ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಆರಂತೋಡಿಗೆ ಭೇಟಿ

ಸುಳ್ಯ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಜಿ.ಕೃಷ್ಣಪ್ಪ ರವರು ಇಂದು ಅರಂತೋಡಿಗೆ ಭೇಟಿ ನೀಡಿ ಆ ಭಾಗದ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಅಧ್ಯಕ್ಷ ಪಿ.ಸಿ. ಜಯರಾಮ್, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಸದಾನಂದ ಮಾವಜಿ, ಎನ್ ಎಸ್ ಯು ಐ ಅಧ್ಯಕ್ಷರಾದ ಕೀರ್ತನ್ ಕೊಡಪಾಲ ಹಾಗೂ ಅರಂತೋಡಿನ ಕಾರ್ಯಕರ್ತರು ಉಪಸ್ಥಿತರಿದ್ದರು.

ಸುಬೇದಾರ್ ಏಕನಾಥ ಶೆಟ್ಟಿಗೆ ಕೆದಂಬಾಡಿ ರಾಮಯ್ಯ ಗೌಡ ಶೌರ್ಯ ಪ್ರಶಸ್ತಿ ಪ್ರದಾನ

ಕೆದಂಬಾಡಿ ರಾಮಯ್ಯ ಗೌಡ ಅವರ ನೇತೃತ್ವದಲ್ಲಿ ನಡೆದಿದ್ದ ಅಮರಸುಳ್ಯ ಹೋರಾಟದ ವಿಷಯ ಪಠ್ಯದಲ್ಲಿ ಸೇರ್ಪಡೆಗೊಂಡು ಯುವ ಪೀಳಿಗೆಗೆ ಪ್ರೇರಣೆಯಾಗಲಿದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಮಹಾಸ್ವಾಮೀಜಿ ಹೇಳಿದರು.ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ ಮಂಗಳೂರು ವತಿಯಿಂದ ನಗರದಲ್ಲಿ ಬುಧವಾರ ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮ ಸಂಸ್ಮರಣಾ ದಿನಾಚರಣೆ,...
Ad Widget

ಸುಬ್ರಹ್ಮಣ್ಯ:ದರ್ಪಣ ತೀರ್ಥ ನದಿಯಲ್ಲಿ ಸತ್ತು ಬಿದ್ದಿರುವ ಮೀನುಗಳು, ಸ್ನಾನ ಘಟ್ಟವನ್ನು ಸೇರುತ್ತಿದೆ ಕಲುಷಿತ ನೀರು

ಸುಬ್ರಹ್ಮಣ್ಯದ ಪ್ರಸಿದ್ಧ ಉಪನದಿ ದರ್ಪಣ ತೀರ್ಥ ನದಿಯಲ್ಲಿ ಸಾವಿರಾರು ಮೀನುಗಳು ಸತ್ತಿರುವ ಘಟನೆ ಎ.5 ರಂದು ವರದಿಯಾಗಿದೆ. ಒಂದು ಕಡೆ ನೀರಿನ ಹರಿವಿನ ಪ್ರಮಾಣ ಕಡಮೆಯಾಗಿರುವುದು ಹಾಗೂ ನೀರಿಗೆ ಡ್ರೈನೇಜ್ ನೀರು ಸೇರುತ್ತಿರುವುದು ಕಂಡು ಬಂದಿದ್ದು ಇದರಿಂದ ಸಾವಿರಾರು ಜಲಚರಗಳು ಸತ್ತಿರುವುದು ಕಂಡು ಬಂದಿದೆ. ಮೀನುಗಳು ಸತ್ತು ತೆಲುತ್ತಿದೆ. ಇದರಿಂದಾಗಿ ಭಾರಿ ವಾಸನೆಯೂ ಬರುತ್ತಿದೆ. ನದಿಯ...

