೆ. ಪುತ್ತೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕಿಯಗಿ ಸೇವೆ ಆರಂಭಿಸಿದ್ದ ಅವರು ಮುಂದೆ ಪುತ್ತೂರಿನ ವಿವೇಕಾನಂದ ಕಾಲೇಜು, ಸಂತ ಫಿಲೋಮಿನಾ ಕಾಲೇಜು, ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜು, ಪುತ್ತೂರಿನ ಸರಕಾರಿ ಪ್ರಥಮ...

ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ; “ದುಶ್ಚಟಮುಕ್ತ ಬದುಕಿನಿಂದ ಯುವಜನಾಂಗದ ಅಭ್ಯುದಯ” : ವಿಮಲಾ ರಂಗಯ್ಯ ಅಭಿಮತ

ಸುಬ್ರಹ್ಮಣ್ಯ : “ದುಶ್ಚಟಮುಕ್ತ ಬದುಕಿನಿಂದ ಯುವ ಜನಾಂಗ ಅಭ್ಯುದಯವಾಗಲು ಸಾಧ್ಯವಿದೆ. ವಿದ್ಯಾರ್ಜನೆಯ ಅವಧಿಯಲ್ಲಿಯೇ ವಿದ್ಯಾರ್ಥಿಗಳು ಮಾದಕ ವಸ್ತುಗಳ ವಿರುದ್ಧ ಜಾಗೃತರಾಗಬೇಕು. ಇದು ಓದು ಬರಹಗಳನ್ನು ಸೇರಿದಂತೆ ನಮ್ಮ ಭವಿಷ್ಯಕ್ಕೆ ಕೊಡಲಿಯೇಟು ನೀಡುತ್ತದೆ ಎಂಬ ಪರಿಜ್ಞಾನ ಎಳವೆಯಲ್ಲಿಯೇ ಮೂಡುವಂತೆ ಮಾಡುವುದು ಅತ್ಯವಶ್ಯಕ. ಧೂಮಪಾನ, ಮದ್ಯಪಾನ ಇತ್ಯಾದಿಗಳು ನಮ್ಮ ಬದುಕಿನ ಅತೀ ದೊಡ್ಡ ಶತ್ರುಗಳು ಎಂಬ ಅರಿವು ನಮ್ಮ...

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್‌ಮೆಂಟ್

ಜೂ. 27ರಂದು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು, ಸುಳ್ಯ ಇದರ ವತಿಯಿಂದ ನಡೆಸಿದiWave ಕಂಪೆನಿಯ ಸಂದರ್ಶನದಲ್ಲಿ 2026ನೇ ಸಾಲಿನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಲಿಖಿತ್ ಕೆ.ಆರ್. ಮತ್ತು ಮೌಸೀನಾ ತಸ್ಲೀಮ್ ಆಯ್ಕೆಯಾಗಿರುತ್ತಾರೆ. ಇವರಿಗೆ ಕಂಪೆನಿಯಿಂದ ರೂ. 4.8 ಲಕ್ಷ ವಾರ್ಷಿಕ ವೇತನ ಇದೆಯೆಂದು ಕಂಪೆನಿ ತಿಳಿಸಿದೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ), ಕಮಿಟಿ...

ಮಂಡೆಕೋಲು: ಸುಸಜ್ಜಿತ ಶಾಲಾ ಗ್ರಂಥಾಲಯ ಉದ್ಘಾಟನೆ

"ನಿರಂತರ ಪುಸ್ತಕ ಓದುವ ಹವ್ಯಾಸ ನಮ್ಮ ಬದುಕನ್ನೇ ಬದಲಾಯಿಸುತ್ತದೆ. ಪುಸ್ತಕ ಓದು ಮಕ್ಕಳ ಜ್ಞಾನ ವರ್ಧಿಸುತ್ತದೆ" ಎಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ಅವರು ಮಂಡೆಕೋಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನವೀಕೃತಗೊಂಡ ಸುಸಜ್ಜಿತ ಗ್ರಂಥಾಲಯವನ್ನು ಉದ್ಘಾಟಿಸಿ, ಮಾತನಾಡಿದರು.‌‌ಸಭೆಯ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷ ಸುರೇಶ್ ಕಣೆಮರಡ್ಕ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ...
Loading posts...

All posts loaded

No more posts

error: Content is protected !!