ಮಲ್ಲಾರ ರಾಮಚಂದ್ರ ಗೌಡ ನಿಧನ

ಕಡಬ ತಾಲೂಕಿನ ಏನೆಕಲ್ಲು ಗ್ರಾಮದ ಮಲ್ಲಾರ ರಾಮಚಂದ್ರ ಗೌಡರು(59) ಮಾ.೪ ರಂದು ನಿಧನರಾದರು.ಇವರು ಕೆಲ ದಿನಗಳಿಂದ ಅಸೌಖ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮಾ.೪ರಂದು ನಿಧನರಾದರು. ಇವರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.

ದೊಡ್ಡಡ್ಕ : ಲಯನ್ಸ್ ಕ್ಲಬ್ ವತಿಯಿಂದ ನಿರ್ಮಿಸಿದ ನೂತನ ಬಸ್ ತಂಗುದಾಣ ಲೋಕಾರ್ಪಣೆ

ಸಂಪಾಜೆ ಗ್ರಾಮದ ದೊಡ್ಡಡ್ಕ ಮೊಗೇರ್ಕಳ ದೇವಸ್ಥಾನ ಬಳಿ ಲಯನ್ಸ್ ಕ್ಲಬ್ ವತಿಯಿಂದ ನಿರ್ಮಿಸಿದ ನೂತನ ಬಸ್ ತಂಗುದಾಣ ಲೋಕಾರ್ಪಣೆ ಕಾರ್ಯಕ್ರಮ ಇಂದು ನಡೆಯಿತು.
Ad Widget

ತೊಡಿಕಾನ : ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ನೇಮೋತ್ಸವ

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ದೊಡ್ಡಕುಮೇರಿ, ತೊಡಿಕಾನದಲ್ಲಿ ವಾರ್ಷಿಕ ನೇಮೋತ್ಸವ ನಡೆಯಿತು. ಇದರ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಸಚಿವರಾದ ಎಸ್. ಅಂಗಾರರವರು ಉದ್ಘಾಟಿಸಿದರು.*ಕಾರ್ಯಕ್ರಮದಲ್ಲಿ ಅರಂತೋಡು ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ, ಸುಳ್ಯ ಮಂಡಲ ಬಿಜೆಪಿ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕಿಶೋರ್...

ಗೂನಡ್ಕ ::ಶ್ರೀ ಆದಿಬ್ರಹ್ಮ ಮೊಗೇರ್ಕಳ ನೇಮೋತ್ಸವ

ಶ್ರೀ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನ, ರಾಜರಾಂಪುರ - ದೊಡ್ಡಡ್ಕ ದಲ್ಲಿ 42ನೇ ವರ್ಷದ ಶ್ರೀ ಆದಿಬ್ರಹ್ಮ ಮೊಗೇರ್ಕಳ ನೇಮೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಸಚಿವರಾದ ಎಸ್. ಅಂಗಾರರವರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ...

ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಸುಳ್ಯದಲ್ಲಿ ಭವ್ಯ ಸ್ವಾಗತ – ಅದ್ದೂರಿ ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿ

https://youtu.be/BuOrR0IMPWk ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಸುಳ್ಯದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಬಳಿಕ ನಡೆದ ಅದ್ದೂರಿ ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿಯಾದರು. ರ‌್ಯಾಲಿಯಲ್ಲಿ ಬಿಜೆಪಿ ಪ್ರಮುಖ ನಾಯಕರುಗಳಾದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಸಚಿವ ಅಂಗಾರ,ಈಶ್ವರಪ್ಪ, ಇಂಧನ ಸಚಿವ ಸುನಿಲ್ ಕುಮಾರ್, ಸ್ಥಳೀಯ ನಾಯಕರುಗಳು ಹಾಗೂ ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಫಲಾನುಭವಿಗಳಿಗೆ ಮೀನು ಮರಿ ವಿತರಿಸಿದ ಸಚಿವ ಎಸ್. ಅಂಗಾರ

ಮೀನು ಸಾಕಣಿಕೆಗೆ ಆಸಕ್ತ ಫಲಾನುಭವಿಗಳಿಗೆ ಇಂದು ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಮಡೆಂಜಿ ಮೀನು ಮರಿಗಳನ್ನು ಮೀನುಗಾರಿಕೆ ಸಚಿವರಾದ ಎಸ್. ಅಂಗಾರ ರವರು ವಿತರಿಸಿದರು. ಈ ಸಂದರ್ಭದಲ್ಲಿ ಸುಮಾರು ಐದು ಸಾವಿರ ಮೀನು ಮರಿಗಳನ್ನು ವಿತರಿಸಲಾಯಿತು.‌ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ. ತೀರ್ಥರಾಮ, ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮಹಾಶೀರ್ ಮತ್ಯ...

