- Thursday
- August 20th, 2026
ಸುಳ್ಯ ಅಮರ ಸಂಘಟನಾ ಸಮಿತಿಯ ವಾರ್ಷಿಕ ಮಹಾಸಭೆಯು ಆ. 14 ರಂದು ಅಮರ ಮುಡ್ನೂರು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕುಸುಮಾಧರ ರವರು ವಹಿಸಿದ್ದರು. ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು. ಗೌರವ ಅಧ್ಯಕ್ಷ ಕುಸುಮಾಧರ ಹುಟ್ಟೂರು, ಅಧ್ಯಕ್ಷ ಪ್ರವೀಣ್ ಕುಲಾಲ್ ಪೈಲಾರ್, ಉಪಾಧ್ಯಕ್ಷ ಜಯಪ್ರಸಾದ್ ಸಂಕೇಶ, ಕಾರ್ಯದರ್ಶಿ ಭವಿತ ಬೇರಿಕೆ, ಜತೆಕಾರ್ಯದರ್ಶಿ...
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ನಾಗರಿಕಾ ಸೇವಾ ಕೇಂದ್ರದಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಅಥವಾ http://pmkisan.gov.in or ಪಾರ್ಮಸ್ರ ಕಾರ್ನರ್ ಮೂಲಕ ಆಧಾರ್ ಸಂಖ್ಯೆ ದಾಖಲಿಸಿ ಆಗಸ್ಟ್-31ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸದಿದ್ದಲ್ಲಿ ರೈತರ ಆರ್ಥಿಕ ನೆರವು ಸ್ಥಗಿತಗೊಳಿಸಲಾಗುವುದು. ಸುಳ್ಯ ತಾಲೂಕಿನ 3182 ರೈತ ಫಲಾನುಭವಿಗಳು ಇ-ಕೆವೈಸಿ ಮಾಡಲು ಬಾಕಿ...
ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸುಳ್ಯ ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ ಸುಳ್ಯದ ದೇವರಾಜ ಅರಸು ಭವನ, ಅಮೈ, ಕೊಡಿಯಾಲಬೈಲ್ ಇಲ್ಲಿ ನಡೆದ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಡಿ.ದೇವರಾಜ ಅರಸುರವರ 107 ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು...
ದುಗ್ಗಲಡ್ಕ: ಮಿತ್ರ ಯುವಕ ಮಂಡಲ ಕೊಯಿಕುಳಿ ಹಾಗೂ ಕುರಲ್ ತುಳುಕೂಟ ಇದರ ಆಶ್ರಯದಲ್ಲಿ ರೋಟರ್ಯಾಕ್ಟ್ ಕ್ಲಬ್ ಇದರ ಸಹಯೋಗದೊಂದಿಗೆ ಶ್ರೀಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆಗಳು ದುಗ್ಗಲಡ್ಕ ಪ್ರೌಢಶಾಲಾ ವಠಾರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಕುರಲ್ ತುಳುಕೂಟದ ಸಂಚಾಲಕ ಕೆ.ಟಿ.ವಿಶ್ವನಾಥ ವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉದ್ಯಮಿ ಶ್ರೀಕಾಂತ್ ಮಾವಿನಕಟ್ಟೆ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ನ.ಪಂ.ಸದಸ್ಯೆ...
ರಾಜ್ಯ ಅಲ್ಪಸಂಖ್ಯಾತರ ಕಾಂಗ್ರೇಸ್ ಘಟಕದ ಕಾರ್ಯದರ್ಶಿಯಾಗಿ ಸಂಪಾಜೆ ಗ್ರಾಮ ಪಂಚಾಯತ್ನ ಹಿರಿಯ ಸದಸ್ಯ ಅಬೂಸಾಲಿ ಗೂನಡ್ಕ ಅವರನ್ನು ರಾಷ್ಟ್ರೀಯ ಅಲ್ಪಸಂಖ್ಯಾತ ಕಾಂಗ್ರೇಸ್ ಘಟಕದ ಅಧ್ಯಕ್ಷ ಇಮ್ರಾನ್ ಪ್ರತಾಫ್ ಗರ್ ರವರ ಅನುಮೋದನೆಯೊಂದಿಗೆ ರಾಜ್ಯ ಅಲ್ಪಸಂಖ್ಯಾತ ಕಾಂಗ್ರೇಸ್ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ರವರು ನೇಮಕಗೊಳಿಸಿರುತ್ತಾರೆ. ಅಬೂಸಾಲಿ ಅವರು ಮಡಿಕೇರಿ ಜಿಲ್ಲಾ ಎನ್.ಎಸ್.ಯು.ಐ ನ ಪ್ರಧಾನ ಕಾರ್ಯದರ್ಶಿಯಾಗಿ, ಮಡಿಕೇರಿ...
ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಆಶ್ರಮದ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸ್ವಾಮಿಜಿಯವರು ಮಾತನಾಡಿ ಭಕ್ತಿಯಿಂದ ಮಾಡಿದ ಕರ್ಮ ಶ್ರೇಷ್ಠ. ಯಾವುದೇ ಕಾರ್ಯಕ್ಕೆ ಇಳಿಯುವ ಮೊದಲು ಅದರ ಒಳಿತು ಕೆಡುಕಗಳ ಬಗ್ಗೆ ಅಲೋಚಿಸಬೇಕು. ಶ್ರೀ ಕೃಷ್ಣನು ದುಷ್ಟರ ಸಂವಾಹರ ಮಾಡಿ ಶಿಷ್ಟರ ರಕ್ಷಣೆ...
ಸಾಮಾನ್ಯವಾಗಿ ಮಕ್ಕಳು ಪ್ರವಾಸ, ಸುತ್ತಾಟ, ದೂರ ಸಂಚಾರಕ್ಕೆ ತಮ್ಮ ಸ್ನೇಹಿತರು, ತಮ್ಮ ಒಡನಾಡಿಗಳೊಂದಿಗೆ ತೆರಳಿ ಸಂಭ್ರಮಿಸುವುದು ಪ್ರಸ್ತುತ ದಿನದಲ್ಲಿ ನಾವು ಕಾಣುತ್ತೇವೆ. ಆದರೆ ಮೈಸೂರಿನ ಈ ಯುವಕನೊಬ್ಬ ತನ್ನ ತಾಯಿಯೊಂದಿಗೆ ದೇಶ ಸುತ್ತುತ್ತಾ ತೀರ್ಥಯಾತ್ರೆ ಮಾಡುತ್ತಿದ್ದು, ಇದೀಗ ದ.ಕ.ಜಿಲ್ಲೆಯ ಯಾತ್ರೆಯಲ್ಲಿದ್ದಾರೆ. ಮೈಸೂರಿನ ಕೃಷ್ಣಕುಮಾರ್(44) ಹಾಗೂ ಅವರ ತಾಯಿ ಚೂಡ ರತ್ಮಮ್ಮ (72) ಎಂಬವರು ಜೊತೆಯಾಗಿ ಸ್ಕೂಟರ್...
ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಪಡೆ ಇದರ ಸಂಯುಕ್ತ ಆಶ್ರಯದಲ್ಲಿ ಜೀವರಕ್ಷಾ ಟ್ರಸ್ಟ್ ಮತ್ತು ಫಾದರ್ ಮುಲ್ಲರ್ ಆಸ್ಪತ್ರೆ, ಮಂಗಳೂರು ಇವರ ಸಹಯೋಗದೊಂದಿಗೆ ಆ.19 ಶುಕ್ರವಾರದಂದು ಮಂಗಳೂರು ನಗರದ ಮೇರಿಹಿಲ್ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ಗೃಹರಕ್ಷಕರಿಗೆ ಹೃದಯ ಸ್ತಂಭನ ಮರುಪೂರಣ ಕೌಶಲ್ಯ ತರಬೇತಿ ಶಿಬಿರ ನಡೆಸಲಾಯಿತು. ಕಾರ್ಯಕ್ರಮದ ಮುಖ್ಯ...
ಭಾವೈಕ್ಯ ಯುವಕ ಮಂಡಲದ ಸದಸ್ಯರಿಂದ ಪೆರುವಾಜೆ ಶಾಲಾ ಆವರಣದಲ್ಲಿ ಪ್ರವೀಣ್ ನೆಟ್ಟಾರ್ ಸ್ಮರಣಾರ್ಥ ಇಂದು ಸಸಿ ನೆಡಲಾಯಿತು. ಈ ಸಂದರ್ಭದಲ್ಲಿ ಪೆರುವಾಜೆ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ತೇಜಪ್ಪ, ಭಾವೈಕ್ಯ ಯುವಕ ಮಂಡಲದ ಸದಸ್ಯರಾದ ರಜನೀಶ್ ಪೆರುವಾಜೆ, ಜಗನ್ನಾಥ ಪೆರುವಾಜೆ, ಹರ್ಷಿತ್ ಪೆರುವಾಜೆ ಉಪಸ್ಥಿತರಿದ್ದರು.
ಸುಳ್ಯದ ಅಮ್ಮ ಚಿಣ್ಣರ ಮನೆ ಮತ್ತು ಯುವಜನ ಸಂಯುಕ್ತ ಮಂಡಳಿಯ ಜಂಟಿ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುದ್ದುಕೃಷ್ಣ ಮುದ್ದು ರಾಧಾ ಸ್ಪರ್ಧೆ ಆ.21 ರಂದು ಯುವಹನ ಸಂಯುಕ್ತ ಮಂಡಳಿಯಯುವ ಸದನ ಸಭಾಂಗಣದಲ್ಲಿ ನಡೆಯಲಿದೆ. ಅಮ್ಮ ಚಿಣ್ಣರ ಮನೆಯ ಹಿರಿಯ ವಿದ್ಯಾರ್ಥಿಗಳಾದ ಮನ್ವಿತ್ ಅಡ್ಪಂಗಾಯ, ಭೂಮಿಕಾ ವಿ. ಕೆ. ದೀಪ ಪ್ರಜ್ವಲನೆ ಮಾಡಲಿದ್ದಾರೆ. ಕಾರ್ಯಕ್ರಮದ...
Loading posts...
All posts loaded
No more posts
