- Thursday
- August 20th, 2026
ಸುಳ್ಯದ ಸೈಂಟ್ ಜೋಸೆಫ್ ಪ್ರೌಢಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಹಂಶಿತ್ ಕುಮಾರ್ ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಯೋಗ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಇವನು ಕೃಷಿಕ, ಅಡ್ಕಾರ್ ಶರತ್ ಕುಮಾರ್ ಹಾಗೂ ಶೋಭಾ ದಂಪತಿಗಳ ಪುತ್ರ, ಯೋಗ ಶಿಕ್ಷಕರಾದ ಸಂತೋಷ್...
ಪೆರುವಾಜೆ: ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ತನ್ನ ಶಾಸಕ ನಿಧಿಯಿಂದ ರೂ 2.50 ಲಕ್ಷ ಅನುದಾನವನ್ನು ಗ್ರಾಮ ಪಂಚಾಯತ್ ಕಟ್ಟಡ ಅಭಿವೃದ್ಧಿ ಕಾಮಗಾರಿಗೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ಪಿ ಸಿ ಜಯರಾಮರವರ ಶಿಫಾರಸಿನ ಮೇರೆಗೆ ನೀಡಿದ್ದಾರೆ ಎಂದು ಪಂಚಾಯತ್ ಅಧ್ಯಕ್ಷ ರಾದ ಜಗನ್ನಾಥ ಪೂಜಾರಿ ಹಾಗೂ ಸದಸ್ಯರಾದ ಸಚಿನ್ ರಾಜ್...
ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾಗಿರುವ ರಸ್ತೆಗಳ ಅಭಿವೃದ್ಧಿಯ ಅನುದಾನಕ್ಕಾಗಿ ಸಚಿವ ಅಂಗಾರರ ನೇತೃತ್ವದಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸಿ ಸಿ ಪಾಟೀಲ್ ರವರಿಗೆ ಮನವಿ ಮಾಡಲಾಗಿದೆ. ಸಚಿವರಾದ ಅಂಗಾರ ರವರ ನೇತೃತ್ವದಲ್ಲಿ ವಿಕಾಸ ಸೌಧದ ಕಛೇರಿಯಲ್ಲಿ ಸಿ ಸಿ ಪಾಟೀಲ್ ರವರನ್ನು ಭೇಟಿಯಾಗಿ ಸುಳ್ಯ ಕ್ಷೇತ್ರದಲ್ಲಿ ವಿವಿಧ ರಸ್ತೆಗಳ ಅಭಿವೃದ್ಧಿಗೆ ಹಾಗೂ ನೆರೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳ ಮೂಲಭೂತ...
ಕಲ್ಮಡ್ಕ ಗ್ರಾಮ ಪಂಚಾಯತ್ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಪಂಚಶ್ರೀ ಯುವಕ ಮಂಡಲ(ರಿ) ಪಂಬೆತ್ತಾಡಿ ಇದರ ಸಹಯೋಗದೊಂದಿಗೆ ಆ.19 ರಂದು ಕರಿಕ್ಕಳ ದಿಂದ ಪಂಬೆತ್ತಾಡಿಯ ವರೆಗೆ ರಸ್ತೆ ಬದಿಯ ಕಳೆಗಳನ್ನು ತೆಗೆದು ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ಕಲ್ಮಡ್ಕ ಗ್ರಾಮ ಪಂಚಾಯತಿನ ಉಪಾಧ್ಯಕ್ಷರಾದ ಮಹೇಶ್...
ನವಚೇತನ ಯುವಕಮಂಡಲ(ರಿ) ಬೊಳುಬೈಲು ಜಾಲ್ಸೂರು ಸುಳ್ಯ ಇದರ ವತಿಯಿಂದ 28ನೇ ವರುಷದ ಶ್ರೀಕೃಷ್ಣ ಜನ್ಮಾಷ್ಣಮಿಯು ಆ.18ರಂದು ಬೊಳುಬೈಲು ನವಚೇತನ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಿವರಾಮ ಗೌಡ ನಡುಬೆಟ್ಟು ನೆರವೇರಿಸಿದರು, ಅಧ್ಯಕ್ಷತೆಯನ್ನು ಯುವಕಮಂಡಲದ ಅಧ್ಯಕ್ಷ ಶಶಿಪ್ರಸಾದ್ ಕಾಟೂರು ವಹಿಸಿದ್ದರು. ಪುರುಷರಿಗೆ, ಮಹಿಳೆಯರಿಗೆ, ಮತ್ತು ಮಕ್ಕಳ ವಿವಿದ ಆಟೋಟ ಸ್ವರ್ಧೆಗಳು ನಡೆಯಿತು. 5ವರುಷದ ಕೆಳಗಿನ ಮಕ್ಕಳಿಗೆ ಶ್ರೀಕೃಷ್ಣ...