2 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿದೆ ನೂತನ ನಿರೀಕ್ಷಣಾ ಮಂದಿರ – ಶಂಕುಸ್ಥಾಪನೆ ನೆರವೇರಿಸಿದ ಸಚಿವ ಅಂಗಾರ

ಸುಮಾರು 2 ಕೋಟಿ ಅನುದಾನದಲ್ಲಿ ನಿರ್ಮಾಣ ಗೊಳ್ಳಲಿರುವ ನೂತನ ನಿರೀಕ್ಷಣಾ ಮಂದಿರ ಕಟ್ಟಡಕ್ಕೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಇಂದು ಶಂಕುಸ್ಥಾಪನೆ ನೆರವೇರಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ‌.ತೀರ್ಥರಾಮ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ, ಉಪಾಧ್ಯಕ್ಷರಾದ ಸರೋಜಿನಿ ಪೆಲ್ತಡ್ಕ, ಸದಸ್ಯರಾದ ಶ್ರೀಮತಿ...

ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಅಡುಗೆ ತಯಾರಿ

ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಅಡುಗೆ ತಯಾರಿ ಕಾರ್ಯಕ್ರಮ ನಡೆಯಿತು. ಪದಕ ನಿಮಿತ್ತ ಶಾಲಾ 8 ಪಟಾಲಂನಿಂದ ಸುಮಾರು 60ಕ್ಕೂ ಮಿಕ್ಕಿ ವಿವಿಧ ಬಗೆಯ ತಿಂಡಿ ತಿನಿಸುಗಳನ್ನು ಬೆಂಕಿ ಬಳಸಿ ಮತ್ತು ಬೆಂಕಿ ಬಳಸದೆ ತಯಾರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಭುವನೇಶ್ವರ್ , ಶಾಲಾ ನಿವೃತ್ತ ಮುಖ್ಯ...

ಕಾಟೂರು : ಚುನಾವಣಾ ಬಹಿಷ್ಕಾರದ ಬ್ಯಾನರ್ ಪತ್ತೆ

ಚುನಾವಣೆ ಹತ್ತಿರವಾಗುತ್ತಿದ್ದಂತೆ ವಿವಿಧೆಡೆ ಮತದಾನ ಬಹಿಷ್ಕಾರದ ಕೂಗು ಕೇಳಿಬರುತ್ತಿದ್ದು ಜಾಲ್ಸೂರು ಗ್ರಾಮದ ಕುಂಬರ್ಚೋಡಿನಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಪ್ರತ್ಯಕ್ಷವಾಗಿದೆ.ಕುಂಬರರ್ಚೋಡುವಿನಿಂದ ಕಾಟೂರು ಭಾಗಕ್ಕೆ ಸಂಪರ್ಕಿಸುವ ಕಾಟೂರು ಭಾಗದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳ ಆಗದ ಕಾರಣ ಚುನಾವಣಾ ಬಹಿಷ್ಕಾರದ ಬ್ಯಾನರನ್ನು ಹಾಕಿದ್ದಾರೆ.

ನಾಗಪಟ್ಟಣ ಸದಾಶಿವ ದೇವಸ್ಥಾನದ ವಾರ್ಷಿಕ ಮಹೋತ್ಸವಕ್ಕೆ ದೇಣಿಗೆ

ಸುಳ್ಯ ತಾಲೂಕು ಅಟೋ ರಿಕ್ಷಾ ಚಾಲಕರ ಸಂಘ (ಬಿ.ಎಂ.ಎಸ್) ದ ವತಿಯಿಂದ ನಾಗಪಟ್ಟಣ ಶ್ರೀ ಸದಾಶಿವ ದೇವಸ್ಥಾನದ ವಾರ್ಷಿಕ ಮಹೋತ್ಸವದ ಅನ್ನ ಸಂತರ್ಪಣೆಯ ಬಾಬ್ತು ದೇಣಿಗೆ ನೀಡಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಕೋಲ್ಚಾರು ರವರಿಗೆ ಸಂಘದ ಅಧ್ಯಕ್ಷ ರಾಧಾಕೃಷ್ಣ ರವರು ನಗದು ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಸಮಿತಿ ಸದಸ್ಯ ಬಾಬು ಗೌಡ ಕಡೆಂಗ ಹಾಗೂ...
Loading posts...

All posts loaded

No more posts

error: Content is protected !!