ಸ.ಹಿ.ಪ್ರಾ. ಶಾಲೆ ದೇವಚಳ್ಳದಲ್ಲಿ ಪೋಷಣ್ ಅಭಿಯಾನ್ ಕಾರ್ಯಕ್ರಮ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳ ಇಲ್ಲಿ ಸೆ.16 ರಂದು ಪೋಷಣ್ ಅಭಿಯಾನ್ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ತರಕಾರಿ, ಹಣ್ಣುಗಳು, ಧಾನ್ಯಗಳು, ಸೊಪ್ಪು ತರಕಾರಿಗಳು, ಸಿರಿಧಾನ್ಯಗಳು ಮುಂತಾದುವುಗಳನ್ನು ತಂದಿದ್ದರು. ನಂತರ ಶಿಕ್ಷಕರ ನೆರವಿನಿಂದ ಅವುಗಳನ್ನು ಪ್ರೊಟೀನ್, ಕಾರ್ಬೋಹೈಡ್ರೇಟ್, ಲಿಪಿಡ್ಗಳು, ಹಾಗೂ ಖನಿಜ ಮತ್ತು ಲವಣಾಂಶಗಳೆಂದು ತರಕಾರಿಗಳನ್ನು ವಿಂಗಡಿಸಿದರು. ನಂತರ ಸಹ ಶಿಕ್ಷಕಿಯಾದ ಶ್ರೀಮತಿ ನಯನ ಕೆ...

ಕಲ್ಲುಗುಂಡಿ : ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ಕಲ್ಲುಗುಂಡಿಯ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಆರ್. ಎಮ್. ಎಸ್. ಎ. ಪ್ರೌಢಶಾಲೆ ಕಲ್ಲುಗುಂಡಿ ಶಾಲೆಯಲ್ಲಿ ಸಮವಸ್ತ್ರ ವಿತರಣೆ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಸಮವಸ್ತ್ರ ವಿತರಣೆ ಮಾಡಿದರು. ಕಾರ್ಯಕ್ರಮದಲ್ಲಿ ಆರ್. ಎಮ್.ಎಸ್.ಎ.ಪ್ರೌಢಶಾಲೆ ಮುಖ್ಯ ಶಿಕ್ಷಕಿ ಜಯಶ್ರೀ, ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಚಂದ್ರಾವತಿ ಡಿ.ಈ., ಶಿಕ್ಷಕರಾದ...
Ad Widget

110 ಕೆ.ವಿ. ಸಬ್ ಸ್ಟೇಷನ್ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಆರಂಭ

ಸುಳ್ಯದ ಬಹುದಿನಗಳ ಬೇಡಿಕೆಯಾಗಿದ್ದ 110 ಕೆವಿ ವಿದ್ಯುತ್ ಸಬ್ ಸ್ಟೇಷನ್ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಆರಂಭಗೊಂಡಿದೆ. ಸಚಿವ ಅಂಗಾರ ಹಾಗೂ ಇಂಧನ ಸಚಿವರಾದ ಸುನಿಲ್ ಕುಮಾರ್ ಅವರು 110 ಕೆ.ವಿ.ಸಬ್ ಸ್ಟೇಷನ್ ನಿರ್ಮಾಣದ ಬಗ್ಗೆ ವಿಶೇಷ ಆಸಕ್ತಿ ವಹಿಸಿದ್ದರು. ಅರಣ್ಯ ಇಲಾಖೆಯ ಅಡೆ ತಡೆ ನಿವಾರಿಸಲು ಸತತ ಪ್ರಯತ್ನ ನಡೆಸಿದ್ದರು. ಇದೀಗ ಕೆಪಿಟಿಸಿಎಲ್ 110 ಕೆ.ವಿ....

