ಕಳಂಜ: ಪಟ್ಟೆ ಗುಳಿಗನ ಬನದಲ್ಲಿ ಆಟಿಯ ಅಗೇಲು ಸೇವೆ

ಸುಮಾರು 100 ವರ್ಷಗಳಿಗೂ ಅಧಿಕ ಇತಿಹಾಸವಿರುವ ಕಳಂಜ ಗ್ರಾಮದ ಪಟ್ಟೆ ಗುಳಿಗ ದೈವಕ್ಕೆ ವರ್ಷಂಪ್ರತಿಯಂತೆ ಆಟಿಯ ಅಗೇಲು ಸೇವೆ ಆ.07ರಂದು ನಡೆಯಿತು. ಈ ಸಂದರ್ಭದಲ್ಲಿ ಗ್ರಾಮದ ಭಕ್ತಾದಿಗಳು ಉಪಸ್ಥಿತರಿದ್ದರು.

ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ದಿ. ಡಾ. ಕುರುಂಜಿ ವೆಂಕಟ್ರಮಣ ಗೌಡರ 9ನೇ ಪುಣ್ಯತಿಥಿ ಆಚರಣೆ

ಆಧುನಿಕ ಸುಳ್ಯದ ನಿರ್ಮಾತೃ , ಶಿಕ್ಷಣ ಬ್ರಹ್ಮ, ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕಾಧ್ಯಕ್ಷ ರಾದ ದಿ. ಡಾ. ಕುರುಂಜಿ ವೆಂಕಟ್ರಮಣ ಗೌಡರ 9ನೇ ವರ್ಷದ ಪುಣ್ಯತಿಥಿಯ ಪ್ರಯುಕ್ತ ನುಡಿನಮನ ಕಾರ್ಯಕ್ರಮವು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಇಂದು ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾದರ್ ಡಿ. ವಿ. ಯವರು ಕುರುಂಜಿ ಯವರ ತತ್ವ- ಆದರ್ಶಗಳನ್ನು...
Ad Widget

ಐವರ್ನಾಡು: ಸ್ವಚ್ಚತಾ ಕಾರ್ಯಕ್ರಮ

ಐವರ್ನಾಡು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಆ.7 ಬೆಳಗ್ಗೆ 7.00 ಗಂಟೆಯಿಂದ 9.00 ರವರೆಗೆ ಐವರ್ನಾಡು ಗ್ರಾಮದ ವಾಹನ ಚಾಲಕ ಮತ್ತು ಮಾಲಕರ ವತಿಯಿಂದ ನಡೆಸಲಾಯಿತು. ಸ್ವಚ್ಛತಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ನ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮದ ವಾಹನ ಚಾಲಕರು ಹಾಗೂ ಮಾಲಕರು ಹಾಗೂ ಊರಿನ ಗ್ರಾಮಸ್ಥರು ಈ ಸಂಧರ್ಭದಲ್ಲಿ ಭಾಗವಹಿಸಿದ್ದರು.

ಉಪ್ಪುಕಳ :- ಸಂಪರ್ಕ ಕಳೆದುಕೊಂಡ 12 ಮನೆಗಳಿಗೆ ಸಂಪರ್ಕ ಸೇತುವೆ ನಿರ್ಮಿಸಿದ ಸೇವಾ ಭಾರತಿ ತಂಡ

ಸುಳ್ಯ ತಾಲೂಕಿನ ಬಾಳುಗೋಡು ಗ್ರಾಮದ ಉಪ್ಪುಕಳ ಎಂಬಲ್ಲಿ ಮೂರನೇ ಭಾರಿಗೆ ಕಾಲು ಸೇತುವೆ ಸಂಪರ್ಕ ಕಡಿತಗೊಂಡ 12 ಮನೆಗಳಿಗೆ ಸೇವಾ ಭಾರತಿ ತಂಡದವರು ಆ.05 ರಂದು ತಡರಾತ್ರಿಯವರೆಗೂ ಕೆಲಸ ನಿರ್ವಹಿಸಿ ಕಿರು ಸೇತುವೆ ನಿರ್ಮಾಣ ಮಾಡುವ ಮೂಲಕ ಸಂಪರ್ಕ ಸಾಧಿಸಿದ್ದು, ಇನ್ನು ಬಾಕಿ ಉಳಿದ ಕೆಲಸಗಳನ್ನು ಆ.06 ರಂದು ಪೂರ್ಣಗೊಳಿಸಿದ್ದಾರೆ. ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್...

ಪಂಬೆತ್ತಾಡಿ ಸಹಕಾರಿ ಸಂಘಕ್ಕೆ ಶೇ. 100 ಸಾಲ ವಸೂಲಾತಿಗಾಗಿ ಜಿಲ್ಲಾ ಬ್ಯಾಂಕ್ ಪ್ರಶಸ್ತಿ

2021-22 ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸಂಘದ ಹೊರಬಾಕಿ ಸಾಲದ ವಸೂಲಾತಿ ಪೈಕಿ ಶೇ 100 ಸಾಧನೆಗೈದ ಪಂಬೆತ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ ನೀಡಿ ಗೌರವಿಸಿದೆ. ಆ. 05ರಂದು ನಡೆದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ 2021-22 ನೇ ಸಾಲಿನ ವಾರ್ಷಿಕ...

