- Friday
- August 28th, 2026
ಉತ್ತರಕನ್ನಡ ಜಿಲ್ಲೆ ಹೊನ್ನಾವರದ ಮಹಿಳೆಯೊಬ್ಬರು ನಿನ್ನೆ ಸಂಜೆ ಸುಳ್ಯ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದು, ಪೋಲೀಸರಿಗೆ ಆಕೆಯನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಿಸಿದರೂ ಯಾವುದೇ ಮಾಹಿತಿ ಆಕೆ ನೀಡುತ್ತಿರಲಿಲ್ಲ. ರಾತ್ರಿಯಾದುದರಿಂದ ಪೋಲೀಸರು ಆಕೆಯನ್ನು ಸುಳ್ಯದ ಸಾಂತ್ವನ ಕೇಂದ್ರಕ್ಕೆ ಸೇರಿಸಿದರು.ಮಹಿಳೆ ಹೊನ್ನಾವರದರೆಂದು ಆಕೆಯ ಆಧಾರ್ ಕಾರ್ಡ್ ನಿಂದ ಗೊತ್ತಾಗಿ ಅವರ ಮನೆಯವರ ಹುಡುಕಾಟ ನಡೆಸಲಾಗಿತ್ತು. ಮನೆಯವರು ಯಾರೆಂದು ಗೊತ್ತಾಗಿ...
ಆಲೆಟ್ಟಿ ಗ್ರಾಮದ ನಾಗಪಟ್ಟಣ ಸಿ.ಆರ್.ಸಿ ಕಾಲನಿಯ ಯವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.ನಾಗಪಟ್ಟಣ ಸಿ .ಆರ್ .ಸಿ ಕಾಲನಿ ನಿವಾಸಿ ಮಣಿಕಂಠ ಎಂಬ ಯುವಕ ಸೋಮವಾರ ರಾತ್ರಿ ಮನೆಗೆ ಬಂದು ಬೈಕ್ ನಿಲ್ಲಿಸಿ ತಾಯಿಯ ಸೀರೆಯನ್ನು ತೆಗೆದುಕೊಂಡು ಹೋಗಿ ಸಮೀಪದ ಅಂಗನವಾಡಿ ಬಳಿಯ ಮಾವಿನಮರಕ್ಕೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.ಮಣಿಕಂಠ ಕಳೆದ...
ಸುಳ್ಯದ ಶಾಂತಿನಗರದಲ್ಲಿ ಕಾಮಗಾರಿ ನಡೆಯುತ್ತಿರುವ ತಾಲೂಕು ಕ್ರೀಡಾಂಗಣಕ್ಕೆ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಪುತ್ತೂರು ವಿಭಾಗದ ಸಹಾಯಕ ಕಮಿಷನರ್ ಗಿರೀಶ್ ನಂದನ್ ರವರು ಜೂ.19ರಂದು ಭೇಟಿ ನೀಡಿ ಕಾಮಗಾರಿಯ ವೀಕ್ಷಣೆ ಮಾಡಿ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡರು.ಕಾಮಗಾರಿಯನ್ನು ವೀಕ್ಷಿಸಿದ ಶಾಸಕರು ಕ್ರೀಡಾಂಗಣದ ಒಂದು ಭಾಗದಲ್ಲಿ ಹಾಕಿರುವ ಮಣ್ಣಿನಿಂದ ಸ್ಥಳೀಯ ಜನತೆ ಆತಂಕದಲ್ಲಿದ್ದು ಮಳೆಗಾಲದಲ್ಲಿ...
ಸುಳ್ಯದಲ್ಲಿ ನಿರ್ಮಾಣ ಹಂತದಲ್ಲಿರುವ ತಾಲೂಕು ಅಂಬೇಡ್ಕರ್ ಭವನ ಕಾಮಗಾರಿಯನ್ನು ಶಾಸಕಿ ಕು.ಭಾಗೀರಥಿ ಮುರುಳ್ಯ ಜೂನ್ .20 ರಂದು ಪರಿಶೀಲನೆ ನಡೆಸಿದರು.ಕಟ್ಟಡದ ಕುರಿತು ನಿರ್ಮಿತಿ ಕೇಂದ್ರದ ಇಂಜಿನಿಯರ್ ಹರೀಶ್ ಮೆದು ಅವರಿಂದ ಮಾಹಿತಿ ಪಡೆದರು. ಬಳಿಕ ಮಾತನಾಡಿದ ಶಾಸಕರು ವಾರದೊಳಗೆ ಕಾಮಗಾರಿಯನ್ನು ಆರಂಭಿಸಿ ಮುಂದಿನ 6 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ಈಗ ಇರುವ ಅನುದಾನದಲ್ಲಿ ಕೆಲಸ ನಿರ್ವಹಿಸಿ,...
