ಶೇ.100 ಸಾಲ ವಸೂಲಾತಿಗೆ ಐವರ್ನಾಡು ಸೊಸೈಟಿಗೆ ಜಿಲ್ಲಾ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

2021-22 ಸಾಲಿನಲ್ಲಿ ಶೇ.100% ಸಾಲ ವಸೂಲಾತಿಗಾಗಿ ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರಶಸ್ತಿ ಸ್ವೀಕರಿಸಲಾಯಿತು.ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಎಂ.ಎನ್ ರಾಜೇಂದ್ರ ಕುಮಾರ್ ಅವರು ಆ.6 ರಂದು ಮಂಗಳೂರಿನಲ್ಲಿ ಸಂಘದ ಅಧ್ಯಕ್ಷರಾದ ಎಸ್.ಎನ್.ಮನ್ಮಥ ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರವಿಪ್ರಸಾದ್ ಸಿ.ಕೆ.ಯವರನ್ನು ಶಾಲು ಹೊದಿಸಿ, ಫಲ ಪುಷ್ಪ ಸ್ಮರಣಿಕೆ ಹಾಗೂ ಸಾಧನಾ ಪ್ರಶಸ್ತಿಯನ್ನು...

ಸಂಪಾಜೆ ಸೊಸೈಟಿಗೆ ಸತತ 9ನೇ ಬಾರಿ ಜಿಲ್ಲಾ ಪ್ರಶಸ್ತಿ

ದ. ಕ. ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ 2021-22 ಸಾಲಿನ ಸಮಗ್ರ ಕಾರ್ಯಚಟುವಟಿಕೆಗೆ 9ನೇ ಬಾರಿಗೆ ಜಿಲ್ಲಾ ಬ್ಯಾಂಕ್ ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ ಎನ್ ರಾಜೇಂದ್ರ ಕುಮಾರ್ ರವರಿಂದ ಇಂದು ಮಂಗಳೂರಿನ ಜಿಲ್ಲಾ ಬ್ಯಾಂಕಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಮತ್ತು ಸ್ಮರಣಿಕೆಯನ್ನು ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ...
Ad Widget

ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವಿಶಿಷ್ಟ ಸಾಧನಾ ಪ್ರಶಸ್ತಿ

ಸುಳ್ಯ ಅಲ್ಪಸಂಖ್ಯಾತರ ವಿವಿಧೋದ್ಧೇಶ ಸಹಕಾರಿ ಸಂಘ ಸಂಸ್ಥೆಗೆ 2021-22 ನೇ ಸಾಲಿನ ವಿಶಿಷ್ಟ ಸಾಧನ ಪ್ರಶಸ್ತಿ ದೊರೆತಿದೆ.ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಈ ಪ್ರಶಸ್ತಿ ನೀಡುತ್ತಿದ್ದು, ಸುಳ್ಯ ಅಲ್ಪಸಂಖ್ಯಾತರ ವಿವಿಧೋದ್ಧೇಶ ಸಹಕಾರಿ ಸಂಘ ತನ್ನ ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ವಿಶಿಷ್ಟ ಸಾಧನೆಗೆ ಈ ಪ್ರಶಸ್ತಿ ಲಭಿಸಿದೆ. ಇಂದು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಪ್ರಧಾನ...

