ಸುಳ್ಯ : ಬಡ ಕುಟುಂಬಕ್ಕೆ ನೆರವಾದ ಕೆಪಿಸಿಸಿ ಸಂಯೋಜಕ ನಂದಕುಮಾರ್

ಅಮರಮಡ್ನೂರು ಗ್ರಾಮದ ಕಲ್ಲುಮಲೆ ಎಂಬಲ್ಲಿ ವಾಸವಾಗಿರುವ ಅಶಕ್ತ ಬಡಕುಟುಂಬದ ನಾರಾಯಣ ಮುಗೇರ ಮತ್ತು ಗಂಗು ದಂಪತಿಗಳ ಮನೆಯು ಗಾಳಿ ,ಮಳೆಯ ಸಂದರ್ಭದಲ್ಲಿ ಹಾನಿಗೊಂಡದ್ದನ್ನು ಮನಗಂಡು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಂಯೋಜಕ ನಂದಕುಮಾರ್ ರವರು ಸ್ಥಳೀಯ ಪಂಚಾಯತ್ ಸದಸ್ಯ ಅಶೋಕ್ ಚೂಂತಾರ್‌ರವರೊಂದಿಗೆ ಸ್ಥಳಕ್ಕೆ ತೆರಳಿ ಬಡ ಕುಟುಂಬಕ್ಕೆ ನೆರವು ನೀಡಿದ್ದಾರೆ. ಈ ಸಂದರ್ಭದಲ್ಲಿ ಸುಳ್ಯ ನಗರ...

ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಎ.ವಿ‌. ತೀರ್ಥರಾಮ ನೇಮಕ

ಸುಳ್ಯದ ಬಿಜೆಪಿ ಮುಖಂಡ, ಬಿಜೆಪಿ ರೈತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಎ.ವಿ. ತೀರ್ಥರಾಮ ಅಂಬೆಕಲ್ಲು ಅವರನ್ನು ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ರಾಜ್ಯ ಸರಕಾರ ನೇಮಕಗೊಳಿಸಿದೆ. ಧಾರ್ಮಿಕ, ಸಹಕಾರಿ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.
Ad Widget

ರಾಷ್ಟ್ರ ಮಟ್ಟದ ಡಾ. ಎ ಪಿ ಜೆ ಅಬ್ದುಲ್ ಕಲಾಂ ಎಜ್ಯುಕೇಷನ್ ಎಕ್ಸಲೆನ್ಸ್ ಅವಾರ್ಡ್ ಪ್ರಶಸ್ತಿಗೆ ಡಾ ಅನುರಾಧಾ ಕುರುಂಜಿ ಆಯ್ಕೆ.

ನವದೆಹಲಿಯ ಅಚೀವರ್ಸ್ ಅಸೋಸಿಯೇಷನ್ ಅಂಡ್ ಎಜ್ಯುಕೇಷನ್ ಗ್ರೋತ್ ಸಂಸ್ಥೆಯವರು ಪ್ರತೀವರ್ಷ ಕೊಡಮಾಡುವ ಡಾ. ಎ ಪಿ ಜೆ ಅಬ್ದುಲ್ ಕಲಾಂ ಎಜ್ಯುಕೇಷನ್ ಎಕ್ಸಲೆನ್ಸ್ ಅವಾರ್ಡ್ ರಾಷ್ಟ್ರ ಮಟ್ಟದ ಪ್ರಶಸ್ತಿಗೆ ವಲಯ ತರಬೇತುದಾರರಾಗಿರುವ ಡಾ. ಅನುರಾಧಾ ಕುರುಂಜಿಯವರು ಆಯ್ಕೆಯಾಗಿದ್ದಾರೆ. ವಲಯ ತರಬೇತುದಾರರಾಗಿ ಶಿಕ್ಚಣದ ಜೊತೆಗೆ ಬೇರೆ ಬೇರೆ ವರ್ಗದ ಜನರಿಗೆ 1600 ಕ್ಕಿಂತ ಅಧಿಕ ತರಬೇತಿಗಳನ್ನು ನೀಡುವ...

