ಮಾ.30ರಂದು ರೋಟರಿ ಕ್ಲಬ್ ಸುಳ್ಯ ಸಿಟಿಗೆ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ: ಡಾ.ರಘುರಾಮ ಮಾಣಿಬೆಟ್ಟು ಅವರಿಗೆ ರೋಟರಿ ಜೀವಮಾನ ಸಾಧಕ ಪ್ರಶಸ್ತಿ ಪ್ರದಾನ ಸಮಾರಂಭ

ಸುಳ್ಯ:ರೋಟರಿ ಕ್ಲಬ್ ಸುಳ್ಯ ಸಿಟಿಗೆ ರೋಟರಿ ಕ್ಲಬ್ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಅವರ ಅಧಿಕೃತ ಭೇಟಿ ಕಾರ್ಯಕ್ರಮ ಮಾ. 30ರಂದು ನಡೆಯಲಿದೆ ಎಂದು ರೋಟರಿ ಕ್ಲಬ್ ಸುಳ್ಯ ಸಿಟಿ ಅಧ್ಯಕ್ಷ ಪಿ.ಮುರಳೀಧರ ರೈ ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರೋಟರಿ ಜಿಲ್ಲಾ ಗವರ್ನರ್ ಭೇಟಿ ಅಂಗವಾಗಿ ರೋಟರಿ ಸಮುದಾಯ ಭವನದಲ್ಲಿ...

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಗೆ 100 ವಸತಿಗೆ ಮಂಜೂರಾತಿ

ಸುಬ್ರಹ್ಮಣ್ಯ ಗ್ರಾಮ ಪಂಚಾಯಿತ್ ಗೆ ಬಸವ ವಸತಿ ಯೋಜನೆ ಅಡಿ 80 ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ನಿವಾಸ ಯೋಜನೆ ಅಡಿ 20 ಹೀಗೆ ಆರ್ಥಿಕವಾಗಿ ಹಿಂದುಳಿದ ಜನರಿಗಾಗಿ 100 ಮನೆಗಳನ್ನು ಕಟ್ಟಲು ಮಂಜೂರಾತಿ ನೀಡಲಾಗಿದೆ‌ ಎಂದು ತಿಳಿದು ಬಂದಿದೆ. ಒಬಿಸಿ, ಮೈನಾರಿಡಿ, ಇತರೇ ವರ್ಗದವರಿಗೆ ಸಿಗುವ ಬಸವ ವಸತಿ ಯೋಜನೆಯಲ್ಲಿ ಆಯ್ಕೆಯಾದವರಿಗೆ ₹120000 ದೊರೆತರೆ,...
Ad Widget

ಅರಂತೋಡು ಗ್ರಾಮ ಪಂಚಾಯತ್ ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ

ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪಾತ್ರವಾಗಿರುವ ಅರಂತೋಡು ಗ್ರಾಮ ಪಂಚಾಯತ್ ನ ಆಡಳಿತ ಮಂಡಳಿ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಸ್ವೀಕರಿಸಿದರು. ಇಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪುರಸ್ಕಾರ ಪ್ರದಾನ ಮಾಡಿದರು. ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಹರಿಣಿ ದೇರಾಜೆ, ಪಿ.ಡಿ.ಒ.ಜಯಪ್ರಕಾಶ್, ಸದಸ್ಯರುಗಳಾದ ಶಿವಾನಂದ...

ಕಂದ್ರಪ್ಪಾಡಿ ಅರೋಗ್ಯ ಮತ್ತು ಕ್ಷೇಮ ಕೇಂದ್ರ ಸೇವೆ ಪ್ರಾರಂಭ

ಸುಳ್ಯ ತಾಲೂಕು ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ ಕೇಂದ್ರವಾಗಿರಿಸಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಸೇವೆಯು ಕಂದ್ರಪ್ಪಾಡಿ ಅಂಗನವಾಡಿ ಕೇಂದ್ರದ ಎದುರುಗಡೆ ಇರುವ ದೇವಿದಾಸ್ ಕುತ್ಯಾಳ ಅವರ ಕಟ್ಟಡದಲ್ಲಿ ಪ್ರಾರಂಭವಾಗಿರುತ್ತದೆ. ಇಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಆಗಿ ಕು. ಧನ್ಯ ಕೆದ್ಕರ್ ಅವರು ನಿಯೋಜನೆಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದು ಸೇವೆಯಲ್ಲಿದ್ದಾರೆ.

ಪೆರಾಜೆ ಗ್ರಾಮ ಪಂಚಾಯತ್ ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ

ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪಾತ್ರವಾಗಿರುವ ಪೆರಾಜೆ ಗ್ರಾಮ ಪಂಚಾಯತ್ ನ ಆಡಳಿತ ಮಂಡಳಿ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಸ್ವೀಕರಿಸಿದರು.ಇಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪುರಸ್ಕಾರ ಪ್ರದಾನ ಮಾಡಿದರು.ಪೆರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಚಂದ್ರಕಲಾ ಬಳ್ಳಡ್ಕ, ಪಿ.ಡಿ.ಒ.ಮಹಾದೇವ ಪ್ರಭು,ಸದಸ್ಯರುಗಳಾದ ನಂಜಪ್ಪ ನಿಡ್ಯಮಲೆ,ಉದಯಚಂದ್ರ ಕುಂಬಳಚೇರಿ,...

