- Sunday
- August 16th, 2026
ಸುಬ್ರಹ್ಮಣ್ಯದ ಪದವಿಪೂರ್ವ ಕಾಲೇಜಿನಲ್ಲಿ ಮಾ.05 ಮತ್ತು 06 ರಂದು ಭಾರತೀಯ ಸಂಸ್ಕಾರ ಸಿಂಧು ಕಾರ್ಯಕ್ರಮ ನಡೆಯಲಿದ್ದು, ಪೂರ್ವಭಾವಿ ಸಭೆ ಫೆ.27 ರಂದು ಸುಬ್ರಹ್ಮಣ್ಯದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಭಾರತೀಯ ಸಂಸ್ಕಾರ ಸಿಂಧು ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ, ಭಾರತೀಯ ಸಂಸ್ಕಾರ ಸಿಂಧು ಸಂಯೋಜಕಿ ಹರಿಣಿ ಪುತ್ತೂರಾಯ, ಭಾರತೀಯ ಸಂಸ್ಕಾರ ಸಿಂಧು ಶಿಬಿರದ ಸಂಪರ್ಕ ಪ್ರಮುಖ್ ಶ್ರೀಮತಿ ಸುಭಾಷಿಣಿ...
ಹರಿಹರ ಪಲ್ಲತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಸೆ.27 ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಪಲ್ಸ್ ಪೋಲಿಯೋ ಲಸಿಕೆ ವಿತರಣಾ ಕಾರ್ಯಕ್ರಮವನ್ನು ನಡೆಸಲಾಯಿತು. ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಿಜಯ ಅಂಗಣ ಅವರು ತೀಕ್ಷಾ ಎಂಬ ಮಗುವಿಗೆ 2 ಹನಿ ಪೋಲಿಯೋ ಲಸಿಕೆ...
ಭಾರತ ಸರ್ಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ,ನೆಹರು ಯುವ ಕೇಂದ್ರ ಮಂಗಳೂರು, ಅಮೃತ ಮಹಿಳಾ ಮಂಡಲ ಪಂಬೆತ್ತಾಡಿ, ಪಂಚಶ್ರೀ ಯುವಕ ಮಂಡಲ ಪಂಬೆತ್ತಾಡಿ,ಅಕ್ಷತಾ ಯುವತಿ ಮಂಡಲ ಪಂಬೆತ್ತಾಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಹಾತ್ಮ ಗಾಂಧಿ ಸ್ವಚ್ಛತಾ ಜಾಗೃತಿ ಕಾರ್ಯಕ್ರಮ ಮತ್ತು ಶ್ರಮದಾನ ಫೆ. 26 ರಂದು ಪಂಬೆತ್ತಾಡಿಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಮೃತಾ ಮಹಿಳಾ...
ತಾಲೂಕು ಪಂಚಾಯತ್ ಸುಳ್ಯ ಅಕ್ಷರ ದಾಸೋಹ ಯೋಜನೆ, ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಮಧ್ಯಾಹ್ನ ಉಪಾಹಾರ ಯೋಜನೆ ಇದರ ವತಿಯಿಂದ ಸುಳ್ಯ ತಾಲೂಕು ಅಡುಗೆ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಕ್ರಮ ನಡೆಯಿತು. ತರಬೇತಿಯಲ್ಲಿ ನಡೆಸಲಾದ ಬೆಂಕಿ ರಹಿತ ಅಡುಗೆ ತಯಾರಿಯಲ್ಲಿ ಎಣ್ಮೂರು ಕ್ಲಸ್ಟರ್ ನ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಅಡುಗೆ ಸಿಬ್ಬಂದಿಗಳಾದ...
ಕಳಂಜದ ವಿಷ್ಣುನಗರದಲ್ಲಿ ಅಟ್ಯಾಕರ್ಸ್ ವಾಲಿಬಾಲ್ ಕ್ಲಬ್ ಕಳಂಜ ವತಿಯಿಂದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಫೆ.26ರಂದು ನಡೆಯಿತು. ಸಂಜೆ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಳಂಜ ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿಯ ಅಧ್ಯಕ್ಷರಾದ ಲಕ್ಷ್ಮೀಶ ರೈ ಗುರಿಕ್ಕಾನ ದೀಪ ಪ್ರಜ್ವಲನೆಗೈದು ಪಂದ್ಯಾಟಕ್ಕೆ ಶುಭಹಾರೈಸಿದರು. ಪಂದ್ಯಾಟವನ್ನು ವಿನಯಚಂದ್ರ ಪೈ ಬಾಚೋಡಿ ವಿದ್ಯುಕ್ತವಾಗಿ ಉದ್ಘಾಟನೆಗೈದರು. ಅಬ್ದುಲ್ ಜಮಾಲ್ ಕಳಂಜ ವಾಲಿಬಾಲ್...
ಐವರ್ನಾಡು ಗ್ರಾಮದ ಪಾಲೆಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೊ ಲಸಿಕೆ ವಿತರಣೆ ಕಾರ್ಯಕ್ರಮವು ಫೆ.27 ರಂದು ನಡೆಯಿತು.ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ಶ್ರೀಮತಿ ಮಮತಾ ಅವರು ಉದ್ಘಾಟನೆ ಮಾಡಿದರು.
ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನದ ಅಂಗವಾಗಿ ಕಳಂಜ ವಿಷ್ಣುನಗರದ ಅಕ್ಷರ ಕರಾವಳಿ ಕಟ್ಟಡದಲ್ಲಿ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮ ಫೆ.27ರಂದು ನಡೆಯಿತು.
ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಮಾ.01ರಂದು ಮಹಾಶಿವರಾತ್ರಿ ಉತ್ಸವ ನಡೆಯಲಿದ್ದು, ಸಂಜೆ ಗಂಟೆ 6.00ರಿಂದ ಶತರುದ್ರಾಭಿಷೇಕ, ರಂಗಪೂಜೆ ನಡೆಯಲಿದೆ. ನಂತರ ಪ್ರಸಾದ ವಿತರಣೆ ನಡೆಯಲಿರುವುದು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ 6.00ರಿಂದ ರಾಮ ಜೋಯಿಸ ಬೆಳ್ಳಾರೆಯವರ ಸಂಯೋಜನೆಯಲ್ಲಿ ಪ್ರಸಿದ್ಧ ಭಾಗವತ ಪುತ್ತಿಗೆ ರಘುರಾಮ ಹೊಳ್ಳರ ಭಾಗವತಿಕೆಯಲ್ಲಿ "ಜಾಂಬವತಿ ಕಲ್ಯಾಣ" ಯಕ್ಷಗಾನ ಬಯಲಾಟ ನಡೆಯಲಿದೆ. ಮುಮ್ಮೇಳದಲ್ಲಿ ತೆಂಕುತಿಟ್ಟಿನ...
Loading posts...
All posts loaded
No more posts
