ಉದಯ ಕಜ್ಜೋಡಿಯವರಿಗೆ ಮ್ಯಾನೇಜರ್ ಆಗಿ ಧರ್ಮಸ್ಥಳ ಕೇಂದ್ರ ಕಛೇರಿಗೆ ವರ್ಗಾವಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಡಗು ಜಿಲ್ಲಾ ಕುಶಾಲನಗರ ಕಛೇರಿಯಲ್ಲಿ ಡಾಟಾ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಉದಯ ಕಜ್ಜೋಡಿ ಅವರು ಬಿ.ಸಿ ಮ್ಯಾನೇಜರ್ ಆಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಛೇರಿಗೆ ವರ್ಗಾವಣೆಗೊಂಡಿದ್ದಾರೆ.ಇವರು ಹರಿಹರ ಪಲ್ಲತ್ತಡ್ಕ ಗ್ರಾಮದ ಕಜ್ಜೋಡಿ ದಿ.ಕೃಷ್ಣಪ್ಪ ಗೌಡ ಹಾಗೂ ಹೊನ್ನಮ್ಮ ದಂಪತಿಯ ಪುತ್ರ.ಇವರು ಈ ಹಿಂದೆ ಚಾಮರಾಜನಗರ...

ಸುಳ್ಯ ಸಿಎ ಬ್ಯಾಂಕ್ ಅಧ್ಯಕ್ಷರಾಗಿ ಬಾಲಗೋಪಾಲ ಸೇರ್ಕಜೆ‌ ಆಯ್ಕೆ

ಸುಳ್ಯ ಸಿ ಎ ಬ್ಯಾಂಕ್ ಅಧ್ಯಕ್ಷರಾಗಿ ಎಂ.ಬಾಲಗೋಪಾಲ ಸೇರ್ಕಜೆ ಆಯ್ಕೆಯಾಗಿದ್ದಾರೆ.‌ ಸಿಎ ಬ್ಯಾಂಕ್ ಅಧ್ಯಕ್ಷರಾಗಿದ್ದ ಹರೀಶ್ ಬೂಡುಪನ್ನೆ ರಾಜಿನಾಮೆ ನೀಡಿದ ಕಾರಣ ತೆರವಾದ ಸ್ಥಾನಕ್ಕೆ ಇಂದು ಬಾಲಗೋಪಾಲ ಸೇರ್ಕಜೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ನಿರ್ದೇಶಕರಾದ ದಾಮೋದರ ಮಂಚಿ ಸೂಚಿಸಿ, ಅಬ್ದುಲ್ಲ ಕುಂಞಿ ನೇಲ್ಯಡ್ಕ ಅನುಮೋದಿಸಿದರು. ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ಮಾರಾಟ ಅಧಿಕಾರಿ ಶೋಭಾ...
Ad Widget

ಅರಂತೋಡು – ಎಲಿಮಲೆ ರಸ್ತೆಯ ಅಭಿವೃದ್ಧಿಗೆ ಆಗ್ರಹ
ಬೇಡಿಕೆ ಈಡೇರದಿದ್ದರೇ ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿದ ಗ್ರಾಮಸ್ಥರು

ಅರಂತೋಡು - ಎಲಿಮಲೆ ರಸ್ತೆಯ ಅಭಿವೃದ್ಧಿಗೆ ವಿಳಂಬ ಮಾಡುತ್ತಿರುವ ಆಡಳಿತವನ್ನು ಎಚ್ಚರಿಸುವ ಸಲುವಾಗಿ ಗ್ರಾಮಸ್ಥರು ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿ ಪೋಸ್ಟರ್ ಅನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ತಾಲೂಕಿನಲ್ಲಿ ಅತೀ ಅಗತ್ಯ ಆಗಲೇಬೇಕಾದ ಕೆಲಸಗಳ ಪಟ್ಟಿಯಲ್ಲಿರುವ ಈ ಪಿಡಬ್ಲ್ಯೂಡಿ ರಸ್ತೆ ಜನಪ್ರತಿನಿಧಿಗಳ ಉದಾಸಿನದಿಂದ ಅಭಿವೃದ್ಧಿಯಾಗದೇ ಜನತೆ ಸಂಕಷ್ಟ ಪಡುವಂತಾಗಿದೆ. ಈ ರಸ್ತೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ಭಕ್ತಾಧಿಗಳು ಸೇರಿದಂತೆ...

