- Friday
- August 21st, 2026
ಗಣೇಶೋತ್ಸವದ ಪ್ರಯುಕ್ತ ಪಂಜ ದೇವಸ್ಥಾನದ ವಠಾರದಲ್ಲಿ ನಡೆದ ವಾಲಿಬಾಲ್ ಪಂದ್ಯಾಟದಲ್ಲಿ ಸಾಯಿ ಮಧುರ ಗುತ್ತಿಗಾರು ತಂಡ ಪ್ರಥಮ ಸ್ಥಾನ ಹಾಗೂ ಶಿವ ಪ್ರೆಂಡ್ಸ್ ಪಂಜ ದ್ವಿತೀಯ ಸ್ಥಾನವನ್ನು ಪಡೆದಿತ್ತು. ಈ ಎರಡು ತಂಡಗಳು ತಮಗೆ ಸಿಕ್ಕಿದ ಬಹುಮಾನದ ಮೊತ್ತವನ್ನು ಹಾಗೂ ಆಟಗಾರರು ಮತ್ತು ಊರವರ ಸಹಾಯದಿಂದ ಒಟ್ಟು ರೂ. 6500 ವನ್ನು ನೆರವು ನೀಡುವ ಮುಖಾಂತರ...
ಮಂಜುಶ್ರೀ ಕ್ರೀಡಾಂಗಣ ದರ್ಖಾಸ್ತು ಪಾಲೆಪ್ಪಾಡಿಯಲ್ಲಿ ಆ.31 ರಂದು ಮಂಜುಶ್ರೀ ಗೆಳೆಯರ ಬಳಗ ಪಾಲೆಪ್ಪಾಡಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಾಲೆಪ್ಪಾಡಿ ವತಿಯಿಂದ 30 ನೇ ವರ್ಷದ ಶ್ರೀ ಗಣೇಶ ಚತುರ್ಥಿ ಆಚರಣೆ ನಡೆಯಿತು.ಬೆಳಿಗ್ಗೆ ಶ್ರೀ ಗಣಪತಿ ಹವನ ಹಾಗೂ ಶ್ರೀ ಗಣೇಶ ಮೂರ್ತಿ ಪ್ರತಿಷ್ಠಾಪನೆ ನಡೆಯಿತು. ಮಧ್ಯಾಹ್ನ ಮಹಾಪೂಜೆ,ಪ್ರಸಾದ ವಿತರಣೆ ಹಾಗೂ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು....
ಮಂಡೆಕೋಲು ಭಜನಾ ಮಂದಿರದಲ್ಲಿ ಆ.31ರಂದು ಮಂಡೆಕೋಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಇವರ ಆಶ್ರಯದಲ್ಲಿ 15ನೇ ವರ್ಷದ ಗಣೇಶೋತ್ಸವ ಆಚರಣೆ ನಡೆಯಿತುಬೆಳಗ್ಗೆ ಗಣಪತಿ ಹೋಮ ಹಾಗೂ ಗಣಪತಿ ಮೂರ್ತಿ ಪ್ರತಿಷ್ಠೆ. ಬಳಿಕ ಭಜನಾ ಸೇವೆ ಹಾಗೂ ಸಾರ್ವಜನಿಕರಿಗೆ ಮತ್ತು ಮಕ್ಕಳಿಗೆ ವಿವಿಧ ಸ್ಪಧೆಗಳು ನಡೆಸಲಾಯಿತು. ಹರಿಕಥಾ ಪ್ರಸಂಗ...
ಸಂಪಾಜೆ : ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಭವನದಲ್ಲಿ ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಸಂಪಾಜೆ ಹಾಗೂ ಪಯಸ್ವಿನಿ ಯುವಕ ಸಂಘ(ರಿ) ಸಂಪಾಜೆ ಕೊಡಗು ಸಂಯುಕ್ತ ಆಶ್ರಯದಲ್ಲಿ 28 ನೇ ವರ್ಷದ ಗೌರಿ ಗಣೇಶೋತ್ಸವ ಆಚರಣೆ. ಬೆಳಗ್ಗೆ 7 ಗಂಟೆಗೆ ಗೌರಿಷ್ಠಾಪನೆಯ ನಂತರ ಪೂಜಾ ವಿಧಿ ವಿಧಾನಗಳು ನಡೆದ ನಂತರ ಪುರುಷರ ಹಾಗೂ ಮಹಿಳೆ ಕೆಸರು ಗದ್ದೆ...
ಕಾಲೇಜಿನಲ್ಲಿ ಅನ್ಯಧರ್ಮದ ವಿದ್ಯಾರ್ಥಿಗಳು ಪರಸ್ಪರ ಪ್ರೀತಿಸುತ್ತಿದ್ದರೆನ್ನುವ ಕಾರಣಕ್ಕೆ ಅನ್ಯಕೋಮಿನ ವಿದ್ಯಾರ್ಥಿಯ ಮೇಲೆ ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರು ಒಂಬತ್ತು ಮಂದಿಯನ್ನು ಅರೆಸ್ಟ್ ಮಾಡಿದ್ದರು. ನ್ಯಾಯಾಲಯ ಎಲ್ಲಾ ಅರೋಪಿಗಳನ್ನು ಜಾಮೀನು ಮುಖಾಂತರ ಬಿಡುಗಡೆ ಮಾಡಿದೆ. ಸುಳ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ...
