ಆದರ್ಶ ಗ್ರಾಮದ ಮೂರು ಸರಕಾರಿ ಶಾಲೆಗಳಿಗೆ ಸಮವಸ್ತ್ರ ಮತ್ತು ನೋಟ್ ಪುಸ್ತಕ ವಿತರಣೆ

ಕೇನ್ಯ : ಶ್ರೀ ದುರ್ಗಾ ಸೇವಾ ಸಂಘ ಉಳಿಸಿದ ಕೇನ್ಯ ಇದರ " ನಮ್ಮೂರ ಶಾಲೆ ಅಭಿಯಾನಕ್ಕೆ ಓಗೊಟ್ಟು " ಓಮ್ ಶಕ್ತಿ ಸಂಸ್ಥೆ ಕಲ್ಯಾಣ್" ಮುಂಬಯಿ ಇವರಿಂದ ಕೇನ್ಯ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೇನ್ಯ, ನೇಲ್ಯಡ್ಕ ಮತ್ತು ಕನ್ಕಲ್ ಶಾಲೆಗಳಿಗೆ ಸುಮಾರು 1 ಲಕ್ಷದಷ್ಟು ಮೌಲ್ಯದ ಸಮವಸ್ತ್ರ ಮತ್ತು ನೋಟು ಪುಸ್ತಕಗಳನ್ನು...

ಕೊಲ್ಲಮೊಗ್ರ ಮತ್ತು ಶಿರೂರು ಚಾಂತಾಳ ಒಕ್ಕೂಟ ಪದಗ್ರಹಣ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ನ ಸುಳ್ಯ ತಾಲೂಕು ಸುಬ್ರಹ್ಮಣ್ಯ ವಲಯದ ಕೊಲ್ಲಮೊಗ್ರ "ಎ" ಮತ್ತು ಶಿರೂರು ಚಾಂತಾಳ "ಬಿ" ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಜು. 04 ರಂದು ಮಯೂರ ಕಲಾಮಂದಿರ ಕೊಲ್ಲಮೊಗ್ರದಲ್ಲಿ ನಡೆಯಿತು. ಅಯ್ಯಪ್ಪ ಪೂಜಾ ಮಂದಿರದ ಆಡಳಿತ ಮೊಕ್ತೇಸರರಾದ ಚಂದ್ರಶೇಖರ ಕಿರಿಭಾಗ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಅಧ್ಯಕ್ಷತೆಯನ್ನು...
Ad Widget

ದೇವನಾಥ್ ನೀರಬಿದಿರೆ ವಿಷ ಸೇವಿಸಿ ಆತ್ಮಹತ್ಯೆ

ಸುಳ್ಯ ನಗರಪಂಚಾಯತ್ ನಲ್ಲಿ ಕಸ ಸಂಗ್ರಹ ಹಾಗೂ ವಿಲೇವಾರಿ ಘಟಕದಲ್ಲಿ ಪೌರಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿದ್ದ ದುಗಲಡ್ಕದ ನೀರಬಿದಿರೆ ನಿವಾಸಿ ದೇವನಾಥ ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ದೇವನಾಥರಿಗೆ 32 ವರ್ಷ ವಯಸ್ಸಾಗಿತ್ತು.ನಿನ್ನೆ ವಿಷ ಸೇವಿಸಿದರೆನ್ನಲಾಗಿದೆ. ಕೂಡಲೇ ಗೆಳೆಯರಿಗೆ ವಿಷಯ ಗೊತ್ತಾಗಿ ಆಸ್ಪತ್ರೆಗೆ ಕರೆತಂದರು. ಹೆಚ್ಚಿನ ಚಿಕಿತ್ಸೆಗಾಗಿ ಸುಳ್ಯದಿಂದ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಯಿತು....