ಅಚ್ರಪ್ಪಾಡಿ ಶಾಲೆಯಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ

ಅಚ್ರಪ್ಪಾಡಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆ.16 ರಂದು ಪೋಷಣ್ ಅಭಿಯಾನ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ವಿವಿಧ ತರಕಾರಿಗಳು ಮತ್ತು ಸಿರಿಧಾನ್ಯಗಳನ್ನು ವೃಕ್ಷದ ರೀತಿಯಲ್ಲಿ ಅಲಂಕರಿಸಿ ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರಾದ ಶ್ರೀಮತಿ ಶ್ವೇತ ಕಾರ್ಯಕ್ರಮದ ಮಹತ್ವ ವನ್ನು ತಿಳಿಸಿದರು. ಶಿಕ್ಷಕರಾದ ಶ್ರೀಮತಿ ಜಾನ್ಸಿ ಮತ್ತು ಕುಮಾರಿ ಪೃಥ್ವಿ ಹಾಗೂ ಅಡುಗೆ ಸಹಾಯಕರು ಉಪಸ್ಥಿತರಿದ್ದರು.

ಜಾಲ್ಸೂರು : ಅಂಗಡಿಯಿಂದ ಮೊಬೈಲ್ ಕಳ್ಳತನ – ಈ ದೃಶ್ಯ ಸಿ.ಸಿ. ಕ್ಯಾಮರಾದಲ್ಲಿ ಸೆರೆ

https://youtu.be/gCATJiOZBoc ಗ್ರಾಹಕನಂತೆ ನಟಿಸಿ ಅಂಗಡಿಯಿಂದ ಮೊಬೈಲ್ ಫೋನನ್ನು ಕಳವುಗೈದ ಘಟನೆ ಜಾಲ್ಸೂರಿನಿಂದ ವರದಿಯಾಗಿದ್ದು, ಈ ದೃಶ್ಯ ಸಿ.ಸಿ. ಕ್ಯಾಮರಾದಲ್ಲಿ ದಾಖಲಾಗಿರುವುದಾಗಿ ತಿಳಿದುಬಂದಿದೆ.ಸೆ.15ರಂದು ರಾತ್ರಿ 10 ಗಂಟೆಯ ವೇಳೆಗೆ ಅಪರಿಚಿತ ವ್ಯಕ್ತಿಯೋರ್ವ ಖರೀದಿಯ ನೆಪದಲ್ಲಿ ಜಾಲ್ಲೂರಿನ ಶ್ರೀನಿವಾಸ ಕಾಂಪ್ಲೆಕ್ಸ್ ನಲ್ಲಿರುವ ದೇವಪ್ಪ ಅವರ ಗೂಡಂಗಡಿಗೆ ಬಂದು ಟೇಬಲ್ ಮೇಲೆ ಇಟ್ಟಿದ್ದ ಅವರ ಮೊಬೈಲನ್ನು ಕಳವುಗೈದಿದ್ದು, ಈ ದೃಶ್ಯ...

ಸುಬ್ರಹ್ಮಣ್ಯ :- ಶುಭಕರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 8ನೇ ವಾರ್ಷಿಕ ಮಹಾಸಭೆ

ಶುಭಕರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸುಬ್ರಹ್ಮಣ್ಯ ಇದರ 8ನೇ ವಾರ್ಷಿಕ ಮಹಾಸಭೆಯು ಸೆ.16 ರಂದು ಕಛೇರಿಯ ಆವರಣದಲ್ಲಿ ದಿನೇಶ್.ಬಿ.ಎನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಶ್ರೀಮತಿ ಶ್ವೇತಾ ರವರ ಪ್ರಾರ್ಥನೆಯೊಂದಿಗೆ ಸಭೆಯು ಆರಂಭಗೊಂಡಿತು. ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷರಾದ ದಿನೇಶ್.ಬಿ.ಎನ್ ರವರು ಸಂಘದ ಬೆಳವಣಿಗೆಯ ಬಗ್ಗೆ ಹೇಳಿದರು. ಅದೇ ರೀತಿ ಸಂಘದ ಉಪಾಧ್ಯಕ್ಷರಾದ ರವೀಂದ್ರ...

ಕಲ್ಮಡ್ಕ : ಮಹಿಳಾ ಗ್ರಾಮ ಸಭೆ

ಕಲ್ಮಡ್ಕ ಗ್ರಾಮ ಪಂಚಾಯತಿನ 2022-23 ನೇ ಸಾಲಿನ ಮಹಿಳಾ ಗ್ರಾಮ ಸಭೆಯು ಸೆ.16 ರಂದು ನಡ್ಕ ಶಿವಗೌರಿ ಕಲಾಮಂದಿರ ಪಡ್ಪಿನಂಗಡಿಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿನ ಅಧ್ಯಕ್ಷರಾದ ಹಾಜಿರಾ ಗಫೂರ್, ಸದಸ್ಯರಾದ ಲೋಕೇಶ್ ಆಕ್ರಿಕಟ್ಟೆ, ಪವಿತ್ರ ಕುಧ್ವ, ಮೀನಾಕ್ಷಿ ಕೆ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಗೋಪಾಲಕೃಷ್ಣ ಕೆ, ಪ್ರಮೀಳಾ ಟಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ...