ಗುತ್ತಿಗಾರು : ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಜೀವನ ಶಿಕ್ಷಣ ಮಾಹಿತಿ ಕಾರ್ಯಗಾರ

ಏ.05 ರಂದು ಗುತ್ತಿಗಾರು ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಜೀವನ ಶಿಕ್ಷಣ ಮಾಹಿತಿ ಕಾರ್ಯಗಾರ ಏರ್ಪಡಿಸಲಾಗಿತ್ತು.ಮಾಹಿತಿಯನ್ನು ಜೀವನ ಶಿಕ್ಷಣ ತರಬೇತುದಾರರಾದ ಲೋಕೇಶ್ ಪೀರನಮನೆ ನಡೆಸಿಕೊಟ್ಟರು.ಕಂಪ್ಯೂಟರ್ ತರಬೇತಿಯ ಜೊತೆಗೆ ವಿದ್ಯಾರ್ಥಿಗಳಿಗೆ ಕೌಶಲ್ಯಾಧಾರಿತ ಚಟುವಟಿಕೆಗಳ ಬಗ್ಗೆ ಶ್ರೀ ದುರ್ಗಾ ಕಂಪ್ಯೂಟರ್ ನ ಮಾಲಕಿ ಶ್ರೀಮತಿ ದಿವ್ಯ ಸುಜನ್ ಗುಡ್ಡೆಮನೆ ಮಾಹಿತಿ ನೀಡಿದರು.ಕಂಪ್ಯೂಟರ್ ಶಿಕ್ಷಕಿ ಯಶಸ್ವಿ ಗಿರೀಶ್...

ಬೆಳ್ಳಾರೆ ಒತ್ತೆಕೋಲ : ಪೂರ್ವಭಾವಿ ಸಭೆ

ಏ. 7-8ರಂದು ಬೆಳ್ಳಾರೆಯ ಅಜಪಿಲ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ನಡೆಯಲಿದ್ದು, ಈ ಬಗ್ಗೆ ಅಂತಿಮ ಪೂರ್ವಭಾವಿ ಸಭೆ ಏ. 5ರಂದು ಅಜಪಿಲ ಒತ್ತೆಕೋಲ ಗದ್ದೆಯಲ್ಲಿ ನಡೆಯಿತು. ಸಮಿತಿಯ ಅಧ್ಯಕ್ಷರಾದ ಶೇಷಪ್ಪ ಕುಲಾಲ್ ಬಸ್ತಿಗುಡ್ಡೆ, ಗೌರವಾಧ್ಯಕ್ಷರಾದ ಆನಂದ ರೈ ಪುಡ್ಕಜೆ, ಕೋಶಾಧಿಕಾರಿ ವಸಂತ ಪಡ್ಪು, ನಿಕಟಪೂರ್ವಾಧ್ಯಕ್ಷ ಆನಂದ ಗೌಡ ಪಡ್ಪು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಮಿತಿಯ...

ಮರ್ಕಂಜ : ಜಲ ಜೀವನ್ ಯೋಜನೆ ಅಪೂರ್ಣ – ಕುಡಿಯುವ ನೀರಿಗೆ ಸಂಕಷ್ಟ – ರಾತ್ರೋರಾತ್ರಿ ತುರ್ತು ಸ್ಪಂದಿಸಿದ ಗ್ರಾ.ಪಂ. ಸದಸ್ಯ

ಮರ್ಕoಜ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಜನ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮದ ಅಜ್ಜಿಕಲ್ ಭಾಗದಲ್ಲಿ 3 ಮನೆಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗಿತ್ತು. ಇದಕ್ಕೆ ತುರ್ತಾಗಿ ಸ್ಪಂದಿಸಿದ ಪಂಚಾಯತ್ ಸದಸ್ಯ ಚಿತ್ತರಂಜನ್ ಕೋಡಿಯವರು ರಾತ್ರೋರಾತ್ರಿ ಮನೆ ಮನೆಗೆ ರಾಜೇಶ್ ಬೇರಿಕೆಯವರ ಪಿಕಪ್ ವಾಹನ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದಾರೆ. ಮೋಹನ್ ನಾಯ್ಕ್...

ತೆಕ್ಕಿಲ್ ಮೊಯಿದೀನ್ ಕುಂಞಿ ಹಾಜಿ ನಿಧನಕ್ಕೆ ಎಸ್.ಡಿ.ಪಿ.ಐ. ಸಂತಾಪ

ಪ್ರತಿಷ್ಟಿತ ತೆಕ್ಕಿಲ್ ಮನೆತನದ ಖ್ಯಾತ ಉದ್ಯಮಿ, ದಿವಂಗತ ತೆಕ್ಕಿಲ್ ಮೊಹಮದ್ ಹಾಜಿ ಯವರ ಪುತ್ರ, ಕೊಡುಗೈ ದಾನಿ ತೆಕ್ಕಿಲ್ ಮೊಯಿದೀನ್ ಕುಂಞಿ ಹಾಜಿ ಯವರು ನಿಧನರಾಗಿರುತ್ತಾರೆ, ಇವರ ನಿಧನಕ್ಕೆ ಎಸ್‌ಡಿಪಿಐ ಸಂಪಾಜೆ ಗ್ರಾಮ ಸಮಿತಿಯು ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ ಎಂದು ಸಂಪಾಜೆ ಗ್ರಾಮ ಸಮಿತಿ ಅಧ್ಯಕ್ಷ ಅಶ್ರಫ್ ಟರ್ಲಿಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಬ್ರಹ್ಮಣ್ಯದಲ್ಲಿ ಗುಡುಗು ಸಹಿತ ಮಳೆ

