ಸುಳ್ಯ ಶ್ರೀ ಶಾರದಾ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಆಚರಣೆ

ಸುಳ್ಯದ ಪ್ರತಿಷ್ಠಿತ ಹೆಣ್ಣು ಮಕ್ಕಳ ವಿದ್ಯಾ ಸಂಸ್ಥೆಯಾದ ಶ್ರೀ ಶಾರದಾ ಮಹಿಳಾ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘ (ರಿ) ಸುಳ್ಯ ಇದರ ಅಧ್ಯಕ್ಷರಾದ ಶ್ರೀ ಧನಂಜಯ ಅಡ್ಪಂಗಾಯ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘ (ರಿ) ಸುಳ್ಯ...

ಎಸ್ ಡಿ ಪಿ ಐ ವತಿಯಿಂದ ಬೆಳ್ಳಾರೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳ್ಳಾರೆ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ಳಾರೆ ಗ್ರಾಮ ಸಮಿತಿ ವತಿಯಿಂದ 73ನೇ ಗಣರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.ಎಸ್ ಡಿ ಪಿ ಐ ಬೆಳ್ಳಾರೆ ಗ್ರಾಮ ಸಮಿತಿ ಅಧ್ಯಕ್ಷ ಸಿದ್ದೀಕ್ ಬೆಳ್ಳಾರೆ ಧ್ವಜಾರೋಹಣ ನೆರವೇರಿಸಿದರು.ಎಸ್ ಡಿ ಪಿ ಐ ಸುಳ್ಯ ವಿಧಾನಸಭಾ ಸಮಿತಿ ಅಧ್ಯಕ್ಷ ಇಕ್ಬಾಲ್ ಬೆಳ್ಳಾರೆ ಸಂದೇಶ ಬಾಷಣ‌ ಮಾಡಿದರು. ಕಾರ್ಯಕ್ರಮದಲ್ಲಿ...
Ad Widget

“ಅಯ್ಯನಕಟ್ಟೆ ಜಾತ್ರೆ”ಗೆ ಹಸಿರು ಕಾಣಿಕೆ ಸಮರ್ಪಣೆ- ವೈಭವದ ಶೋಭಾಯಾತ್ರೆಯ ಮೂಲಕ ನಡೆದ ಹಸಿರು ಕಾಣಿಕೆ ಮೆರವಣಿಗೆ

ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ಜ.26 ಬುಧವಾರದಿಂದ ಆರಂಭಗೊಳ್ಳಲಿದ್ದು, ಇಂದು(ಜ.25) ಹಸಿರು ಕಾಣಿಕೆ ಸಮರ್ಪಣೆ ಕಾರ್ಯಕ್ರಮ ನಡೆಯಿತು. ಭಕ್ತರಿಂದ ನೀಡಲಾದ ಹಸಿರು ಕಾಣಿಕೆಯನ್ನು ವೈಭವದ ಶೋಭಾಯಾತ್ರೆ ಮೆರವಣಿಗೆಯ ಮೂಲಕ ಬಾಳಿಲದಲ್ಲಿನ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ಮಹಾದ್ವಾರದ...

ಅಯ್ಯನಕಟ್ಟೆ ಜಾತ್ರೆಯ ಕುರಿತಾದ ನೆನಪಿನ ಸಂಚಿಕೆ “ಅಯ್ಯನಕಟ್ಟೆ ಜಾತ್ರಾಂತರಂಗ” ಅಯ್ಯನಕಟ್ಟೆ ಜಾತ್ರೋತ್ಸವದಂದು ಬಿಡುಗಡೆ

