ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಕಂಪೆನಿಗೆ ಆಯ್ಕೆ

ಕೆ.ವಿ.ಜಿ. ಕಾಲೇಜ್ ಆಫ್ ಇಂಜಿನಿಯರಿಂಗ್‌ನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಗೌತಮಿ ದೇರಾಜೆ BRAVYNEX ENGINEERING LLPಗೆ ಆಯ್ಕೆಯಾಗಿರುತ್ತಾರೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ), ಕಮಿಟಿ ‘ಬಿ’ ಇದರ ಅಧ್ಯಕ್ಷರಾಗಿರುವ ಡಾ. ರೇಣುಕಾಪ್ರಸಾದ್ ಕೆ.ವಿ., ಸೆಕ್ರೆಟರಿ, ಎ.ಒ.ಎಲ್.ಇ.(ರಿ) ಕಮಿಟಿ ‘ಬಿ’ ಡಾ. ಜ್ಯೋತಿ ಆರ್. ಪ್ರಸಾದ್, ಡೈರೆಕ್ಟರ್ ಎ.ಒ.ಎಲ್.ಇ.(ರಿ) ಕಮಿಟಿ ‘ಬಿ’ ಡಾ....

ಪೋಷಕರು ಮಕ್ಕಳೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಬೇಕು: ಬಿ.ವಿ. ಸೂರ್ಯನಾರಾಯಣ

ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಮನೆ ಮತ್ತು ಶಾಲೆ ಎರಡು ಸಮಾನ ಪಾಲುದಾರರು. ಪೋಷಕರ ಪ್ರೋತ್ಸಾಹ ಶಿಕ್ಷಕರ ಮಾರ್ಗದರ್ಶನ ಮತ್ತು ವಿದ್ಯಾರ್ಥಿಗಳ ಪರಿಶ್ರಮ ಒಂದಾದಾಗ ಮಾತ್ರ ಗುಣಮಟ್ಟದ ಶಿಕ್ಷಣ ಸಾಧ್ಯವಾಗುತ್ತದೆ. ಶಿಕ್ಷಕರ ಹಾಗೂ ಪೋಷಕರ ಧನಾತ್ಮಕ ನಡವಳಿಕೆಗಳು ವಿದ್ಯಾರ್ಥಿಗಳಿಗೆ ಮಾದರಿಯಾಗಿರಬೇಕು. ಪೋಷಕರು ಮಕ್ಕಳೊಂದಿಗೆ ಧನಾತ್ಮಕ ಮನೋಭಾವದೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಬೇಕು. ಆ ಮೂಲಕ ಮಕ್ಕಳನ್ನು ಅರ್ಥ ಮಾಡಿಕೊಂಡು...
Ad Widget

ಸುಳ್ಯದ ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ ಉಪತಹಶೀಲ್ದಾರ್ ಆಗಿ ಭಡ್ತಿ

ಸುಳ್ಯ ತಾಲೂಕು ಕಚೇರಿಯಲ್ಲಿ ಕಂದಾಯ ನಿರೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಅವಿನ್ ರಂಗತ್ತಮಲೆ ಅವರು ಉಪತಹಶೀಲ್ದಾರ್ ಆಗಿ ಭಡ್ತಿ ಹೊಂದಿದ್ದು, ಸುಳ್ಯದಲ್ಲಿಯೇ ತಮ್ಮ ಸೇವೆಯನ್ನು ಮುಂದುವರಿಸಲಿದ್ದಾರೆ. ಅವರು ಬೆಳ್ತಂಗಡಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಸರ್ಕಾರಿ ಸೇವೆಯನ್ನು ಆರಂಭಿಸಿದ್ದರು. ಗ್ರಾಮ ಆಡಳಿತಾಧಿಕಾರಿಯಾಗಿ ಮರ್ಕಂಜ ಗ್ರಾಮಕ್ಕೆ ನೇಮಕಗೊಂಡ ಬಳಿಕ ಅಜ್ಜಾವರ, ಮಂಡೆಕೋಲು, ಉಬರಡ್ಕಮಿತ್ತೂರು ಹಾಗೂ ಜಾಲ್ಸೂರು ಗ್ರಾಮಗಳಲ್ಲಿ ವಿವಿಧ ಹಂತಗಳಲ್ಲಿ ಸೇವೆ...

