ಹರಿಹರಪಲ್ಲತ್ತಡ್ಕ : ಮದ್ಯದಂಗಡಿ ವಿರೋಧಿಸಿ ಪ್ರತಿಭಟನೆ – ವ್ಯಕ್ತಿಯಿಂದ ವಿಡಿಯೋ ಚಿತ್ರೀಕರಣಕ್ಕೆ ಆಕ್ರೋಶ – ಪೊಲೀಸ್ ವಶಕ್ಕೆ

ಹರಿಹರ ಪಲ್ಲತ್ತಡ್ಕ ಗ್ರಾಮದಲ್ಲಿ ಮದ್ಯದಂಗಡಿ ತೆರೆಯುವ ವಿರುದ್ಧ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ.) ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್(ರಿ.) ಸುಳ್ಯ ತಾಲೂಕು, ಶೌರ್ಯಶ್ರೀ ವಿಪತ್ತು ನಿರ್ವಹಣಾ ಘಟಕ ಸುಬ್ರಹ್ಮಣ್ಯ ವಲಯ ಹಾಗೂ ಮದ್ಯ ಮುಕ್ತ ಹೋರಾಟ ಸಮಿತಿ ಹರಿಹರ ಪಲ್ಲತ್ತಡ್ಕ ಇದರ ನೇತೃತ್ವದಲ್ಲಿ ಹರಿಹರ ಪಲ್ಲತ್ತಡ್ಕ ಮುಖ್ಯ ಪೇಟೆಯಲ್ಲಿ ಸೆ.29...

ಅ.1ರಂದು ರೈತ ಸಂಘದ ತಾಲೂಕು ಕಚೇರಿ ಉದ್ಘಾಟನೆ – ಕೃಷಿ ಬದುಕು ಕುರಿತು ವಿಚಾರ ವಿನಿಮಯ

ಕರ್ನಾಟಕ ರಾಜ್ಯ ರೈತ ಸಂಘ ಸುಳ್ಯ ತಾಲೂಕು ಘಟಕದ ನೂತನ ತಾಲೂಕು ಕಚೇರಿ ಉದ್ಘಾಟನೆ ಹಾಗೂ ಕೃಷಿ ಬದುಕು ಕುರಿತು ವಿಚಾರ ವಿನಿಮಯ ಕಾರ್ಯಕ್ರಮ ಅ.1ರಂದು ಬೆಳಗ್ಗೆ 10.30 ಕ್ಕೆ ಪೈಚಾರು ಬಸ್ ನಿಲ್ದಾಣದ ಬಳಿ ನಡೆಯಲಿದೆ. ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕರು ಹಾಗೂ ಚಿಂತಕರಾದ ತೇಜಕುಮಾರ್ ಕುಡೆಕಲ್ಲು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ತಾಲೂಕು ರೈತ ಸಂಘದ ಅಧ್ಯಕ್ಷ...
Ad Widget

ಪತ್ರಕರ್ತರ ಸಂಘದಿಂದ ಆರೋಗ್ಯ ತಪಾಸಣೆ – ಆಭಾ ಕಾರ್ಡ್ ನೋಂದಣಿ ಶಿಬಿರ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಗ್ರಾಮ್ ಒನ್ ನಾಗರಿಕಾ ಸೇವಾ ಕೇಂದ್ರ ಅರಂತೋಡು ಇದರ ಆಶ್ರಯದಲ್ಲಿ ಪ್ರೆಸ್ ಕ್ಲಬ್ ಸಹಯೋಗದಲ್ಲಿ ನಡೆದ ಪತ್ರಕರ್ತರ ಆರೋಗ್ಯ ತಪಾಸಣೆ ಹಾಗೂ ಆಭಾ ಕಾರ್ಡ್ ನೋಂದಣಿ ಶಿಬಿರ ಸೆ.28 ರಂದು ನಡೆಯಿತು. ಕಾರ್ಯಕ್ರಮಕ್ಕೆ ತಾಲೂಕು ಆರೋಗ್ಯ ಅಧಿಕಾರಿ ಡಾ. ನಂದಕುಮಾರ್ ಚಾಲನೆ ನೀಡಿ ಮಾತನಾಡಿ, ಒಂದು ದೇಶ...

