ಹರಿಹರ: ಹೊಳೆಗೆ ಬಿದ್ದ ಕ್ರೇನ್ ಆಪರೇಟರ್ -ನೀರಿಗೆ ಹಾರಿ ರಕ್ಷಿಸಿದ ಸೋಮಶೇಖರ ಕಟ್ಟೆಮನೆ

ಹರಿಹರಪಲ್ಲತಡ್ಕದ ಸೇತುವೆಗೆ ಪವಾಹದಲ್ಲಿ ಬಂದಿದ್ದ ಮರದ ದಿಮ್ಮಿಗಳು ಸಿಕ್ಕಿಹಾಕಿಕೊಂಡು ಅವಾಂತರವನ್ನೇ ಸೃಷ್ಟಿಸಿತ್ತು. ಈ ಮರಗಳು ತೆರವು ಕಾರ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕ್ರೇನ್ ಆಪರೇಟರ್ ಶರೀಫ್ ಎಂಬವರು ನದಿಗೆ ಬಿದ್ದಿದ್ದು ಅವರನ್ನು ರಕ್ಷಿಸಿದ ಘಟನೆ ಇಂದು ನಡೆದಿದೆ. ಅಪರೇಟರ್ ನೀರಿಗೆ ಬಿದ್ದ ತಕ್ಷಣ ಸೋಮಶೇಖರ್ ಕಟ್ಟೆಮನೆ ಎಂಬವರು ನೀರಿಗೆ ಅವರನ್ನು ರಕ್ಷಿಸಿದರು. ಸ್ಥಳೀಯರ ಸಹಕಾರದಿಂದ ಅವರನ್ನು...

ಹರಿಹರ: ಹೊಳೆಗೆ ಬಿದ್ದ ಕ್ರೇನ್ ಆಪರೇಟರ್ -ನೀರಿಗೆ ಹಾರಿ ರಕ್ಷಿಸಿದ ಸೋಮಶೇಖರ ಕಟ್ಟೆಮನೆ

ಹರಿಹರಪಲ್ಲತಡ್ಕದ ಸೇತುವೆಗೆ ಪವಾಹದಲ್ಲಿ ಬಂದಿದ್ದ ಮರದ ದಿಮ್ಮಿಗಳು ಸಿಕ್ಕಿಹಾಕಿಕೊಂಡು ಅವಾಂತರವನ್ನೇ ಸೃಷ್ಟಿಸಿತ್ತು. ಈ ಮರಗಳು ತೆರವು ಕಾರ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕ್ರೇನ್ ಆಪರೇಟರ್ ಶರೀಫ್ ಎಂಬವರು ನದಿಗೆ ಬಿದ್ದಿದ್ದು ಅವರನ್ನು ರಕ್ಷಿಸಿದ ಘಟನೆ ಇಂದು ನಡೆದಿದೆ. ಅಪರೇಟರ್ ನೀರಿಗೆ ಬಿದ್ದ ತಕ್ಷಣ ಸೋಮಶೇಖರ್ ಕಟ್ಟೆಮನೆ ಎಂಬವರು ನೀರಿಗೆ ಅವರನ್ನು ರಕ್ಷಿಸಿದರು. ಸ್ಥಳೀಯರ ಸಹಕಾರದಿಂದ ಅವರನ್ನು...
Ad Widget

ಆ.03; ಮಳೆಯಿಂದ ಹಾನಿಗೊಂಡ ಪ್ರದೇಶಗಳಿಗೆ ನಾಳೆ ಸಚಿವ ಸುನಿಲ್ ಕುಮಾರ್ ಭೇಟಿ

ದ.ಕ ಜಿಲ್ಲೆ ಉಸ್ತುವಾರಿ ಸಚಿವ, ಇಂಧನ, ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ.ಸುನಿಲ್ ಕುಮಾರ್ ಅವರು ನಾಳೆ (ಆ.3 ) ಬೆಳಗ್ಗೆ 9.30ಕ್ಕೆ ಸುಬ್ರಹ್ಮಣ್ಯ ಆಗಮಿಸಿ ಅಲ್ಲಿಂದ ಪ್ರಾಕೃತಿಕ ವಿಕೋಪ ಸಂಭವಿಸಿದ ಹರಿಹರ, ಕೊಲ್ಲಮೊಗ್ರು ಕಲ್ಮಕಾರು ಈ ಭಾಗಕ್ಕೆ ಭೇಟಿ ನೀಡಲಿದ್ದಾರೆ.

