ಸುಳ್ಯ : ಅಡಿಕೆ ಖರೀದಿಸಿ ಚೆಕ್ ನೀಡಿ ವಂಚಿಸಿದ ಆರೋಪಿಗೆ ಶಿಕ್ಷೆ

ಚೆಕ್ ಬೌನ್ಸ್ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆದು ಆರೋಪ ಸಾಬೀತಾದ ಹಿನ್ನಲೆಯಲ್ಲಿ ಆರೋಪಿಗೆ ಸುಳ್ಯದ ಹಿರಿಯ ಸಿವಿಲ್ ನ್ಯಾಯಾಲಯ ಶಿಕ್ಷೆ ನೀಡಿ ಆದೇಶಿಸಿದೆ. ದುಗಲಡ್ಕ ನಿವಾಸಿ ಸುಳ್ಯದ ಮರದ ವ್ಯಾಪಾರಿ ಮಹಮ್ಮದ್ ಅಶ್ರಫ್ ಎಂಬವರು ದಿನಾಂಕ 01/01/2019 ರಂದು ನೆಲ್ಲೂರು ಕೆಮ್ರಾಜೆ ಗ್ರಾಮದ ಜಬಳೆ ಸೋಮಶೇಖರ್‌ ನಾಯಕ್ ಎಂಬವರ ಮನೆಗೆ ಪಿಕಪ್ ವಾಹನದಲ್ಲಿ ಧಾವಿಸಿ, ಸುಲಿದು...

ಬಸ್ ನಿಲ್ದಾಣದಲ್ಲಿ ಮುರಿದು ಬಿದ್ದಿದ್ದ ಚಯರ್ ದುರಸ್ತಿ

ಸುಳ್ಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕುಳಿತುಕೊಳ್ಳಲು ಹಾಕಿರುವ ಹಲವು ಚಯರ್ ಗಳು ಮುರಿದು ಬಿದ್ದು ಕಬ್ಬಿಣದ ರಾಡ್ ಮಾತ್ರ ಉಳಿದುಕೊಂಡಿತ್ತು. ಇದರಿಂದ ಪ್ರಯಾಣಿಕರು ಸಂಕಟ ಅನುಭವಿಸುತ್ತಿರುವ ಬಗ್ಗೆ ಅಮರ ಸುದ್ದಿ ವೆಬ್ಸೈಟ್ ನಲ್ಲಿ ಫೆ. 14 ರಂದು ವರದಿ ಪ್ರಕಟಿಸಿ ಅಧಿಕಾರಿಗಳನ್ನು ಎಚ್ಚರಿಸಿತ್ತು.ವಾರದೊಳಗೆ ಸರಿಪಡಿಸುವ ಭರವಸೆ ನೀಡಿದ್ದ ಅಧಿಕಾರಿಗಳು ಫೆ.17 ರಂದು ಚಯರ್ ದುರಸ್ತಿ...
Ad Widget

ಸುಬ್ರಹ್ಮಣ್ಯ : ವೆಂಕಟರಮಣ ಸೊಸೈಟಿಯ ಶಾಖೆ ಕಾರ್ಯಾರಂಭ – ಡಾ.ರೇಣುಕಾಪ್ರಸಾದ್ ಕೆ.ವಿ. ದೀಪ ಬೆಳಗಿಸಿ ಉದ್ಘಾಟನೆ

(ಚಿತ್ರ : ಶಾಂತಾಲ ಸುಬ್ರಹ್ಮಣ್ಯ) ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸುಬ್ರಹ್ಮಣ್ಯ ಶಾಖೆಯ ಉದ್ಘಾಟನೆಯು ಫೆ. 17 ರಂದು ಶ್ರೀಕೃಪಾ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾರಂಭಗೊಂಡಿತು. ಶಾಖೆಯ ಉದ್ಘಾಟನೆಯನ್ನು ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು ಇದರ ಉಪಾಧ್ಯಕ್ಷರು ಹಾಗೂ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಸುಳ್ಯ ಇದರ ಪ್ರಧಾನ ಕಾರ್ಯದರ್ಶಿ ಡಾ. ರೇಣುಕಾಪ್ರಸಾದ್...

ಶ್ರದ್ಧಾ-ಭಕ್ತಿಯ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ಜಾತ್ರೋತ್ಸವ

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.12ರಿಂದ ಫೆ.16ರ ತನಕ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗಿತು. ಫೆ.12ರಂದು ಬೆಳಗ್ಗೆ ಉಗ್ರಾಣ ಮುಹೂರ್ತ ನಡೆದು ಸಂಜೆ ತಂತ್ರಿಗಳ ಆಗಮನ, ಸ್ವಾಗತ, ಪ್ರಾರ್ಥನೆ, ದೀಪಾರಾಧನೆ, ರಾತ್ರಿ ಧ್ವಜಾರೋಹಣ ನಡೆಯಿತು. ಬಳಿಕ...

ತಾಲೂಕಿನ ವಿವಿಧೆಡೆ ಸುರಿದ ಅಕಾಲಿಕ ಮಳೆ

ಸುಳ್ಯ ತಾಲೂಕಿನ ವಿವಿಧೆಡೆ ಫೆ.16ರಂದು ರಾತ್ರಿ ಅಕಾಲಿಕ ಮಳೆ ಸುರಿದಿದೆ. ಸುಬ್ರಹ್ಮಣ್ಯ ಪರಿಸರದಲ್ಲಿ ಎರಡನೇ ಬಾರಿಗೆ ಮಳೆ ಸುರಿದರೇ ಗುತ್ತಿಗಾರು, ಮಡಪ್ಪಾಡಿ, ಪಂಜ, ಬಳ್ಪ , ಎಲಿಮಲೆ, ಕುಕ್ಕುಜಡ್ಕ ಮರ್ಕಂಜ ಮೊದಲಾದ ಕಡೆಗಳಲ್ಲಿ ಮೊದಲ ಬಾರಿ ಮಳೆ ಸುರಿದಿದೆ. ನಿರೀಕ್ಷೆಯಿಲ್ಲದೇ ಸುರಿದ ಮಳೆಯಿಂದಾಗಿ ಸಭೆ, ಸಮಾರಂಭಗಳಲ್ಲಿ ತೊಂದರೆ ಅನುಭವಿಸುವಂತಾಯಿತು.