ಇಂದು ದ.ಕ ಶಾಲೆ ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ. ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಇಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಸಾರಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ

ಕಲ್ಮಕಾರು :- ಗುಳಿಕ್ಕಾನಕ್ಕೆ ಭೂ ವಿಜ್ಞಾನಿಗಳು ಮತ್ತು ಗಣಿ ಇಲಾಖೆಯ ಅಧಿಕಾರಿಗಳ ಭೇಟಿ : ಸ್ಥಳ ಪರಿಶೀಲನೆ, ಮಾಹಿತಿ ಸಂಗ್ರಹ

ಕೊಲ್ಲಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಮಕಾರಿನ ಗುಳಿಕ್ಕಾನದ ಗುಡ್ಡದಲ್ಲಿ 2018 ರಲ್ಲಿ ಭೂಮಿ ಆಳವಾಗಿ ಬಿರುಕು ಬಿಟ್ಟಿತು. ಆ ಸಂದರ್ಭದಲ್ಲಿ ಗುಳಿಕ್ಕಾನದ ಗುಡ್ಡದ ಭಾಗದಲ್ಲಿ 10 ಕುಟುಂಬಗಳು ವಾಸಿಸುತ್ತಿದ್ದವು. ಅಲ್ಲಿರುವ ಕುಟುಂಬಗಳನ್ನು ಬೇರೆಡೆಗೆ ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿ 4 ವರ್ಷಗಳಾದರೂ ಈವರೆಗೆ ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಗುಳಿಕ್ಕಾನ ಪ್ರದೇಶ ಜನರ ವಾಸಕ್ಕೆ ಯೋಗ್ಯವಾಗಿದೆಯೇ ಎಂದು ತಿಳಿಯಲು...

ಅಡ್ಡನಪಾರೆ : ಮನೆ ಮೇಲೆ ಮರ ಬಿದ್ದು ಸಂಪೂರ್ಣ ಹಾನಿ : ಮಹಿಳೆಯ ತಲೆಗೆ ಗಾಯ

ನಿರಂತರ ಮಳೆಯಿಂದ ಮನೆ ಮೇಲೆ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡ ಹಾಗೂ ಮನೆಯೊಳಗಿದ್ದ ಮಹಿಳೆಯ ತಲೆಗೆ ಗಂಭೀರ ಗಾಯಗಳಾದ ಘಟನೆ ಇಂದು ನಡೆದಿದೆ. ದೇವಚಳ್ಳ ಗ್ರಾಮದ ಅಡ್ಡನಪಾರೆ ನಿವಾಸಿ ದೈವ ನರ್ತಕ ಚಿದಾನಂದ ಅವರ ಮನೆಗೆ ಮನೆಗೆ ಮರ ಬಿದ್ದು ಮನೆ ಸಂಪೂರ್ಣ ಕುಸಿದಿದೆ. ಮನೆಯೊಳಗಿದ್ದ ಚಿದಾನಂದ ರವರ ಪತ್ನಿ ಶೀಲಾವತಿಯ ತಲೆಗೆ ಗಂಭೀರ...

ಬೊಳುಬೈಲು : ನವಚೇತನ ಚಿಣ್ಣರ ಕೂಟ ಉದ್ಘಾಟನೆ

ನವಚೇತನ ಯುವಕ ಮಂಡಲ (ರಿ.) ಬೊಳುಬೈಲು ಇದರ ನವಚೇತನ ಚಿಣ್ಣರ ಕೂಟದ ಉದ್ಘಾಟನಾ ಸಮಾರಂಭ ಜು‌.3ರಂದು ಯುವಕ ಮಂಡಲದ ಸಭಾಭವನ ಯುವಸದನ ಬೊಳುಬೈಲುನಲ್ಲಿ ನಡೆಯಿತು.ಸ್ನೇಹ ಶಿಕ್ಷಣ ಸಂಸ್ಥೆ ಸುಳ್ಯ ಇದರ ಅಧ್ಯಕ್ಷ ಡಾ.ಚಂದ್ರಶೇಖರ ದಾಮ್ಲೆ ಉದ್ಘಾಟಿಸಿ, ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ ಮಾತನಾಡಿದ ಅವರು ಉದ್ಯೋಗದ ಕಾರಣಕ್ಕಾಗಿ ಶಿಕ್ಷಣ ಪಡೆಯುವ ಪ್ರಸ್ತುತ ಸಂದರ್ಭದಲ್ಲಿ ಮಕ್ಕಳ...