ಹರಿಹರಪಲ್ಲತ್ತಡ್ಕ : ಮದ್ಯದಂಗಡಿ ತೆರೆಯದಂತೆ ಉಸ್ತುವಾರಿ ಸಚಿವರಿಗೆ ಮನವಿ

ಹರಿಹರ ಪಲ್ಲತ್ತಡ್ಕದಲ್ಲಿ ಮದ್ಯದಂಗಡಿ ತೆರೆಯದಂತೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಅವರಿಗೆ ಸೆ.27ರಂದು ಪತ್ರಕರ್ತ ಬಾಲಕೃಷ್ಣ ಭೀಮಗುಳಿಯವರು ಊರವರ ಪರವಾಗಿ ಮನವಿ ನೀಡಿದರು. ಪತ್ರಕರ್ತ ಬಾಲಕೃಷ್ಣ ಭೀಮಗುಳಿ ಉಸ್ತುವಾರಿ ಸಚಿವರನ್ನು ಭೇಟಿಯಾಗಿ ಹರಿಹರ ಪಲ್ಲತ್ತಡ್ಕ ಗ್ರಾಮದಲ್ಲಿ ಮದ್ಯದಂಗಡಿ ತೆರೆಯದಂತೆ ಹಾಗೂ ತೆರೆದಲ್ಲಿ ಯುವ ಸಮೂಹ ದುಶ್ಚಟಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬಲಿಯಾಗಿ ಊರಿನಲ್ಲಿ ಅಶಾಂತಿ ಸೃಷ್ಟಿಗೆ...

ಸುಳ್ಯ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ರೆಡ್ ಕ್ರಾಸ್ ಘಟಕ ಉದ್ಘಾಟನೆ

ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜು ಸುಳ್ಯ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು  ಜಂಟಿ ಆಶ್ರಯದಲ್ಲಿ ಜೂನಿಯರ್ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮ ಸೆ.28 ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆಹರೂ ಸ್ಮಾರಕ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಡಾ. ಅನುರಾಧ ಕುರುಂಜಿ ನೆರವೇರಿಸಿದರು.  ಅಧ್ಯಕ್ಷತೆಯನ್ನು  ದ ಕ ಗೌಡ ವಿದ್ಯಾ ಸಂಘದ...

ಕೆ ಎಸ್ ಎಸ್ ಕಾಲೇಜಿನಲ್ಲಿ ಜನಪರ ಉತ್ಸವ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಮಣೇಶ್ವರ ಮಹಾವಿದ್ಯಾಲಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಜನಪರ ಉತ್ಸವವ ಕಾರ್ಯಕ್ರಮ ಸೆ. 27ರಂದು ನಡೆಯಿತು.ಕಾರ್ಯಕ್ರಮವನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲಲಿತಾ ಗುಂಡಡ್ಕ ಉದ್ಘಾಟಿಸಿದರು.ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ. ನಿಂಗಯ್ಯ ಅಧ್ಯಕ್ಷತೆ ವಹಿಸಿದ್ದರು. ಕೆ ಎಸ್ ಎಸ್ ಕಾಲೇಜು ಸುಬ್ರಮಣ್ಯನ ಪ್ರಾಂಶುಪಾಲ...

ಮೊಬೈಲ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಅಟೋ ಚಾಲಕ

ರಿಕ್ಷಾದಲ್ಲಿ ಸಿಕ್ಕಿದ ಮೊಬೈಲನ್ನು ಅದರ ವಾರಸುದಾರರಿಗೆ ಹಿಂತಿರುಗಿಸುವ ಮೂಲಕ ಚಾಲಕ ಪ್ರಾಮಾಣಿಕತೆ ಮೆರೆದ ಘಟನೆ ಕಲ್ಲುಗುಂಡಿಯಲ್ಲಿ ನಡೆದಿದೆ. ಕಲ್ಲುಗುಂಡಿಯಲ್ಲಿ ಅಟೋ ಚಾಲಕ ತೊಡಿಕಾನ ಗ್ರಾಮದ ಪ್ರಭಾಕರ ಕಾಡುಪಂಜ ಅವರಿಗೆ ತನ್ನ ರಿಕ್ಷಾದಲ್ಲಿ ಸಿಕ್ಕಿದ ಸುಮಾರು ಹತ್ತು ಸಾವಿರ ಮೌಲ್ಯದ ಸ್ಮಾರ್ಟ್ ಫೋನ್ ಪ್ರಾಮಾಣಿಕವಾಗಿ ಹಿಂತಿರುಗಿಸಿದ್ದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಹಿಂದೆಯೂ ಅವರಿಗೆ ಬಾಲೆಂಬಿ ಬಳಿ...

