ಬೆಳ್ಳಾರೆ : ಗ್ರಾ.ಪಂ. ಅಧ್ಯಕ್ಷರಾಗಿ ನಮಿತಾ ರೈ – ಉಪಾಧ್ಯಕ್ಷರಾಗಿ ಶ್ರೀಮತಿ ವೀಣಾ

ಬೆಳ್ಳಾರೆ ಗ್ರಾಮ ಪಂಚಾಯತ್ ನ 2 ನೇ ಅವಧಿಗೆ ನೂತನ ಅಧ್ಯಕ್ಷರಾಗಿ ಶ್ರೀಮತಿ ನಮಿತಾ ಕೆ ಎಲ್ ರೈ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ವೀಣಾರವರು ಆಯ್ಕೆಯಾಗಿರುತ್ತಾರೆ.

ಕೊಲ್ಲಮೊಗ್ರ : ಅಧ್ಯಕ್ಷರಾಗಿ ಜಯಶ್ರೀ ಚಾಂತಾಳ – ಉಪಾಧ್ಯಕ್ಷರಾಗಿ ಅಶ್ವಥ್ ಯಾಲದಾಳು

ಕೊಲ್ಲಮೊಗ್ರ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಇಂದು ನಡೆಯಿತು. ಅಧ್ಯಕ್ಷರಾಗಿ ಜಯಶ್ರೀ ಚಾಂತಾಳ ಹಾಗೂ ಉಪಾಧ್ಯಕ್ಷರಾಗಿ ಅಶ್ವಥ್ ಯಾಲದಾಳು ಅವಿರೋಧವಾಗಿ ಆಯ್ಕೆಯಾದರು.
Ad Widget

ಸೌಜನ್ಯ ಪರ ಬೃಹತ್ ವಾಹನ ಜಾಥಕ್ಕೆ ಕ್ಷಣಗಣನೆ, ಕಿಕ್ಕಿರಿದು ಸೇರಿದ ಯುವ ಸಮೂಹ

ಬೆಳ್ತಂಗಡಿ ತಾಲೂಕಿನಲ್ಲಿ ಹನ್ನೊಂದು ವರ್ಷಗಳ ಹಿಂದೆ ಭೀಕರವಾಗಿ ಅತ್ಯಾಚಾರವಾಗಿ ಸಾವನ್ನಪ್ಪಿದ್ದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ಮುತ್ತು ಶಿಕ್ಷೆಗೆ ಗುರಿಯಾಗಿಸಬೇಕು ಎಂದು ಆಗ್ರಹಿಸಿ ಇಂದು ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯ ಕುಟುಂಬಸ್ಥರ ಜೊತೆಗೆ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರಿಂದ ವಾಹನ ಜಾಥಕ್ಕೆ ಇದೀಗ ಕ್ಷಣಗಣನೆ ಪ್ರಾರಂಭವಾಗಿದ್ದು ಕೆಲ ನಿಮಿಷಗಳಲ್ಲಿ ಸಾವಿರಾರು...

ಸೌಜನ್ಯಳ ಪರ ನ್ಯಾಯಕ್ಕಾಗಿ ಧರ್ಮಯುದ್ಧ – ರಾಜಕೀಯ ರಹಿತ ಹೋರಾಟಕ್ಕೆ ಸಾಕ್ಷಿಯಾಗಲಿದೆ ಸುಳ್ಯ – ಇಂದು ನಿಂತಿಕಲ್ಲಿನಿಂದ ಸುಳ್ಯಕ್ಕೆ ಜಾಥಾ – ಬೃಹತ್ ಪ್ರತಿಭಟನೆ

ಸುಮಾರು 11 ವರ್ಷಗಳ ಹಿಂದೆ ಧರ್ಮಸ್ಥಳ ಸಮೀಪ ಸೌಜನ್ಯಳನ್ನು  ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದ ನೈಜ ಆರೋಪಗಳನ್ನು ಶಿಕ್ಷೆಕೆ ಒಳಪಡಿಸಬೇಕು,ಸೌಜನ್ಯಳ ಸಾವಿಗೆ ನ್ಯಾಯ ಒದಗಿಸಬೇಕು ಎಂಬ ಕೂಗು ರಾಜ್ಯದಾದ್ಯಂತ ಕೇಳಿ ಬರುತ್ತಿದೆ. ಈ ಹೋರಾಟದ ಭಾಗವಾಗಿ ಸುಳ್ಯದಲ್ಲಿ ಆ. 8ರಂದು ಸುಳ್ಯದ ನಿಂತಿಕಲ್ಲಿನಿಂದ ಸುಳ್ಯ ನಗರದವರೆಗೆ ವಾಹನ ಜಾಥಾ, ಪೈಚಾರಿನಿಂದ ಕಾಲ್ನಡಿಗೆ ಜಾಥಾ  ...

