ನೀನಾಸಂ ಗೆ ಆಯ್ಕೆ ಆದ ಮಮತಾ ಕಲ್ಮಕಾರ್‌ಗೆ ರಂಗಮನೆಯಲ್ಲಿ ಆತ್ಮಿಯವಾಗಿ ಬೀಳ್ಕೊಡುಗೆ

ರಾಜ್ಯದ ಅತ್ಯತ್ತಮ ಮತ್ತು ಪ್ರತಿಷ್ಠಿತ ರಂಗ ತರಬೇತಿ ಸಂಸ್ಥೆಯಾದ ನೀನಾಸಂ ಗೆ ಇತ್ತೀಚೆಗೆ ಆಯ್ಕೆ ಪ್ರಕ್ರಿಯೆ ನಡೆದಿದ್ದು ಸುಳ್ಯ ತಾಲೂಕಿನ ಕಲ್ಮಕಾರಿನ ಮಮತ ಆಯ್ಕೆಯಾಗಿದ್ದಾರೆ. ರಾಜ್ಯದ ವಿವಿಧ ಕಡೆಗಳಿಂದ ಸುಮಾರು 125 ರಂಗಾಸಕ್ತರು ಭಾಗವಹಿಸಿದ್ದು ಅದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಮತಾ ಕಲ್ಮಕಾರು ಆಯ್ಕೆ ಆಗಿರುವುದು ಹೆಮ್ಮೆಯ ವಿಚಾರ. ಸುಳ್ಯದ ರಂಗಮನೆಯ ವಿದ್ಯಾರ್ಥಿ ಆಗಿರುವ ಮಮತ...

ಮತ್ತೆ ಭೂಕಂಪ – ಪೆರಾಜೆ, ಚೆಂಬು ಭಾಗದಲ್ಲಿ ಶಬ್ಧದೊಂದಿಗೆ ಲಘು ಕಂಪನ

ಕೊಡಗು ಹಾಗೂ ದಕ್ಷಿಣ ಕನ್ನಡ ಗಡಿ ಭಾಗದಲ್ಲಿ ನಿರಂತರ ಕಂಪನ ಸಂಭವಿಸುತ್ತಿದ್ದು ಜು‌.3 ರಂದು ರಾತ್ರಿ 9.18 ಕ್ಕೆ ಭೂಮಿ ಕಂಪಿಸಿದೆ. ಮೊದಲಿಗೆ ಶಬ್ಧ ಹಾಗೂ ನಂತರ ಸಣ್ಣ ಮಟ್ಟಿನ ಕಂಪನ ಆಗಿದೆ ಎಂದು ಚೆಂಬು ನಿವಾಸಿಗಳು ಮಾಹಿತಿ ನೀಡಿದ್ದಾರೆ. ಹಿಂದಿನ ಕಂಪನಗಳಿಗೆ ಹೋಲಿಸಿದರೆ ಇದು ಲಘು ಪ್ರಮಾಣದಲ್ಲಿತ್ತು ಎನ್ನಲಾಗಿದೆ.
Ad Widget

ನಡುಗಲ್ಲು ಹರಿಹರಪಲ್ಲತ್ತಡ್ಕ ರಸ್ತೆಗೆ ಮರ ಬಿದ್ದು ಸಂಚಾರಕ್ಕೆ ತಡೆ

ನಡುಗಲ್ಲು ಹರಿಹರಪಲ್ಲತ್ತಡ್ಕ ರಸ್ತೆಗೆ ಮರ ಬಿದ್ದು ಸಂಚಾರಕ್ಕೆ ತಡೆ ಉಂಟಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಸಂಚಾರಕ್ಕೆ ಅಡಚಣೆಯಾಗಿದ್ದು ಸ್ಥಳೀಯರ ಸಹಕಾರದಿಂದ ಮರವನ್ನು ತೆರವುಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ.