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನಗಳ ಜೀರ್ಣೋದ್ಧಾರ, ಪುನರ್ ಪ್ರತಿಷ್ಟಾ ಬ್ರಹ್ಮಕಲಶೋತ್ಸವ ಹಾಗೂ ಅಯ್ಯನಕಟ್ಟೆ ಜಾತ್ರೆಯ ಕುರಿತಾದ ಸಂಗ್ರಾಹಯೋಗ್ಯ ನೆನಪಿನ ಸಂಚಿಕೆ "ಅಯ್ಯನಕಟ್ಟೆ ಜಾತ್ರಾಂತರಂಗ" ಈ ವರ್ಷದ ಅಯ್ಯನಕಟ್ಟೆ ಜಾತ್ರೆಯ ಸಂದರ್ಭದಲ್ಲಿ ಅಧಿಕೃತವಾಗಿ ನಮ್ಮ ಕೈಸೇರಲಿದೆ. ಕೋವಿಡ್ ಕಾರಣದಿಂದ ಮುದ್ರಣಗೊಳ್ಳುವಾಗ ಸ್ವಲ್ಪ ತಡವಾಯಿತು. ನಾಡಿನ ಹೆಸರಾಂತ ಜನಪದ ಸಂಶೋಧಕರು ನೀಡಿದ ಮಾಹಿತಿಪೂರ್ಣ ಲೇಖನಗಳು,...

ಶಕ್ತಿ ಕೇಂದ್ರಗಳ ಅಭಿವೃದ್ಧಿಯಿಂದ ಧರ್ಮ ರಕ್ಷಣೆ : ರವೀಶ ತಂತ್ರಿ

ಧರ್ಮ ಉಳಿಯಬೇಕಾದರೆ ಶಕ್ತಿ ಕೇಂದ್ರಗಳು ಅಭಿವೃದ್ಧಿ ಆಗಬೇಕು. ಶಕ್ತಿ ಕೇಂದ್ರಗಳ ಆಭಿವೃದ್ಧಿಯಿಂದ ಧರ್ಮ ರಕ್ಷಣೆ ಸಾಧ್ಯ. ಅದಕ್ಕಾಗಿ ಸಮಾಜ ಒಗ್ಗಟ್ಟಾಗಿ ಇರಬೇಕು ಎಂದು ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿ ಹೇಳಿದರು. ಮಂಡೆಕೋಲು ಪೆರಜದ ಶ್ರೀ ವನ ಶಾಸ್ತಾರ ದೇವಸ್ಥಾನದ ನವೀಕರಣ ಪುನಃ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು. ದೈವಿಕ ಚೈತನ್ಯ ಒಂದು...

ಎಣ್ಮೂರು ಪ್ರೌಢಶಾಲಾ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಮತ್ತು ಗೌರವಾರ್ಪಣೆ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸರಕಾರಿ ಪ್ರೌಢಶಾಲೆ ಎಣ್ಮೂರು ವತಿಯಿಂದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮ ಜ. 24 ರಂದು ಎಣ್ಮೂರು ಸರಕಾರಿ ಪ್ರೌಢಶಾಲೆಯಲ್ಲಿ ಆಚರಿಸಲಾಯಿತು. ಡಾ|ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಪೆರುವಾಜೆ ಬೆಳ್ಳಾರೆ ಇಲ್ಲಿನ ಸಹಾಯಕ ಪ್ರಾಧ್ಯಾಪಕಿ ಡಾ| ಸುಪ್ರಿಯಾ.ಪಿ.ಆರ್ ಹೆಣ್ಣು ಮಕ್ಕಳ ಆರೋಗ್ಯ, ಶಿಕ್ಷಣ, ದಿನದ...