ಜಲಶ್ರೀ ಪ್ರತಿಷ್ಠಾನ ಕಡ್ಲಾರು, ಕಿರಣರಂಗ ಅಧ್ಯಯನ ಸಂಸ್ಥೆ ಗುತ್ತಿಗಾರು, ಕಲಾಮಾಯೆ ಏನೆಕಲ್ ಇವುಗಳ ವತಿಯಿಂದ ಆ.21 ರಂದು ಸುಳ್ಯದ ಚೆನ್ನಕೇಶವ ದೇವಸ್ಥಾನದಲ್ಲಿ ಅಮೃತ ಸಾಹಿತ್ಯೋತ್ಸವ ನಡೆಯಲಿದ್ದು, ಸಾಹಿತ್ಯೋತ್ಸವದ ಅಧ್ಯಕ್ಷತೆಯನ್ನು ನಿವೃತ್ತ ಸಿ.ಡಿ.ಪಿ.ಓ ನೀರಬಿದಿರೆ ನಾರಾಯಣ ಅವರು ವಹಿಸಿಕೊಳ್ಳಲಿದ್ದು, ನಿವೃತ್ತ ಪ್ರಾಂಶುಪಾಲರಾದ ಬಾಬು ಗೌಡ ಅಚ್ರಪ್ಪಾಡಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಆನ್ಲೈನ್ ನಲ್ಲಿ ಈ ಹಿಂದೆ ನಡೆದ...
https://youtu.be/Vx6M8CMS-ro ಅಜ್ಜಾವರ ಗ್ರಾಮದ ಮೇನಾಲದಲ್ಲಿ ದರ್ಗಾ ಸಮೀಪವಿರುವ ವಿವಾದಿತ ಜಾಗದಲ್ಲಿ ಮೇನಾಲದ ಕೃಷ್ಣಾಷ್ಟಮಿ ಸಮಿತಿಯವರು ವಾಹನ ಪಾರ್ಕಿಂಗ್ ಗಾಗಿ ಜೆಸಿಬಿಯಲ್ಲಿ ನೆಲ ಸಮತಟ್ಟು ಮಾಡಿದ ವಿಚಾರವಾಗಿ ದರ್ಗಾದವರ ಆಕ್ಷೇಪಕ್ಕೆ ಕಾರಣವಾಗಿ ವಿವಾದ ಕೇಂದ್ರವಾಗಿದ್ದು, ಪೋಲೀಸರು ಹಾಗೂ ಕಂದಾಯ ಇಲಾಖೆಯರು ಸ್ಥಳಕ್ಕೆ ಆಗಮಿಸಿ ಈ ಜಾಗದ ವಿಚಾರ ನ್ಯಾಯಾಲಯದಲ್ಲಿ ಇರುವುದರಿಂದ ಅಲ್ಲಿಯವರೆಗೆ ಯಥಾಸ್ಥಿತಿ ಕಾಪಾಡಲು ಸೂಚನೆ ನೀಡಿರುವ...
ಕೊಡಗು ಜಿಲ್ಲೆ ಕೊಯಿನಾಡು ಮತ್ತು ಸಂಪಾಜೆ ಭಾಗದಲ್ಲಿ ಮಳೆಹಾನಿಯಿಂದ ತೊಂದರೆಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿ ಜನರ ಅಹವಾಲು ಸ್ವೀಕರಿಸಿದರು. ಕೊಯಿನಾಡು ಕಿಂಡಿ ಅಣೆಕಟ್ಟು ಮತ್ತು ಸರಕಾರಿ ಶಾಲೆಯ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿದಾಗ ಕಿಂಡಿ ಅಣೆಕಟ್ಟುನ್ನು ತೆರವುಗೊಳಿಸಬೇಕು. ನಮಗೆ ಹೊಸ ಮನೆಗೆ ಬೇರೆ ಕಡೆ ಬದಲಿ ವ್ಯವಸ್ಥೆಯನ್ನು ಮಾಡಿ ಕೊಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದರು....
ಮಿಶೋ ಆ್ಯಪ್ ಮೂಲಕ ಬಹಳಷ್ಟು ಜನ ವಿವಿಧ ಉಡುಪು, ಗೃಹೋಪಯೋಗಿ ವಸ್ತುಗಳನ್ನು , ಸೌಂದರ್ಯ ವರ್ಧಕ, ಪಾದರಕ್ಷೆ ಸೇರಿದಂತೆ ಅನೇಕ ವಸ್ತುಗಳನ್ನು ಖರೀದಿ ಮಾಡಿದ್ದಾರೆ. ನೀವು ಮಾಡಿರಬಹುದು. ನೀವು ಸಂತುಷ್ಟ ಗ್ರಾಹಕರೋ ಇಲ್ಲವೋ ಅದು ಅವರವರ ಭಾವಕ್ಕೆ ಬಿಟ್ಟಿದ್ದು . ಆದರೆ ಇಲ್ಲಿ ಇದನ್ನೇ ಬಂಡವಾಳವಾಗಿಸಿ ಖದೀಮರ ತಂಡವೊಂದು ಸದ್ದಿಲ್ಲದೆ ವಂಚನಾ ಜಾಲ ವ್ಯಾಪಿಸಿದೆ. ಹೌದು...
Loading posts...
All posts loaded
No more posts
