- Thursday
- August 27th, 2026
ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ‘ಗೃಹ ಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗೃಹ ಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸಲಾಗುವುದು. ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ...
ಗುತ್ತಿಗಾರಿನಲ್ಲಿ ತರಕಾರಿ ವ್ಯಾಪಾರಸ್ಥರಾಗಿರುವ ಹೊನ್ನಮೂಲೆ ಚಿನ್ನಪ್ಪ ಗೌಡ ಅವರಿಗೆ ಇತ್ತೀಚೆಗೆ ರಸ್ತೆ ಅಪಘಾತದಿಂದ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ನೆರವಾಗುವ ಹಿನ್ನೆಲೆಯಲ್ಲಿ ಗುತ್ತಿಗಾರಿನ ವರ್ತಕರ ಸಂಘದ ವತಿಯಿಂದ ರೂ. 20650 ನ್ನು ನೀಡಲಾಯಿತು.
ವಿಜಯಕರ್ನಾಟಕ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ ಬಣ್ಣ ಹಚ್ಚಿ ಪ್ಲಾಸ್ಟಿಕ್ ಮುಕ್ತ ಪರಿಸರ ಎಂಬ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಧನ್ವಿತ್.ಎ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.
ಕೆವಿಜಿ ದಂತ ಮೆಡಿಕಲ್ ಕಾಲೇಜು,ಕೆವಿಜಿ ಇಂಜಿನಿಯರಿಂಗ್ ಕಾಲೇಜು,ಕೆವಿಜಿ ಪಾಲಿಟೆಕ್ನಿಕ್, ಕೆವಿಜಿ ಐಟಿಐ, ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸುಳ್ಯಘಟಕ ಇವುಗಳ ಸಂಯುಕ್ತ ಆಶ್ರಯ ದಲ್ಲಿ ಇಂದು ಕೆವಿಜಿ ದಂತ ಮಹಾ ವಿದ್ಯಾಲಯ ಸಭಾಂಗಣ ದಲ್ಲಿವಿಶ್ವರಕ್ತ ದಾನಿಗಳ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಬೃಹತ್ ರಕ್ತದಾನ ಶಿಬಿರ ಡಾ.ಕೆ.ವಿ.ರೇಣುಕಾಪ್ರಸಾದ್ ಉದ್ಘಾಟಿಸಿ ಶುಭಹಾರೈಸಿದರು.ಅಧ್ಯಕ್ಷತೆಯನ್ನು ವಹಿಸಿದ್ದ ರೆಡ್ ಕ್ರಾಸ್ ಸುಳ್ಯ...
ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು, ಕೆ.ವಿ.ಜಿ ಡೆಂಟಲ್ ಕಾಲೇಜು ಮತ್ತು ಅಸ್ಪತ್ರೆ, ಕೆ.ವಿ.ಜಿ. ಪಾಲಿಟೆಕ್ನಿಕ್, ಕೆ.ವಿ.ಜಿ. ಐಟಿಐ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸುಳ್ಯ ಯುನಿಟ್ ಇವುಗಳ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರ ಇಂದು ಕೆ.ವಿ.ಜಿ. ಡೆಂಟಲ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಕೆ.ವಿ.ಜಿ. ಚಾರಿಟೇಬಲ್ ಟ್ರಸ್ಟ್ನ ವ್ಯವಸ್ಥಾಪಕ ನಿರ್ದೇಶಕ ಮತ್ತು ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಡಾ....
ಸುಳ್ಯ ತಾಲೂಕು ಪಿಂಚಣಿ ದಾರರ ಮತ್ತು ನಿವೃತ್ತ ನೌಕರರ ಸಂಘ (ರಿ) ಇದರ 2022 – 23ನೇ ಸಾಲಿನ ವಾರ್ಷಿಕ ಮಹಾಸಭೆ ಜೂ.13ರಂದು ಸುಳ್ಯ ಸಂಧ್ಯಾ ರಶ್ಮಿ ಸಭಾಭವನದಲ್ಲಿ ನಡೆಯಿತು. ಸಭೆ ಸಮಾರಂಭದಲ್ಲಿ ಸಂಘದ ಸದಸ್ಯೆ ಎಂ.ವಿ ಗಿರಿಜಾ ಪ್ರಾರ್ಥನಾ ಗೀತೆಯನ್ನು ಹಾಡಿದರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಡಾ. ಎಸ್ ರಂಗಯ್ಯ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ...
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಶಿವಕೃಪ ಕಲಾ ಮಂದಿರದಲ್ಲಿ ನಡೆಯಿತು, ತರಬೇತಿಯನ್ನು ಜಿಲ್ಲಾ ಕಾಂಗ್ರೆಸ್ ನಾಯಕರಾದ ಲಾರೆನ್ಸ್ ಡಿಸೋಜಾ ಹಾಗೂ ಶುಭಾಷ್ ಕೊಲ್ನಾಡ್ ನೀಡಿದರುಸಭಾಧ್ಯಕ್ಷತೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ ಜಯರಾಮ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಜಯಪ್ರಕಾಶ್ ರೈ, ಪ್ರಚಾರ ಸಮಿತಿ ಅಧ್ಯಕ್ಷರಾದ ಸದಾನಂದ ಮಾವಜಿ, ಕೆ.ಪಿ.ಸಿ.ಸಿ ವಕ್ತಾರರಾದ ಟಿ.ಎಂ ಶಾಹೀದ್,...
ಡಾ. ಕೆ. ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ, ಪೆರುವಾಜೆ ಇಲ್ಲಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವತಿಯಿಂದ ಗ್ರಾಮೀಣ ಸಮುದಾಯ ಶಿಬಿರವನ್ನು ಮೇ 23ರಿಂದ 27ರ ವರೆಗೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಊರುಕೇರಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಊರುಕೇರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಪ್ರಕಾಶ್ ಶಾನುಭಾಗ್ ಇವರು...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಡಪ್ಪಾಡಿ ಇಲ್ಲಿ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಆರು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಮುಖ್ಯೋಪಾಧ್ಯಾಯರಾಗಿ ಪದೋನ್ನತಿಗೊಂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಮುಖ್ಯೋಪಾಧ್ಯಾಯರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀ ಚಂದ್ರಶೇಖರ್ ಪಾರೆಪ್ಪಾಡಿ ಇವರ ಬೀಳ್ಕೊಡುಗೆ ಸಮಾರಂಭವನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಿರಿಯ ವಿದ್ಯಾರ್ಥಿಗಳ ಸಂಘ...
ಸುಳ್ಯ ತಾಲೂಕು ಕಾರ್ಯನಿತ ಪತ್ರಕರ್ತರ ಸಂಘಕ್ಕೆ 25 ವರ್ಷ ಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಬೆಳ್ಳಿ ಹಬ್ಬ ಕಾರ್ಯಕ್ರಮವನ್ನು ಆಚರಿಸಲು ನಿರ್ಧರಿಸಲಾಗಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಮಿತಿ ರಚಿಸಲಾಗಿದೆ.ಜು.19 ರಂದು ಮಾಧ್ಯಮ ವಿಚಾರ ಸಂಕಿರಣ, ಸುಳ್ಯ ಮೂಲದ ಪತ್ರಕರ್ತರ ಸಮ್ಮಿಲನ, ಸನ್ಮಾನ , ಸಾಂಸ್ಕೃತಿಕ ಸಹಿತ ಒಂದು ದಿನದ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದು, ವಿವಿಧ ಕ್ಷೇತ್ರಗಳ ಗಣ್ಯರು ಸಮಾರಂಭದಲ್ಲಿ...
Loading posts...
All posts loaded
No more posts