ಹರಿಪುರ ಸ.ಕಿ.ಪ್ರಾ. ಶಾಲೆಗೆ ಕೋಟೆ ಫೌಂಡೇಶನ್ ನಿಂದ ಬ್ಯಾಗ್ ವಿತರಣೆ

ಕೋಟೆ ಫೌಂಡೇಶನ್ ರೈಟ್ ಟೂ ಲೀವ್ ಮತ್ತು ಆಪ್ ಡೈನಾಮಿಕ್ಸ್ (ಪಾರ್ಟ್ ಆಫ್ ಸಿಸ್ಕೊ) ನಿಂದ ಸ.ಕಿ.ಪ್ರಾ. ಶಾಲೆ ಹರಿಪುರ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ ಸೆ. 13 ರಂದು ನಡೆಯಿತು. ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಲತಾ ಕುಮಾರಿ ಮತ್ತು ಪತ್ರಕರ್ತರಾದ ಮಹೇಶ್ ಪುಚ್ಚಪಾಡಿಯವರು ಸಹಕರಿಸಿದರು. ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯೆ...

ಬೊಮ್ಮಾರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಬೊಮ್ಮಾರು ಹಾಲು ಉತ್ಪಾದಕರ ಸಹಕಾರ ಸಂಘದ 2021-22ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯು ಸೆ.13ರಂದು ಬೊಮ್ಮಾರು ಶಿವಾಮೃತ ಸಂಘದ ಕಟ್ಟಡದಲ್ಲಿ ಸಂಘದ ಅಧ್ಯಕ್ಷ ದಿವಾಕರ ನಾಯಕ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ಇದೇ ಸಂದರ್ಭದಲ್ಲಿ ಯುವ ಹೈನುಗಾರ ಪ್ರಸಾದ್ ಜೋಗಿಮೂಲೆ ಮತ್ತು ನಿವೃತ್ತ ದೈ.ಶಿ.ಶಿ. ಲಕ್ಷ್ಮೀಶ ರೈ ಯವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ದ.ಕ.ಉಪ ವ್ಯವಸ್ಥಾಪಕ ಡಾ| ಸತೀಶ್ ರಾವ್,...

ಸುಳ್ಯ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯಾಗಿ ಶ್ರೀಮತಿ ಗೀತಾ ಅಧಿಕಾರ ಸ್ವೀಕಾರ

ಸುಳ್ಯ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯಾಗಿ ಶ್ರೀಮತಿ ಗೀತಾರವರು ಸೆ.12ರಂದು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭ ತಾಲ್ಲೂಕು ವಿಸ್ತರಣಾಧಿಕಾರಿ ಶುಭಾ ಎ. ಹಾಗೂ ತಾಲೂಕು ನಿಲಯಗಳ ಮೇಲ್ವಿಚಾರಕರು, ಸಿಬ್ಬಂದಿ ವರ್ಗದವರು ಗೀತಾರವರನ್ನು ಹೂವು ನೀಡಿ ಸ್ವಾಗತಿಸಿದರು.11 ವರ್ಷಗಳಿಂದ ಪುತ್ತೂರಿನಲ್ಲಿ ನಿಲಯ ಪಾಲಕರಾಗಿದ್ದ ಗೀತಾರವರು, ಅದಕ್ಕಿಂತ ಮೊದಲು ಬೆಳ್ತಂಗಡಿಯಲ್ಲಿ 9ವರ್ಷ ನಿಲಯಪಾಲಕರಾಗಿ ಕರ್ತವ್ಯ ನಿರ್ವಹಿಸಿದ್ದರು. ಇದೀಗ ತಾಲ್ಲೂಕು...
Loading posts...

All posts loaded

No more posts

error: Content is protected !!