ಸುಳ್ಯ : ಶ್ರೀ.ಕ್ಷೇ.ಧ. ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ತರಬೇತಿ ಕಾರ್ಯಗಾರ

ಸುಳ್ಯ ಮತ್ತು ಕಡಬ ತಾಲೂಕಿನ ಸಾಮಾನ್ಯ ಸೇವಾ ಕೇಂದ್ರ ಹಾಗೂ ಗ್ರಾಮ ಮಟ್ಟದ ಕಾರ್ಯನಿರ್ವಾಹಕರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸುಳ್ಯ ಯೋಜನಾ ಕಛೇರಿಯ ಸಭಾಂಗಣದಲ್ಲಿ ಜ.24 ರಂದು ತರಬೇತಿ ಕಾರ್ಯಗಾರವನ್ನು ಮಾನವ ಸಂಪನ್ಮೂಲ ಹಿರಿಯ ನಿರ್ದೇಶಕರಾದ ಶ್ರೀಮತಿ ಮಮತಾ ಹರೀಶ್ ರಾವ್ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ...

ದೊಡ್ಡತೋಟ : ತೋಟಕ್ಕೆ ಉರುಳಿದ ಓಮಿನಿ ಕಾರು – ನಾಲ್ವರಿಗೆ ಗಾಯ

ಮದುವೆ ಕಾರ್ಯಕ್ರಮಕ್ಕೆ ತೆರಳಿ ಹಿಂದಿರುಗುವ ವೇಳೆ ಒಮ್ನಿ ಕಾರು ತೋಟಕ್ಕೆ ಉರುಳಿದ ಘಟನೆ ಇಂದು ದೊಡ್ಡತೋಟ ಬಳಿ ನಡೆದಿದೆ. ಒಮ್ನಿ ಕಾರು ತೋಟಕ್ಕೆ ಉರುಳಿಬಿದ್ದ ಪರಿಣಾಮ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ನಾಲ್ವರು ಜಖಂ ಆಗಿದ್ದಾರೆ. ಒಮ್ನಿ ಕಾರಿನಲ್ಲಿದ್ದ ಬೈತಡ್ಕ ಭರತ್ ಕುಮಾರ್, ಬಾಲಕೃಷ್ಣ, ದಿನೇಶ ಹಾಗೂ ಗುಣಪಾಲ ಎಂಬವರು ಗಾಯಗೊಂಡಿದ್ದಾರೆ. ಅವರೆಲ್ಲರೂ ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ...

ಸಂಪಾಜೆ ಗ್ರಾಮ ಪಂಚಾಯತ್ ವತಿಯಿಂದ ನೀರಿನ ಸಿಂಟೆಕ್ಸ್ ಟ್ಯಾಂಕ್ ವಿತರಣೆ

ಸಂಪಾಜೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದ 62 ಪಲಾನುಭವಿಗಳಿಗೆ 500 ಲೀಟರ್ ಸಾಮರ್ಥ್ಯದ ಸಿಂಟೆಕ್ಸ್ ಟ್ಯಾಂಕ್ ವಿತರಣಾ ಕಾರ್ಯಕ್ರಮವನ್ನು ಸಂಪಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸೋಮಶೇಖರ್ ಕೊಯಿಂಗಾಜೆ ಟ್ಯಾಂಕ್ ವಿತರಿಸುವ ಮೂಲಕ ಉದ್ಘಾಟನೆ ಮಾಡಿದರು. ನಂತರ  ಮಾತನಾಡಿದ ಅವರು...

ಜ.30: ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

ಪೆರುವಾಜೆ ಗ್ರಾಮದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ಜ.30 ಆದಿತ್ಯವಾರದಂದು ಜರುಗಲಿದೆ. ಜಾತ್ರೋತ್ಸವದ ಅಂಗವಾಗಿ ಪೂರ್ವಾಹ್ನ ಗಂಟೆ 8.00ರಿಂದ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ ಮತ್ತು ಶುದ್ಧಿ ಕಲಶ ನಡೆಯಲಿದೆ. ಮಧ್ಯಾಹ್ನ ಗಂಟೆ 12.30ಕ್ಕೆ ಮಹಾಪೂಜೆ ನಡೆದು ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಗಂಟೆ 5.00ರಿಂದ ವಿಷ್ಣುಪ್ರಿಯ...
Loading posts...

All posts loaded

No more posts

error: Content is protected !!