ಪ್ರವೀಣ್ ಕೊಲೆಯ ಪ್ರಧಾನ ಆರೋಪಿಗಳ ಶೀಘ್ರ ಪತ್ತೆಗೆ ಶೋಭ ಕರಂದ್ಲಾಜೆ ಒತ್ತಾಯ

ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರನ್ನು ಇಂದು ಸಂಸತ್ತಿನಲ್ಲಿ ಭೇಟಿ ಮಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಯವರು ನಮ್ಮ ಕಾರ್ಯಕರ್ತ ಶ್ರೀ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ಕೇಸನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದುದಕ್ಕಾಗಿ ಧನ್ಯವಾದ ತಿಳಿಸಿದರು. ಈ ಸಂದರ್ಭದಲ್ಲಿ ಕೇರಳದ ಗಡಿಪ್ರದೇಶವಾದ ಕರಾವಳಿ ಪ್ರದೇಶಗಳಲ್ಲಿ ರಾಷ್ಟ್ರ ವಿರೋಧಿ ಚಟುವಟಿಕೆಗಳು ಹೆಚ್ಚಾಗಿದ್ದು,...

ಸುಬ್ರಹ್ಮಣ್ಯ : ಮಕ್ಕಳನ್ನು ಕಳೆದುಕೊಂಡ ಕುಟುಂಬಕ್ಕೆ ಸಚಿವ ಎಸ್.ಅಂಗಾರರಿಂದ ಪರಿಹಾರಧನ ಹಸ್ತಾಂತರ

ಸುಬ್ರಹ್ಮಣ್ಯದಲ್ಲಿ ಆ.1 ರಂದು ನಡೆದ ಭೂಕುಸಿತದಿಂದಾಗಿ ಮೃತಪಟ್ಟ ಮಕ್ಕಳ ಕುಟುಂಬಕ್ಕೆ ರೂ.11 ಲಕ್ಷ 5 ಸಾವಿರ ಮೊತ್ತದ ಒಟ್ಟು 3 ಚೆಕ್ ನ್ನು ಸಚಿವ ಎಸ್. ಅಂಗಾರ ಆ. 2 ರಂದು ಕುಸುಮಾಧರಿಗೆ ಕುಸುಮಾಧರರ ತಂದೆ ಬೊಮ್ಮಣ ಗೌಡ ಕರಿಮಜಲುರವರ ನಿವಾಸದಲ್ಲಿ ವಿತರಿಸಿದರು. ಮೃತಪಟ್ಟ ಇಬ್ಬರು ಮಕ್ಕಳಿಗಾಗಿ ಸರಕಾರದಿಂದ ತಲಾ 5 ಲಕ್ಷದಂತೆ ಹಾಗೂ ಮನೆ...

ಮಡಪ್ಪಾಡಿ : “ಗ್ರಾಮ ಚದುರಂಗ ಆಟ ಆಡೋಣ” ಅಭಿಯಾನಕ್ಕೆ ಚಾಲನೆ

ಮಡಪ್ಪಾಡಿ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಓದುವ ಬೆಳಕು ಕಾರ್ಯಕ್ರಮದ ಅಂಗವಾಗಿ "ಗ್ರಾಮ ಚದುರಂಗ ಆಟ ಆಡೋಣ ಅಭಿಯಾನ" ಕಾರ್ಯಕ್ರಮಕ್ಕೆ ಜು.31 ರಂದು ಚಾಲನೆ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಮಡಪ್ಪಾಡಿ ಶಾಲಾ ವಿದ್ಯಾರ್ಥಿಗಳು ಸ್ಪರ್ಧಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಸಹ ಶಿಕ್ಷಕರು,ಗ್ರಾ.ಪಂ ಸಿಬ್ಬಂದಿಗಳು ಹಾಜರಿದ್ದರು.

ಎಣ್ಮೂರು: ಶಾಲಾ ಮಟ್ಟದ ಪ್ರತಿಭಾ ಕಾರಂಜಿ

ಮಕ್ಕಳ ಸುಪ್ತ ಪ್ರತಿಭೆಯನ್ನು ಗುರುತಿಸಿ ಬೆಳೆಸುವ ನಿಟ್ಟಿನಲ್ಲಿ ಸರ್ಕಾರ ನಡೆಸುವ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸ್ಪರ್ಧೆ ಪ್ರತಿಭಾ ಕಾರಂಜಿಯ ಶಾಲಾ ಮಟ್ಟದ ಸ್ಪರ್ಧೆಯು ಸರಕಾರಿ ಪ್ರೌಢ ಶಾಲೆ ಎಣ್ಮೂರಿನಲ್ಲಿ ಇಂದು ಜರುಗಿತು. ಶಾಲಾ ಹಿರಿಯ ಶಿಕ್ಷಕಿ ಶ್ರೀಮತಿ ಸುಮಿತ್ರಾ ಕೆ ಇವರು ಸ್ಪರ್ಧೆಯ ಕ್ರಮ ಸಂಖ್ಯೆ ಎತ್ತುವುದರ ಮೂಲಕ ಉದ್ಘಾಟಿಸಿ, ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ...