ಸುಳ್ಯ : ಗುಂಡಿನ ದಾಳಿ ಪ್ರಕರಣ ಮೂವರು ಆರೋಪಿಗಳ ಬಂಧನ – ಗೆಳೆಯನೇ ಪ್ರಮುಖ ಆರೋಪಿ

ಸುಳ್ಯದಲ್ಲಿ ಜೂ.5 ರಂದು ರಾತ್ರಿ ಸ್ಕಾರ್ಪಿಯೋ ವಾಹನದಲ್ಲಿ ಬಂದ ತಂಡವೊಂದು ಸುಳ್ಯ ಜಯನಗರದ ಮಹಮ್ಮದ್ ಶಾಹಿ ಎಂಬವರ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣವನ್ನು ಭೇಧಿಸಿರುವ ಸುಳ್ಯ ಪೊಲೀಸರು ಮೂವರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಕಳಗಿ ಕೊಲೆ ಪ್ರಕರಣದ ಆರೋಪದಲ್ಲಿ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಕುಶಾಲನಗರದ ಕೆ ಜಯನ್ (38), ಮಡಿಕೇರಿಯ ವಿನೋದ್ (34) ಹೆಚ್.ಎಸ್...

ಅತ್ಯಾಚಾರ ಆರೋಪದಡಿ ಬಂಧಿತ ಆರೋಪಿಗೆ ಜಾಮೀನು

ಯುವತಿ ಯೋರ್ವಳನ್ನು 2022 ಫೆ.17 ರಂದು ಪುಸುಲಾಯಿಸಿ ಕಾಣಿಯೂರು ಗ್ರಾಮದ ಬಂಡಾಜೆ ಎಂಬಲ್ಲಿರುವ ಗುಡ್ಡೆಗೆ ಕರೆದುಕೊಂಡು ಹೋಗಿ ಅವಳ ಮೇಲೆ ಅತ್ಯಾಚಾರ ಎಸಲಾಗಿದೆ ಎಂದು ಆರೋಪಿಸಿ ಸ್ಥಳೀಯ ಚಂದ್ರಶೇಖರ. ಎ ಎಂಬುವರನ್ನು ಬೆಳ್ಳಾರೆ ಪೊಲೀಸರು ಬಂಧಿಸಿ ಆರೋಪಿಯನ್ನು ಅತ್ಯಾಚಾರ ಆರೋಪದಡಿಯಲ್ಲಿ ಸುಳ್ಯ ನ್ಯಾಯಾಲಯಕ್ಕೆ ಹಾಜಾರು ಪಡಿಸಿದಾಗ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಈ ಮದ್ಯೆ ಆರೋಪಿಯನ್ನು...

ಕನಕಮಜಲಿನಲ್ಲಿ ಬಿತ್ತೋತ್ಸವ ಮತ್ತು ವನಮಹೋತ್ಸವ ಆಚರಣೆ

ಕರ್ನಾಟಕ ಅರಣ್ಯ ಇಲಾಖೆ, ಗ್ರಾಮ ಅರಣ್ಯ ಸಮಿತಿ ಕನಕಮಜಲು, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಗೇರು ಮಾಣಿಮಜಲು, ಗ್ರಾಮ ಪಂಚಾಯಿತ್ ಕನಕಮಜಲು, ಜೆಸಿಐ ಸುಳ್ಯ ಸಿಟಿ ಮತ್ತು ಯುವಕ ಮಂಡಲ ಕನಕಮಜಲು ಇವರ ಸಹಯೋಗದೊಂದಿಗೆ ಗೋಗ್ರೀನ್ ಕಾರ್ಯಕ್ರಮದ ಪ್ರಯುಕ್ತ ಇಂದು ಕನಕಮಜಲಿನಲ್ಲಿ ಹಣ್ಣಿನ ಗಿಡ ನೆಡುವುದು ಮತ್ತು ಹಣ್ಣಿನ ಬೀಜ ಬಿತ್ತುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು...

ಸುಳ್ಯ : ಪ್ರಥಮ ದರ್ಜೆ ಕಾಲೇಜಿನಲ್ಲಿ ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆಯಿಂದ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಕಾರ‍್ಯಾಗಾರ

ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆ ಮತ್ತು ಸ.ಪ್ರ.ದ. ಕಾಲೇಜು ಆಂತರಿಕ ಗುಣಮಟ್ಟ ಭರವಸಾ ಕೋಶ ವತಿಯಿಂದ ““MATHS SHORT CUT TRICKS & TIPS FOR COMPETITIVE EXAMS” ” ಎಂಬ ವಿಷಯದ ಬಗ್ಗೆ ತರಬೇತಿ ಕಾರ‍್ಯಾಗಾರ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ....