ಜಾಗತಿಕ ಮಟ್ಟದ “ವಿಕಿಮೇನಿಯಾ” ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ ಭರತೇಶ ಅಲಸಂಡೆಮಜಲು ಆಯ್ಕೆ

ಹಂಪಿಯ ಕನ್ನಡ ವಿಶ್ವವಿದ್ಯಾಲಯದ ದ್ರಾವಿಡ ಸಂಸ್ಕೃತಿ ಅಧ್ಯಯನ ವಿಭಾಗದ ಪಿಎಚ್.ಡಿ ಸಂಶೋಧಕ ವಿದ್ಯಾರ್ಥಿ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಹಾಗೂ ಬ್ಯಾಂಕ್ ಆಫ್ ಬರೋಡದ ಉದ್ಯೋಗಿ ಪೆರ್ಲಂಪಾಡಿಯ ಭರತೇಶ ಅಲಸಂಡೆಮಜಲು ಅವರು ಜುಲೈ ತಿಂಗಳ 20ರಿಂದ 26ರವರೆಗೆ ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ನಡೆಯಲಿರುವ ಜಾಗತಿಕ ಮಟ್ಟದ “ವಿಕಿಮೇನಿಯಾ 2026” ಅಂತರರಾಷ್ಟ್ರೀಯ ಸಮ್ಮೇಳನಕ್ಕೆ...

ಏನೆಕಲ್ಲು : ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ; ಯುವಕ ಪೊಲೀಸ್ ವಶಕ್ಕೆ

ಜು.16 : ಕಡಬ ತಾಲೂಕಿನ ಏನೆಕಲ್ಲು ಗ್ರಾಮದ ಕಲ್ಲಾಜೆ ದೇವನಹಳ್ಳಿ ಪ್ರದೇಶದಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ದೂರುದಾರರ ಅಪ್ರಾಪ್ತ ಪುತ್ರಿ ಜುಲೈ 07ರಂದು ಏನೆಕಲ್ಲು ಗ್ರಾಮದ ತನ್ನ ಸ್ನೇಹಿತೆಯ ಮನೆಗೆ ತೆರಳಿದ್ದು, ಜುಲೈ...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ : 17-07-2026 ಗುರುವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197*01,ಮೇಷರಾಶಿ*,ಇಂದು ಈ ರಾಶಿಯವರು ಕೆಲಸದಲ್ಲಿ ಪ್ರಭುದ್ಧತೆ ಮೆರೆಯುತ್ತಾರೆ.ಶಿಸ್ತು ಮತ್ತು ಸಂಯಮದಿಂದ ಜೀವನ ಕಟ್ಟಿಕೊಳ್ಳುವ ಪ್ರಯತ್ನ ಸಾಗಲಿ. ನಿಮ್ಮಲ್ಲಿನ ವಿಶೇಷ ಪ್ರತಿಭೆಗಳಿಗೆ ಸೂಕ್ತ ವೇದಿಕೆ ದೊರೆಯುವುದು ನಿಶ್ಚಿತ. ಪ್ರೀತಿಯಲ್ಲಿ ಸಂತೋಷವಾಗಿರುವುದು ಹೇಗೆ ಎಂದು ತಿಳಿಯಿರಿ, ಗಮನಿಸಿ:-ಸ್ವಯಂ ಭರವಸೆಯನ್ನು ಅಭ್ಯಾಸ ಮಾಡಿಕೊಳ್ಳಿ, ಪರಿಹಾರ:-ಗಣಪತಿಗೆ ದೇವರಿಗೆ ಗರಿಕೆ ನೀಡಿ,...

ಗುತ್ತಿಗಾರು : ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಮಂತ್ರಿಮಂಡಲದ ಪದಗ್ರಹಣ ಸಮಾರಂಭ

ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ 2026-27 ಸಾಲಿನ ಕಾಲೇಜು ಮಂತ್ರಿಮಂಡಲದ ಪದಗ್ರಹಣ ಸಮಾರಂಭ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಶಾರದಾ ಪದವಿ ಪೂರ್ವ ಕಾಲೇಜು ಸುಳ್ಯ ಇದರ ನಿವೃತ ಇತಿಹಾಸ ಉಪನ್ಯಾಸಕರಾದ ಪ್ರಸನ್ನ.ನಿಡ್ಯಮಲೆ ಇವರು ಶೈಕ್ಷಣಿಕ ಸಾಲಿನ ಮಂತ್ರಿ ಮಂಡಲದ ಉದ್ಘಾಟನೆ ನೆರವೇರಿಸಿ ಶುಭಹಾರೈಸಿದರು. ಪ್ರಧಾನ ಮಂತ್ರಿ ಕಾಲೇಜು ವಿಭಾಗ ಮೇಘ.ಹೆಚ್.ಕೆ ಇವರಿಗೆ ಕಾಲೇಜು...