ಕೆ.ವಿ.ಜಿ.ಪಾಲಿಟೆಕ್ನಿಕ್ ನಲ್ಲಿ ಡಾ. ಕೆ.ವಿ.ಜಿ.ಯವರ ಪುಣ್ಯಸ್ಮರಣೆ

ಅಮರ ಸುಳ್ಯದ ಶಿಲ್ಪಿ, ಶಿಕ್ಷಣ ಕ್ರಾಂತಿಯ ಹರಿಕಾರ ಡಾ. ಕುರುಂಜಿ ವೆಂಕಟ್ರಮಣ ಗೌಡರ ಹತ್ತನೇ ಪುಣ್ಯ ತಿಥಿಯ ಅಂಗವಾಗಿ ನುಡಿನಮನ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ ನುಡಿನಮನ ಸಲ್ಲಿಸಿದರು. ಉಪ ಪ್ರಾಂಶುಪಾಲ ಶ್ರೀಧರ್ ಎಂ.ಕೆ, ಅಕಾಡೆಮಿಕ್ ಡೀನ್ ಚಂದ್ರಶೇಖರ ಎಮ್.ಎನ್, ಕಛೇರಿ ಅಧೀಕ್ಷಕ ರುಗಳಾದ ಶಿವರಾಮ ಕೇರ್ಪಳ, ಧನಂಜಯ ಕಲ್ಲುಗದ್ದೆ ,...

ದ.ಕ.ಜಿಲ್ಲಾ ಖಾಸಗಿ ಅನುದಾನಿತ ಪ.ಪೂ. ಕಾಲೇಜುಗಳ ಉಪನ್ಯಾಸಕರ ಹಾಗೂ ಬೋಧಕೇತರ ಸಂಘ ರಚನೆ – ಜಿಲ್ಲಾಧ್ಯಕ್ಷರಾಗಿ ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ಕಾಲೇಜಿನ ಪ್ರಾಂಶುಪಾಲ ಸೋಮಶೇಖರ್ ನಾಯಕ್ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹಾಗೂ ಬೋಧಕೇತರ ಸಂಘದ ಮಹಾಸಭೆ ಆ.5 ರಂದು ನಡೆಯಿತು.ಮಹಾಸಭೆಯಲ್ಲಿ ಮುಂದಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಅನುದಾನಿತ ನೌಕರರ ಸಂಘ ಎಂದು ಬದಲಾವಣೆ ಮಾಡಿಕೊಳ್ಳಲಾಯಿತು. ಹಾಗೂ  ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಂಘದ ನೂತನ ಅಧ್ಯಕ್ಷರಾಗಿ ಸುಬ್ರಹ್ಮಣ್ಯದ ಎಸ್ ಎಸ್ ಪಿ...

ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ  ಡಾ. ಕುರುಂಜಿ ವೆಂಕಟ್ರಮಣ ಗೌಡರ ಪುಣ್ಯಸ್ಮರಣೆ

                      ಆಧುನಿಕ ಸುಳ್ಯದ  ಶಿಲ್ಪಿ, ಸುಳ್ಯವನ್ನು ಶಿಕ್ಷಣ  ಕಾಶಿಯನ್ನಾಗಿಸಿದ  ಡಾ. ಕುರುಂಜಿ ವೆಂಕರಮಣ ಗೌಡರ  10 ನೇ ಪುಣ್ಯಸ್ಮರಣೆಯನ್ನು ಪುಷ್ಪಾ ರ್ಚನೆ  ಮತ್ತು ನುಡಿ ನಮನ ಮೂಲಕ ಸ್ಮರಣೆ ಮಾಡಲಾಯಿತುಕೆವಿಜಿ ಸುಳ್ಯ ಹಬ್ಬ ಸಮಿತಿ ಅಧ್ಯಕ್ಷ ಚಂದ್ರಶೇಖರ  ಪೇರಾಲ್, ಪ್ರದಾನ ಕಾರ್ಯದರ್ಶಿ ದಿನೇಶ್ ಅಂಬೆಕಲ್ಲು, ಕೋಶಾಧಿಕಾರಿ ಜನಾರ್ಧನ  ನಾಯ್ಕ್, ಪೂರ್ವಾಧ್ಯಕ್ಷ ರುಗಳಾದ ನಿತ್ಯಾನಂದ ಮುಂಡೋಡಿ, ದೊಡ್ಡಣ್ಣ ಬರಮೇಲು,...

