- Tuesday
- August 25th, 2026
ಐನೆಕಿದು : ತೋಟಕ್ಕೆ ಆನೆ ದಾಳಿ ಐನೆಕಿದು ಗ್ರಾಮದ ಜಯಪ್ರಕಾಶ್ ಕೂಜುಗೋಡು ಮತ್ತು ಸೋಮಸುಂದರ ಕೂಜುಗೋಡು ಎಂಬುವವರ ತೋಟಕ್ಕೆ ಮಾ.05 ರಂದು ರಾತ್ರಿ ಆನೆ ದಾಳಿ ಮಾಡಿದ್ದು, ಹಲವು ಅಡಿಕೆ ಗಿಡ, ತೆಂಗಿನ ಗಿಡ ಹಾಗೂ ಬಾಳೆ ಗಿಡಗಳನ್ನು ನಾಶಗೊಳಿಸಿದೆ ಎಂದು ತಿಳಿದುಬಂದಿದೆ.ಜಯಪ್ರಕಾಶ್ ಕೂಜುಗೋಡು ಅವರ ತೋಟಕ್ಕೆ 1 ತಿಂಗಳ ಹಿಂದೆಯೂ ಒಮ್ಮೆ ಆನೆ ದಾಳಿ...
ನಾಳೆ (ಮಾ.07) ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ ಮಾ.7 ರಂದು ಮಂಗಳವಾರಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ಕಡಿತ ಮಾಡಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. 33/11 ಕೆ.ವಿ. ಸುಳ್ಯ ವಿದ್ಯುತ್ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ನಿರ್ವಹಣಾ ಕೆಲಸವನ್ನು ಹಮ್ಮಿಕೊಳ್ಳಲಾಗಿದ್ದು, 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2...
ಬಿಜೆಪಿಯ ಸದ್ಬಾವನ ಯಾತ್ರೆಯು ಚುನಾವಣಾ ಪೂರ್ವ ತಯಾರಿಗಾಗಿ ನಡೆಯುತ್ತಿದ್ದು, ಇದರ ಬಗ್ಗೆ ಮಾ.4ರಂದು ಐವರ್ನಾಡಿನಲ್ಲಿ ಪೂರ್ವಭಾವಿ ಸಭೆ ನಡೆಯಿತು. ಬಿಜೆಪಿ ಮುಂದಾಳು ಎಸ್.ಎನ್. ಮನ್ಮಥರ ನೇತೃತ್ವದಲ್ಲಿ ಬಾಂಜಿಕೋಡಿ ಕಾಂಗ್ರೆಸ್ ಬೂತ್ ಸಮಿತಿ ಅಧ್ಯಕ್ಷ ಮಹಾಬಲ ಗುಂಪಕಲ್ಲು ಬಿಜೆಪಿ ಸೇರ್ಪಡೆಗೊಂಡರು.ಇವರಿಗೆ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.ಸಭೆಯಲ್ಲಿ...
ಆಲೆಟ್ಟಿ ಗ್ರಾಮದ ಗುಂಡ್ಯ ಎಂಬಲ್ಲಿ ಕಳೆದ ಹತ್ತು ವರ್ಷಗಳ ಪ್ರಾರಂಭಗೊಂಡ ಜನನಿ ಸಂಘ ಹಲವಾರು ಸಾಮಾಜಿಕ ಕಾರ್ಯಗಳನ್ನು ಮಾಡುತ್ತ ಬಂದಿದೆ. ಈ ಸಂಘಕ್ಕೆ ಹತ್ತು ವರುಷ ತುಂಬಿದ್ದು, ಇದರ ಅಂಗವಾಗಿ ಮಾ.12 ರಂದು ಕ್ರಿಕೆಟ್ ಪಂದ್ಯಾಟ ಹಾಗೂ ಮಾ.18 ರಂದು ಪುರುಷರ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ 'ಗುಂಡ್ಯ ಟ್ರೋಫಿ 2023' ನಡೆಯಲಿದೆ ಎಂದು...
ಗೃಹರಕ್ಷಕರ ಚುನಾವಣಾ ಪೂರ್ವ ಸಿದ್ಧತಾ ಸಭೆ ಮುಂದಿನ ಮೇ ತಿಂಗಳಲ್ಲಿ ನಡೆಯುವ ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗೃಹರಕ್ಷಕರನ್ನು ನೇಮಿಸಬೇಕಾಗಿರುವುದರಿಂದ ದ.ಕ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರು ಮತ್ತು ಪೌರರಕ್ಷಣಾ ಪಡೆಯ ಮುಖ್ಯಪಾಲಕರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಕಡಬ ಗೃಹರಕ್ಷಕ ದಳಕ್ಕೆ ದಿನಾಂಕ 05-03-2023 ರಂದು ಭೇಟಿ ನೀಡಿದರು....