https://youtube.com/shorts/4vqRaSBSpMc?feature=share ಸುಬ್ರಹ್ಮಣ್ಯ ಭಾಗದಲ್ಲಿ ಇಂದು ಸಂಜೆ ಗುಡುಗು ಸಹಿತ ಮಳೆ ಸುರಿದಿದ್ದು, ಬಿಸಿಲಿನ ಕಂಗೆಟ್ಟಿದ್ದ ಜನ ಸ್ವಲ್ಪ ನಿಟ್ಟುಸಿರು ಬಿಡುವಂತಾಗಿದೆ.

ಡಾ. ಅನುರಾಧಾ ಕುರುಂಜಿಯವರ ಭಾಷಣ ಆಕಾಶವಾಣಿಯಲ್ಲಿ ಪ್ರಸಾರ

ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರಾದ ಡಾ. ಅನುರಾಧಾ ಕುರುಂಜಿಯವರು ಪ್ರಸ್ತುತ ಪಡಿಸಿದ ಪ್ರಾದೇಶಿಕ ಭಾಷೆಗಳ ಬೆಳವಣಿಗೆ ಕುರಿತಭಾಷಣ ಸಾಧನಾ ಪಥ "ಸ್ವತಂತ್ರ ಭಾರತದ 75 ವರ್ಷಗಳ ಸಾಧನೆಯ ಪಕ್ಷಿ ನೋಟ" ಕಾರ್ಯಕ್ರಮದಲ್ಲಿ ಮಂಗಳೂರು ಆಕಾಶವಾಣಿಯಲ್ಲಿ ದಿನಾಂಕ 06-04-2023 ರಂದು ಬೆಳಿಗ್ಗೆ 6.45ಕ್ಕೆ ಬಿತ್ತರಗೊಳ್ಳಲಿದೆ. ಇದನ್ನು ಮಂಗಳೂರು ಆಕಾಶವಾಣಿಯ 100.3FM ನಲ್ಲಿ ಆಲಿಸಬಹುದು.

ತುಳು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಲಿ – ದೆಹಲಿಯ ಕರಾವಳಿ ಸಮಾವೇಶದಲ್ಲಿ ವಸಂತ ಶೆಟ್ಟಿ ಬೆಳ್ಳಾರೆ ಅಭಿಮತ

ʼತುಳು ಬಂಧುಗಳು ಎಂದಿಗೂ ಕನ್ನಡದ ವಿರೋಧಿಗಳಾಗಿರಲೇ ಇಲ್ಲ. ತುಳುವರು ಕನ್ನಡದ ಅಭಿವೃದ್ಧಿ ಗೆ ವಿಶೇಷವಾಗಿ ದುಡಿದಿದ್ದಾರೆ, ಅದನ್ನು ಕನ್ನಡಿಗರೂ ಗುರುತಿಸಿದ್ದಾರೆ. ತುಳು ಭಾಷೆಗೆ ಸಂವಿಧಾನದ ಎಂಟನೇ ಪರಿಚ್ಚೇದದದಲ್ಲಿ ಸ್ಥಾನ ಸಿಗಬೇಕೆಂಬ ತುಳುವರ ಬೇಡಿಕೆಯನ್ನು ಕರ್ನಾಟಕ ಸರಕಾರವೇ ಶಿಫಾರಸ್ಸಿನೊಂದಿಗೆ ಕೇಂದ್ರ ಸರಕಾರಕ್ಕೆ ಕಳಿಸಿಕೊಟ್ಟಿದೆ. ದೆಹಲಿ ತುಳು ಸಿರಿ ಯೂ ಅದಕ್ಕಾಗಿ ಹೋರಾಟ ನಡೆಸುತ್ತಲೇ ಬಂದಿದೆ. ಆದರೆ ಇದೀಗ...
Loading posts...

All posts loaded

No more posts

error: Content is protected !!