- Monday
- August 24th, 2026
ಕೆ.ವಿ.ಜಿ. ದಂತಮಹಾವಿದ್ಯಾಲಯದ ವಿದ್ಯಾರ್ಥಿಗಳ ಮಧ್ಯೆ ಡಿ.29 ರಂದು ನಡೆದ ಕಲಹದ ಕುರಿತು ಪ್ರಾಂಶುಪಾಲರು ಸ್ಪಷ್ಟಿಕರಣ ನೀಡಿದ್ದಾರೆ. ರ್ಯಾಗಿಂಗ್ ನಡೆದಿದೆ ಎಂದು ಪ್ರಚಾರ ಪಡೆದಿರುವ ವಿಚಾರಗಳು ಸತ್ಯಕ್ಕೆ ದೂರವಾಗಿದೆ. ಡಾ| ಪಲ್ಲವಿ ಎನ್.ಪಿ. ನಮ್ಮ ಸಂಸ್ಥೆಯ 3ನೇ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿದ್ದು, ಮೂಲತ: ಬೆಂಗಳೂರಿನ ವೈಟ್ ಫೀಲ್ಡ್ ನವರಾಗಿರುತ್ತಾರೆ. ಡಾ. ಪಲ್ಲವಿಯವರು ನಮ್ಮದೇ, ಕೆ.ವಿ.ಜಿ. ದಂತ ಮಹಾವಿದ್ಯಾಲಯದ...
ಸುಳ್ಯ ತಾಲೂಕು ಕಚೇರಿಯಲ್ಲಿ ಇಂದು ವಿಶ್ವಮಾನವ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ತಹಶೀಲ್ದಾರ್ ಕು.ಅನಿತಾ ಲಕ್ಷ್ಮಿ, ತಾಲೂಕು ವೈದ್ಯಾಧಿಕಾರಿ ಡಾ. ನಂದಕುಮಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಅರಂತೋಡು, ಸಂಪಾಜೆ ಭಾಗದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಇದನ್ನು ತಡೆಗಟ್ಟಬೇಕೆಂದು ಧನಪಾಲ್ ಗೂನಡ್ಕ ಅವರ ಹೆಸರಿನಲ್ಲಿ ಜಿಲ್ಲಾಧಿಕಾರಿಗೆ ಬೇನಾಮಿ ದೂರು ನೀಡಿದ ಘಟನೆ ನಡೆದಿದ್ದು, ಈ ಬಗ್ಗೆ ಮಾಧ್ಯಮಗಳಲ್ಲಿ ಕೂಡ ವರದಿಯಾಗಿತ್ತು. ಈ ಬಗ್ಗೆ ಅಮರ ಸುದ್ದಿಗೆ ಧನಪಾಲ್ ಗೂನಡ್ಕ ಪ್ರತಿಕ್ರಿಯೆ ನೀಡಿ ಅಕ್ರಮ ಮರಳುಗಾರಿಕೆ ತಡೆಗಟ್ಟಲು ನಾನು ಯಾವ ಅಧಿಕಾರಿಗಳಿಗೂ ದೂರು ನೀಡಿಲ್ಲ. ಮರಳು...
ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರು ವತಿಯಿಂದ ನಡೆಸಲ್ಪಡುವ ಅಮರ ಯೋಗ ತರಬೇತಿ ಕೇಂದ್ರ ವಿದ್ಯಾರ್ಥಿಗಳು ಕೇಂದ್ರ ಸಹಕಾರದ ಆಜಾದಿ ಕಾ ಅಮೃತ ಮಹೋತ್ಸವ - 2022. ಪ್ರಯುಕ್ತ ಕೇಂದ್ರ ಸರಕಾರದ ಆಯುಷ್ ಮಂತ್ರಾಲಯ ಹಾಗೂ ಶ್ರೀ ವೇದವ್ಯಾಸ ಯೋಗ ಪ್ರತಿಷ್ಠಾನ ಮೈಸೂರು ವತಿಯಿಂದ ನಡೆಸಿದ ಯೋಗ ಕಾರ್ಯಕ್ರಮದಲ್ಲಿ ಸೂರ್ಯನಮಸ್ಕಾರ ಯಜ್ಞ ಇದರಲ್ಲಿ...
ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಸ್ಮೃತಿ ಇರಾನಿ ಅವರು ಡಿ.27 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.ಬೆಳಿಗ್ಗೆ ಕ್ಷೇತ್ರಕ್ಕೆ ಆಗಮಿಸಿದ ಅವರು ಶ್ರೀ ದೇವರ ದರುಶನ ಪಡೆದು ವಿಶೇಷ ಪೂಜೆ ಹಾಗೂ ಮಹಾಭಿಷೇಕ ಸೇವೆ ಮಾಡಿಸಿದರು.ಕಿರುಷಷ್ಠಿ ಸಭಾಭವನದಲ್ಲಿ ಸಚಿವರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು. ಆನಂತರ...
