- Sunday
- August 16th, 2026
ಪಾಲೆಪ್ಪಾಡಿ ಐವರ್ನಾಡು ರಸ್ತೆಯಲ್ಲಿ ಸುಮಾರು 1 ಕೋಟಿ ವೆಚ್ಚದಲ್ಲಿ ಡಾಮರೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ಹಾಗೂ 30 ಲಕ್ಷದಲ್ಲಿ ಕಾಂಕ್ರೀಟಿಕರಣಗೊಂಡ ರಸ್ತೆಯ ಉದ್ಘಾಟನೆ ಕಾರ್ಯಕ್ರಮ ಮಾ.6 ರಂದು ನಡೆಯಿತು. ಬಂದರು,ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಐವರ್ನಾಡು ಸಹಕಾರಿ ಸಂಘದ ಅಧ್ಯಕ್ಷ ಎಸ್. ಎನ್. ಮನ್ಮಥ,...
ಕಟ್ಟಿಂಗ್ ಮೆಷಿನ್ ತಾಗಿ ಮೃತಪಟ್ಟ ಐವರ್ನಾಡು ಗ್ರಾಮದ ನಾಟಿಕೇರಿ ನಿವಾಸಿ ದಯಾನಂದರವರ ಮನೆಗೆ ಸಚಿವ ಎಸ್. ಅಂಗಾರ ಅವರು ಮಾ.06 ರಂದು ಭೇಟಿ ನೀಡಿ ಸಾಂತ್ವನ ಹೇಳಿದರು. ಸರಕಾರದಿಂದ ಸಿಗುವ ಪರಿಹಾರ ನೀಡಲು ಶೀಘ್ರ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.
ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಗರಡಿ ಬೂಡು – ಬೆಳ್ಳಾರೆಯಲ್ಲಿ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಹಾಗೂ ಸಪರಿವಾರ ದೈವಗಳ ನೇಮೋತ್ಸವವು ಮಾ.14 ಮತ್ತು ಮಾ.15 ರಂದು ನಡೆಯಲಿದ್ದು ಆ ಪ್ರಯುಕ್ತ ಮಾ.5 ರಂದು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಆರ್.ಕೆ.ಭಟ್ ಕುರುಂಬುಡೇಲು ಆಮಂತ್ರಣ ಬಿಡುಗಡೆಗೊಳಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಬೆಳ್ಳಾರೆ ಗ್ರಾಮ ಪಂಚಾಯತ್...
ಪೆರುವಾಜೆ ಶ್ರೀ ಜಲದುರ್ಗಾ ದೇವಿ ದೇವಸ್ಥಾನ, ಶ್ರೀ ಜಲದುರ್ಗಾ ದೇವಿ ಭಜನಾ ಮಂಡಳಿ, ಶ್ರೀ ಜಲದುರ್ಗಾ ದೇವಿ ಮಹಿಳಾ ಭಜನಾ ಮಂಡಳಿ ಪೆರುವಾಜೆ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಏಕಾಹ ಭಜನೆ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಜಲದುರ್ಗಾ ಕುಣಿತ ಭಜನಾ ತಂಡ ಪೆರುವಾಜೆ ಇಲ್ಲಿಯ ಭಜಕರಿಂದ ಕುಣಿತ ಭಜನಾ ಸೇವೆ ನಡೆಯಿತು. ತಂಡದ ಸದಸ್ಯರು...
ಐನೆಕಿದು ಗ್ರಾಮದ ಕೆದಿಲ ನಾಗಪ್ಪ ಗೌಡ ಕೆದಿಲ ರವರ ಮನೆಯಲ್ಲಿ ಶ್ರೀ ಪಾಷಾಣಮೂರ್ತಿ ದೈವದ ನೇಮೋತ್ಸವವು ಮಾ.5ರಂದು ನಡೆಯಿತು. ಈ ಸಂದರ್ಭದಲ್ಲಿ ಕೆದಿಲ ಕುಟುಂಬಸ್ಥರು ಹಾಗೂ ನೂರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.