ಅರಂತೋಡು : ಪಾದಾಚಾರಿಗೆ ಕಾರು ಡಿಕ್ಕಿ – ಗಾಯಾಳು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತ್ಯು

ಪಾದಾಚಾರಿಗೆ ಓಮಿನಿ ಕಾರು ಡಿಕ್ಕಿ ಹೊಡೆದು ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಅರಂತೋಡಿನಿಂದ ಇಂದು ವರದಿಯಾಗಿದೆ. ಮೀನು ವ್ಯಾಪಾರಕ್ಕೆಂದು ಹೋಗುತ್ತಿದ್ದ ಓಮಿನಿ ಕಾರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಉಳುವಾರು ನಿವಾಸಿ ತೀರ್ಥರಾಮ ಎಂಬುವರಿಗೆ ಡಿಕ್ಕಿ ಹೊಡೆದಿದೆ. ತಲೆಗೆ ಗಂಭೀರ ಗಾಯಗಳಾಗಿದ್ದ ಅವರನ್ನು ಕೂಡಲೇ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಕೆವಿಜಿ...

ಐವರ್ನಾಡು : ಮೀನು ಕೃಷಿಕರಿಗೆ ಸಿಹಿನೀರು ಮುತ್ತು ಕೃಷಿ ತರಬೇತಿ

ಐವರ್ನಾಡು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಮೀನು ಕೃಷಿಕರಿಗೆ ಸಿಹಿನೀರು ಮುತ್ತು ಕೃಷಿ ತರಬೇತಿ ಕಾರ್ಯಕ್ರಮ ಆ.7 ರಂದು ನಡೆಯಿತು. ಶಾಸಕಿ ಕು. ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಾಲಕೃಷ್ಣ ಕೀಲಾಡಿ, ಪಿಡಿಓ ಶ್ಯಾಮಪ್ರಸಾದ್ ಉಪಸ್ಥಿತರಿದ್ದರು. ತರಬೇತುದಾರರಾಗಿ ಡಾ. ಸುಪ್ರೀತಾ ಬಿ ಯು ಮತ್ತು ಮೀನುಗಾರಿಕೆ ಕಾಲೇಜಿನ ಸಹಾಯಕ...

ಸುಬ್ರಹ್ಮಣ್ಯ : ಇನ್ನರ್ ವ್ಹೀಲ್ ಕ್ಲಬ್ ಪದಗ್ರಹಣ

ಸುಬ್ರಹ್ಮಣ್ಯ ರೋಟರಿ ಕ್ಲಬ್ ಪ್ರಾಯೋಜಿತ ಇನ್ನರ್ ವ್ಹೀಲ್  ಕ್ಲಬ್ ನ ಪದಗ್ರಹಣ ಸಮಾರಂಭವು ಜುಲೈ 22ರಂದು ಇಂಜಾಡಿಯ ಮಹಮ್ಮಾಯ ರೆಸಿಡೆನ್ಸಿ ಸಭಾಂಗಣದಲ್ಲಿ ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ಕ್ಲಬ್ಬಿನ ಅಧ್ಯಕ್ಷ ಮಾಲಪ್ಪ ವಹಿಸಿದ್ದರು. ಇನ್ನರ್ ವ್ಹೀಲ್ ಕ್ಲಬ್ 2022 23ನೇ ಸಾಲಿನಲ್ಲಿ ನಡೆಸಿದ ವಿವಿಧ ಕಾರ್ಯಕ್ರಮಗಳ ವರದಿಯನ್ನು ಕಾರ್ಯದರ್ಶಿ ಸೌಮ್ಯ ದಿನೇಶ್ ವಾಚಿಸಿದರು ಅಧ್ಯಕ್ಷೆ ಸರೋಜಾ ಮೈಲಪ್ಪ  ರವರು...
Loading posts...

All posts loaded

No more posts

error: Content is protected !!