ಇತಿಹಾಸ ಪ್ರಸಿದ್ಧ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಜ.3ರಿಂದ ಜ.12ರವರೆಗೆ ವರ್ಷಾವಧಿ ಜಾತ್ರೋತ್ಸವವು ನಡೆಯಲಿದ್ದು ಗೊನೆ ಮುಹೂರ್ತ ಡಿ. 28ರಂದು ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ, ಸದಸ್ಯರಾದ ಲಿಂಗಪ್ಪ ಗೌಡ ಕೇರ್ಪಳ, ಶ್ರೀಮತಿ ಎಂ. ಮೀನಾಕ್ಷಿ ಗೌಡ, ಎ. ರಮೇಶ ಬೈಪಡಿತ್ತಾಯ, ಎನ್. ಜಯಪ್ರಕಾಶ್ ರೈ ಹಾಗೂ...
ಸೈಂಟ್ ಬ್ರಿಜಿಡ್ಸ್ ಚರ್ಚ್ ಸುಳ್ಯ ಹಾಗೂ ಕೆಥೋಲಿಕ್ ಸಭಾ ಘಟಕದ ವತಿಯಿಂದ ಕ್ರಿಸ್ತ ಜಯಂತಿ ಹಾಗೂ ಸೌಹಾರ್ದ ಕೂಟ ಕಾರ್ಯಕ್ರಮ ಡಿ.25ರಂದು ಸೈಂಟ್ ಬ್ರಿಜಿಡ್ಸ್ ಚರ್ಚ್ ಮುಂಭಾಗದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಸೈಂಟ್ ಬ್ರಿಜಿಡ್ಸ್ ಚರ್ಚ್ನ ಧರ್ಮ ಗುರುಗಳಾದ ರೆ.ಫಾ ವಿಕ್ಟರ್ ಡಿಸೋಜರವರು ಅಧ್ಯಕ್ಷತೆಯನ್ನು ವಹಿಸಿದರು. ಕೆಥೋಲಿಕ್ ಸಭಾ ಸುಳ್ಯ ಘಟಕದ ಅಧ್ಯಕ್ಷ ಜೊಸೆಫ್ ಅರುಣ್ ಕ್ರಾಸ್ತ ಪ್ರಸ್ತಾವಿಕ...
ಅಜ್ಜಾವರ ಗ್ರಾಮ ಪಂಚಾಯತ್ ನಲ್ಲಿ ವಿಶ್ವ ವಿಕಲಚೇತನ ದಿನಾಚರಣೆ ಪ್ರಯುಕ್ತ ವಿಶೇಷ ಗ್ರಾಮ ಸಭೆಯು ಗ್ರಾ.ಪಂ. ಸಭಾಭವನದಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಸತ್ಯವತಿ ಬಸವನಪಾದೆ ವಹಿಸಿದ್ದರು . ಕಾರ್ಯಕ್ರಮದಲ್ಲಿ ವಿಕಲಚೇತನರ ತಾಲೂಕು ಅಧಿಕಾರಿ ಚಂದ್ರಶೇಖರ ಬಿ ವಿಕಲ ಚೇತನರಿಗೆ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಈ ಸಂದರ್ಭ ಗ್ರಾಮ ಪಂಚಾಯತ್...
ಸುಳ್ಯ ನಗರದಲ್ಲಿ ಈ ಹಿಂದೆ ಕಾರ್ಯಾಚರಿಸುತ್ತಿದ್ದ ಸೇವಾ ಕೇಂದ್ರಗಳಲ್ಲಿ ಆಧಾರ್ ಸೇವೆಗಳು ಕಾರಣಾಂತರಗಳಿಂದ ತಾತ್ಕಾಲಿಕ ನಿಲುಗಡೆಯಾಗಿದ್ದು ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ಪರಿಗಣಿಸಿ ತಾಲೂಕು ಪಂಚಾಯತ್ ಸುಳ್ಯದಲ್ಲಿ ಆಧಾರ್ ಸೇವಾ ಕೇಂದ್ರ ಆರಂಭಗೊಂಡಿದ್ದು, ವಿಳಾಸ ತಿದ್ದುಪಡಿ, ಹೆಸರು ತಿದ್ದುಪಡಿ, ಮೊಬೈಲ್ ನಂಬರ್ ಸೇರ್ಪಡೆ, ಹೊಸ ಆಧಾರ್ ಕಾರ್ಡ್ ಹಾಗೂ ಬಯೋಮೆಟ್ರಿಕ್ ಅಪ್ಲೇಟ್ ಸೇವೆಗಳು ಲಭ್ಯವಿರುತ್ತದೆ. ತಿದ್ದುಪಡಿಗಾಗಿ ಸಂಬಂಧಪಟ್ಟ...
ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಸ್ಮೃತಿ ಇರಾನಿ ಅವರು ಡಿ.27 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.ಬೆಳಿಗ್ಗೆ ಕ್ಷೇತ್ರಕ್ಕೆ ಆಗಮಿಸಿದ ಅವರು ಶ್ರೀ ದೇವರ ದರುಶನ ಪಡೆದು ವಿಶೇಷ ಪೂಜೆ ಹಾಗೂ ಮಹಾಭಿಷೇಕ ಸೇವೆ ಮಾಡಿಸಿದರು.ಕಿರುಷಷ್ಠಿ ಸಭಾಭವನದಲ್ಲಿ ಸಚಿವರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು. ಆನಂತರ...
Loading posts...
All posts loaded
No more posts