ಪುತ್ತೂರು ಹಾಸ್ಟೆಲ್ ನಿಂದ ಕಾಲೇಜಿಗೆ ಹೋಗುತ್ತಿದ್ದ ಸುಳ್ಯದ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿಯಲ್ಲಿ ಐವರ್ನಾಡಿನ ಯುವಕನ ವಿರುದ್ಧ ಪುತ್ತೂರು ಮಹಿಳಾ ಠಾಣಾ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಐವರ್ನಾಡು ನಿವಾಸಿ ರಕ್ಷಿತ್ ಪೋಕ್ಸೋ ಪ್ರಕರಣದಲ್ಲಿ ಬಂಧಿತನಾದ ಆರೋಪಿ. ಸುಳ್ಯ ಮೂಲದ 16 ವರ್ಷದ ಅಪ್ರಾಪ್ತ ನೊಂದ ಬಾಲಕಿ ಪುತ್ತೂರು ಹಾಸ್ಟೆಲ್ ನಿಂದ...
ಗುತ್ತಿಗಾರಿನ ಶ್ರೀ ಮುತ್ತಪ್ಪ ದೈವಸ್ಥಾನ ದಲ್ಲಿ ಶ್ರೀ ಮುತ್ತಪ್ಪ ತಿರುವಪ್ಪ ದೈವದ ನೇಮೋತ್ಸವ ಆರಂಭಗೊಂಡಿದ್ದು ಮಾ.5 ರಂದು ಬೆಳಿಗ್ಗೆ ಶ್ರೀ ಗಣಪತಿ ಹವನ, ಸಂಜೆ ಶ್ರೀ ದೈವಕ್ಕೆ ಪೈಂಗುತ್ತಿ, ಶ್ರೀ ಮುತ್ತಪ್ಪ ದೈವದ ನೇಮ ನಡೆದು ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭದಲ್ಲಿಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಭೇಟಿ ನೀಡಿ...
ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.02 ರಂದು ಕೊರತಿ ದೈವದ 7ನೇ ವರ್ಷದ ನೇಮೋತ್ಸವ ಹಾಗೂ ಮಾ.03 ರಿಂದ ಮಾ.04 ರವರೆಗೆ ಶ್ರೀ ಮಹಾವಿಷ್ಣುಮೂರ್ತಿ ದೈವದ 53ನೇ ವರ್ಷದ ಒತ್ತೆಕೋಲ ನಡೆಯಿತು.ಮಾ.02 ರಂದು ರಾತ್ರಿ ಶ್ರೀ ಕೊರತಿ ದೈವದ ನಡಾವಳಿ ಹಾಗೂ ಅನ್ನಸಂತರ್ಪಣೆ ನಡೆಯಿತು.ಮಾ.03 ರಂದು ಸಂಜೆ ಭಂಡಾರ ತೆಗೆದು, ಮೇಲೇರಿಗೆ ಅಗ್ನಿ ಸ್ಪರ್ಶ ನಡೆಯಿತು....
ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಸುಳ್ಯ ಇದರ 2020-21 ರ ಸಾಲಿನ ವಾರ್ಷಿಕ ಮಹಾಸಭೆಯು ಮಾ.4 ರಂದು ಕೆ.ವಿ.ಜಿ.ಮೆಡಿಕಲ್ ಕಾಲೇಜಿನಲ್ಲಿರುವ ಅಕಾಡೆಮಿ ಪ್ರಧಾನ ಕಾರ್ಯಾಲಯದಲ್ಲಿ ನಡೆಯಿತು. ಅಕಾಡೆಮಿ ಅಧ್ಯಕ್ಷ ಡಾ. ಕೆ. ವಿ. ಚಿದಾನಂದರವರು ಸಭೆಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ 2020-21ರ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕಪತ್ರವನ್ನು ಮಂಡಿಸಿ ಸಭೆಯ ಅನುಮೋದನೆ...
Loading posts...
All posts loaded
No more posts