ಮೌನ ಮಾತಾದಾಗ ಆಲ್ಬಮ್ ಸಾಂಗ್ ಬಿಡುಗಡೆ – ಕೆಲವೇ ಕ್ಷಣಗಳಲ್ಲಿ ಅತೀ ಹೆಚ್ಚು ವೀಕ್ಷಣೆ

ಕೀರ್ತನ್ ಶೆಟ್ಟಿ ಸುಳ್ಯ ನಿರ್ದೇಶನದ, ಪ್ರಶಾಂತ್ ವಿಟ್ಲ ಸಾಹಿತ್ಯದ ,ವಿಷ್ಣು ನಾಗ್ ಶೇಟ್ ಹಾಡಿರುವ, ಯಶ್ ಫೋಟೋಗ್ರಾಫಿ ಛಾಯಾಗ್ರಹಣದ, ಜೀವನ್ ಕೆರೆಮೂಲೆ ಹಾಗೂ ಗಿರೀಶ್ ಇವರ ಸಂಕಲನದ ಬಹುನಿರೀಕ್ಷಿತ ಕನ್ನಡ ಆಲ್ಬಮ್ ಸಾಂಗ್ "ಮೌನ ಮಾತಾದಾಗ" ಭಾನುವಾರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಬಿಡುಗಡೆ ಕಾರ್ಯಕ್ರಮದಲ್ಲಿ ಕನ್ನಡದ ಹೆಸರಾಂತ ನಟ ಆರ್ಯನ್, ಕನ್ನಡ ಸಿನಿಮಾ...

ದೆಹಲಿಯ ಸ್ವಾತಂತ್ರ್ಯೋತ್ಸವದ ಪೆರೇಡ್‌ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ನೀಡುವ ರಾಜ್ಯ ತಂಡಕ್ಕೆ ಸುಳ್ಯದ ಕು.ಸಾಹಿತ್ಯ ಆಯ್ಕೆ

ಆಗಸ್ಟ್ ೧೫ರಂದು ದೆಹಲಿಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ನೃತ್ಯ ಪ್ರದರ್ಶನ ನೀಡಲು ಕರ್ನಾಟಕ ರಾಜ್ಯ ತಂಡ ತೆರಳಲಿದ್ದು ಈ ತಂಡದಲ್ಲಿ ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಸುಳ್ಯದ ಕು.ಸಾಹಿತ್ಯ ಪುರುಷೋತ್ತಮ್ ಭಾಗವಹಿಸಲಿದ್ದಾರೆ. ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಪ್ರಥಮ ಬಿಬಿಎ ವಿದ್ಯಾರ್ಥಿನಿಯಾಗಿರುವ ಕು.ಸಾಹಿತ್ಯ ಅಲ್ಲಿಯ ಎನ್.ಸಿ.ಸಿ. ತಂಡದ ವಿದ್ಯಾರ್ಥಿನಿ. ಇತ್ತೀಚೆಗೆ ನಡೆದ ಎನ್.ಸಿ.ಸಿ. ಕ್ಯಾಂಪ್‌ನಲ್ಲಿ ಸಾಹಿತ್ಯ...

ನಾಟಿ ವೈದ್ಯೆ ಶ್ರೀಮತಿ ವಿಜಯಲಕ್ಷ್ಮೀ ಕರುವಜೆ ಅವರಿಗೆ ಗೌರವ ಡಾಕ್ಟರೇಟ್

ಗುತ್ತಿಗಾರಿನ ವಳಲಂಬೆಯ ಹಳ್ಳಿ ವೈದ್ಯೆ ಶ್ರೀಮತಿ ವಿಜಯಲಕ್ಷ್ಮೀ ಕರುವಜೆ ಅವರಿಗೆ ಇಂಟರ್‌ನ್ಯಾಷನಲ್ ಪೀಸ್ ಯುನಿವರ್ಸಿಟಿ ವತಿಯಿಂದ ಡಾಕ್ಟರ್ ಆಪ್ ಏನ್ಶಿಯಂಟ್ ಇಂಡಿಯನ್ ಮೆಡಿಸಿನ್ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ. ಬಾಲ್ಯದಿಂದಲೇ ಔಷಧಿ ಸಸ್ಯ ವಿಶೇಷಗಳಲ್ಲಿ ಆಸಕ್ತಿಯನ್ನು ಹೊಂದಿದ್ದ ವಿಜಯ ಲಕ್ಷ್ಮಿಯವರು ತಮ್ಮ ತಾಯಿಯಿಂದ ಬಳುವಳಿಯಾಗಿ ಬಂದ ಪಾರಂಪರಿಕ ಔಷಧ ಪದ್ಧತಿಯನ್ನು ಅಭ್ಯಸಿಸಿದ್ದರು. ಸಂತಾನ ಇಲ್ಲದ ದಂಪತಿಗಳಿಗೆ...