ಆರೋಗ್ಯ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಶಾಸಕಿ ಭಾಗೀರಥಿ ಮುರುಳ್ಯ

ವಿಧಾನ ಸೌಧದಲ್ಲಿ ನಡೆದ KFD ಸಭೆಯಲ್ಲಿ ಭಾಗವಹಿಸಿದ್ದ ಶಾಸಕರು ಕ್ಷೇತ್ರದಲ್ಲಿ ಪ್ರಮುಖವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಮತ್ತು ಸಿಬಂದಿ ಕೊರತೆಯ ಬಗ್ಗೆ ಸಭೆಯಲ್ಲಿ ತಿಳಿಸಿದರು. ಇದಕ್ಕೆ ಸಭೆಯ ಇತರ ಶಾಸಕರು ಕೂಡ ಧ್ವನಿಯಾಗಿ 24×7 ಸೇವೆಯನ್ನು ನೀಡುವಂತೆ ಸಚಿವರನ್ನು ಒತ್ತಾಸಿದರು. ಸಭೆಯ ನಂತರ ಸುಳ್ಯ ವಿಧಾನ ಸಭಾ ಕ್ಷೇತ್ರದ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಡಯಾಲಿಸಿಸ್...

ಕುಕ್ಕೆ ಸುಬ್ರಹ್ಮಣ್ಯ : ಆಶ್ಲೇಷ ನಕ್ಷತ್ರ ಹಿನ್ನೆಲೆ ಭಕ್ತರ ಸಾಲು

ಸುಬ್ರಹ್ಮಣ್ಯ ಜುಲೈ 16 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ತಿಂಗಳಿಗೊಮ್ಮೆ ಬರುವ ಆಶ್ಲೇಷ ನಕ್ಷತ್ರದಂದು ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಕ್ಷೇತ್ರಕ್ಕೆ ಬಂದು ಆಶ್ಲೇಷ ಬಲಿ ಸೇವೆ ಸಲ್ಲಿಸುವುದಾಗಿದೆ. ಅದೇ ರೀತಿ ಈ ಬಾರಿ ಮಳೆಗಾಲವಾದರೂ ಮಳೆ ಇಲ್ಲದ ಕಾರಣ ಹೆಚ್ಚಿನ ಭಕ್ತರು ಆಶ್ಲೇಷ ಸೇವೆಗೆಂದೆ ಬಂದು ನಿನ್ನೆ ಬುಧವಾರದಂದು ಕುಕ್ಕೆ ಕ್ಷೇತ್ರದ ದೇವಳದ ವಸತಿ...

ಸುಬ್ರಹ್ಮಣ್ಯದ ಗೃಹ ರಕ್ಷಕ ದಳದ ಸಿಬ್ಬಂದಿಗಳಿಗೆ ರೈನ್ ಕೋಟ್ ವಿತರಣೆ

ಸುಬ್ರಹ್ಮಣ್ಯ ಜುಲೈ 16 : ಸುಬ್ರಹ್ಮಣ್ಯ ಪೊಲೀಸ್ ಠಾಣಾ ಸುಪರ್ದಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 20 ಜನ ಗ್ರಹರಕ್ಷಕ ಸಿಬ್ಬಂದಿಯವರಿಗೆ ಸುಬ್ರಹ್ಮಣ್ಯದ ಅಖಿಲ ಭಾರತ ಅಯ್ಯಪ್ಪ ಸೇವಾ ಸಮಿತಿ ವತಿಯಿಂದ ರೈನ್ ಕೋರ್ಟ್ ಗುರುವಾರ ವಿತರಿಸಲಾಯಿತು.  ಸುಬ್ರಹ್ಮಣ್ಯದ ಕಾಶಿ ಕಟ್ಟೆ ಬಳಿಯ ಮೈದಾನದಲ್ಲಿ ಬೆಳಗ್ಗಿನ ಜಾವ ನಡೆದ ಕಾರ್ಯಕ್ರಮದಲ್ಲಿ ಅಯ್ಯಪ್ಪ ಸೇವಾ ಸಮಿತಿಯ ಸ್ಥಾಪಕ ಅಧ್ಯಕ್ಷ ಉಮೇಶ ಕೆ.ಎನ್...
Loading posts...

All posts loaded

No more posts

error: Content is protected !!