ಗಡಿಕಲ್ಲು :- ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ಸಂಪನ್ನ

ಗಡಿಕಲ್ಲು ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಫೆ.15 ಮತ್ತು 16 ರಂದು ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ನಡೆಯಿತು.ಫೆ.15 ಮಂಗಳವಾರದಂದು ಪ್ರಾತಃಕಾಲ 6:00 ಗಂಟೆಗೆ ಆಗ್ನಿಕುಂಡ ಜೋಡಣೆ ಪ್ರಾರಂಭ, ಬೆಳಿಗ್ಗೆ 9:30 ಕ್ಕೆ ಗಣಪತಿ ಹೋಮ, ಬೆಳಿಗ್ಗೆ 10:00 ಗಂಟೆಗೆ ಉಗ್ರಾಣ ಮಹೂರ್ತ, ಮದ್ಯಾಹ್ನ 12:00 ಗಂಟೆಗೆ ಮಹಾಪೂಜೆ, ಮದ್ಯಾಹ್ನ 1:00 ಗಂಟೆಗೆ ಅನ್ನಸಂತರ್ಪಣೆ, ಸಂಜೆ 6:00...

ನಾಳೆ (ಫೆ.17) ಸುಳ್ಯ ತಾಲೂಕಿನಾದ್ಯಂತ ವಿದ್ಯುತ್ ಕಡಿತ

110 ಕೆ.ವಿ ಪುತ್ತೂರು, ಮಾಡಾವು ವಿದ್ಯುತ್ ಮಾರ್ಗದ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಫೆ.17ರಂದು ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ 110/33/11 ಕೆ.ವಿ ಪುತ್ತೂರು, ಮಾಡಾವು ಮತ್ತು ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊಡುವ ಎಲ್ಲಾ 33ಕೆವಿ ಕಡಬ ಸುಬ್ರಹ್ಮಣ್ಯ, ಸವಣೂರು ನೆಲ್ಯಾಡಿ, ಮಾಡಾವು ಕುಂಬ, ಕಾವು ಸುಳ್ಯ, ಬೆಳ್ಳಾರೆ ಗುತ್ತಿಗಾರು ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು....

ಗಾಂಧಿನಗರ : ಶುಭಶ್ರೀ ಮಹಿಳಾ ಮಂಡಲದ ವತಿಯಿಂದ ಕೆಡ್ಡಸ ಆಚರಣೆ

ಶುಭಶ್ರೀ ಮಹಿಳಾ ಮಂಡಲದ ವತಿಯಿಂದ ಕೆಡ್ಡಸ ಆಚರಣೆ ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕು ಮಹಿಳಾ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಇಂದಿರಾ ರಾಜಶೇಖರ ರೈ, ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಶಶಿಕಲಾ ಹರಪ್ರಸಾದ್, ಖಜಾಂಜಿ, ಶ್ರೀಮತಿ ಗಿರಿಜಾ ಎಂ ವಿ, ಸದಸ್ಯೆ ಶ್ರೀಮತಿ ಸುಜಾತ ಎನ್, ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಸವಿತ,...

ಬೆಳ್ಳಾರೆ: ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಅಂಗವಾಗಿ ಶ್ರೀ ದೇವರ ದರ್ಶನ ಬಲಿ, ರಾತ್ರಿ ಅಗ್ನಿಗುಳಿಗ ದೈವದ ನೇಮೋತ್ಸವ

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜರುಗುತ್ತಿದ್ದು, ಇಂದು(ಫೆ.16) ಬೆಳಗ್ಗೆ ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು. ದೇವಸ್ಥಾನದಲ್ಲಿ ಪೂರ್ವಾಹ್ನ ಕವಾಟೋದ್ಘಾಟನೆ, ತೈಲಾಭ್ಯಂಜನ, ಉಷಾಃಪೂಜೆ, ಆರಾಟು ಬಲಿ ನಡೆದು ಶ್ರೀ ದೇವರ ಅವಭೃಥ ಸ್ನಾನ ನಡೆಯಿತು. ಬಳಿಕ ದರ್ಶನ...

ಕಲ್ಮಡ್ಕ : ಪಡ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಪುಸ್ತಕ ಗೂಡು ಉದ್ಘಾಟನೆ

ಕಲ್ಮಡ್ಕ ಗ್ರಾಮ ಪಂಚಾಯತ್ ಇದರ ಆಶ್ರಯದಲ್ಲಿ 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಅಂಗವಾಗಿ ಕಲ್ಮಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಪುಸ್ತಕ ಗೂಡಿನ ಉದ್ಘಾಟನಾ ಕಾರ್ಯಕ್ರಮವು ಫೆಬ್ರವರಿ 14 ರಂದು ನಡೆಯಿತು.ಬಸ್ ನಿಲ್ದಾಣದ ಪುಸ್ತಕ ಗೂಡಿನ ಉದ್ಘಾಟನೆ ಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಹಾಜಿರಾ ಗಫೂರ್ ರವರು...
Loading posts...

All posts loaded

No more posts

error: Content is protected !!