ಕೊಲ್ಲಮೊಗ್ರು :- ಸೆ.30 ರಂದು ನಾಯಿಗಳಿಗೆ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

ದ.ಕ ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವರಿಂದ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಇದರ ಸಹಯೋಗದಲ್ಲಿ ಸೆ.30 ರಂದು ನಾಯಿಗಳಿಗೆ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ ನಡೆಯಲಿದೆ. ಪೂರ್ವಾಹ್ನ 10:30 ರಿಂದ 11:00 ರವರೆಗೆ ಡಾ| ಬಿ.ಆರ್ ಅಂಬೇಡ್ಕರ್ ಸಭಾಭವನ ಕಟ್ಟ ಗೋವಿಂದನಗರ, ಪೂರ್ವಾಹ್ನ 11:15 ರಿಂದ...

ಮಡಪ್ಪಾಡಿಯ ಸಂಘಸಂಸ್ಥೆಗಳಿಂದ ಸಮೀಕ್ಷಾಳ ಚಿಕಿತ್ಸೆಗೆ ಧನಸಹಾಯ

ಯುವಕ ಮಂಡಲ ಮಡಪ್ಪಾಡಿ, ಶ್ರೀರಾಮ ಭಜನಾ ಮಂಡಳಿ ಮಡಪ್ಪಾಡಿ ಇದರ ವತಿಯಿಂದ ಗುತ್ತಿಗಾರು ಗ್ರಾಮದ ಮೋಟ್ನೂರು ಸಮೀಕ್ಷಾಳ ಚಿಕಿತ್ಸೆಗೆ ಧನಸಹಾಯ ನೀಡಲಾಯಿತು. ಮಡಪ್ಪಾಡಿಯ ಗ್ರಾಮಸ್ಥರು ಹಾಗೂ ಸಂಘ ಸಂಸ್ಥೆಗಳಿಂದ ಸಂಗ್ರಹವಾದ ರೂ 40,006 ನ್ನು ಸಮೀಕ್ಷಾಳ ಮನೆಯವರಿಗೆ ಸೆ.24 ರಂದು ಹಸ್ತಾಂತರಿಸಲಾಯಿತು.
Ad Widget

ಸೆ.30 : ಎಲಿಮಲೆಯಲ್ಲಿ ಮೈತ್ರೇಯ ಕ್ಲಿನಿಕ್ ಶುಭಾರಂಭ

ಎಲಿಮಲೆಯ ಪ್ರಸನ್ನ ಕಾಂಪ್ಲೆಕ್ಸ್‌ನ ನಲ್ಲಿ ಡಾ.ಚೈತ್ರ ಭಾನು ಮಾಲಕತ್ವದ ಮೈತ್ರೇಯ ಕ್ಲಿನಿಕ್ ಸೆ. 30 ರಂದು ಶುಭಾರಂಭಗೊಳ್ಳಲಿದೆ.ಕ್ಲಿನಿಕ್ ನ ಉದ್ಘಾಟನೆಯನ್ನು ತಾಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್ ಬಾಳಿಕಳ ನೆರವೇರಿಸಲಿದ್ದಾರೆ.ನಿವೃತ್ತ ಉಪನ್ಯಾಸಕ ವಾಸುದೇವ ಗೌಡ ಪಡ್ಪು ಗೌರವ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ನೆಲ್ಲೂರು ಕೆಮ್ರಾಜೆ ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಶೀಲಾವತಿ ಬೊಳ್ಳಾಜೆ, ದೇವಚಳ್ಳ ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಸುಲೋಚನ ದೇವ,...

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಶ್ರೀ.ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ ಇದರ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಸೆ.24 ರಂದು ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ನಡೆಯಿತು.ಸ್ವಾಸ್ಥ್ಯ ಸಂಕಲ್ಪದ ಬಗ್ಗೆ ನಿವೃತ್ತ ಪೋಲಿಸ್ ಅಧಿಕಾರಿ ಭಾಸ್ಕರ ಅಡ್ಕಾರು ಮಾಹಿತಿ ನೀಡಿದರು. ಶಾಲಾ ಮುಖ್ಯ ಶಿಕ್ಷಕಿ ಕುಸುಮಾವತಿ ಯು.ಪಿ, ವಲಯ...

ಗುತ್ತಿಗಾರು ಸೊಸೈಟಿ ಮಹಾಸಭೆ : ಶೇ.7 ಡಿವಿಡೆಂಟ್ ಘೋಷಣೆ

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸೆ.24 ರಂದು ಸಂಘದ ದೀನದಯಾಳ್ ಸಭಾಭವನದಲ್ಲಿ ನಡೆಯಿತು.ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಸಕ್ತ ಸಾಲಿನಲ್ಲಿ ಸಂಘವು 434 ಕೋಟಿ ವ್ಯವಹಾರ ಮಾಡಿದ್ದು ‍ 1.42 ಕೋಟಿ ಲಾಭಾಂಶ ಪಡೆದಿದೆ. ಸದಸ್ಯರಿಗೆ ಶೇ.7 ಡಿವಿಡೆಂಟ್ ಘೋಷಿಸಲಾಯಿತು.ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಮೀನುಗಾರಿಕಾ...

ಕಾಂಗ್ರೆಸ್‌ ನವರು ಜನರಿಗೆ ವಂಚಿಸುವ ಕೆಲಸ ಮಾಡುತ್ತಿದ್ದಾರೆ – ಹರೀಶ್ ಕಂಜಿಪಿಲಿ ಟೀಕೆ

ಇತ್ತೀಚೆಗೆ ಭೀಕರ ಪ್ರವಾಹದಿಂದಾಗಿ ಸುಳ್ಯ ಕ್ಷೇತ್ರದ ಕೆಲವೊಂದು ಭಾಗಗಳಲ್ಲಿ ವಿಪರೀತ ಸಮಸ್ಯೆಗಳಾಗಿದ್ದು, ಕೊಲ್ಲಮೊಗ್ರು ಗ್ರಾಮದ ಕಡಂಬಳ ಸೇತುವೆ ಕೂಡಾ ಕೊಚ್ಚಿ ಹೋಗಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಮಳೆಗಾಲದಲ್ಲಿ ತಕ್ಷಣ ಸೇತುವೆ ನಿರ್ಮಾಣ ಕಾರ್ಯ ಅಸಾಧ್ಯವಾದುದರಿಂದ ಅಲ್ಲಿ ಸ್ವಲ್ಪ ವಿಳಂಬವಾಗಿ ಮೋರಿ ಪೈಪು ಅಳವಡಿಸಿ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ...

ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಬಾಲಕೃಷ್ಣ ಭೀಮಗುಳಿ ಆಯ್ಕೆ

ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಕಳ ತಾಲೂಕು ಘಟಕ ಇದರ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಸುಳ್ಯ ತಾಲೂಕಿನ ಹರಿಹರಪಲ್ಲತ್ತಡ್ಕ ನಿವಾಸಿ ಕಾರ್ಕಳದಲ್ಲಿ ಉದಯವಾಣಿ ಪತ್ರಿಕೆಯ ವರದಿಗಾರರಾಗಿರುವ ಬಾಲಕೃಷ್ಣ ಭೀಮಗುಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸೂಚನೆಯಂತೆ ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಕಳ ತಾಲೂಕು ಘಟಕದ ಪದಾಧಿಕಾರಿಗಳ ಪುನರ್ ರಚನೆ ಪ್ರಕ್ರಿಯೆ...

ಕಾಂತಮಂಗಲ : ಶಾರದಾಬಾಯಿ ನಾವಡರ ಸ್ಮರಣಾರ್ಥ ಕೊಡುಗೆಯಾಗಿ ನೀಡಿದ ಕೊಠಡಿ ಉದ್ಘಾಟನೆ

ಅಜ್ಜಾವರ ಗ್ರಾಮದ ಕಾಂತಮಂಗಲ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಶಿಕ್ಷಕಿಯಾಗಿದ್ದ ದಿ.ಬಿ.ಕೆ.ಶಾರದಾಬಾಯಿ ನಾವಡರವರ ಸ್ಮರಣಾರ್ಥ ಅವರ ಪತಿ ಕೃಷ್ಣ ನಾವಡರು ಹಾಗೂ ಮಕ್ಕಳು ಕೊಡುಗೆಯಾಗಿ ನೀಡಿದ ನಲಿಕಲಿ ಕೊಠಡಿಯ ಹಸ್ತಾಂತರ ಕಾರ್ಯಕ್ರಮ ಇಂದು ನಡೆಯಿತು.ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ಸ್ವಾಮೀಜಿಯವರು ಕಾರ್ಯಕ್ರಮ ಆಶೀರ್ವಚನ ನುಡಿಗಳಲ್ಲಿ ದೇಶ ಭಕ್ತಿಯು ಎಳೆಯವಯಸ್ಸಿನಲ್ಲಿ ಕಲಿಸಬೇಕು ಇದೀಗ ಕಲಿತವರೇ ದೇಶದ್ರೋಹದ ಕೆಲಸಗಳನ್ನು...

ಮರ್ಕಂಜ ಸೊಸೈಟಿಯ ನೂತನ ಅಧ್ಯಕ್ಷರಾಗಿ ರಮೇಶ್ ದೇಲಂಪಾಡಿ

ಮರ್ಕಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ಮಹಾಬಲ ಕಟ್ಟಕೋಡಿಯವರು ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಕ್ಕೆ ಸೆ.19 ರಂದು ನಡೆದ ಸಂಘದ ಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಡೆಯಿತು. ರಮೇಶ್ ದೇಲಂಪಾಡಿ ಅವರನ್ನು ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷ ಮಹಾಬಲ ಕಟ್ಟಕೋಡಿ, ನಿರ್ದೇಶಕರು, ಮುಖ್ಯ...

ಐವರ್ನಾಡು : ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಅಂಗವಾಗಿ ರಕ್ತದಾನ ಶಿಬಿರ

ಐವರ್ನಾಡು ಗ್ರಾಮ ಪಂಚಾಯತ್ ಮತ್ತು ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಗೆಳೆಯರ ಬಳಗ ದೇರಾಜೆ,ಮಂಜುಶ್ರೀ ಗೆಳೆಯರ ಬಳಗ ,ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ಮತ್ತು ರೆಡ್ ಕ್ರಾಸ್ ಸಂಸ್ಥೆ ದ.ಕ ಇವರ ಸಹಯೋಗದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 72 ನೇ ಹುಟ್ಟುಹಬ್ಬದ ಪ್ರಯುಕ್ತ...
Loading posts...

All posts loaded

No more posts

error: Content is protected !!