ಸುಳ್ಯ ತಾಲೂಕಿನ ತಂಟೆಪ್ಪಾಡಿ ಮನೆಯಲ್ಲಿ ಆ.31ರಂದು ಖ್ಯಾತ ಯಕ್ಷಗಾನ ಮದ್ದಳೆ ಕಲಾವಿದರಾದ ತಂಟೆಪ್ಪಾಡಿ ಶಂಭಟರ ನೆನಪಿನ ಗ್ರಂಥ ಬಿಡುಗಡೆ ಸಮಾರಂಭ ಜರುಗಿತು. ಈ ನೆನಪಿನ ಗ್ರಂಥವನ್ನು ಹಿರಿಯ ಸಾಹಿತಿ ಮತ್ತು ಖ್ಯಾತ ಕವಿಗಳಾದ ಶ್ರೀ ಸುಬ್ರಾಯ ಚೊಕ್ಕಾಡಿ ಇವರು ಲೋಕಾರ್ಪಣೆಗೊಳಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಲಾ ಪೋಷಕರು ಹಾಗೂ ಹವ್ಯಕ ವಿಭಾಗದ ಗುರಿಕಾರರಾಗಿರುವ ಶ್ರೀ ಮುಂಡುಗಾರು ಸುಬ್ರಮಣ್ಯ...
ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ಆ.31 ರಿಂದ ಸೆ.4 ರ ವರೆಗೆ ಸುಳ್ಯ ಸಿದ್ಧಿವಿನಾಯಕ ಸೇವಾ ಸಮಿತಿ, ಸಾರ್ವಜನಿಕ ದೇವತಾರಾಧನಾ ಸಮಿತಿ ಇವುಗಳ ಆಶ್ರಯದಲ್ಲಿ 54 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಪ್ರಯುಕ್ತ ಬೆಳಿಗ್ಗೆ ಪುರೋಹಿತ್ ಆದಿನಾರಾಯಣ ರವರ ನೇತೃತ್ವದಲ್ಲಿ ಗಣಪತಿ ಹವನ ನಡೆದು ಗಣಪತಿ ಮೂರ್ತಿಯ ಪ್ರತಿಷ್ಠೆ ನೆರವೇರಿಸಲಾಯಿತು. ನಂತರ ಸ್ವಾತಂತ್ರ್ಯ ವೀರ ಸಾವರ್ಕರ್ ವೇದಿಕೆಯಲ್ಲಿ...
ಸಾರ್ವಜನಿಕ ಶ್ರೀ ಗಣೇಶೋತ್ಸವ ಯೇನೆಕಲ್ಲು ಇದರ ಆಶ್ರಯದಲ್ಲಿ 15ನೇ ವರ್ಷದ ಶ್ರೀ ಗಣೇಶೋತ್ಸವ ಆ. 31 ಮತ್ತು ಸೆ.1ರಂದು ಯೇನೆಕಲ್ಲಿನ ಬಾಲಾಡಿ ಶ್ರೀ ಆದಿಶಕ್ತಿ ಭಜನಾ ಮಂದಿರದಲ್ಲಿ ನಡೆಯಿತು. ಎ. 31ರಂದು ಗಣಪತಿ ಹೋಮ, ಗಣೇಶನ ವಿಗ್ರಹ ಪ್ರತಿಷ್ಠಾಪನೆ ನಡೆಯಿತು. ಸಂಜೆ ಗಂಟೆ 6.00 ರಿಂದ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಸೆ.1ರಂದು...
ಸರ್ಕಾರಿ ಪದವಿ ಕಾಲೇಜು ಸುಳ್ಯದಲ್ಲಿ ಆ.30 ರಂದು ನಡೆದ ಶಾಲಾ ವಿದ್ಯಾರ್ಥಿಗಳ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ. ಉಪ ಪ್ರಾಂಶುಪಾಲರಾದ ಪ್ರಕಾಶ್ ಮೂಡಿತ್ತಾಯರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಎನ್.ಎಂ.ಪಿ.ಸಿ ಅರಂತೋಡು ಇಂದಿನ ಮುಖ್ಯ ಶಿಕ್ಷಕರಾದ ನಿವೃತ್ತ ನಿವೃತ್ತರಾಗಿ ಆಗಮಿಸಿದ ಆನಂದ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಶಿಕ್ಷಣ ಸಂಯೋಜಕಿ ಹಾಗೂ ಕಾರ್ಯಕ್ರಮಗಳ...
ಸುಬ್ರಹ್ಮಣ್ಯ ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 1996 ರಲ್ಲಿ ಖಾಯಂ ಗುಮಾಸ್ತರಾಗಿ ಕರ್ತವ್ಯಕ್ಕೆ ಸೇರಿ 2016 ರಿಂದ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಬಡ್ತಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿ ಆ.31 ರಂದು ನಿವೃತ್ತಿ ಹೊಂದಿದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಕುಜುಂಬಾರು ಅವರಿಗೆ ಆ.30 ರಂದು ಪ್ರಾ.ಕೃ.ಪ.ಸ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು. ಸುಬ್ರಹ್ಮಣ್ಯ ಐನೆಕಿದು...
Loading posts...
All posts loaded
No more posts