ಭಾರೀ ಮಳೆ : ಆರೋಗ್ಯ ಇಲಾಖೆಯಿಂದ ಮನೆ ಭೇಟಿ | ಸೇವೆಯಲ್ಲಿ ಸ್ವಯಂ ಸೇವಕರು

ಹರಿಹರ ಪಲ್ಲತ್ತಡ್ಕ, ಕೊಲ್ಲಮೊಗ್ರು, ಬಾಳುಗೋಡು, ಕಲ್ಮಕಾರು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಭಾರೀ ಹಾನಿಯಾಗುತ್ತಿರುವ ಘಟನೆಗಳು ಮುಂದುವರಿದಿವೆ.ಆರೋಗ್ಯ ಇಲಾಖೆಯಿಂದ ಮನೆ ಭೇಟಿ ಹಾಗೂ ಸ್ವಯಂ ಸೇವಕರಿಂದ ಶ್ರಮಸೇವೆ ನಡೆಯುತ್ತಿದೆ. ಭಾರೀ ಮಳೆಯಿಂದಾಗಿ ಸಂಪರ್ಕ ಕಡಿತಗೊಂಡಿರುವ ನಾಲ್ಕು ಗ್ರಾಮಗಳಲ್ಲಿ ಸಿಲುಕಿರುವ ಮನೆಗಳಿಗೆ ಆರೋಗ್ಯ ಇಲಾಖೆಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಭೇಟಿ ನೀಡಿ ಸಂತ್ರಸ್ತರ, ವೃದ್ಧರ, ಗರ್ಭಿಣಿಯರ ಆರೋಗ್ಯ...

ಅರಂತೋಡು : ಭಜನಾ ಮಂದಿರದಲ್ಲಿ ವರಮಹಾಲಕ್ಷ್ಮೀ ಪೂಜೆ

ಆರಂತೋಡು ಶ್ರೀ ದುರ್ಗಾ ಮಾತಾ ಭಜನಾ ಮಂದಿರದಲ್ಲಿ ವರಮಹಾಲಕ್ಷ್ಮಿ ಆಚರಣಾ ಸಮಿತಿ ವತಿಯಿಂದ ವರಮಹಾಲಕ್ಷ್ಮಿ ಪೂಜೆಯು ವಿಜೃಂಭಣೆಯಿಂದ ನಡೆಯಿತು. ವರಮಹಾಲಕ್ಷ್ಮಿ ಪೂಜೆಯ ಮಹತ್ವ ಹಾಗೂ ರಕ್ಷಾ ಬಂಧನ ಬಗ್ಗೆ ಬೇಬಿ ವಿದ್ಯಾ ಪೂಜಾರಿಮನೆ ಇವರು ಭೌದ್ಧಿಕ್ ನಡೆಸಿಕೊಟ್ಟರು.

ಮಡಪ್ಪಾಡಿ : ಬಾಳಿಕಳ ಕೇಪಳಕಜೆ ರಸ್ತೆ ಸಂಪರ್ಕ ಕಡಿತ

ಮಡಪ್ಪಾಡಿ ಗ್ರಾಮದ ಬಾಳಿಕಳ ಕೇಪಳಕಜೆ ರಸ್ತೆಯಲ್ಲಿ ಭಾರಿ ಮಳೆಗೆ ಮೋರಿ ಹಾನಿಯಾಗಿ ರಸ್ತೆ ಕುಸಿದಿದೆ. ಇದರಿಂದಾಗಿ ಕೇಪಳಕಜೆ ಭಾಗದ 7 ಮನೆಗಳಿಗೆ ರಸ್ತೆ ಸಂಪರ್ಕ ಇಲ್ಲದಾಗಿದೆ. ಈ ಬಗ್ಗೆ ಸ್ಥಳೀಯಾಡಳಿತ ಶೀಘ್ರ ಗಮನಹರಿಸಬೇಕೆಂದು ನಿವಾಸಿಗಳು ಒತ್ತಾಯಿಸಿದ್ದಾರೆ.

ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವಿಶಿಷ್ಟ ಸಾಧನಾ ಪ್ರಶಸ್ತಿ

ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನೀಡುವ 2021-22ನೇ ಸಾಲಿನ ವಿಶಿಷ್ಟ ಸಾಧನಾ ಪ್ರಶಸ್ತಿಗೆ ಸುಳ್ಯದ ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘ ಆಯ್ಕೆಯಾಗಿದೆ. ಕಳೆದ 24 ವರ್ಷಗಳಿಂದ ಕಾರ್ಯಚರಿಸುತ್ತಿರುವ ಸುಳ್ಯ ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘ ತನ್ನ ಕಾರ್ಯ ವ್ಯಾಪ್ತಿಯಲ್ಲಿ ಸಾಧಿಸಿರುವ ವಿಶಿಷ್ಟ ಸಾಧನೆ ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿಯನ್ನು ಅಗಸ್ಟ್ 5...