ಕೊಡಿಯಾಲ ಗ್ರಾಮದ ಕಲ್ಲಪಣೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಮತ್ತು ಪರಿವಾರ ದೇವರುಗಳ ಪುನರ್ ಪ್ರತಿಷ್ಠಾ ಕಾರ್ಯಕ್ರಮವು ಮಾ.16ರಿಂದ ಮಾ.17 ರ ತನಕ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಇಂದು (ಮಾ.05ರಂದು) ಜರುಗಿತು. ಈ ಸಂದರ್ಭ ಕಲ್ಲಪಣೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಜೀರ್ಣೋದ್ದಾರ ಸಮಿತಿ...
ಕುಲ್ಕುಂದ : ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ಸಂಪನ್ನ ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.02 ರಂದು ಶ್ರೀ ಕೊರತಿಯಮ್ಮ ದೈವದ 8ನೇ ವರ್ಷದ ನೇಮೋತ್ಸವ ಹಾಗೂ ಮಾ.03 ರಿಂದ 04 ರವರೆಗೆ ಶ್ರೀ ಮಹಾವಿಷ್ಣುಮೂರ್ತಿ ದೈವದ 54ನೇ ವರ್ಷದ ಒತ್ತೆಕೋಲವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಮಾ.02 ರಂದು ಗಣಪತಿ ಹೋಮ,...
ಸುಳ್ಯ : ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಬಿ.ಇ. ರಮೇಶ್ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಬಿ.ಇ. ರಮೇಶ್ ಎಂಬವರು ನೇಮಕಗೊಂಡಿದ್ದಾರೆ. ಚಾಮರಾಜನಗರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯಲ್ಲಿ ಉಪನ್ಯಾಸಕರಾಗಿದ್ದ ಬಿ.ಇ. ರಮೇಶ್ ಅವರು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಪದೋನ್ನತಿಯಾಗಿದ್ದು, ಅವರು ಸುಳ್ಯಕ್ಕೆ ಬರಲಿದ್ದಾರೆ ಎಂದು ತಿಳಿದು ಬಂದಿದೆ. ಪಿರಿಯಾಪಟ್ಟಣ ತಾಲೂಕು ದೊಡ್ಡ ಬೆಳಾಲಿನವರು. ಸುಳ್ಯ ಕ್ಷೇತ್ರ...
ಉಡುಪಿಯ ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠ ಕಟಪಾಡಿಯಲ್ಲಿ 'ವಿಶ್ವಕರ್ಮನೆ ನಮೋ ನಮೋ' ಎಂಬ ಕನ್ನಡ ಭಕ್ತಿಗೀತೆಯು ಬಿಡುಗಡೆಗೊಂಡಿತು.ಮಾ. 2ರಂದು ಈ ಭಕ್ತಿಗೀತೆಯನ್ನು ಶ್ರೀಮತ್ ಆನೆಗುಂದಿ ಜಗದ್ಗುರು ಮಹಾಸಂಸ್ಥಾನ ಸರಸ್ವತಿ ಪೀಠಾಧೀಶ್ವರರಾದ ಪರಮಪೂಜ್ಯ ಜಗದ್ಗುರು ಅಷ್ಟೋತ್ತರ ಶತ ಶ್ರೀ ಕಾಳಹಸ್ತೇಂದ್ರ ಮಹಾಸ್ವಾಮಿಯವರು ಅಮೃತ ಹಸ್ತದಲ್ಲಿ ಬಿಡುಗಡೆಗೊಳಿಸಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ವಿಶ್ವೇಶ್ವರ ಪುರೋಹಿತ...
ಅರಂತೋಡು ಅಡ್ತಲೆ ಎಲಿಮಲೆ ರಸ್ತೆ ಅಭಿವೃದ್ಧಿಗಾಗಿ ಅಡ್ತಲೆಯ ನಾಗರಿಕ ಹಿತರಕ್ಷಣಾ ವೇದಿಕೆಯ ಸತತ ಹೋರಾಟ ಮಾಡುತ್ತಾ ಬಂದಿದ್ದು ಜನಪ್ರತಿನಿಧಿಗಳ ಭರವಸೆ ಸಂಪೂರ್ಣ ಈಡೇರದಿದ್ದರೇ ಮತ್ತೊಮ್ಮೆ ಹೋರಾಟ ನಡೆಸುತ್ತೇವೆ ಎಂದು ಅಡ್ತಲೆ ನಾಗರಿಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಹರಿಪ್ರಸಾದ್ ಅಡ್ತಲೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಸುಮಾರು 1 ಕೋಟಿ ರೂ ವೆಚ್ಚದಲ್ಲಿ ಅರಂತೋಡಿನಿಂದ ಆರಂಭಗೊಂಡು ಕಾಮಗಾರಿ ಮುಗಿದಿದೆ. ಇನ್ನೂ...
Loading posts...
All posts loaded
No more posts
