- Saturday
- August 22nd, 2026
ನಾಲ್ಕೂರು ಗ್ರಾಮದ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನ.13 ರಂದು ಮಾಜಿ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ರವರು ಭೇಟಿ ನೀಡಿ ದೇವರ ದರುಶನ ಪಡೆದರು.ಸುರೇಶ್ ಕುಮಾರ್ ರವರು ಕ್ಷೇತ್ರಕ್ಕೆ ಎರಡನೇ ಬಾರಿಗೆ ಭೇಟಿ ನೀಡುತ್ತಿದ್ದು, ಈ ಸಂದರ್ಭದಲ್ಲಿ ಚಂದ್ರಶೇಖರ ಮಾವಿನಕಟ್ಟೆ, ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯ ವಿಜಯ ಕುಮಾರ್ ಚಾರ್ಮತ, ದೀರನ್ ಪರಮಲೆ, ಚಂದ್ರಶೇಖರ...
ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ತಾಲೂಕಿನ ಆಯ್ದ ಭಜನಾ ಮಂಡಳಿಗಳಿಂದ ನಡೆದ ಭಜನೋತ್ಸವ - 2022 ಹಾಗೂ ರೂ. 10 ಲಕ್ಷ ಅನುದಾನದಲ್ಲಿ ದೇವಾಲಯದ ಆವರಣದಲ್ಲಿ ಗ್ರಾನೈಟ್ ಅಳವಡಿಕೆಯ ಗುದ್ದಲಿಪೂಜೆ ಅಂಗವಾಗಿ ಆಯೋಜಿಸಿದ ಸಭಾ ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರು ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ...
ಕರ್ನಾಟಕ ರಾಜ್ಯ ಸರಕಾರ ನೀಡುವ ‘ಸಹಕಾರ ರತ್ನ’ ಪ್ರಶಸ್ತಿಗೆ ಹಿರಿಯ ಸಹಕಾರಿ ನಿತ್ಯಾನಂದ ಮುಂಡೋಡಿ ಅವರು ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವತಿಯಿಂದ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನ.18ರಂದು ನಡೆಯುವ ರಾಜ್ಯ ಮಟ್ಟದ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ನಿತ್ಯಾನಂದ ಮುಂಡೋಡಿ ಅವರಿಗೆಸಹಕಾರ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ. ಸಹಕಾರ...
ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಐವರ್ನಾಡು ಇಲ್ಲಿ ಇಂದು(ನ.13) ಪ್ರಾತಃಕಾಲ 6:30 ರಿಂದ ಸೂರ್ಯಾಸ್ತ 5:59 ರವರೆಗೆ ತಾಲೂಕಿನ ಆಯ್ದ ಭಜನಾ ಮಂಡಳಿಗಳಿಂದ ಭಜನೋತ್ಸವ-2022 ಕಾರ್ಯಕ್ರಮ ನಡೆಯಲಿದೆ.
ಎಲ್ಲರಿಗೆ ಸರಕಾರಿ ಉದ್ಯೋಗ ಸಿಗುವುದು ಕಷ್ಟ, ಇಂತಹ ಸಂದರ್ಭಗಳಲ್ಲಿ ಯುವಕರು ವಂಚಿತರಾಗಬಾರದೆನ್ನುವ ಉದ್ದೇಶದಿಂದ ಇಂತಹ ಉದ್ಯೋಗ ಮೇಳಗಳನ್ನು ಆಯೋಜನೆ ಮಾಡಲಾಗಿದ್ದು ಮಹತ್ವ ಪಡೆಯಲಿದೆ ಎಂದು ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು. ಅವರು ಸುಳ್ಯದ ನಿರೀಕ್ಷಣಾ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ನ.26 ರಂದು ಸುಳ್ಯದ ನೆಹರೂ ಸ್ಮಾರಕ ಮಹಾ ವಿದ್ಯಾಲಯದಲ್ಲಿ ನಡೆಯಲಿರುವ...
ಮಂಗಳೂರಿನ ಬಾವುಟಗುಡ್ಡೆಯಲ್ಲಿ ಸ್ಥಾಪನೆಗೊಂಡಿರುವ ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ನ.19 ರಂದು ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದ್ದು ಸುಳ್ಯದಿಂದ 10 ಸಾವಿರ ಜನ ಭಾಗವಹಿಸಲಿದ್ದಾರೆ ಎಂದು ಚಂದ್ರ ಕೋಲ್ಚಾರ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆಯನ್ನು...
2022-2ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ (1-10ನೇ ತರಗತಿ) ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಅರ್ಜಿಯನ್ನು ಆಹ್ವಾನಿಸಲಾಗಿದೆ.ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಎಸ್ಎಸ್ ಪಿ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಉದ್ಯಮಿ ಸುಳ್ಯದ ರೂಪ ಬಾರ್ ಮಾಲಕರಾದ ಸುಂದರ ರಾವ್ ರವರ ಪುತ್ರ ಸಂದೀಪ್ ರಾವ್ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಬೆನಕಾ ಕ್ರೀಡಾ ಮತ್ತು ಕಲಾ ಸಂಘದ ಸಕ್ರೀಯ ಸದಸ್ಯರಾಗಿದ್ದರು. ಮೃತರು ತಂದೆ,ತಾಯಿ, ಹಾಗೂ ಸಹೋದರಿಯರನ್ನು ಅಗಲಿದ್ದಾರೆ.
ಪ್ರತಿಷ್ಠಿತ ಸ್ವದೇಶಿ ಸಂಸ್ಥೆಯಾಗಿರುವ ಮೋದಿಕೇರ್ ಸಂಸ್ಥೆಯ ಕಾರ್ಯಚಟುವಟಿಕೆ, ಬೆಳವಣಿಗೆ ಹಾಗೂ ಸ್ವದೇಶಿ ಉತ್ಪನ್ನಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ನ.18 ರಂದು ಸುಬ್ರಹ್ಮಣ್ಯದ ಗ್ರಾ.ಪಂ.ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಂಸ್ಥೆಯ ವತಿಯಿಂದ ಸ್ವದೇಶಿ ಉತ್ಪನ್ನಗಳ ಬಗ್ಗೆ, ಸ್ವ ಉದ್ಯೋಗ ಮಾಡುವ ಬಗ್ಗೆ ಮಾಹಿತಿ ಕಾರ್ಯಕ್ರಮ ನೀಡಲಿದ್ದಾರೆ ಎಂದು ಸುಬ್ರಹ್ಮಣ್ಯದ ಡಿಸ್ಟ್ರಿಬ್ಯೂಟ್ ಪಾಯಿಂಟ್ ನ ಮುರಳೀಕೃಷ್ಣ ಕಾಮತ್ ತಿಳಿಸಿದ್ದಾರೆ. ಹೆಚ್ಚಿನ...
Loading posts...
All posts loaded
No more posts