ಸುಬ್ರಹ್ಮಣ್ಯ : ಭಾರಿ ಮಳೆಯಿಂದ ಸ್ನಾನ ಘಟ್ಟ ಮುಳುಗಡೆ

ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕುಮಾರಧಾರ ನದಿ ತುಂಬಿ ಹರಿಯುತ್ತಿದೆ. ಇದರಿಂದಾಗಿ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಸದ್ಯ ಪ್ರವಾಹ ನೀರಿನಲ್ಲೇ ಭಕ್ತರು ತೀರ್ಥಸ್ನಾನ ನೆರವೇರಿಸುತ್ತಿರುವ ದೃಶ್ಯ ಕಂಡುಬರುತ್ತಿದೆ. ಭಕ್ತರು ನದಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಜೇಸಿಐ ಪಂಜ ಪಂಚಶ್ರೀಗೆ ವಲಯಾಭಿವೃದ್ಧಿ ಪ್ರಶಸ್ತಿ

ಜೇಸಿಐ ವಿಟ್ಲ ಘಟಕದ ವತಿಯಿಂದ ಜು.3 ರಂದು ನಡೆದ ವಲಯದ ಅಭಿವೃದ್ಧಿ ಮತ್ತು ಬೆಳವಣಿಗೆ ಸಮ್ಮೇಳನದಲ್ಲಿ ಜೇಸಿಐ ಪಂಜ ಪಂಚಶ್ರೀ ಘಟಕಕ್ಕೆ ವಲಯದಿಂದ ಕೊಡಮಾಡುವ ವಲಯಾಭಿವೃದ್ಧಿ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯನ್ನು ಜೇಸಿಐ ಪಂಜ ಪಂಚಶ್ರೀಯ ಘಟಕಾಧ್ಯಕ್ಷರಾದ ಜೆ.ಎಫ್.ಎಮ್ ಶಿವಪ್ರಸಾದ್ ಹಾಲೆಮಜಲು ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಘಟಕದ ಪೂರ್ವಾದ್ಯಕ್ಷರಾದ ಜೆ.ಎಫ್.ಎಂ. ನಾಗಮಣಿ ಕೆದಿಲ, ಉಪಾಧ್ಯಕ್ಷರಾದ ಜೆ ಎಫ್ ಎಮ್...

ಕಣ್ಕಲ್ : ಶಾಲಾ ಮಕ್ಕಳಿಗೆ ಸಮವಸ್ತ್ರ ಮತ್ತು ನೋಟ್ ಪುಸ್ತಕ ವಿತರಣೆ, ಸನ್ಮಾನ

ಕೇನ್ಯ ಶ್ರೀ ದುರ್ಗಾ ಸೇವಾ ಸಂಘದ "ನಮ್ಮೂರ ಶಾಲೆ ಉಳಿಸಿ ಅಭಿಯಾನಕ್ಕೆ ಓಗೊಟ್ಟು ಮುಂಬಯಿಯ ಓಂ ಶಕ್ತಿ ಮಹಿಳಾ ಸಂಸ್ಥೆ ಕಲ್ಯಾಣ್" ಇವರು ಕೇನ್ಯ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಣ್ಕಲ್ ಇಲ್ಲಿನ ಮಕ್ಕಳಿಗೆ ಸಮವಸ್ತ್ರ ಮತ್ತು ನೋಟ್ ಪುಸ್ತಕ ಗಳನ್ನು ಕೊಡುಗೆಯಾಗಿ ನೀಡಲಾಯಿತು. ಕಣ್ಕಲ್ ಶಾಲೆಯಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷರಾದ...
Loading posts...

All posts loaded

No more posts

error: Content is protected !!