ಮಳೆಯ ಆರ್ಭಟಕ್ಕೆ ಕಂದ್ರಪ್ಪಾಡಿ – ಬಾಳೆಗುಡ್ಡೆ ರಸ್ತೆ ಸಂಪೂರ್ಣ ಹಾನಿ

ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ ಬಾಳೆಗುಡ್ಡೆ ರಸ್ತೆ ಕಳೆದೆರಡು ದಿನಗಳಿಂದ ಸುರಿದ ಭಾರಿ ಮಳೆಗೆ ಸಂಪೂರ್ಣ ಹಾನಿಯಾಗಿದೆ. ರಸ್ತೆ ಬದಿ ಬೃಹತ್ ಗುಂಡಿಬಿದ್ದಿದ್ದು ಡಾಮರೆಲ್ಲ ಕಿತ್ತು ಹೋಗಿ ಸಂಚಾರಕ್ಕೆ ಅಡಚಣೆಯಾಗಿದೆ. ಈ ಬಗ್ಗೆ ಗ್ರಾಮ ಪಂಚಾಯತ್ ಹಾಗೂ ಜನಪ್ರತಿನಿಧಿಗಳು ಗಮನ ಹರಿಸಬೇಕೆಂದು ಮನವಿ ಮಾಡಿದ್ದಾರೆ.

ಕಲ್ಮಕಾರು :- ಗುಳಿಕ್ಕಾನದ 6 ಮನೆಯ 21 ಜನರು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ

ಹರಿಹರ ಪಲ್ಲತ್ತಡ್ಕ, ಕೊಲ್ಲಮೊಗ್ರು, ಬಾಳುಗೋಡು, ಕಲ್ಮಕಾರು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕಲ್ಮಕಾರು ಗ್ರಾಮದ ಗುಳಿಕ್ಕಾನ ಎಂಬಲ್ಲಿ ಗುಡ್ಡ ಜರಿಯುವ ಭೀತಿಯಲ್ಲಿದ್ದ 6 ಕುಟುಂಬಗಳ 21 ಜನರನ್ನು ಕಲ್ಮಕಾರು ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕಲ್ಮಕಾರು ಶಾಲೆಯ ಬಿಳಿಮಲೆ ಲಕ್ಷ್ಮೀ ರಾಮಣ್ಣ ರಂಗಮಂದಿರದ ತಾತ್ಕಾಲಿಕ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ. ವರದಿ...

ಬೆದ್ರುಪಣೆ : ಮಳೆಗೆ ಕೊಚ್ಚಿ ಹೋದ ಸೇತುವೆಯ ತಡೆಗೋಡೆ – ತುರ್ತು ವ್ಯವಸ್ಥೆ ಕಲ್ಪಿಸಿದ ನಾಗರಿಕಾ ಹಿತರಕ್ಷಣಾ ವೇದಿಕೆ

ಆ.03 ರಂದು ಸಂಜೆ ಸುರಿದ ಭಾರಿ ಮಳೆಗೆ ಅರಂತೋಡು ಗ್ರಾಮದ ಬೆದ್ರುಪಣೆಯಲ್ಲಿನ ಸೇತುವೆಯ ಒಂದು ಬದಿಯ ತಡೆಗೋಡೆ ಮತ್ತು ಮಣ್ಣು ನೀರಿನಲ್ಲಿ ಕೊಚ್ಚಿ ಹೋಗಿ ಸಂಪರ್ಕ ಕಡಿತಗೊಂಡಿತ್ತು. ಇದರಿಂದಾಗಿ ಹೊಳೆಯ ಇನ್ನೊಂದು ಬದಿಯ ಹಲವಾರು ಮನೆಗಳ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಹೊಳೆ ದಾಟಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿದ್ದರು. ಸಮಸ್ಯೆ ಕೂಡಲೇ ಸ್ಪಂದಿಸಿದ ಅಡ್ತಲೆಯ ನಾಗರಿಕ ಹಿತರಕ್ಷಣಾ...
Loading posts...

All posts loaded

No more posts

error: Content is protected !!