ನೀನಾಸಂ ರಂಗ ಶಿಕ್ಷಣಕ್ಕೆ ಮಮತಾ ಕಲ್ಮಕಾರು ಆಯ್ಕೆ

ಕರ್ನಾಟಕದ ಪ್ರತಿಷ್ಠಿತ ರಂಗ ಶಿಕ್ಷಣ ಕೇಂದ್ರವಾಗಿರುವ ನೀನಾಸಂ ನ 2022-23 ನೇ ಸಾಲಿನ ರಂಗಪದವಿ ವಿದ್ಯಾರ್ಥಿನಿಯಾಗಿ, ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ಸುಳ್ಯದ ಪ್ರತಿಭೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು ರಾಜ್ಯಾದ್ಯಂತ ನಡೆಸಿದ ರಂಗ ಪಯಣದ ಸಾಹೇಬ್ರು ಬಂದವೇ ನಾಟಕದ ಮುಖ್ಯ ನಟಿ ಕುಮಾರಿ ಮಮತಾ ಕಲ್ಮಕಾರು ಇವರು ಆಯ್ಕೆ ಆಗಿರುತ್ತಾರೆ.ಮಮತಾರವರು  ಅರೆಭಾಷೆ...

7ನೇ ಬಾರಿಗೆ ನಡುಗಿದ ಭೂಮಿ – ದಿನದಲ್ಲಿ ಎರಡು ಸಲ ಕಂಪನ

ಚೆಂಬು, ಸಂಪಾಜೆ ಗೂನಡ್ಕ, ತೊಡಿಕಾನ ಸೇರಿದಂತೆ ವಿವಿಧೆಡೆ ಇಂದು ರಾತ್ರಿ 8.28 ಕ್ಕೆ ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ ಎಂದು ತಿಳಿದು ಬಂದಿದೆ

ಕೊಲ್ಲಮೊಗ್ರ : ವ್ಯಕ್ತಿಯೋರ್ವನಿಗೆ ಚೂರಿ ಇರಿತ – ಗಂಭೀರ ಗಾಯ

ಕೊಲ್ಲಮೊಗ್ರ ಗ್ರಾಮದ ತೋಟದಮಜಲು ಎಂಬಲ್ಲಿ ವ್ಯಕ್ತಿಯೊರ್ವರಿಗೆ ಅಪರಿಚಿತನೋರ್ವ ಚೂರಿ ಇರಿದ ಘಟನೆ ವರದಿಯಾಗಿದೆ. ತೋಟದಮಜಲಿನಲ್ಲಿ ಕಳೆದ 10 ವರ್ಷಗಳಿಂದ ನೆಲೆಸಿದ್ದ ಲೂಕೋಸ್ ಎಂಬವರು ಚೂರಿ ಇರಿತದಿಂದ ಗಾಯಗೊಂಡ ವ್ಯಕ್ತಿ. ದೇಹದ 5 ಕಡೆ ಚೂರಿ ಇರಿತದಿಂದ ಗಾಯಗಳಾಗಿದ್ದು, ಸ್ಥಳೀಯರು ಸುಬ್ರಹ್ಮಣ್ಯ ಪೋಲೀಸರಿಗೆ ಮಾಹಿತಿ ನೀಡಿ ಗಾಯಾಳುವನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆಂದು ತಿಳಿದುಬಂದಿದೆ.

ಸುಳ್ಯ: ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಸುಳ್ಯದ ರಥಬೀದಿಯ ಸಮುದಾಯ ಭವನದಲ್ಲಿ ಜು. 6 ರಂದು ರೋಟರಿ ಕ್ಲಬ್ ಸುಳ್ಯ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಕುರಿತು ಜು.2 ರಂದು ಪತ್ರಿಕಾ ಗೋಷ್ಠಿ ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ರೊ. ಚಂದ್ರಶೇಖರ ಪೇರಾಲು ಕಾರ್ಯಕ್ರಮದ ಸಂಪೂರ್ಣ ಮಾಹಿತಿಯನ್ನು ನೀಡಿ, ರೋಟರಿ ಪದಗ್ರಹಣ ಕಾರ್ಯಕ್ರಮವನ್ನು ಪುತ್ತೂರು ರೋಟರಿ ಕ್ಲಬ್ ನ ಅಧ್ಯಕ್ಷರಾಗಿರುವ ರೊ....