ಕಳಂಜ ಗ್ರಾ.ಪಂ ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ

ಕಳಂಜ ಗ್ರಾ.ಪಂ ಗೆ 2019-20 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರವನ್ನು ಇಂದು ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು. ಗ್ರಾ.ಪಂ ಅಧ್ಯಕ್ಷ ಪ್ರಶಾಂತ್ ಕುಮಾರ್ ಕಿಲಂಗೋಡಿ, ಪಿಡಿಒ ಪದ್ಮಯ್ಯ, ಗ್ರಾ.ಪಂ ಸದಸ್ಯರುಗಳಾದ ಬಾಲಕೃಷ್ಣ ಬೇರಿಕೆ, ಕಮಲ, ಸುದಾ, ಪ್ರೇಮಲತಾ ಉಪಸ್ಥಿತರಿದ್ದರು.

ಕಾಂಕ್ರೀಟೀಕರಣಗೊಂಡ ಕಲ್ಮಕಾರು-ಮೆಂಟೆಕಜೆ-ಪಡ್ಪು ರಸ್ತೆ ಉದ್ಘಾಟಿಸಿದ ಸಚಿವ ಅಂಗಾರ

ಕಲ್ಮಕಾರು ಗ್ರಾಮದ ಕಲ್ಮಕಾರು-ಮೆಂಟೆಕಜೆ-ಪಡ್ಪು ರಸ್ತೆಯ ಸುಮಾರು ರೂ.80.00 ಲಕ್ಷ ಅನುದಾನದಲ್ಲಿ ನಡೆದ ಕಾಂಕ್ರೀಟ್ ರಸ್ತೆಯ ಕಾಮಗಾರಿಯನ್ನು ಸಚಿವರಾದ ಎಸ್. ಅಂಗಾರರವರು ಇಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸುಳ್ಯ ಬಿ.ಜೆ.ಪಿ ಮಂಡಲಾಧ್ಯಕ್ಷರಾದ ಹರೀಶ್ ಕಂಜಿಪಿಲಿ, ದ.ಕ. ಜಿಲ್ಲಾ ಬಿ.ಜೆ.ಪಿ ಉಪಾಧ್ಯಕ್ಷರಾದ ವೆಂಕಟ್ ವಳಲಂಬೆ, ಜಿಲ್ಲಾ ಬಿ.ಜೆ.ಪಿ ಪ್ರಧಾನ ಕಾರ್ಯದರ್ಶಿ ಕೇಶವ ಭಟ್ ಮುಳಿಯ,ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ...

ಪಂಬೆತ್ತಾಡಿ : ಹೃದಯಾಘಾತದಿಂದ ಯುವಕ ಮೃತ್ಯು

ಎದೆನೋವಿನಿಂದಾಗಿ ಆಸ್ಪತ್ರೆ ಸೇರಿದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಪಂಬೆತ್ತಾಡಿ ನಿಂದ ವರದಿಯಾಗಿದೆ. ಪಂಬೆತ್ತಾಡಿ ಗ್ರಾಮದ ಎದುರುಮಜಲು ಮಹಾಲಿಂಗ ನಾಯ್ಕ ರವರ ಪುತ್ರ ಜಗದೀಶ್ (33) ಮೃತ ಪಟ್ಟ ದುರ್ದೈವಿ. ಮೂರು ದಿನಗಳ ಹಿಂದೆ ಎದೆ ನೋವು ಕಾಣಿಸಿಕೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಾ.23ರಂದು ಕೊನೆಯುಸಿರೆಳೆದಿದ್ದಾರೆ. ಮೃತರು ಅವಿವಾಹಿತರಾಗಿದ್ದು...

ಕಲ್ಮಕಾರು : ನೂತನ ಸೇತುವೆ ನಿರ್ಮಾಣಕ್ಕೆ ಸಚಿವರಿಂದ ಗುದ್ದಲಿಪೂಜೆ – 2 ಕೋಟಿ ಅನುದಾನ ಮಂಜೂರು

ಕಲ್ಮಕಾರು ಗ್ರಾಮದ ಶೆಟ್ಟಿಕಟ್ಟ ಎಂಬಲ್ಲಿ ಬಹುಕಾಲದ ಬೇಡಿಕೆಯಾದ ಶೆಟ್ಟಿಕಟ್ಟ-ಬೈಲು ಸಂಪರ್ಕ ಸೇತುವೆಗೆ ರೂ. 2.00 ಕೋಟಿ ವೆಚ್ಚದಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಇಂದು ಗುದ್ದಲಿಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಸುಳ್ಯ ಬಿ.ಜೆ.ಪಿ ಮಂಡಲಾಧ್ಯಕ್ಷರಾದ ಹರೀಶ್ ಕಂಜಿಪಿಲಿ, ದ.ಕ. ಜಿಲ್ಲಾ ಬಿ.ಜೆ.ಪಿ ಉಪಾಧ್ಯಕ್ಷರಾದ ವೆಂಕಟ್ ವಳಲಂಬೆ, ಜಿಲ್ಲಾ...

ಕುಲ್ಕುಂದ : ಶ್ರೀ ಬಸವೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕುಲ್ಕುಂದ ಬಸವನಮೂಲೆ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಏಪ್ರಿಲ್ 19 ಮತ್ತು 20 ರಂದು ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಲಿದ್ದು, ಮಾ.24 ರಂದು ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ದೇವಳದ ಅಧ್ಯಕ್ಷರಾದ ಗಿರಿಧರ ಸ್ಕಂದ, ಪದ್ಮಯ್ಯ ಜಾಡಿಮನೆ, ಗಿರೀಶ್ ಆಚಾರ್ಯ ಕುಲ್ಕುಂದ, ಯತೀಶ್ ಪಳ್ಳಿಗದ್ದೆ, ಜಯಣ್ಣ ಪಳ್ಳಿಗದ್ದೆ, ಜಯಂತ್ ಕುದುರೆಮಜಲು, ಕವಿತಾ ಗಣೇಶ್, ಸೀನಪ್ಪ...
Loading posts...

All posts loaded

No more posts

error: Content is protected !!