ಜೆಸಿಐ ಸುಳ್ಯ ಸಿಟಿ ವತಿಯಿಂದ ಕೆಸರ್ ಡ್ ಕಸರತ್ತ್

ಜೆ ಸಿ ಐ ಸುಳ್ಯ ಸಿಟಿ ವತಿಯಿಂದ ಮ್ಯಾಟ್ರಿಕ್ಸ್ ವಿದ್ಯಾಸಂಸ್ಥೆ ಸುಳ್ಯ ಮತ್ತು ಬ್ರದರ್ಸ್ ಬಳ್ಳಡ್ಕ ರವರ ಸಹಯೋಗದೊಂದಿಗೆ ಬಳ್ಳಡ್ಕ ಗದ್ದೆಯಲ್ಲಿ ಕೆಸರ್ ಡ್ ಕಸರತ್ತ್ ಕ್ರೀಡಾಕೂಟ ಜು.24ರಂದು ನಡೆಯಿತು. ಈ ಕ್ರೀಡಾಕೂಟದ ಅಧ್ಯಕ್ಷತೆಯನ್ನು ಜೆಸಿಐ ಸುಳ್ಯ ಸಿಟಿ ಅಧ್ಯಕ್ಷ ಬಶೀರ್ ಯುಪಿ ವಹಿಸಿದ್ದರು. ಶಿವರಾಮ ಬಳ್ಳಡ್ಕ ದೀಪ ಬೆಳಗಿಸುವುದರೊಂದಿಗೆ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ಉಬರಡ್ಕ...

ಹರಿಹರ ಪಲ್ಲತ್ತಡ್ಕ ಹಾಗೂ ಐನೆಕಿದು ನೂತನ ಒಕ್ಕೂಟಗಳ ಜಂಟಿ ಪದಗ್ರಹಣ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಸುಬ್ರಹ್ಮಣ್ಯ ವಲಯದ ಹರಿಹರ ಪಲ್ಲತ್ತಡ್ಕ ಹಾಗೂ ಐನೆಕಿದು ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಜು.24 ರಂದು ಹರಿಹರ ಪಲ್ಲತ್ತಡ್ಕ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆಯಿತು. ಹರಿಹರ ಪಲ್ಲತ್ತಡ್ಕ ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು ಅವರು...

ಎಲಿಮಲೆ : ಸಚಿವ ಅಂಗಾರರಿಂದ ನೆಲ್ಲೂರು ಕೆಮ್ರಾಜೆ ಸೊಸೈಟಿಯ ನೂತನ ಸಭಾಭವನ ಲೋಕಾರ್ಪಣೆ- ಸಹಕಾರ ಸಂಘಗಳ ಮುಖಾಂತರ ಸ್ವ-ಉದ್ಯೋಗಕ್ಕೆ ಸಾಲ ನೀಡಲು ಸರಕಾರ ಚಿಂತನೆ – ಸಚಿವ ಅಂಗಾರ

ಸ್ವ ಉದ್ಯೋಗ ಮಾಡಲು ಸರಕಾರ ಸ್ವ ಸಹಾಯ ಸಂಘಗಳ ಮುಖಾಂತರ ಉತ್ತಮ ಅವಕಾಶ ನೀಡುತ್ತಿದೆ. ಮೀನುಗಾರಿಕೆ ಮುಖಾಂತರ ಉತ್ತಮ ಅವಕಾಶಗಳಿದೆ ಎಂದರು. ಸಹಕಾರ ಸಂಘಗಳಲ್ಲೂ ಸ್ವ ಉದ್ಯೋಗಕ್ಕೆ ಸಾಲ ನೀಡುವಂತಾಗಲೂ ಸರಕಾರ ಕಾನೂನು ರೂಪಿಸುತ್ತಿದೆ ಎಂದರು.ಅವರು ಜು.24 ರಂದು ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸಹಕಾರಿ ಸಂಘವು ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣ ಮಾಡಿದ...

8 ತಿಂಗಳಲ್ಲಿ ಸುಳ್ಯ ಕ್ಷೇತ್ರಕ್ಕೆ 100 ಕೋಟಿ‌ ಅನುದಾನ ಬಂದಿದೆ – ಅಸ್ತಿತ್ವ ಕಳೆದುಕೊಳ್ಳುವ ಭೀತಿಯಿಂದ ಸಚಿವರನ್ನು ಕಾಂಗ್ರೆಸ್ ಟೀಕೆ ಮಾಡುತ್ತಿದೆ – ಬಿಜೆಪಿ

ಕಳೆದ 8 ತಿಂಗಳಿನಿಂದ ಅಂಗಾರರು 100 ಕೋಟಿ ಅನುದಾನ ತರಿಸಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ನಡೆಸುತ್ತಿದ್ದಾರೆ. ಇದೆಲ್ಲವನ್ನೂ ನೋಡಿದ ಕಾಂಗ್ರೆಸ್ ನವರಿಗೆ ರಾಜಕೀಯವಾಗಿ ಅಸ್ತಿತ್ವ ಕಳೆದುಕೊಳ್ಳುವ ಭೀತಿ ಎದುರಾಗಿ ಶಾಸಕರ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರಷ್ಟೆ ಎಂದು ಬಿಜೆಪಿ ಮಂಡಲ ಸಮಿತಿ ಹೇಳಿದೆ. ಸಚಿವರಾದ ಎಸ್.ಅಂಗಾರರ ಸುಳ್ಯ ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿಗೆ ವಿಶೇಷ ಅನುದಾನಗಳ...
Loading posts...

All posts loaded

No more posts

error: Content is protected !!