ಸುಳ್ಯ : ಸ್ವಚ್ಛತೆಯ ಬಗ್ಗೆ ಜನಜಾಗೃತಿ ಹಾಗೂ ಸ್ವಚ್ಚತಾ ಅಭಿಯಾನ

ಸುಳ್ಯ ನಗರ ಪಂಚಾಯತ್ ವತಿಯಿಂದ ಸ್ವಚ್ಚತೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಾಗೂ ಸ್ವಚ್ಚತಾ ಕಾರ್ಯಕ್ರಮ ಇಂದು ಬೆಳಿಗ್ಗೆ ನಡೆಯಿತು. ಕಾರ್ಯಕ್ರಮದಲ್ಲಿ ನ.ಪಂ‌.ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಮುಖ್ಯಾಧಿಕಾರಿ ಸುಧಾಕರ ಎಂ.ಎಚ್., ನ.ಪಂ.ಸದಸ್ಯರಾದ ಬುದ್ಧನಾಯ್ಕ್, ಸುಧಾಕರ, ಸುಶೀಲ ಜಿನ್ನಪ್ಪ, ಲೀಲಾವತಿ ಕುರುಂಜಿ, ಕಿಶೋರಿ ಶೇಟ್, ಬೂಡು ರಾಧಾಕೃಷ್ಣ ರೈ ಹಾಗೂ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಕಲ್ಚರ್ಪೆಯ ತ್ಯಾಜ್ಯ ನಿರ್ವಹಣಾ ಘಟಕದ ಜಾಗದ ವಿವಾದ ಇತ್ಯರ್ಥ – ಅರಣ್ಯ ಮತ್ತು ಪರಿಸರ ಇಲಾಖೆಯ ಅನುಮತಿ

ಕಳೆದ 15 ವರ್ಷಗಳಿಂದ ತೊಡಕಾಗಿದ್ದ ಸುಳ್ಯದ ತ್ಯಾಜ್ಯ ವಿಲೇವಾರಿ ಘಟಕದ ಜಾಗದ ಸಮಸ್ಯೆಗೆ ಅಂತಿಮ ಪರಿಹಾರ ಲಭ್ಯವಾಗಲಿದೆ. ಅಲೆಟ್ಟಿ ಗ್ರಾಮದ ಕಲ್ಚರ್ಪೆಯಲ್ಲಿ 2008ರಲ್ಲಿ ಸುಳ್ಯ ನಗರದ ಘನತ್ಯಾಜ್ಯ ಘಟಕಕ್ಕೆ 3.00ಎಕ್ರೆ ಸ್ಥಳವನ್ನು ಕಾದಿರಿಸಲಾಗಿತ್ತು. ಅಲ್ಲಿಂದ ಬಳಿಕ ಕಲ್ಚರ್ಪೆ ತ್ಯಾಜ್ಯ ವಿಲೇವಾರಿ ಘಟಕವು ಅನೇಕ ಕಾರಣಗಳಿಂದ ವಿವಾದಗ್ರಸ್ತವಾಗಿತ್ತು. ಮೊದಲಿಗೆ ಹತ್ತಿರದ ನಿವಾಸಿಗಳು ಹಾಗೂ ಪೆರಾಜೆ ಗ್ರಾಮ ಪಂಚಾಯತ್...

ಗಾಂಧಿನಗರ ಕೆಪಿಎಸ್ : ಕಾಲೇಜು ವಿಭಾಗದಲ್ಲಿ ಪ್ರತಿಭಾ ದಿನ

ಕರ್ನಾಟಕ ಪಬ್ಲಿಕ್ ಸ್ಕೂಲ್ ಸುಳ್ಯ ಗಾಂಧೀನಗರ ಕಾಲೇಜಿನಲ್ಲಿ ಪ್ರತಿಭಾ ದಿನ ಆಚರಣೆ ಸೆ. 24ರಂದು ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ನೆರವೇರಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಕೆ.ಪಿ.ಎಸ್. ಕಾರ್ಯಧ್ಯಕ್ಷ ಪ್ರವೀಣ್ ನಾಯಕ್ ವಹಿಸಿದ್ದರು. ಕೆ.ಪಿ.ಎಸ್ ಪ್ರಾಂಶುಪಾಲ ಅಬ್ದುಲ್ ಸಮದ್, ನಗರ ಪಂಚಾಯತ್ ಸದಸ್ಯ ಎಂ.ವೆಂಕಪ್ಪ ಗೌಡ ಮತ್ತು ಲಯನ್ಸ್ ಮಾಜಿ...
Loading posts...

All posts loaded

No more posts

error: Content is protected !!