ಮುಂಬೈಯ ಭ್ರಾಮರಿ ಯಕ್ಷ ನೃತ್ಯ ಕಲಾ ನಿಲಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೀಡಲಾಗುವ ಅರಣ್ಯ ಬ್ರಹ್ಮ ಪ್ರಶಸ್ತಿಗೆ ಗ್ರೀನ್ ಹೀರೋ ಆಫ್ ಇಂಡಿಯಾ ಡಾ.ಆರ್. ಕೆ. ಭಾಜನರಾಗಿದ್ದು, ಮುಂಬೈಯಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು
ರಕ್ತದಾನಿ, ಸುಳ್ಯ ತಾಲೂಕು ರೆಡ್ ಕ್ರಾಸ್ ಸಭಾಪತಿ ಸುಧಾಕರ ರೈ ಅವರ ಕಾರು ಅಪಘಾತ, ಸುಧಾಕರ ರೈ ಅವರು ಅಪಾಯದಿಂದ ಪಾರುಖ್ಯಾತ ರಕ್ತದಾನಿಗಳಾದ ಸುಳ್ಯ ತಾಲೂಕು ರೆಡ್ ಕ್ರಾಸ್ ಸಭಾಪತಿ ಹಾಗೂ ಸುಳ್ಯ ತಾಲೂಕು ವರ್ತಕರ ಸಂಘದ ಅಧ್ಯಕ್ಷರಾದ ಸುಧಾಕರ ರೈ ಅವರ ಕಾರು ಜೂ.19 ರಂದು ಪುತ್ತೂರಿನ ಕುಂಬ್ರದ ಬಳಿ ಅಪಘಾತಗೊಂಡಿದ್ದು, ಕಾರು ಜಂಖಂಗೊಂಡಿದ್ದು,...
ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.19 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ಹಾಗೂ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಇವುಗಳ ಆಶ್ರಯದಲ್ಲಿ ಪರಿಸರ ಕಾರ್ಯಕ್ರಮ ನಡೆಯಿತು. ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಬ್ರಹ್ಮಣ್ಯ ವಲಯಾಧ್ಯಕ್ಷರಾದ ತೀರ್ಥರಾಮ ದೋಣಿಪಳ್ಳ ಕಾರ್ಯಕ್ರಮದ...
ಶ್ರೀ ವೇದವ್ಯಾಸ ವಿದ್ಯಾಲಯ ಬಿಳಿನೆಲೆ ಶಾಲಾ ಮಂತ್ರಿಮಂಡಲ ರಚನೆ; ಶಾಲಾ ನಾಯಕನಾಗಿ ಪ್ರಣಿತ್ ಎಂ ಆರ್, ಉಪನಾಯಕನಾಗಿ ಸೃಜನ್
ಪ್ರಣಿತ್ ಎಂ ಆರ್ ಸೃಜನ್ ಶ್ರೀ ವೇದವ್ಯಾಸ ವಿದ್ಯಾಲಯ ಬಿಳಿನೆಲೆ ಶಾಲಾ ಮಂತ್ರಿಮಂಡಲವನ್ನು ರಚಿಸಲಾಯಿತು. ಶಾಲಾ ನಾಯಕನಾಗಿ 8ನೇ ತರಗತಿಯ ಪ್ರಣಿತ್ ಎಂ ಆರ್ ಉಪನಾಯಕನಾಗಿ 7ನೇ ತರಗತಿಯ ಸೃಜನ್ ರನ್ನು ಆಯ್ಕೆ ಮಾಡಲಾಯಿತು. ಶಿಕ್ಷಣ ಮಂತ್ರಿಯಾಗಿ ನಿಷ್ಮಾ 8ನೇ ತರಗತಿ, ಉಪ ಶಿಕ್ಷಣ ಮಂತ್ರಿಯಾಗಿ ಅನ್ವಿತ 7ನೇ ತರಗತಿ, ಸಾಂಸ್ಕೃತಿಕ ಮಂತ್ರಿಯಾಗಿ ದಿಶಾ 7ನೇ...
ಕಡಬದ ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ಅಬಾಕಸ್ ಗಣಿತ ತರಬೇತಿಯ ಉದ್ಘಾಟನಾ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ಪ್ರಾಂಶುಪಾಲರಾದ ವಂದನೀಯ ಫಾದರ್ ಅಮಿತ್ ಪ್ರಕಾಶ್ ರೋಡ್ರಿಗಸ್ ರವರು ವಹಿಸಿ ಮಾತನಾಡಿ ಅಬಾಕಸ್ ತರಗತಿಯನ್ನು ನಮ್ಮ ವಿದ್ಯಾರ್ಥಿಗಳಿಗೆ ನೀಡುವುದರಿಂದ ವಿದ್ಯಾರ್ಥಿಗಳ ಬುದ್ದಿ ಶಕ್ತಿ...
ಅಕ್ರಮ ಗೋಸಾಗಾಟ ಅರೋಪದಲ್ಲಿ ಬೆಳ್ಳಾರೆ ಪೊಲೀಸರು ಇಬ್ಬರನ್ನು ಬಂಧಿಸಿ ಹಾಗೂ ಇಬ್ಬರು ಪರಾರಿಯಾಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಮೂರು ಗಂಡು ಕರುಗಳು, ಆಕ್ಟಿವಾ ಸ್ಕೂಟರ್, ಪಿಕಪ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೂ.18ರಂದು ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಮೂವಪ್ಪೆ ಎಂಬಲ್ಲಿ ಬೆಳ್ಳಾರೆ ಪೊಲೀಸ್ ಠಾಣಾ ಪಿಎಸ್ಐ ಸುಹಾಸ್ ಆರ್ ಹಾಗೂ ಸಿಬ್ಬಂದಿಗಳು ಕರ್ತವ್ಯ...
Loading posts...
All posts loaded
No more posts