ಪಣಿಯಾಲ: ನಾಗರ ಪಂಚಮಿಯ ಪ್ರಯುಕ್ತ ನಾಗ ತಂಬಿಲ ಹಾಗೂ ಹಾಲಾಭಿಷೇಕ

ಪಣಿಯಾಲ ಬೈಲಿನ ಬಾಳಿಕಳ ಬೂಡು ಉಳ್ಳಾಕುಲು ಸಂಬಂಧಿತ ನಾಗ ಸನ್ನಿಧಿಯಲ್ಲಿ ಆ.2 ರಂದು ನಾಗರ ಪಂಚಮಿಯ ಪ್ರಯುಕ್ತ ನಾಗ ತಂಬಿಲ ಹಾಗೂ ಹಾಲಾಭಿಷೇಕ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರಾದ ಭವಾನಿ ಶಂಕರ ಗೌಡ ಬಾಳಿಕಳ ಹಾಗೂ ಪಣಿಯಾಲ ಬೈಲಿನ ಎಲ್ಲಾ ಭಕ್ತಾದಿಗಳು ಉಪಸ್ಥಿತರಿದ್ದರು.ವೈದಿಕ ಕಾರ್ಯಗಳನ್ನು ವೇದಮೂರ್ತಿ ಶ್ರೀ ಮುರಳಿ ಕೃಷ್ಣ ಭಟ್ ವಳಲಂಬೆ ನೆರವೇರಿಸಿದರು.

ಸುಳ್ಯ : ನಾಗರ ಪಂಚಮಿ ಆಚರಣೆ

ನಾಗರ ಪಂಚಮಿ ಪ್ರಯುಕ್ತ ಸುಳ್ಯದ ಚೆನ್ನಕೇಶವ ದೇವಸ್ಥಾನದ ಸಮೀಪ ನಾಗಬನದಲ್ಲಿ ನಾಗದೇವರಿಗೆ ಹಾಲೆರೆದು ಆರಾಧನೆ ಮಾಡಲಾಯಿತು.ಈ ಸಂದರ್ಭದಲ್ಲಿ ಭಕ್ತಾದಿಗಳು ನಾಗದೇವರಿಗೆ ಹಾಲು,ಸಿಯಾಳ ಅಭಿಷೇಕ ಮಾಡಿದರು.

ಹರಿಹರ ಪಲ್ಲತ್ತಡ್ಕ :- ಮಳೆಹಾನಿ ಪ್ರದೇಶಗಳಿಗೆ ಸಚಿವ ಎಸ್.ಅಂಗಾರ ಭೇಟಿ

ಭಾರೀ ಮಳೆ ಹಾನಿಗೊಳಗಾದ ಘಟನಾ ಸ್ಥಳಗಳಿಗೆ ಸಚಿವ ಎಸ್.ಅಂಗಾರ ಆ.02 ರಂದು ಭೇಟಿ ನೀಡಿದರು. ಹರಿಹರ ಪಲ್ಲತ್ತಡ್ಕ ಗ್ರಾಮದ ಹರಿಹರ ಪೇಟೆಯಲ್ಲಿ ಭಾರೀ ಹಾನಿ ಸಂಭವಿಸಿದ್ದು, ಘಟನಾ ಸ್ಥಳದಲ್ಲಿ ಜನಸ್ತೋಮವೇ ಸೇರಿದೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಎಸ್.ಅಂಗಾರ “ಮಳೆಯಿಂದ ಉಂಟಾದ ಹಾನಿಗಳ ಬಗ್ಗೆ ಮಾಹಿತಿ ಪಡೆದ ಕೂಡಲೇ ಆಗಮಿಸಿದ್ದೇನೆ. ರಾತ್ರಿ ಸುಬ್ರಹ್ಮಣ್ಯಕ್ಕೆ ಭೇಟಿ...
Loading posts...

All posts loaded

No more posts

error: Content is protected !!