ಐದು ವರ್ಷಗಳ ಸಾಧನೆ ತೃಪ್ತಿ ತಂದಿದೆ – ಎಪಿಎಂಸಿ ಅಧ್ಯಕ್ಷ ವಿನಯಕುಮಾರ್ ಮುಳುಗಾಡು

ಎಪಿಎಂಸಿ ಅಧ್ಯಕ್ಷರಾಗಿ ಐದು ವರ್ಷಗಳ ಸಾಧನೆ ತೃಪ್ತಿ ತಂದಿದೆ. ಸರಕಾರ ನಿರೀಕ್ಷೆಗಿಂತ ಹೆಚ್ಚಿನ ಸಾಧನೆ ಮಾಡಲಾಗಿದೆ ಎಂದು ಎಪಿಎಂಸಿ ಅಧ್ಯಕ್ಷ ವಿನಯಕುಮಾರ್ ಮುಳುಗಾಡು ಹೇಳಿದರು. ಎಪಿಎಂಸಿ ಅಧಿಕಾರ ಅವಧಿ ಕೊನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜೂನ್ 8 ರಂದು ಎಪಿಎಂಸಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.ಐದು ವರ್ಷದಲ್ಲಿ ಮಾಡಿದಂತ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಹಿತಿ ನೀಡಿದರು. ಸುಳ್ಯದ...

ಯೆನೆಪೋಯ ಅಬ್ದುಲ್ ಕುಂಞಿ ಯವರಿಗೆ ಸುಳ್ಯದಲ್ಲಿ ಸನ್ಮಾನ

ಗುಲ್ಬರ್ಗ ವಿಶ್ವವಿದ್ಯಾನಿಲಯದಿಂದ ಪ್ರತಿಷ್ಠಿತ ಗೌರವ ಡಾಕ್ಟರೇಟ್ ಪಡೆದ ಯೆನೆಪೋಯ ಡೀಮ್ಡ್ ವಿಶ್ವವಿದ್ಯಾನಿಲಯದ ಕುಲಪತಿ ಹಾಜಿ ಯೆನೆಪೋಯ ಅಬ್ದುಲ್ಲಕುಂಞಿ ಯವರಿಗೆ ಸುಳ್ಯ ತಾಲೂಕಿನ ವಿವಿಧ ಸಂಘ ಸಂಸ್ಥೆಗಳ ಪರವಾಗಿ ಮಂಗಳೂರಿನಲ್ಲಿ ಸನ್ಮಾನಿಸಲಾಯಿತು.ದ. ಕ ಜಿಲ್ಲೆಯ ಎಲ್ಲಾ ತಾಲೂಕುಗಳ ಮುಸ್ಲಿಂ ಸಮುದಾಯದ ಉಲಮಾ -ಉಮರಾ ನೇತಾರರ ಸೌಹಾರ್ದ ಸಂಗಮದಲ್ಲಿ ಈ ಗೌರವಾರ್ಪಣೆ ನಡೆಸಲಾಯಿತು.ಈ ಸಂದರ್ಭದಲ್ಲಿ ಕಾಣಚೂರು ಮೆಡಿಕಲ್ ಕಾಲೇಜು...

ಚೆರಿಶ್ಯ ಗಟ್ಟಿಗಾರು ಹುಟ್ಟುಹಬ್ಬ

ಮಡಪ್ಪಾಡಿ ಗ್ರಾಮದ ಗಟ್ಟಿಗಾರು ಲೋಕೇಶ್ ಮತ್ತು ದಿವ್ಯ ದಂಪತಿಗಳ ಪುತ್ರಿ ಚೆರಿಶ್ಯ ಳ ಪ್ರಥಮ ವರ್ಷದ ಹುಟ್ಟುಹಬ್ಬ‌ವನ್ನು‌ ಗಟ್ಟಿಗಾರು ಮನೆಯಲ್ಲಿ ಜೂನ್ 6 ರಂದು ಆಚರಿಸಲಾಯಿತು.
Loading posts...

All posts loaded

No more posts

error: Content is protected !!