ಪ್ರಾಕೃತಿಕ ವಿಕೋಪದ ಹಿನ್ನೆಲೆಯಲ್ಲಿ ಎಸ್‌ಡಿಪಿಐ ವತಿಯಿಂದ ರೆಸ್ಕ್ಯೂ ತಂಡ ರಚನೆ

ತಾಲೂಕಿನ ವಿವಿಧ ಭಾಗಗಳಲ್ಲಿ ಒಂದು ವಾರದೊಳಗೆ ಐದು ಬಾರಿ ಭೂಕಂಪನದ ಅನುಭವವಾಗಿದ್ದು ಮತ್ತು ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುವ ಬಗ್ಗೆ ಹವಮಾನ ಇಲಾಖೆಯ ಮುನ್ನೆಚ್ಚರಿಕೆಯ ಭಾಗವಾಗಿ ಎಸ್‌ಡಿಪಿಐ ಸಂಪಾಜೆ ಗ್ರಾಮ ಸಮಿತಿ ವತಿಯಿಂದ ರೆಸ್ಕ್ಯೂ ತಂಡವನ್ನು ರಚಿಸಲಾಯಿತು‌.ಇದರ ಭಾಗವಾಗಿ ಸ್ವಯಂ ಸೇವಕರಿಗೆ ತುರ್ತು ಸಂದರ್ಭದಲ್ಲಿ ಮಾಡಬೇಕಾದ ಕಾರ್ಯಗಳ ಬಗ್ಗೆ ವಿಸ್ಕೃತವಾಗಿ ತಿಳಿಸಿಕೊಡಲಾಯಿತು. ಹಾಗೂ ಯಾವುದೇ ಸಂದರ್ಭದಲ್ಲೂ ತುರ್ತು...

ಅರಂತೋಡು : ಪಿಕಪ್ ಪಲ್ಟಿ

ಅರಂತೋಡು ಅಡ್ಯಡ್ಕ ಸಮೀಪ ಅಜ್ಜನಗದ್ದೆ ಎಂಬಲ್ಲಿ ಪಿಕಪ್ ವಾಹನ ಪಲ್ಟಿಯಾದ ಘಟನೆ ಇಂದು ನಡೆದಿದೆ. ಹಂದಿ ಸಾಗಿಸುತ್ತಿದ್ದ ವಾಹನವಾಗಿದ್ದು ಚಾಲಕ ಅಪಾಯದಿಂದ ಪಾರಾಗಿದ್ದಾರೆ.

ಐವರ್ನಾಡು : ಪ್ರಿಡ್ಜ್ ನಿಂದ ಶಾಕ್ ಹೊಡೆದು 4 ವರ್ಷದ ಬಾಲಕ ಮೃತ್ಯು

ಐವರ್ನಾಡಿನಲ್ಲಿ ಸಂಭವಿಸಿದ ವಿದ್ಯುತ್ ದುರಂತವೊಂದರಲ್ಲಿ ನಾಲ್ಕು ವರ್ಷದ ಬಾಲಕ ದುರ್ಮರಣಕ್ಕೀಡಾದ ಘಟನೆ ಇಂದು ನಡೆದಿದೆ. ಐವರ್ನಾಡಿನ ಆದಂ ಎಂಬವರ ಪುತ್ರಿ, ರಿಕ್ಷಾ ಡ್ರೈವರ್ ಅಜರ್ ಅವರ ಸಹೋದರಿ ಅಪ್ಸರವರ ಮಗ ಹೈದರ್ ಅಲಿ ವಿದ್ಯುತ್ ಶಾಕ್‌ನಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಪ್ರಿಡ್ಜ್ ನ ಮುಟ್ಟಿದಾಗ ಶಾಕ್ ಹೊಡೆದಿದೆ ಎನ್ನಲಾಗಿದೆ.
Loading posts...

All posts loaded

No more posts

error: Content is protected !!