ವೆಂಕಟರಮಣ ಸೊಸೈಟಿಯಲ್ಲಿ ನಿರ್ದೇಶಕರಿಗೆ ಸನ್ಮಾನ

ಸುಳ್ಯದ ವೆಂಕಟರಮಣ ಸೊಸೈಟಿಯ ಸಾಮಾನ್ಯ ಸಭೆಯಲ್ಲಿ ಸಂಘದ ಇಬ್ಬರು ನಿರ್ದೇಶಕರಿಗೆ ಸನ್ಮಾನ ನಡೆಸಲಾಯಿತು. ಸಂಘದ ನಿರ್ದೇಶಕರಾದ ಪಿ.ಎಸ್ ಗಂಗಾಧರರವರು ಟಿಎಪಿಸಿಎಂಎಸ್ ಇದರ ಉಪಾಧ್ಯಕ್ಷರಾಗಿ , ಹಾಗೂ ಇನ್ನೋರ್ವ ನಿರ್ದೇಶಕರಾಗ ಎ.ವಿ ತೀರ್ಥರಾಮರವರು ಕರ್ನಾಟಕ ರಾಜ್ಯ ಮೀನುಗಾರಿಕಾ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಇಬ್ಬರಿಗೂ ಸೊಸೈಟಿಯ ಸಾಮಾನ್ಯ ಸಭೆಯಲ್ಲಿ ಸನ್ಮಾನ ನಡೆಸಲಾಯಿತು. ಈ ಸಂದರ್ಭದಲ್ಲಿ ಸೊಸೈಟಿ ಅಧ್ಯಕ್ಷ ಪಿ.ಸಿ...

ಭಾರತೀಯ ಸೇನೆಯ ಪೂರ್ವ ಸಿದ್ಧತಾ ಪರೀಕ್ಷೆ ಬಗ್ಗೆ ತರಬೇತಿಗೆ ಅರ್ಜಿ ಆಹ್ವಾನ

ಭಾರತೀಯ ಸೇನೆ ಹಾಗೂ ಸಮವಸ್ತ್ರ ಸೇವೆಗಳಿಗೆ ಸೇರ ಬಯಸುವ ಕರ್ನಾಟದ ರಾಜ್ಯದ ಪರಿಶಿಷ್ಟ ಜಾತಿ ಅರ್ಹ ಅಭ್ಯರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ 2022-23ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡುತ್ತಿದ್ದು, ಅರ್ಜಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:15.08 2022 ಆಗಿರುತ್ತದೆ ಎಂದು ಸುಳ್ಯ...

ಅಚ್ರಪ್ಪಾಡಿ : ತಂಬಾಕು ನಿಯಂತ್ರಣ ಕುರಿತು ಮಾಹಿತಿ ಕಾರ್ಯಕ್ರಮ

ಕೊಲ್ಲಮೊಗ್ರ ಪ್ರಾಥಮಿಕ ಆರೋಗ್ಯ ಕೇಂದ್ರ ಇದರ ಉಪಕೇಂದ್ರ ಎಲಿಮಲೆಯಲ್ಲಿ ಸಮಾಜ ಮತ್ತು ಕುಟುಂಬ ಕಲ್ಯಾಣ ಯೋಜನೆ ಹಾಗೂ ತಂಬಾಕು ನಿಯಂತ್ರಣ ಕೋಶ ಮಂಗಳೂರು ಇದರ ಸಹಭಾಗಿತ್ವದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಚ್ರಪ್ಪಾಡಿಯಲ್ಲಿ ತಂಬಾಕು ನಿಯಂತ್ರಣ ಸಮಿತಿಯನ್ನು ಆ.06 ರಂದು ರಚಿಸಲಾಯಿತು. ಹಾಗೂ ತಂಬಾಕು ನಿಯಂತ್ರಣ ಖಾಯಿದೆ (COTPA-2003) ಬಗ್ಗೆ ಮಾವಿನಕಟ್ಟೆ ಉಪಕೇಂದ್ರದ ಸಮುದಾಯ ಆರೋಗ್ಯ...

ಸ್ಕಾಲರ್ ಶಿಪ್ ಪಡೆಯಲು ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನ

2021-22ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ/ಸ್ನಾತಕೋತರ ಪದವಿ/ಮೆಡಿಕಲ್ /ಇಂಜಿನಿಯರಿಂಗ್ ಇತರ ಕೋರ್ಸುಗಳಲ್ಲಿ ಶೇಕಡಾ 60% ಹೆಚ್ಚು ಅಂಕಗಳಿಸಿ ಪ್ರಥಮ ಪ್ರಯತ್ನದಲ್ಲಿ ಉತ್ತೀಣರಾದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಅಂತರ್ಜಾಲದಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿಯನ್ನು ಸಲ್ಲಿಸಿದ ನಂತರ ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲರಿಂದ ದೃಢೀಕರಿಸಿ, ಒಂದು ವಾರದೊಳಗಾಗಿ ಅರ್ಜಿಯನ್ನು, ಅಗತ್ಯ...

ಲ್ಯಾಂಪ್ಸ್ ಸಹಕಾರ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ

ಸುಳ್ಯ ತಾಲೂಕು ಲ್ಯಾಂಪ್ಸ್ ಸಹಕಾರ ಸಂಘ 2021-22 ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಪ್ರಗತಿಯನ್ನು ಗುರುತಿಸಿ ವಿಶೇಷ ಪ್ರೋತ್ಸಾಹಕ ಬಹುಮಾನ ಪ್ರಶಸ್ತಿಯನ್ನು ಆ.05 ರಂದು ನಡೆದ ಎಸ್ ಸಿ ಡಿ ಡಿ ಸಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷರಾದ ಸೀತಾನಂದ ಎಸ್. ಮತ್ತು ಕಾರ್ಯದರ್ಶಿ ಚಂದ್ರಶೇಖರ ಡಿ. ಯವರನ್ನು ಪ್ರಶಸ್ತಿ ಸ್ಮರಣಿಕೆ ನೀಡಿ ಸನ್ಮಾಸಿದರು....
Loading posts...

All posts loaded

No more posts

error: Content is protected !!